Homeಮುಖಪುಟಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಲಾಠಿಚಾರ್ಜ್: ಎಫ್ಐಆರ್ ದಾಖಲಿಸಿದ ಪೊಲೀಸರು

ಜೆಎನ್‌ಯು ವಿದ್ಯಾರ್ಥಿಗಳ ವಿರುದ್ಧ ಲಾಠಿಚಾರ್ಜ್: ಎಫ್ಐಆರ್ ದಾಖಲಿಸಿದ ಪೊಲೀಸರು

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ ( ಜೆ.ಎನ್.ಯು) ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಾಸ್ಟೆಲ್ ಶುಲ್ಕ ಹೆಚ್ಚಳದ ವಿರುದ್ಧ ಪ್ರತಿಭಟನೆಗಿಳಿದಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿ, ವಶಕ್ಕೆ ಪಡೆದಿದ್ದಾರೆ.

ಹಾಸ್ಟೆಲ್ ಶುಲ್ಕ ಹೆಚ್ಚಳ ಮತ್ತು ಕಾಲೇಜು ಆಡಳಿತ ಮಂಡಳಿ ರೂಪಿಸಿರುವ ಕೆಲ ನೀತಿಗಳು ವಿದ್ಯಾರ್ಥಿಗಳ ಬೆಳವಣಿಗೆ ಮತ್ತು ಚಟುವಟಿಕೆಗಳಿಗೆ ವಿರುದ್ಧವಾಗಿವೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಪ್ರತಿಭಟನೆಯಲ್ಲಿ ಸಾರ್ವಜನಿಕ ವಸ್ತುಗಳನ್ನು ಹಾನಿಗೊಳಿಸಿದ ಆರೋಪದಡಿಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ: ಪಟ್ಟು ಬಿಡದೇ ಸಂಸತ್ತಿಗೆ ಜ್ಞಾಪಕ ಪತ್ರ ರವಾನಿಸಿದ ಜೆಎನ್‌ಯು ವಿದ್ಯಾರ್ಥಿಗಳು..

ಅಲ್ಲದೇ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೆ.ಎನ್.ಯು.ಎಸ್.ಯು ಅಧ್ಯಕ್ಷ ಐಶೇ ಘೋಷ್ ಮಾತನಾಡಿ, ಪರಿಸ್ಥಿತಿಯನ್ನು ಪೊಲೀಸರು ನಿಯಂತ್ರಿಸುತ್ತಿರುವ ರೀತಿ ಸಾಕಷ್ಟು ನಾಚಿಕೆಗೇಡಿನಿಂದ ಕೂಡಿದೆ. ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಎಳೆದೊಯ್ದಿದ್ದಾರೆ. ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ನಮ್ಮ ಬೇಡಿಕೆಗಳು ಈಡೇರುವವರೆಗೆ ಪ್ರತಿಭಟನೆ ಮುಂದುವರೆಯಲಿದೆ ಎಂದು ಹೇಳಿದರು.

ಇನ್ನು ಹಾಸ್ಟೆಲ್ ಫೀ ಇಳಿಕೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಪೊಲೀಸರು ಹತ್ತಿಕ್ಕುವ ರೀತಿಯನ್ನು ವಿಪಕ್ಷಗಳು ಖಂಡಿಸಿವೆ. ಶಿಕ್ಷಣ ಎಲ್ಲರ ಹಕ್ಕು. ಉಚಿತ ಹಾಗೂ ಉತ್ತಮ ಶಿಕ್ಷಣ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಶೈಕ್ಷಣಿಕ ಹಂತದ ಶುಲ್ಕ ಕಡಿತಕ್ಕೆ ಒತ್ತಾಯಿಸಿದ್ದಕ್ಕೆ, ಪೊಲೀಸರನ್ನು ಬಿಟ್ಟು ಲಾಠಿಚಾರ್ಜ್ ನಡೆಸುತ್ತಿರುವುದು ಯಾವ ನ್ಯಾಯ..? ಸರ್ಕಾರದ ಸರ್ವಾಧಿಕಾರತ್ವ ಕೀಳು ಮಟ್ಟಕ್ಕಿಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ಆಮ್ ಆದ್ಮಿ ಪಕ್ಷ ವಿದ್ಯಾರ್ಥಿಗಳನ್ನು, ಪೊಲೀಸರು ಥಳಿಸಿ, ವಶಕ್ಕೆ ಪಡೆದಿರುವ ರೀತಿಯನ್ನು ಖಂಡಿಸಿದೆ. ಇನ್ನು ಬಿಜೆಪಿಯ ಗಿರಿರಾಜ್ ಸಿಂಗ್ ಮಾತನಾಡಿ, ಕೆಲವರು ಜೆ.ಎನ್.ಯು ಅನ್ನು ಅರ್ಬನ್ ನಕ್ಸಲ್ ಕೇಂದ್ರವನ್ನಾಗಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇತ್ತ ಜೆ.ಎನ್.ಯು ವಿದ್ಯಾರ್ಥಿಗಳು ನವೆಂಬರ್ 18ನ್ನು ಕಪ್ಪು ದಿನವನ್ನಾಗಿ ಆಚರಿಸಲು ಕರೆ ನೀಡಿದೆ. ಲೋಕಸಭೆಯಲ್ಲೂ ಜೆ.ಎನ್.ಯು ಪ್ರತಿಭಟನೆ ಪ್ರತಿಧ್ವನಿಸಿತು. ತ್ರಿಣಮೂಲ ಕಾಂಗ್ರೆಸ್ ನಾಯಕಿ ಸುಗತಾ ರಾಯ್, ಹಾಸ್ಟೆಲ್ ಶುಲ್ಕ ಹೆಚ್ಚಳದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಹೇಳಿದರು. ಬಿಎಸ್ಪಿಯ ಡ್ಯಾನಿಶ್ ಅಲಿ ಕೂಡ ಪೊಲೀಸರು ಮತ್ತು ಕೇಂದ್ರದ ಕ್ರಮವನ್ನು ಖಂಡಿಸಿದ್ದಾರೆ.

ರಾಷ್ಟ್ರೀಯ ಜನತಾ ದಳ ( ಆರ್ಜೆಡಿ) ಕೂಡ ಪೊಲೀಸರ ವರ್ತನೆಯನ್ನು ಖಂಡಿಸಿದೆ. ಎಲ್ಲರಿಗೂ ಉಚಿತ ಶಿಕ್ಷಣ, ವಸತಿ ಸಿಗಬೇಕು. ವಿದ್ಯಾರ್ಥಿಗಳ ಬೇಡಿಕೆಯಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜೆ.ಎನ್. ಯು.ಚುನಾವಣೆಯಲ್ಲಿ ಮನುವಾದಿಗಳಿಗೆ ಸೋಲುಂಟಾದ್ದರಿಂದ, ಜೆ.ಎನ್. ಯು.ವನ್ನು ಹಾಳುಗೆಡವಲು ಕೇಂದ್ರ ಸರ್ಕಾರ ನಿರ್ಧರಿಸಿರುವಂತಿದೆ.

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...