Homeಕರ್ನಾಟಕಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಮುಂದಾದ ಶಿಕ್ಷಣ ಇಲಾಖೆ; 'ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ' ಸಮಿತಿಯಿಂದ ಸರ್ಕಾರಕ್ಕೆ ಸಲಹೆ

ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಮುಂದಾದ ಶಿಕ್ಷಣ ಇಲಾಖೆ; ‘ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ’ ಸಮಿತಿಯಿಂದ ಸರ್ಕಾರಕ್ಕೆ ಸಲಹೆ

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆ ಕ್ರಮವನ್ನು ವಿರೋಧಿಸಿರುವ ‘ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ’ ಸಮಿತಿಯು, ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದೆ.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಮಿತಿ ಸದಸ್ಯರು, “ಶಿಕ್ಷಣ ಇಲಾಖೆಯು ಹೊಸ ಪರಿಕಲ್ಪನೆಯೊಂದಿಗೆ 4 ರಿಂದ 6 ವರ್ಷದ ಮಕ್ಕಳಿಗೆ ಎಲ್‌.ಕೆ.ಜಿ-ಯುಕೆಜಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡಲು ಸುತ್ತೋಲೆ ಹೊರಡಿಸಿದೆ. ಇದುವರೆಗೂ ರಾಜ್ಯದಲ್ಲಿ 2524 ಶಾಲೆಗಳಲ್ಲಿ ಪ್ರಾರಂಭಿಸಲಾಗಿದೆ. ಇದರಿಂದ ಸರ್ಕಾರದ ಐಸಿಡಿಎಸ್‌ (ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆ) ಯೋಜನೆಯಿಂದ ನಡೆಯುವ ಅಂಗನವಾಡಿ ಕೇಂದ್ರಗಳಿಗೆ ಮತ್ತು ಶಾಲಾಪೂರ್ವ ಶಿಕ್ಷಣ ಕುರಿತ ಇಸಿಸಿಇ ಅಂಶಗಳ ಜಾರಿಗೆ ತೀವ್ರ ಧಕ್ಕೆಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆದ್ದರಿಂದಲೇ, ಕಳದ ಜೂನ್‌ 3 ರಿಂದ ರಾಜ್ಯವ್ಯಾಪಿ ಹೋರಾಟಗಳು ಆರ೦ಭವಾಗಿದ್ದು, ಬೆ೦ಗಳೂರಿನಲ್ಲಿ ಜೂನ್‌ 19 ಮತ್ತು 20 ರಂದು ಭೃಹತ್‌ ಹೋರಾಟ ನಡೆದಿದೆ. ಶಿಕ್ಷಣ ಇಲಾಖೆಯವರ ವಾದ ಏನೆಂದರೆ, ಬಡವರ ಮಕ್ಕಳಿಗೆ ಇಂಗ್ಲಿಷ್‌ ಕಲಿಸಬೇಕು, ಒಂದನೇ ತರಗತಿಗೆ ಬರುವ ಮಗು ಶಾಲಾ ವ್ಯವಸ್ಥೆಗೆ ಸಿದ್ಧವಾಗಿರಬೇಕು ಮತ್ತು ಸರ್ಕಾರಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸಬೇಕು; ಆದ್ದರಿ೦ದ ಮಕ್ಕಳು 4 ವರ್ಷದಿಂದ ಮೇಲ್ಪಟ್ಟವರಿರುವಾಗಲೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕೊಡಬೇಕು ಎಂಬುದಾಗಿದೆ” ಎಂದು ವಿವರಿಸಿದ್ದಾರೆ.

“ಯಾವುದೇ ಮಗುವಿನ 40% ದೈಹಿಕ ಬೆಳವಣಿಗೆ 85% ಮಾನಸಿಕ ಬೆಳವಣಿಗೆಯಾಗುವ ಸ೦ದರ್ಭದಲ್ಲಿ ಲಾಲನೆ ಪಾಲನೆ, ಪೋಷಣೆ ಮತ್ತು ಶಿಕ್ಷಣವನ್ನು ಕೊಡುವ ಸಲುವಾಗಿಯೇ 1975 ರಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ, ಅ೦ಗನವಾಡಿ ಕೇಂದ್ರದ ಪರಿಕಲ್ಪನೆ ಕೂಡ ಬಂದಿರುವುದು. ಶಿಕ್ಷಣ ಇಲಾಖೆಯು ಹೊರಡಿಸಿರುವ ಈ ಮೇಲಿನ ಆದೇಶದಿಂದ ಅಂಗನವಾಡಿ ಕೇಂದ್ರಗಳಲ್ಲಿ 3- 4 ವರ್ಷದ ಮಕ್ಕಳು ಮಾತ್ರವೇ ಉಳಿಯುತ್ತವೆ. ಆಗ ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ತುಂಬಾ ಕಡಿಮೆ ಆಗುತ್ತದೆ. 49 ವರ್ಷಗಳಿಂದ ಸರ್ಕಾರದ ಮಾರ್ಗದರ್ಶನದಲ್ಲಿಯೇ ಐಸಿಡಿಎಸ್‌ ಮೂಲಕ ನಡೆಸಲಾಗುತ್ತಿರುವ ಬಾಲ್ಯದ ಆರೈಕೆ ಮತ್ತು ಶಿಕ್ಷಣ (ಇಸಿಸಿಇ) ಎಲ್ಲಾ ಅ೦ಶಗಳನ್ನು ಒಳಗೊಂಡ ಶಾಲಾಪೂರ್ವ ಶಿಕ್ಷಣಕ್ಕೆ ಗಂಭೀರವಾಗಿ ಧಕ್ಕೆಯಾಗುತ್ತದೆ. ಈ ಯೋಜನೆ ಯಾವಾಗ ಬೇಕಾದರೂ ಕುಸಿದು ಕಣ್ಮರೆಯಾಗುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಐಸಿಡಿಎಸ್‌ ಉಳಿಸಿ; ಮಕ್ಕಳನ್ನು ರಕ್ಷಿಸಿ’ ಸಮಿತಿಯಿಂದ ಸರ್ಕಾರಕ್ಕೆ ಸಲಹೆ

1. ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಕ್ಷಣ ಇಲಾಖೆ ಪರಸ್ಪರ ಚರ್ಚಿಸದೆ ಶಿಕ್ಷಣ ಇಲಾಖೆ ಏಕಮುಖವಾಗಿ ತಂದಿರುವ ಈ ಸುತ್ತೋಲೆಗಳಿ೦ದ ಆಗಿರುವ ಗೊ೦ದಲವನ್ನು ನಿವಾರಿಸಲು, ಎರಡೂ ಇಲಾಖೆಗಳು ಪರಸ್ಪರ ಪ್ರಜಾಸತ್ತಾತ್ಮಕವಾಗಿ ಚರ್ಚಿಸಿ, ಎರಡೂ ಇಲಾಖೆಗಳು ನಡೆಸುತ್ತಿರುವ ಪೂರ್ವ ಪ್ರಾಥಮಿಕ ಶಿಕ್ಷಣದ ಅಗತ್ಯತೆಗಳು ಮತ್ತು ಅದರ ಪರಿಣಾಮಗಳನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸಬೇಕು. ಅಲ್ಲಿಯ ತನಕ 11-6-2024 ರ ಮತ್ತು 19-05-2024 ರ ಆದೇಶಗಳನ್ನು ತಡೆಹಿಡಿಯಬೇಕು, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮ೦ಡಳಿಯ 7 ಜಿಲ್ಲೆಗಳ ವ್ಯಾಪ್ತಿಯನ್ನೂ ಒಳಗೊಂಡು ರಾಜ್ಯದ ಎಲ್ಲಿಯೂ ಜಾರಿಯಾಗಬಾರದು.

2. ಅಂಗನವಾಡಿ ಕೇ೦ದ್ರದ ಹೆಸರು “ಪೂರ್ವ ಪ್ರಾಥಮಿಕ ಶಿಕ್ಷಣ ಕೇ೦ದ್ರ” ಎ೦ದು ಪರಿವರ್ತಿಸುವುದು.

3. ಪಿಯುಸಿಗಿಂತ ಹಚ್ಚು ವಿದ್ಯಾರ್ಹತೆ ಹೊಂದಿರುವ ಮತ್ತು ಸರ್ಕಾರಿ ಶಾಲೆಯ ಅವರಣದಲ್ಲಿರುವ ಅ೦ಗನವಾಡಿ ಕೇಂದ್ರಗಳನ್ನು ಮೊದಲ ಆದ್ಯತೆಯಲ್ಲಿ ಆಯ್ಕೆ ಮಾಡಿಕೊಳ್ಳುವುದು.

4. ನಿರಂತರ ಕೌಶಲ್ಯಭರಿತ ತರಬೇತಿಗಳನ್ನು ಕೊಡುವುದು.

5. ಸರ್ಕಾರದಿಂದ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್‌ ಮತ್ತು ಷೂಗಳನ್ನು ನೀಡುವುದು.

6. ಇಸಿಸಿಇ ನೀಡಿದ ಮಗುವಿಗೆ ‘ಟಿಸಿ’ ಕೊಡುವ ವ್ಯವಸ್ಥೆ ತರಬೇಕು.

7. ಅಂಗನವಾಡಿ ಕಾರ್ಯಕರ್ತರನ್ನು “ಶಿಕ್ಷಕಿ” ಎಂದು ಹೆಸರಿಸಿ ಪದನಾಮ ಬದಲಿಸುವುದು.

8. ಐಸಿಡಿಎಸ್‌ ನಲ್ಲಿರುವ ಇಸಿಸಿಇಗೆ ಅನುದಾನವನ್ನು ನಿರಂತರವಾಗಿ ಹೆಚ್ಚಳ ಮಾಡುವುದು.

9. ಶಿಕ್ಷಣ ಇಲಾಖೆ ಅತಿಥಿ ಶಿಕ್ಷಕರಿಗೆ ನೀಡುವ ಗೌರವಧನವನ್ನು ಈ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ನೀಡುವುದು.

10. ಇಸಿಸಿಇ ಶಿಕ್ಷಣವನ್ನು ಅ೦ಗನವಾಡಿ ಕೇ೦ದ್ರಗಳಲ್ಲಿಯೇ ಕೊಡುವ ಬಗ್ಗೆ ಕಾನೂನು ರೂಪಿಸುವುದು.

11 ಅಂಗನವಾಡಿ ಕಾರ್ಯಕರ್ತೆಯರನ್ನು ನಿರಂತರವಾಗಿ ಚುನಾವಣಾ ಕೆಲಸಗಳಿಂದ ಮುಕ್ತಿಗೊಳಿಸುವುದು (ಚುನಾವಣಾ ಕೆಲಸಗಳಿಗೆ ನಿವೃತ್ತ ಅಂಗನವಾಡಿ ನೌಕರರನ್ನು ಬಳಸಬಹುದು).

12. ಐಸಿಡಿಎಸ್‌ ಯೋಜನೆಯನ್ನು ಪ್ರತ್ಯೇಕ ನಿರ್ದೇಶನಾಲಯವಾಗಿ ಪರಿವರ್ತಿಸಬೇಕು.

ಸುದ್ದಿಗೋಷ್ಠಿಯಲ್ಲಿ ಡಾ. ವಿಜಯಮ್ಮ, ಕೆ.ಎಸ್‌. ವಿಮಲಾ, ಎಸ್‌. ವರಲಕ್ಷ್ಮಿ ಮತ್ತು ಎಚ್‌.ಎಸ್‌ ಸುನಂದಾ ಇದ್ದರು.

ಇದನ್ನೂ ಓದಿ; ನರೇಂದ್ರ ಮೋದಿ, ಅಮಿತ್ ಶಾ ಅವರ ಸಂವಿಧಾನದ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...