Homeಕರ್ನಾಟಕಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಮುಂದಾದ ಶಿಕ್ಷಣ ಇಲಾಖೆ; 'ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ' ಸಮಿತಿಯಿಂದ ಸರ್ಕಾರಕ್ಕೆ ಸಲಹೆ

ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಮುಂದಾದ ಶಿಕ್ಷಣ ಇಲಾಖೆ; ‘ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ’ ಸಮಿತಿಯಿಂದ ಸರ್ಕಾರಕ್ಕೆ ಸಲಹೆ

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆ ಕ್ರಮವನ್ನು ವಿರೋಧಿಸಿರುವ ‘ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ’ ಸಮಿತಿಯು, ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದೆ.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಮಿತಿ ಸದಸ್ಯರು, “ಶಿಕ್ಷಣ ಇಲಾಖೆಯು ಹೊಸ ಪರಿಕಲ್ಪನೆಯೊಂದಿಗೆ 4 ರಿಂದ 6 ವರ್ಷದ ಮಕ್ಕಳಿಗೆ ಎಲ್‌.ಕೆ.ಜಿ-ಯುಕೆಜಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡಲು ಸುತ್ತೋಲೆ ಹೊರಡಿಸಿದೆ. ಇದುವರೆಗೂ ರಾಜ್ಯದಲ್ಲಿ 2524 ಶಾಲೆಗಳಲ್ಲಿ ಪ್ರಾರಂಭಿಸಲಾಗಿದೆ. ಇದರಿಂದ ಸರ್ಕಾರದ ಐಸಿಡಿಎಸ್‌ (ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆ) ಯೋಜನೆಯಿಂದ ನಡೆಯುವ ಅಂಗನವಾಡಿ ಕೇಂದ್ರಗಳಿಗೆ ಮತ್ತು ಶಾಲಾಪೂರ್ವ ಶಿಕ್ಷಣ ಕುರಿತ ಇಸಿಸಿಇ ಅಂಶಗಳ ಜಾರಿಗೆ ತೀವ್ರ ಧಕ್ಕೆಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆದ್ದರಿಂದಲೇ, ಕಳದ ಜೂನ್‌ 3 ರಿಂದ ರಾಜ್ಯವ್ಯಾಪಿ ಹೋರಾಟಗಳು ಆರ೦ಭವಾಗಿದ್ದು, ಬೆ೦ಗಳೂರಿನಲ್ಲಿ ಜೂನ್‌ 19 ಮತ್ತು 20 ರಂದು ಭೃಹತ್‌ ಹೋರಾಟ ನಡೆದಿದೆ. ಶಿಕ್ಷಣ ಇಲಾಖೆಯವರ ವಾದ ಏನೆಂದರೆ, ಬಡವರ ಮಕ್ಕಳಿಗೆ ಇಂಗ್ಲಿಷ್‌ ಕಲಿಸಬೇಕು, ಒಂದನೇ ತರಗತಿಗೆ ಬರುವ ಮಗು ಶಾಲಾ ವ್ಯವಸ್ಥೆಗೆ ಸಿದ್ಧವಾಗಿರಬೇಕು ಮತ್ತು ಸರ್ಕಾರಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸಬೇಕು; ಆದ್ದರಿ೦ದ ಮಕ್ಕಳು 4 ವರ್ಷದಿಂದ ಮೇಲ್ಪಟ್ಟವರಿರುವಾಗಲೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕೊಡಬೇಕು ಎಂಬುದಾಗಿದೆ” ಎಂದು ವಿವರಿಸಿದ್ದಾರೆ.

“ಯಾವುದೇ ಮಗುವಿನ 40% ದೈಹಿಕ ಬೆಳವಣಿಗೆ 85% ಮಾನಸಿಕ ಬೆಳವಣಿಗೆಯಾಗುವ ಸ೦ದರ್ಭದಲ್ಲಿ ಲಾಲನೆ ಪಾಲನೆ, ಪೋಷಣೆ ಮತ್ತು ಶಿಕ್ಷಣವನ್ನು ಕೊಡುವ ಸಲುವಾಗಿಯೇ 1975 ರಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ, ಅ೦ಗನವಾಡಿ ಕೇಂದ್ರದ ಪರಿಕಲ್ಪನೆ ಕೂಡ ಬಂದಿರುವುದು. ಶಿಕ್ಷಣ ಇಲಾಖೆಯು ಹೊರಡಿಸಿರುವ ಈ ಮೇಲಿನ ಆದೇಶದಿಂದ ಅಂಗನವಾಡಿ ಕೇಂದ್ರಗಳಲ್ಲಿ 3- 4 ವರ್ಷದ ಮಕ್ಕಳು ಮಾತ್ರವೇ ಉಳಿಯುತ್ತವೆ. ಆಗ ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ತುಂಬಾ ಕಡಿಮೆ ಆಗುತ್ತದೆ. 49 ವರ್ಷಗಳಿಂದ ಸರ್ಕಾರದ ಮಾರ್ಗದರ್ಶನದಲ್ಲಿಯೇ ಐಸಿಡಿಎಸ್‌ ಮೂಲಕ ನಡೆಸಲಾಗುತ್ತಿರುವ ಬಾಲ್ಯದ ಆರೈಕೆ ಮತ್ತು ಶಿಕ್ಷಣ (ಇಸಿಸಿಇ) ಎಲ್ಲಾ ಅ೦ಶಗಳನ್ನು ಒಳಗೊಂಡ ಶಾಲಾಪೂರ್ವ ಶಿಕ್ಷಣಕ್ಕೆ ಗಂಭೀರವಾಗಿ ಧಕ್ಕೆಯಾಗುತ್ತದೆ. ಈ ಯೋಜನೆ ಯಾವಾಗ ಬೇಕಾದರೂ ಕುಸಿದು ಕಣ್ಮರೆಯಾಗುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಐಸಿಡಿಎಸ್‌ ಉಳಿಸಿ; ಮಕ್ಕಳನ್ನು ರಕ್ಷಿಸಿ’ ಸಮಿತಿಯಿಂದ ಸರ್ಕಾರಕ್ಕೆ ಸಲಹೆ

1. ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಕ್ಷಣ ಇಲಾಖೆ ಪರಸ್ಪರ ಚರ್ಚಿಸದೆ ಶಿಕ್ಷಣ ಇಲಾಖೆ ಏಕಮುಖವಾಗಿ ತಂದಿರುವ ಈ ಸುತ್ತೋಲೆಗಳಿ೦ದ ಆಗಿರುವ ಗೊ೦ದಲವನ್ನು ನಿವಾರಿಸಲು, ಎರಡೂ ಇಲಾಖೆಗಳು ಪರಸ್ಪರ ಪ್ರಜಾಸತ್ತಾತ್ಮಕವಾಗಿ ಚರ್ಚಿಸಿ, ಎರಡೂ ಇಲಾಖೆಗಳು ನಡೆಸುತ್ತಿರುವ ಪೂರ್ವ ಪ್ರಾಥಮಿಕ ಶಿಕ್ಷಣದ ಅಗತ್ಯತೆಗಳು ಮತ್ತು ಅದರ ಪರಿಣಾಮಗಳನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸಬೇಕು. ಅಲ್ಲಿಯ ತನಕ 11-6-2024 ರ ಮತ್ತು 19-05-2024 ರ ಆದೇಶಗಳನ್ನು ತಡೆಹಿಡಿಯಬೇಕು, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮ೦ಡಳಿಯ 7 ಜಿಲ್ಲೆಗಳ ವ್ಯಾಪ್ತಿಯನ್ನೂ ಒಳಗೊಂಡು ರಾಜ್ಯದ ಎಲ್ಲಿಯೂ ಜಾರಿಯಾಗಬಾರದು.

2. ಅಂಗನವಾಡಿ ಕೇ೦ದ್ರದ ಹೆಸರು “ಪೂರ್ವ ಪ್ರಾಥಮಿಕ ಶಿಕ್ಷಣ ಕೇ೦ದ್ರ” ಎ೦ದು ಪರಿವರ್ತಿಸುವುದು.

3. ಪಿಯುಸಿಗಿಂತ ಹಚ್ಚು ವಿದ್ಯಾರ್ಹತೆ ಹೊಂದಿರುವ ಮತ್ತು ಸರ್ಕಾರಿ ಶಾಲೆಯ ಅವರಣದಲ್ಲಿರುವ ಅ೦ಗನವಾಡಿ ಕೇಂದ್ರಗಳನ್ನು ಮೊದಲ ಆದ್ಯತೆಯಲ್ಲಿ ಆಯ್ಕೆ ಮಾಡಿಕೊಳ್ಳುವುದು.

4. ನಿರಂತರ ಕೌಶಲ್ಯಭರಿತ ತರಬೇತಿಗಳನ್ನು ಕೊಡುವುದು.

5. ಸರ್ಕಾರದಿಂದ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್‌ ಮತ್ತು ಷೂಗಳನ್ನು ನೀಡುವುದು.

6. ಇಸಿಸಿಇ ನೀಡಿದ ಮಗುವಿಗೆ ‘ಟಿಸಿ’ ಕೊಡುವ ವ್ಯವಸ್ಥೆ ತರಬೇಕು.

7. ಅಂಗನವಾಡಿ ಕಾರ್ಯಕರ್ತರನ್ನು “ಶಿಕ್ಷಕಿ” ಎಂದು ಹೆಸರಿಸಿ ಪದನಾಮ ಬದಲಿಸುವುದು.

8. ಐಸಿಡಿಎಸ್‌ ನಲ್ಲಿರುವ ಇಸಿಸಿಇಗೆ ಅನುದಾನವನ್ನು ನಿರಂತರವಾಗಿ ಹೆಚ್ಚಳ ಮಾಡುವುದು.

9. ಶಿಕ್ಷಣ ಇಲಾಖೆ ಅತಿಥಿ ಶಿಕ್ಷಕರಿಗೆ ನೀಡುವ ಗೌರವಧನವನ್ನು ಈ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ನೀಡುವುದು.

10. ಇಸಿಸಿಇ ಶಿಕ್ಷಣವನ್ನು ಅ೦ಗನವಾಡಿ ಕೇ೦ದ್ರಗಳಲ್ಲಿಯೇ ಕೊಡುವ ಬಗ್ಗೆ ಕಾನೂನು ರೂಪಿಸುವುದು.

11 ಅಂಗನವಾಡಿ ಕಾರ್ಯಕರ್ತೆಯರನ್ನು ನಿರಂತರವಾಗಿ ಚುನಾವಣಾ ಕೆಲಸಗಳಿಂದ ಮುಕ್ತಿಗೊಳಿಸುವುದು (ಚುನಾವಣಾ ಕೆಲಸಗಳಿಗೆ ನಿವೃತ್ತ ಅಂಗನವಾಡಿ ನೌಕರರನ್ನು ಬಳಸಬಹುದು).

12. ಐಸಿಡಿಎಸ್‌ ಯೋಜನೆಯನ್ನು ಪ್ರತ್ಯೇಕ ನಿರ್ದೇಶನಾಲಯವಾಗಿ ಪರಿವರ್ತಿಸಬೇಕು.

ಸುದ್ದಿಗೋಷ್ಠಿಯಲ್ಲಿ ಡಾ. ವಿಜಯಮ್ಮ, ಕೆ.ಎಸ್‌. ವಿಮಲಾ, ಎಸ್‌. ವರಲಕ್ಷ್ಮಿ ಮತ್ತು ಎಚ್‌.ಎಸ್‌ ಸುನಂದಾ ಇದ್ದರು.

ಇದನ್ನೂ ಓದಿ; ನರೇಂದ್ರ ಮೋದಿ, ಅಮಿತ್ ಶಾ ಅವರ ಸಂವಿಧಾನದ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...