Homeಮುಖಪುಟಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

ಗಾಝಾದಲ್ಲಿ ಮಾನವೀಯತೆಯನ್ನು ಸಮಾಧಿ ಮಾಡಿದ ನೆತನ್ಯಾಹು

- Advertisement -
- Advertisement -

ನಾಲ್ಕು ತಿಂಗಳ ಬಾಂಬ್‌ ದಾಳಿಯ ಮೂಲಕ ಗಾಝಾವನ್ನು ಬಹುಪಾಲು ಭಗ್ನಾವಶೇಷಗಳಾಗಿ ಮಾಡಿದ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ರಕ್ಷಣಾ ಪಡೆಗೆ (IDF) ಈಜಿಪ್ಟ್ ಗಡಿಯಲ್ಲಿರುವ ದಕ್ಷಿಣ ಗಾಝಾ ಪಟ್ಟಣವಾದ ರಫಾವನ್ನು ವಶಕ್ಕೆ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಸಂಪೂರ್ಣ ಗೆಲುವು ಕೈಗೆಟುಕಲು ಇಸ್ರೇಲ್‌ಗೆ ಇನ್ನೇನು ಬಾಕಿ ಉಳಿದಿದೆ ಎಂಬಂತಹ ಪರಿಸ್ಥಿ ಇದೆ. ಜನಾಂಗೀಯ ಹತ್ಯೆ, ಜನರ ಬಲವಂತದ ವರ್ಗಾವಣೆ ಮೂಲಕ ಇಸ್ರೇಲ್‌ ತನ್ನ ನೈಜ ಮುಖವನ್ನು ವಿಶ್ವಕ್ಕೆ ಅನಾವರಣಗೊಳಿಸಿದೆ. ನಾಗರಿಕರ ನೋವು ಇಸ್ರೇಲ್‌ನ್ನು ಕ್ರೂರ ಕೃತ್ಯದಿಂದ ಹಿಂದೆ ಸರಿಯುವಂತೆ ಮಾಡಿಲ್ಲ. ನೆತನ್ಯಾಹು  ರಕ್ತಪಾತದ  ಬೆದರಿಕೆಯನ್ನು ಮುಂದವರಿಸಿದ್ದಾರೆ. ಗಾಝಾದಲ್ಲಿ ಕಾನೂನು ಮತ್ತು ಮಾನವೀಯತೆಯನ್ನು ಹೂತು ಹಾಕಿದ್ದಾರೆ.

ಅ.7ರಂದು ಇಸ್ರೇಲ್ ಗಾಝಾದ ಮೇಲೆ ಯುದ್ಧ ಘೋಷಿಸಿದ ಬಳಿಕ ಆ ಪ್ರದೇಶದಲ್ಲಿ ಸಾವಿನ ಸಂಖ್ಯೆ 29,000 ಮೀರಿದೆ. 69,000ಕ್ಕೂ ಹೆಚ್ಚು ಪ್ಯಾಲೆಸ್ತೀನ್‌ ನಾಗರಿಕರು ಗಾಯಗೊಂಡಿದ್ದಾರೆ ಎಂದು ಯುಎನ್ ವರದಿ ತಿಳಿಸಿದೆ. ಆದರೆ ವಾಸ್ತವ ಸಾವು ಮತ್ತು ಗಾಯಾಳುಗಳ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳದ ಸಾಧ್ಯತೆ ಇದೆ. ಇಸ್ರೇಲ್‌ ನಡೆಸಿದ ಬಾಂಬ್‌ ದಾಳಿಗೆ ಲಕ್ಷಾಂತರ ಮನೆಗಳು, ಕಟ್ಟಡಗಳು ಧ್ವಂಸಗೊಂಡಿದೆ. ಲಕ್ಷಾಂತರ ಮಂದಿ ಮನೆಗಳನ್ನು ಕಳೆದುಕೊಂಡು ಕಿಕ್ಕಿರಿದ ಜನಸಂದಣಿಯ ನಿರಾಶ್ರಿತರ ಕೇಂದ್ರಗಳಲ್ಲಿ ದಿನದೂಡುವಂತಾಗಿದೆ. ಗಾಝಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಗ್ಧ ಮಕ್ಕಳು ಮತ್ತು ಮಹಿಳೆಯರ ಹತ್ಯೆ ನಡೆಸಿದರೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಯುದ್ಧ ದಾಹ ಮುಗಿದಿಲ್ಲ. ಹಮಾಸ್‌ನ್ನು ಸಂಪೂರ್ಣ ನಿರ್ನಾಮ ಮಾಡುತ್ತೇವೆ ಎಂದು ಹೇಳುತ್ತಿರುವ ನೆತನ್ಯಾಹು, ಪ್ಯಾಲೆಸ್ತೀನ್‌ನ ಮುಗ್ಧ ನಾಗರಿಕರ ಹತ್ಯೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಗಾಝಾದಲ್ಲಿನ ಯುದ್ಧ ನಿರಾಶ್ರಿತರಿಗೆ ಮಾನವೀಯ ನೆರವನ್ನು ತಡೆಯುತ್ತಿರುವುದು ಮತ್ತು ಶುದ್ಧ ನೀರಿನ ಕೇಂದ್ರಗಳ ಮೇಲೆ ದಾಳಿ ನಡೆಸಿ ಕುಡಿಯಲು ಅಯೋಗ್ಯವನ್ನಾಗಿ ಮಾಡುವುದು ಇಸ್ರೇಲ್‌ ಯುದ್ಧ ಕ್ರೌರ್ಯವನ್ನು ಬಿಚ್ಚಿಡುತ್ತಿದೆ.

2007ರಲ್ಲಿ ಇಸ್ರೇಲ್ ಗಾಝಾದ ಮೇಲೆ ಆಕ್ರಮಿಸಿದ ಬಳಿಕ ರಫಾವು ಗಾಝಾದ ಯುದ್ದ ಸಂತ್ರಸ್ತ ಪ್ರದೇಶಕ್ಕೆ  ಹೆಚ್ಚಿನ ಮಾನವೀಯ ಸರಬರಾಜುಗಳನ್ನು ತಲುಪಿಸುವ ಮಾರ್ಗವಾಗಿತ್ತು. ಇಸ್ರೇಲ್‌ ಆಕ್ರಮಣಕ್ಕೆ ಮುಂಚಿತವಾಗಿ ಒಂದು ಲಕ್ಷ ಜನರು ಇಲ್ಲಿ ವಾಸಿಸುತ್ತಿದ್ದರು. ಇತ್ತೀಚಿನ ಇಸ್ರೇಲ್‌ ಯುದ್ಧ ಘೋಷಣೆ ಬಳಿಕ ಒಂದೂವರೆ ಮಿಲಿಯನ್‌ ಜನರು ಗಾಝಾದ ರಫಾವನ್ನು ಆಶ್ರಯ ಕೇಂದ್ರವನ್ನಾಗಿಸಿಕೊಂಡಿದ್ದಾರೆ. ಜನ ಸಂದಣಿಯಿಂದಾಗಿ ರಫಾದಲ್ಲಿ ವಾಸಿಸುವ ಜನರು ನೀರಿನ ಕೊರತೆ, ಮೂಲ ಸೌಕರ್ಯದ ಕೊರತೆ, ಆಹಾರದ ಕೊರತೆ, ನೈರ್ಮಲ್ಯದ ಕೊರತೆ, ಸಾಂಕ್ರಾಮಿಕ ರೋಗದಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈಗ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿಯನ್ನು ನಡೆಸುತ್ತಿದ್ದು, ಆಸ್ಪತ್ರೆಗಳು, ಮನೆಗಳು ಮತ್ತು ಮಸೀದಿಗಳನ್ನು ಧ್ವಂಸ ಮಾಡಿದೆ. ರಫಾದಲ್ಲಿ ಕೂಡ ಡಜನ್‌ ಗಟ್ಟಲೆ ಜನರನ್ನು ಹತ್ಯೆ ಮಾಡಿದೆ.

UNICEF ಹೇಳುವಂತೆ ಗಾಝಾವು ಮಕ್ಕಳ ಸಾವುಗಳ ಕೇಂದ್ರವಾಗುತ್ತಿದೆ. ಹತ್ತಾರು ಯುರೋಪಿಯನ್ ರಾಷ್ಟ್ರಗಳು  ತಕ್ಷಣದ ಕದನ ವಿರಾಮಕ್ಕೆ ಕರೆ ನೀಡಿವೆ. ರಫಾದ ಮೇಲೆ ಇಸ್ರೇಲ್‌ ಆಕ್ರಮಣವನ್ನು ಕೈಬಿಡುವಂತೆ ಆಗ್ರಹಿಸಿದೆ. ಅಲ್ ಜಝೀರಾ ವರದಿಯ ಪ್ರಕಾರ, ಉತ್ತರ ಗಾಝಾದಲ್ಲಿ ಮಾನವೀಯ ನೆರವಿಗಾಗಿ ಕಾಯುತ್ತಿದ್ದ ಅಂದರೆ ಆಹಾರದ ಪೊಟ್ಟಣಕ್ಕೆ ಕಾಯುತ್ತಿದ್ದ ಪ್ಯಾಲೆಸ್ತೀನ್‌ ನಾಗರಿಕರ ಮೇಲೆ ಇಸ್ರೇಲ್‌ ದಾಳಿ ನಡೆಸಿದೆ. ದಾಳಿಯಲ್ಲಿ ಓರ್ವ ನಾಗರಿಕ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದಾರೆ.

ಗಾಝಾದಲ್ಲಿ ಅಪೌಷ್ಟಿಕತೆಯ ಕುರಿತು ಯುಎನ್‌ನ ಮಕ್ಕಳ ಸಂಸ್ಥೆ (ಯುನಿಸೆಫ್), ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ)  ಕಳವಳವನ್ನು ವ್ಯಕ್ತಪಡಿಸಿದೆ. ಗಾಝಾ ಪಟ್ಟಿಯು ಪೌಷ್ಟಿಕಾಂಶದ ಬಿಕ್ಕಟ್ಟಿನ ಅಂಚಿನಲ್ಲಿದೆ ಎಂದು ನಾವು ವಾರಗಳಿಂದ ಎಚ್ಚರಿಸುತ್ತಿದ್ದೇವೆ. ಗಾಝಾದಲ್ಲಿ ಊಹಿಸಲು ಅಸಾಧ್ಯವಾದ ಮಟ್ಟದಲ್ಲಿ ಮಕ್ಕಳ ಸಾವುಗಳು ಸಂಭವಿಸುತ್ತದೆ ಎಂದು ಯುನಿಸೆಫ್‌ನ ಉಪ ಕಾರ್ಯನಿರ್ವಾಹಕ ನಿರ್ದೇಶಕ ಟೆಡ್ ಚೈಬಾನ್ ಹೇಳಿದ್ದಾರೆ.

ವರದಿಯ ಪ್ರಕಾರ, ಗಾಝಾದ ಉತ್ತರದಲ್ಲಿ ಪರಿಸ್ಥಿತಿಯು ಚಿಂತಾಜನಕವಾಗಿದೆ, ಈ ಪ್ರದೇಶಗಳಲ್ಲಿ ವಾರಗಳಿಂದ ಎಲ್ಲಾ ಮಾನವೀಯ ನೆರವು ಪರಿಹಾರ ಕಡಿತಗೊಂಡಿದೆ ಮತ್ತು ಅಲ್ಲಿನ ಆರು ಮಕ್ಕಳಲ್ಲಿ ಒಂದು ಮಗು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದೆ. ರಾಫಾದಲ್ಲಿ ಎರಡಕ್ಕಿಂತ ಕಡಿಮೆ ವಯಸ್ಸಿನ 5 ಪ್ರತಿಶತ ಮಕ್ಕಳು ತೀವ್ರವಾಗಿ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.

ಹಸಿವು ಮತ್ತು ರೋಗವು ಮಾರಣಾಂತಿಕವಾಗಿದೆ ಎಂದು WHO ನ ಆರೋಗ್ಯ ತುರ್ತು ಕಾರ್ಯಕ್ರಮದ ಮುಖ್ಯಸ್ಥ ಡಾ ಮೈಕ್ ರಯಾನ್ ಹೇಳಿದ್ದಾರೆ. ಹಸಿದ, ದುರ್ಬಲಗೊಂಡ ಮತ್ತು ಆಳವಾಗಿ ಆಘಾತಕ್ಕೊಳಗಾದ ಮಕ್ಕಳು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯಿದೆ. ಇದು ಅಪಾಯಕಾರಿ ಮತ್ತು ಈ ದುರಂತ ನಮ್ಮ ಕಣ್ಣುಗಳ ಮುಂದೆ ನಡೆಯುತ್ತಿದೆ ಎಂದು ರಯಾನ್ ಹೇಳಿದ್ದಾರೆ.

ಐರಿಷ್ ವಿದೇಶಾಂಗ ಸಚಿವ ಮೈಕೆಲ್ ಮಾರ್ಟಿನ್ ಅವರು ದಕ್ಷಿಣ ಗಾಝಾದ ರಫಾಹ್ ಮೇಲೆ ದಾಳಿ ಮಾಡದಂತೆ ಯುರೋಪಿಯನ್ ಒಕ್ಕೂಟವು ಇಸ್ರೇಲ್‌ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದ್ದಾರೆ. ಬ್ರಸೆಲ್ಸ್‌ನಲ್ಲಿ ಮಾತನಾಡಿದ ಮಾರ್ಟಿನ್, ಗಾಝಾದಲ್ಲಿ ಈಗ ನಡೆಯುತ್ತಿರುವ ಅಮಾನವೀಯತೆಯ ಮಟ್ಟ ಜಗತ್ತನ್ನು ಬೆಚ್ಚಿಬೀಳಿಸಿದೆ. ರಫಾದಲ್ಲಿ ಇಸ್ರೇಲ್‌ನ ಯೋಜಿತ ಆಕ್ರಮಣವನ್ನು ತಡೆಯಲು ಯುರೋಪ್ ಸಾಧ್ಯವಾದ ಎಲ್ಲವನ್ನೂ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಭಾನುವಾರ ಮತ್ತು ಸೋಮವಾರದ ನಡುವೆ ಗಾಝಾದ ಮೇಲಿನ ಇಸ್ರೇಲ್‌ ದಾಳಿಯಲ್ಲಿ ಹೆಚ್ಚುವರಿ 107 ಪ್ಯಾಲೆಸ್ತೀನ್‌ ನಾಗರಿಕರ ಹತ್ಯೆ ನಡೆದಿದೆ. ಈ ದಾಳಿಯಲ್ಲಿ 145 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ಗಾಝಾ ಮೇಲೆ ಮತ್ತೆ ಆಕ್ರಮಣವನ್ನು ಮುಂದುವರಿಸಿದೆ.

ಇದನ್ನು ಓದಿ: 5 ವರ್ಷದ ಎಂಎಸ್ಪಿ ಗುತ್ತಿಗೆ; ಕೇಂದ್ರದ ಪ್ರಸ್ತಾವನೆ ತಿರಸ್ಕರಿಸಿದ ರೈತ ಮುಖಂಡರು: ನಾಳೆಯಿಂದ ದೆಹಲಿ ಚಲೋ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...