Homeಕರ್ನಾಟಕNEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

NEP ವಿರೋಧಿಸಿ ಪ್ರತಿಭಟಿಸುತ್ತಿದ್ದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ತೀವ್ರ ಖಂಡನೆ

ಪೊಲೀಸರ ಲಾಠಿಚಾರ್ಜ್ ಅನ್ನು ಪಾಪ್ಯುಲರ್ ಫ್ರಂಟ್ ಇಂಡಿಯಾ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.

- Advertisement -
- Advertisement -

ಸಮಗ್ರ ಚರ್ಚೆ ನಡೆಸದೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಮಾನವೀಯ ಲಾಠಿಚಾರ್ಜ್ ನಡೆಸಿದ್ದಾರೆ.

ಐದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎನ್‌ಇಪಿ ಜಾರಿ ನಿಲ್ಲಬೇಕು ಎಂದು ಆಗ್ರಹಿಸಿ ಇಂದು ವಿಧಾನಸೌಧ ಚಲೋ ಹೋರಾಟ ನಡೆಸುತ್ತಿದ್ದರು. ಈ ವೇಳೆ ಮನಬಂದಂತೆ ಲಾಠಿಚಾರ್ಜ್ ನಡೆಸಿ ನೂರಾರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಇನ್ನೂ ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರತಿಭಟನೆ ಮತ್ತು ಲಾಠಿಚಾರ್ಜ್‌ನ ಪೂರ್ಣ ವಿಡಿಯೋ ಇಲ್ಲಿದೆ.

ಪೊಲೀಸರ ಲಾಠಿಚಾರ್ಜ್ ಅನ್ನು ಪಾಪ್ಯುಲರ್ ಫ್ರಂಟ್ ಇಂಡಿಯಾ, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.

ರಾಜ್ಯದ ಬಿಜೆಪಿ ಸರಕಾರವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ‌ ಸಂಬಂಧಿಸಿದಂತೆ ಯಾವುದೇ ಚರ್ಚೆ ನಡೆಸದೇ,  ಶಿಕ್ಷಣ ತಜ್ಞರ‌ ಅಭಿಪ್ರಾಯವನ್ನೂ ಪಡೆದುಕೊಳ್ಳದೆ ಈ ಕಾಯ್ದೆಯನ್ನು ತರಾತುರಿಯಲ್ಲಿ ಜಾರಿಗೊಳಿಸಲು ಹೊರಟಿದೆ. ಸರಕಾರದ‌ ಈ ಅಸಾಂವಿಧಾನಿಕ ಕ್ರಮದ ವಿರುದ್ಧ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯು ವಿಧಾನ ಸೌಧಕ್ಕೆ ಮುತ್ತಿಗೆ ಹಾಕುವ ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಪ್ರತಿಭಟನೆಯ ಹಕ್ಕು ಪ್ರತಿಯೋರ್ವ ನಾಗರಿಕನ ಮೂಲಭೂತ‌ ಹಕ್ಕು. ಆದರೆ ಪೊಲೀಸರು ಪ್ರತಿಭಟನಾ ನಿರತ‌ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಅಕ್ಷಮ್ಯ ಎಂದು ಪಿಎಫ್‌ಐ ಕಿಡಿಕಾರಿದೆ.

ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ವಿದ್ಯಾರ್ಥಿನಿಯರನ್ನೂ ಎಳೆದಾಡಲಾಗಿದೆ. ಮಾತ್ರವಲ್ಲ, ಪೊಲೀಸರು ಹಲವು ವಿದ್ಯಾರ್ಥಿಗಳನ್ನು ಅಕ್ರಮವಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಅಮಾನವೀಯವಾಗಿ ಲಾಠಿಚಾರ್ಜ್ ನಡೆಸಿದ ಪೊಲೀಸರ ಮೇಲೆ ಕಾನೂ‌ನು ಕ್ರಮ ಕೈಗೊಳ್ಳಬೇಕು. ಬಂಧಿತ ವಿದ್ಯಾರ್ಥಿಗಳನ್ನು ಕೂಡಲೇ‌ ಬಿಡುಗಡೆಗೊಳಿಸಬೇಕು. ಶಿಕ್ಷಣವನ್ನು ಕೇಸರೀಕರಣಗೊಳಿಸುವ, ಶಿಕ್ಷಣದ ಬಜಾರೀಕರಣ ನಡೆಸುವ, ರಾಜ್ಯ ಸರಕಾರದ ಅಧಿಕಾರವನ್ನು ಮೊಟಕುಗೊಳಿಸಲುವ, ಶೋಷಿತ ಸಮುದಾಯವನ್ನು ಉನ್ನತ ಶಿಕ್ಷಣದಿಂದ ವಂಚಿತರನ್ನಾಗಿಸುವ ಹೊಸ ಎನ್.ಇ.ಪಿ. ಜಾರಿಗೊಳಿಸುವ ನಿರ್ಧಾರದಿಂದ ರಾಜ್ಯ ಸರಕಾರವು ಹಿಂದೆ ಸರಿಯಬೇಕೆಂದು ಪಿಎಫ್‌ಐ ಆಗ್ರಹಿಸಿದೆ.

“ಹೊಸ ಶಿಕ್ಷಣ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಖಂಡನೀಯ. ವಿದ್ಯಾರ್ಥಿಗಳಿಗೆ ಮೋಸದ ಅರಿವಾಗಿ ಬೀದಿಗಿಳಿದಿದ್ದಾರೆ. ಮುಖ್ಯಮಂತ್ರಿಗಳೇ, ಪೊಲೀಸರ ಲಾಠಿಯಿಂದ ಪ್ರತಿಭಟನೆ ಹತ್ತಿಕ್ಕಬಹುದೆಂದು ತಿಳಿದುಕೊಂಡಿದ್ದರೆ ಅದು ನಿಮ್ಮ ಭ್ರಮೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ. ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಇದೆ. ಮೊದಲು ಹೊಸ ಶಿಕ್ಷಣ ನೀತಿಯ ಜಾರಿಯನ್ನು ಸ್ಥಗಿತಗೊಳಿಸಿ. ವಿದ್ಯಾರ್ಥಿಗಳು, ಹೆತ್ತವರು ಹಾಗೂ ಶಿಕ್ಷಕರ ಜೊತೆ ಚರ್ಚಿಸಿ ನಂತರ ತೀರ್ಮಾನಕ್ಕೆ ಬನ್ನಿ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

“NEP ಯನ್ನು ಒಂದು ವರ್ಷ ಮುಂದೂಡುವಂತೆ ನಾನು ಮಾಡಿದ್ದ ಮನವಿಗೆ ಬಿಜೆಪಿ ಸರ್ಕಾರ ಗಮನ ಕೊಡಲಿಲ್ಲ. ಈಗ ಅದೇ ಹೊಸ ಶಿಕ್ಷಣ ನೀತಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟಿಸುತ್ತಿದ್ದು, ಅಮಾಯಕ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿಗಳ ಬೆಂಬಲಕ್ಕೆ ಸದಾ ನಾನಿದ್ದೇನೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: NEP ಎಂದರೆ ‘ನಾಗ್ಪುರ ಶಿಕ್ಷಣ ನೀತಿ’ – ಡಿ.ಕೆ. ಶಿವಕುಮಾರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...