Homeಕರ್ನಾಟಕಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಮುಂದಾದ ಶಿಕ್ಷಣ ಇಲಾಖೆ; 'ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ' ಸಮಿತಿಯಿಂದ ಸರ್ಕಾರಕ್ಕೆ ಸಲಹೆ

ಎಲ್‌ಕೆಜಿ-ಯುಕೆಜಿ ಪ್ರಾರಂಭಿಸಲು ಮುಂದಾದ ಶಿಕ್ಷಣ ಇಲಾಖೆ; ‘ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ’ ಸಮಿತಿಯಿಂದ ಸರ್ಕಾರಕ್ಕೆ ಸಲಹೆ

- Advertisement -
- Advertisement -

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭಿಸಲು ಮುಂದಾಗಿರುವ ಶಿಕ್ಷಣ ಇಲಾಖೆ ಕ್ರಮವನ್ನು ವಿರೋಧಿಸಿರುವ ‘ಐಸಿಡಿಎಸ್‌ ಉಳಿಸಿ, ಮಕ್ಕಳನ್ನು ರಕ್ಷಿಸಿ’ ಸಮಿತಿಯು, ಸರ್ಕಾರಕ್ಕೆ ಕೆಲವು ಸಲಹೆಗಳನ್ನು ನೀಡಿದೆ.

ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಮಿತಿ ಸದಸ್ಯರು, “ಶಿಕ್ಷಣ ಇಲಾಖೆಯು ಹೊಸ ಪರಿಕಲ್ಪನೆಯೊಂದಿಗೆ 4 ರಿಂದ 6 ವರ್ಷದ ಮಕ್ಕಳಿಗೆ ಎಲ್‌.ಕೆ.ಜಿ-ಯುಕೆಜಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ನೀಡಲು ಸುತ್ತೋಲೆ ಹೊರಡಿಸಿದೆ. ಇದುವರೆಗೂ ರಾಜ್ಯದಲ್ಲಿ 2524 ಶಾಲೆಗಳಲ್ಲಿ ಪ್ರಾರಂಭಿಸಲಾಗಿದೆ. ಇದರಿಂದ ಸರ್ಕಾರದ ಐಸಿಡಿಎಸ್‌ (ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆಗಳ ಯೋಜನೆ) ಯೋಜನೆಯಿಂದ ನಡೆಯುವ ಅಂಗನವಾಡಿ ಕೇಂದ್ರಗಳಿಗೆ ಮತ್ತು ಶಾಲಾಪೂರ್ವ ಶಿಕ್ಷಣ ಕುರಿತ ಇಸಿಸಿಇ ಅಂಶಗಳ ಜಾರಿಗೆ ತೀವ್ರ ಧಕ್ಕೆಯಾಗಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆದ್ದರಿಂದಲೇ, ಕಳದ ಜೂನ್‌ 3 ರಿಂದ ರಾಜ್ಯವ್ಯಾಪಿ ಹೋರಾಟಗಳು ಆರ೦ಭವಾಗಿದ್ದು, ಬೆ೦ಗಳೂರಿನಲ್ಲಿ ಜೂನ್‌ 19 ಮತ್ತು 20 ರಂದು ಭೃಹತ್‌ ಹೋರಾಟ ನಡೆದಿದೆ. ಶಿಕ್ಷಣ ಇಲಾಖೆಯವರ ವಾದ ಏನೆಂದರೆ, ಬಡವರ ಮಕ್ಕಳಿಗೆ ಇಂಗ್ಲಿಷ್‌ ಕಲಿಸಬೇಕು, ಒಂದನೇ ತರಗತಿಗೆ ಬರುವ ಮಗು ಶಾಲಾ ವ್ಯವಸ್ಥೆಗೆ ಸಿದ್ಧವಾಗಿರಬೇಕು ಮತ್ತು ಸರ್ಕಾರಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸಬೇಕು; ಆದ್ದರಿ೦ದ ಮಕ್ಕಳು 4 ವರ್ಷದಿಂದ ಮೇಲ್ಪಟ್ಟವರಿರುವಾಗಲೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕೊಡಬೇಕು ಎಂಬುದಾಗಿದೆ” ಎಂದು ವಿವರಿಸಿದ್ದಾರೆ.

“ಯಾವುದೇ ಮಗುವಿನ 40% ದೈಹಿಕ ಬೆಳವಣಿಗೆ 85% ಮಾನಸಿಕ ಬೆಳವಣಿಗೆಯಾಗುವ ಸ೦ದರ್ಭದಲ್ಲಿ ಲಾಲನೆ ಪಾಲನೆ, ಪೋಷಣೆ ಮತ್ತು ಶಿಕ್ಷಣವನ್ನು ಕೊಡುವ ಸಲುವಾಗಿಯೇ 1975 ರಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪ್ರಾರಂಭವಾಗಿ, ಅ೦ಗನವಾಡಿ ಕೇಂದ್ರದ ಪರಿಕಲ್ಪನೆ ಕೂಡ ಬಂದಿರುವುದು. ಶಿಕ್ಷಣ ಇಲಾಖೆಯು ಹೊರಡಿಸಿರುವ ಈ ಮೇಲಿನ ಆದೇಶದಿಂದ ಅಂಗನವಾಡಿ ಕೇಂದ್ರಗಳಲ್ಲಿ 3- 4 ವರ್ಷದ ಮಕ್ಕಳು ಮಾತ್ರವೇ ಉಳಿಯುತ್ತವೆ. ಆಗ ಅಂಗನವಾಡಿಗಳಲ್ಲಿ ಮಕ್ಕಳ ಸಂಖ್ಯೆ ತುಂಬಾ ಕಡಿಮೆ ಆಗುತ್ತದೆ. 49 ವರ್ಷಗಳಿಂದ ಸರ್ಕಾರದ ಮಾರ್ಗದರ್ಶನದಲ್ಲಿಯೇ ಐಸಿಡಿಎಸ್‌ ಮೂಲಕ ನಡೆಸಲಾಗುತ್ತಿರುವ ಬಾಲ್ಯದ ಆರೈಕೆ ಮತ್ತು ಶಿಕ್ಷಣ (ಇಸಿಸಿಇ) ಎಲ್ಲಾ ಅ೦ಶಗಳನ್ನು ಒಳಗೊಂಡ ಶಾಲಾಪೂರ್ವ ಶಿಕ್ಷಣಕ್ಕೆ ಗಂಭೀರವಾಗಿ ಧಕ್ಕೆಯಾಗುತ್ತದೆ. ಈ ಯೋಜನೆ ಯಾವಾಗ ಬೇಕಾದರೂ ಕುಸಿದು ಕಣ್ಮರೆಯಾಗುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಐಸಿಡಿಎಸ್‌ ಉಳಿಸಿ; ಮಕ್ಕಳನ್ನು ರಕ್ಷಿಸಿ’ ಸಮಿತಿಯಿಂದ ಸರ್ಕಾರಕ್ಕೆ ಸಲಹೆ

1. ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಕ್ಷಣ ಇಲಾಖೆ ಪರಸ್ಪರ ಚರ್ಚಿಸದೆ ಶಿಕ್ಷಣ ಇಲಾಖೆ ಏಕಮುಖವಾಗಿ ತಂದಿರುವ ಈ ಸುತ್ತೋಲೆಗಳಿ೦ದ ಆಗಿರುವ ಗೊ೦ದಲವನ್ನು ನಿವಾರಿಸಲು, ಎರಡೂ ಇಲಾಖೆಗಳು ಪರಸ್ಪರ ಪ್ರಜಾಸತ್ತಾತ್ಮಕವಾಗಿ ಚರ್ಚಿಸಿ, ಎರಡೂ ಇಲಾಖೆಗಳು ನಡೆಸುತ್ತಿರುವ ಪೂರ್ವ ಪ್ರಾಥಮಿಕ ಶಿಕ್ಷಣದ ಅಗತ್ಯತೆಗಳು ಮತ್ತು ಅದರ ಪರಿಣಾಮಗಳನ್ನು ಅಧ್ಯಯನ ಮಾಡಲು ತಜ್ಞರ ಸಮಿತಿಯನ್ನು ರಚಿಸಬೇಕು. ಅಲ್ಲಿಯ ತನಕ 11-6-2024 ರ ಮತ್ತು 19-05-2024 ರ ಆದೇಶಗಳನ್ನು ತಡೆಹಿಡಿಯಬೇಕು, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮ೦ಡಳಿಯ 7 ಜಿಲ್ಲೆಗಳ ವ್ಯಾಪ್ತಿಯನ್ನೂ ಒಳಗೊಂಡು ರಾಜ್ಯದ ಎಲ್ಲಿಯೂ ಜಾರಿಯಾಗಬಾರದು.

2. ಅಂಗನವಾಡಿ ಕೇ೦ದ್ರದ ಹೆಸರು “ಪೂರ್ವ ಪ್ರಾಥಮಿಕ ಶಿಕ್ಷಣ ಕೇ೦ದ್ರ” ಎ೦ದು ಪರಿವರ್ತಿಸುವುದು.

3. ಪಿಯುಸಿಗಿಂತ ಹಚ್ಚು ವಿದ್ಯಾರ್ಹತೆ ಹೊಂದಿರುವ ಮತ್ತು ಸರ್ಕಾರಿ ಶಾಲೆಯ ಅವರಣದಲ್ಲಿರುವ ಅ೦ಗನವಾಡಿ ಕೇಂದ್ರಗಳನ್ನು ಮೊದಲ ಆದ್ಯತೆಯಲ್ಲಿ ಆಯ್ಕೆ ಮಾಡಿಕೊಳ್ಳುವುದು.

4. ನಿರಂತರ ಕೌಶಲ್ಯಭರಿತ ತರಬೇತಿಗಳನ್ನು ಕೊಡುವುದು.

5. ಸರ್ಕಾರದಿಂದ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್‌ ಮತ್ತು ಷೂಗಳನ್ನು ನೀಡುವುದು.

6. ಇಸಿಸಿಇ ನೀಡಿದ ಮಗುವಿಗೆ ‘ಟಿಸಿ’ ಕೊಡುವ ವ್ಯವಸ್ಥೆ ತರಬೇಕು.

7. ಅಂಗನವಾಡಿ ಕಾರ್ಯಕರ್ತರನ್ನು “ಶಿಕ್ಷಕಿ” ಎಂದು ಹೆಸರಿಸಿ ಪದನಾಮ ಬದಲಿಸುವುದು.

8. ಐಸಿಡಿಎಸ್‌ ನಲ್ಲಿರುವ ಇಸಿಸಿಇಗೆ ಅನುದಾನವನ್ನು ನಿರಂತರವಾಗಿ ಹೆಚ್ಚಳ ಮಾಡುವುದು.

9. ಶಿಕ್ಷಣ ಇಲಾಖೆ ಅತಿಥಿ ಶಿಕ್ಷಕರಿಗೆ ನೀಡುವ ಗೌರವಧನವನ್ನು ಈ ಕಾರ್ಯಕರ್ತೆಯರಿಗೆ ಹೆಚ್ಚುವರಿಯಾಗಿ ನೀಡುವುದು.

10. ಇಸಿಸಿಇ ಶಿಕ್ಷಣವನ್ನು ಅ೦ಗನವಾಡಿ ಕೇ೦ದ್ರಗಳಲ್ಲಿಯೇ ಕೊಡುವ ಬಗ್ಗೆ ಕಾನೂನು ರೂಪಿಸುವುದು.

11 ಅಂಗನವಾಡಿ ಕಾರ್ಯಕರ್ತೆಯರನ್ನು ನಿರಂತರವಾಗಿ ಚುನಾವಣಾ ಕೆಲಸಗಳಿಂದ ಮುಕ್ತಿಗೊಳಿಸುವುದು (ಚುನಾವಣಾ ಕೆಲಸಗಳಿಗೆ ನಿವೃತ್ತ ಅಂಗನವಾಡಿ ನೌಕರರನ್ನು ಬಳಸಬಹುದು).

12. ಐಸಿಡಿಎಸ್‌ ಯೋಜನೆಯನ್ನು ಪ್ರತ್ಯೇಕ ನಿರ್ದೇಶನಾಲಯವಾಗಿ ಪರಿವರ್ತಿಸಬೇಕು.

ಸುದ್ದಿಗೋಷ್ಠಿಯಲ್ಲಿ ಡಾ. ವಿಜಯಮ್ಮ, ಕೆ.ಎಸ್‌. ವಿಮಲಾ, ಎಸ್‌. ವರಲಕ್ಷ್ಮಿ ಮತ್ತು ಎಚ್‌.ಎಸ್‌ ಸುನಂದಾ ಇದ್ದರು.

ಇದನ್ನೂ ಓದಿ; ನರೇಂದ್ರ ಮೋದಿ, ಅಮಿತ್ ಶಾ ಅವರ ಸಂವಿಧಾನದ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...