Homeಮುಖಪುಟಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

- Advertisement -
- Advertisement -

ನಾಲ್ಕು ತಿಂಗಳ ಬಾಂಬ್‌ ದಾಳಿಯ ಮೂಲಕ ಗಾಝಾವನ್ನು ಬಹುಪಾಲು ಭಗ್ನಾವಶೇಷಗಳಾಗಿ ಮಾಡಿದ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ರಕ್ಷಣಾ ಪಡೆಗೆ (IDF) ಈಜಿಪ್ಟ್ ಗಡಿಯಲ್ಲಿರುವ ದಕ್ಷಿಣ ಗಾಝಾ ಪಟ್ಟಣವಾದ ರಫಾವನ್ನು ವಶಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಸಂಪೂರ್ಣ ಗೆಲುವು ಕೈಗೆಟುಕಲು ಇಸ್ರೇಲ್‌ಗೆ ಇನ್ನೇನು ಬಾಕಿ ಉಳಿದಿದೆ ಎಂಬಂತಹ ಪರಿಸ್ಥಿ ಇದೆ. ಜನಾಂಗೀಯ ಹತ್ಯೆ, ಜನರ ಬಲವಂತದ ವರ್ಗಾವಣೆ ಮೂಲಕ ಇಸ್ರೇಲ್‌ ತನ್ನ ನೈಜ ಮುಖವನ್ನು ವಿಶ್ವಕ್ಕೆ ಅನಾವರಣಗೊಳಿಸಿದೆ. ನಾಗರಿಕರ ನೋವು ಇಸ್ರೇಲ್‌ನ್ನು ಕ್ರೂರ ಕೃತ್ಯದಿಂದ ಹಿಂದೆ ಸರಿಯುವಂತೆ ಮಾಡಿಲ್ಲ. ನೆತನ್ಯಾಹು  ರಕ್ತಪಾತದ  ಬೆದರಿಕೆಯನ್ನು ಮುಂದವರಿಸಿದ್ದಾರೆ. ಗಾಝಾದಲ್ಲಿ ಕಾನೂನು ಮತ್ತು ಮಾನವೀಯತೆಯನ್ನು ಹೂತು ಹಾಕಿದ್ದಾರೆ.

ಅ.7ರಂದು ಇಸ್ರೇಲ್ ಗಾಝಾದ ಮೇಲೆ ಯುದ್ಧ ಘೋಷಿಸಿದ ಬಳಿಕ ಆ ಪ್ರದೇಶದಲ್ಲಿ ಸಾವಿನ ಸಂಖ್ಯೆ 29,000 ಮೀರಿದೆ. 69,000ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದಾರೆ ಎಂದು ಯುಎನ್ ವರದಿ ತಿಳಿಸಿದೆ. ಆದರೆ ವಾಸ್ತವ ಸಾವು ಮತ್ತು ಗಾಯಾಳುಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳದ ಸಾಧ್ಯತೆ ಇದೆ. ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಗೆ ಲಕ್ಷಾಂತರ ಮನೆಗಳು, ಕಟ್ಟಡಗಳು ಧ್ವಂಸಗೊಂಡಿದೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ಕಿಕ್ಕಿರಿದ ಜನಸಂದಣಿಯ ನಿರಾಶ್ರಿತರ ಕೇಂದ್ರಗಳಲ್ಲಿ ದಿನದೂಡುವಂತಾಗಿದೆ. ಗಾಝಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಗ್ಧ ಮಕ್ಕಳು ಮತ್ತು ಮಹಿಳೆಯರ ಹತ್ಯೆ ನಡೆಸಿದರೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ದಾಹ ಮುಗಿದಿಲ್ಲ. ಹಮಾಸ್‌ನ್ನು ಸಂಪೂರ್ಣ ನಿರ್ನಾಮ ಮಾಡುತ್ತೇವೆ ಎಂದು ಹೇಳುತ್ತಿರುವ ನೆತನ್ಯಾಹು, ಪ್ಯಾಲೆಸ್ತೀನ್‌ನ ಮುಗ್ಧ ನಾಗರಿಕರ ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಗಾಝಾದಲ್ಲಿನ ಯುದ್ಧ ನಿರಾಶ್ರಿತರಿಗೆ ಮಾನವೀಯ ನೆರವನ್ನು ತಡೆಯುತ್ತಿರುವುದು ಮತ್ತು ಶುದ್ಧ ನೀರಿನ ಕೇಂದ್ರಗಳ ಮೇಲೆ ದಾಳಿ ನಡೆಸಿ ಕುಡಿಯಲು ಅಯೋಗ್ಯವನ್ನಾಗಿ ಮಾಡುವುದು ಇಸ್ರೇಲ್‌ ಯುದ್ಧ ಕ್ರೌರ್ಯವನ್ನು ಬಿಚ್ಚಿಡುತ್ತಿದೆ.

2007ರಲ್ಲಿ ಇಸ್ರೇಲ್ ಗಾಝಾದ ಮೇಲೆ ಆಕ್ರಮಿಸಿದ ಬಳಿಕ ರಫಾವು ಗಾಝಾದ ಯುದ್ದ ಸಂತ್ರಸ್ತ ಪ್ರದೇಶಕ್ಕೆ  ಹೆಚ್ಚಿನ ಮಾನವೀಯ ಸರಬರಾಜುಗಳನ್ನು ತಲುಪಿಸುವ ಮಾರ್ಗವಾಗಿತ್ತು. ಇಸ್ರೇಲ್‌ ಆಕ್ರಮಣಕ್ಕೆ ಮುಂಚಿತವಾಗಿ ಒಂದು ಲಕ್ಷ ಜನರು ಇಲ್ಲಿ ವಾಸಿಸುತ್ತಿದ್ದರು. ಇತ್ತೀಚಿನ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಒಂದೂವರೆ ಮಿಲಿಯನ್‌ ಜನರು ಗಾಝಾದ ರಫಾವನ್ನು ಆಶ್ರಯ ಕೇಂದ್ರವನ್ನಾಗಿಸಿಕೊಂಡಿದ್ದಾರೆ. ಜನ ಸಂದಣಿಯಿಂದಾಗಿ ರಫಾದಲ್ಲಿ ವಾಸಿಸುವ ಜನರು ನೀರಿನ ಕೊರತೆ, ಮೂಲ ಸೌಕರ್ಯದ ಕೊರತೆ, ಆಹಾರದ ಕೊರತೆ, ನೈರ್ಮಲ್ಯದ ಕೊರತೆ, ಸಾಂಕ್ರಾಮಿಕ ರೋಗದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಆಸ್ಪತ್ರೆಗಳು, ಮನೆಗಳು ಮತ್ತು ಮಸೀದಿಗಳನ್ನು ಧ್ವಂಸ ಮಾಡಿದೆ. ರಫಾದಲ್ಲಿ ಕೂಡ ಡಜನ್‌ ಗಟ್ಟಲೆ ಜನರನ್ನು ಹತ್ಯೆ ಮಾಡಿದೆ.

UNICEF ಹೇಳುವಂತೆ ಗಾಝಾವು ಮಕ್ಕಳ ಸಾವುಗಳ ಕೇಂದ್ರವಾಗುತ್ತಿದೆ. ಹತ್ತಾರು ಯುರೋಪಿಯನ್ ರಾಷ್ಟ್ರಗಳು  ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿವೆ. ರಫಾದ ಮೇಲೆ ಇಸ್ರೇಲ್‌ ಆಕ್ರಮಣವನ್ನು ಕೈಬಿಡುವಂತೆ ಆಗ್ರಹಿಸಿದೆ. ಅಲ್ ಜಝೀರಾ ವರದಿಯ ಪ್ರಕಾರ, ಉತ್ತರ ಗಾಝಾದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ ಅಂದರೆ ಆಹಾರದ ಪೊಟ್ಟಣಕ್ಕೆ ಕಾಯುತ್ತಿದ್ದ ಪ್ಯಾಲೆಸ್ತೀನ್‌ ನಾಗರಿಕರ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಗಾಝಾದಲ್ಲಿ ಅಪೌಷ್ಟಿಕತೆಯ ಕುರಿತು ಯುಎನ್‌ನ ಮಕ್ಕಳ ಸಂಸ್ಥೆ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)  ಕಳವಳವನ್ನು ವ್ಯಕ್ತಪಡಿಸಿದೆ. ಗಾಝಾ ಪಟ್ಟಿಯು ಪೌಷ್ಟಿಕಾಂಶದ ಬಿಕ್ಕಟ್ಟಿನ ಅಂಚಿನಲ್ಲಿದೆ ಎಂದು ನಾವು ವಾರಗಳಿಂದ ಎಚ್ಚರಿಸುತ್ತಿದ್ದೇವೆ. ಗಾಝಾದಲ್ಲಿ ಊಹಿಸಲು ಅಸಾಧ್ಯವಾದ ಮಟ್ಟದಲ್ಲಿ ಮಕ್ಕಳ ಸಾವುಗಳು ಸಂಭವಿಸುತ್ತದೆ ಎಂದು ಯುನಿಸೆಫ್‌ನ ಉಪ ಕಾರ್ಯನಿರ್ವಾಹಕ ನಿರ್ದೇಶಕ ಟೆಡ್ ಚೈಬಾನ್ ಹೇಳಿದ್ದಾರೆ.

ವರದಿಯ ಪ್ರಕಾರ, ಗಾಝಾದ ಉತ್ತರದಲ್ಲಿ ಪರಿಸ್ಥಿತಿಯು ಚಿಂತಾಜನಕವಾಗಿದೆ, ಈ ಪ್ರದೇಶಗಳಲ್ಲಿ ವಾರಗಳಿಂದ ಎಲ್ಲಾ ಮಾನವೀಯ ನೆರವು ಪರಿಹಾರ ಕಡಿತಗೊಂಡಿದೆ ಮತ್ತು ಅಲ್ಲಿನ ಆರು ಮಕ್ಕಳಲ್ಲಿ ಒಂದು ಮಗು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದೆ. ರಾಫಾದಲ್ಲಿ ಎರಡಕ್ಕಿಂತ ಕಡಿಮೆ ವಯಸ್ಸಿನ 5 ಪ್ರತಿಶತ ಮಕ್ಕಳು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಹಸಿವು ಮತ್ತು ರೋಗವು ಮಾರಣಾಂತಿಕವಾಗಿದೆ ಎಂದು WHO ನ ಆರೋಗ್ಯ ತುರ್ತು ಕಾರ್ಯಕ್ರಮದ ಮುಖ್ಯಸ್ಥ ಡಾ ಮೈಕ್ ರಯಾನ್ ಹೇಳಿದ್ದಾರೆ. ಹಸಿದ, ದುರ್ಬಲಗೊಂಡ ಮತ್ತು ಆಳವಾಗಿ ಆಘಾತಕ್ಕೊಳಗಾದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಇದು ಅಪಾಯಕಾರಿ ಮತ್ತು ಈ ದುರಂತ ನಮ್ಮ ಕಣ್ಣುಗಳ ಮುಂದೆ ನಡೆಯುತ್ತಿದೆ ಎಂದು ರಯಾನ್ ಹೇಳಿದ್ದಾರೆ.

ಐರಿಷ್ ವಿದೇಶಾಂಗ ಸಚಿವ ಮೈಕೆಲ್ ಮಾರ್ಟಿನ್ ಅವರು ದಕ್ಷಿಣ ಗಾಝಾದ ರಫಾಹ್ ಮೇಲೆ ದಾಳಿ ಮಾಡದಂತೆ ಯುರೋಪಿಯನ್ ಒಕ್ಕೂಟವು ಇಸ್ರೇಲ್‌ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ. ಬ್ರಸೆಲ್ಸ್‌ನಲ್ಲಿ ಮಾತನಾಡಿದ ಮಾರ್ಟಿನ್, ಗಾಝಾದಲ್ಲಿ ಈಗ ನಡೆಯುತ್ತಿರುವ ಅಮಾನವೀಯತೆಯ ಮಟ್ಟ ಜಗತ್ತನ್ನು ಬೆಚ್ಚಿಬೀಳಿಸಿದೆ. ರಫಾದಲ್ಲಿ ಇಸ್ರೇಲ್‌ನ ಯೋಜಿತ ಆಕ್ರಮಣವನ್ನು ತಡೆಯಲು ಯುರೋಪ್ ಸಾಧ್ಯವಾದ ಎಲ್ಲವನ್ನೂ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಭಾನುವಾರ ಮತ್ತು ಸೋಮವಾರದ ನಡುವೆ ಗಾಝಾದ ಮೇಲಿನ ಇಸ್ರೇಲ್‌ ದಾಳಿಯಲ್ಲಿ ಹೆಚ್ಚುವರಿ 107 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ. ಈ ದಾಳಿಯಲ್ಲಿ 145 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ಗಾಝಾ ಮೇಲೆ ಮತ್ತೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: 5 ವರ್ಷದ ಎಂಎಸ್ಪಿ ಗುತ್ತಿಗೆ; ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತ ಮುಖಂಡರು: ನಾಳೆಯಿಂದ ದೆಹಲಿ ಚಲೋ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...