Homeಅಂತರಾಷ್ಟ್ರೀಯಕಾನೂನು ಕ್ರಮ ಕೈಗೊಳ್ಳುತ್ತೇವೆ | ದೇಶದ ಮಾಜಿ ರಾಜನಿಗೆ ಎಚ್ಚರಿಕೆ ನೀಡಿದ ನೇಪಾಳ ಪ್ರಧಾನಿ

ಕಾನೂನು ಕ್ರಮ ಕೈಗೊಳ್ಳುತ್ತೇವೆ | ದೇಶದ ಮಾಜಿ ರಾಜನಿಗೆ ಎಚ್ಚರಿಕೆ ನೀಡಿದ ನೇಪಾಳ ಪ್ರಧಾನಿ

- Advertisement -
- Advertisement -

ನೇಪಾಳದ ಕಠ್ಮಂಡುವಿನಲ್ಲಿ ಭದ್ರತಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ ಭಾಗಿಯಾಗಿರುವ ಮಾಜಿ ರಾಜ ಜ್ಞಾನೇಂದ್ರ ಶಾ ಮತ್ತು ರಾಜಪ್ರಭುತ್ವ ಪರ ಪ್ರತಿಭಟನಾಕಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಸೋಮವಾರ ಎಚ್ಚರಿಸಿದ್ದಾರೆ ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ.

ರಾಜಪ್ರಭುತ್ವವನ್ನು ಪುನಃಸ್ಥಾಪಿಸಲು ಒತ್ತಾಯಿಸಿ ಮಾಜಿ ರಾಜನ ಬೆಂಬಲಿಗರು ಶುಕ್ರವಾರ ಕಠ್ಮಂಡುವಿನ ಟಿಂಕುನೆ ಪ್ರದೇಶದಲ್ಲಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಘರ್ಷಣೆಗಳು ಭುಗಿಲೆದ್ದಿದ್ದವು. ಈ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದರು. ಘಟನೆಯಲ್ಲಿ ಹಲವಾರು ಕಟ್ಟಡಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

2008 ರಲ್ಲಿ, ನೇಪಾಳವು ತನ್ನ 240 ವರ್ಷಗಳಷ್ಟು ಹಳೆಯದಾದ ರಾಜಪ್ರಭುತ್ವವನ್ನು ರದ್ದುಗೊಳಿಸಿ ಜಾತ್ಯತೀತ, ಫೆಡರಲ್ ಮತ್ತು ಪ್ರಜಾಪ್ರಭುತ್ವ ಗಣರಾಜ್ಯವಾಗಿ ಪರಿವರ್ತನೆಗೊಂಡಿತು.

ಸೋಮವಾರ ದೇಶದ ಸಂಸತ್ತಿನಲ್ಲಿ ಮಾತನಾಡಿದ ಓಲಿ, ಬ್ಯಾಂಕ್ ಸಾಲಗಳನ್ನು ಮರುಪಾವತಿಸಲು ನಿರಾಕರಿಸುವ ವ್ಯಕ್ತಿಗಳೊಂದಿಗೆ ಜ್ಞಾನೇಂದ್ರ ಶಾ ಹೊಂದಾಣಿಕೆ ಮಾಡಿಕೊಂಡಿದ್ದು, ಅವರ ಮಹತ್ವಾಕಾಂಕ್ಷೆಗಳಿಗಾಗಿ ಸಾಮಾಜಿಕ ಅಶಾಂತಿಯನ್ನು ಹುಟ್ಟುಹಾಕಿದ್ದಾರೆ ಎಂದು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆರೋಪಿತ ಸಂಘಟಕರು ಪೊಲೀಸರ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ್ದಾರೆ ಮತ್ತು ನಿರ್ಬಂಧಿತ ಪ್ರದೇಶವನ್ನು ಉಲ್ಲಂಘಿಸಿದ್ದಾರೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ತೈಲ ನಿಗಮದ ಡಿಪೋಗೆ ಬೆಂಕಿ ಹಚ್ಚುವಂತಹ ಭಯೋತ್ಪಾದಕ ಚಟುವಟಿಕೆಗಳು ನಡೆದಿವೆ.” ಎಂದು ಅವರು ಹೇಳಿದ್ದಾರೆ.

“ಮಾಜಿ ರಾಜ ವೀಡಿಯೊ ಹೇಳಿಕೆಯ ಮೂಲಕ ಪ್ರತಿಭಟನಾಕಾರರನ್ನು ಪ್ರಚೋದಿಸಿದ್ದು, ಸಿಂಹಾಸನವನ್ನು ಮರಳಿ ಪಡೆಯಲು ಬಯಸುವವರು ಪ್ರತಿಭಟನೆ ಮತ್ತು ಅದರ ಫಲಿತಾಂಶಗಳ ಬಗ್ಗೆ ತಮ್ಮ ನಿಲುವನ್ನು ಸಾರ್ವಜನಿಕವಾಗಿ ಹೇಳಬೇಕಲ್ಲವೇ?” ಎಂದು ಪ್ರಧಾನ ಮಂತ್ರಿ ಕೇಳಿದ್ದಾರೆ ಎಂದು ಕಠ್ಮಂಡು ಪೋಸ್ಟ್ ಉಲ್ಲೇಖಿಸಿದೆ.

ಫೆಬ್ರವರಿ 19 ರಂದು ನೇಪಾಳದ ಪ್ರಜಾಪ್ರಭುತ್ವ ದಿನದಂದು ವೀಡಿಯೊ ಬಿಡುಗಡೆ ಮಾಡಿದ್ದ ಜ್ಞಾನೇಂದ್ರ ಶಾ, ರಾಜಪ್ರಭುತ್ವದ ಮರು ಸ್ಥಾಪನೆಗೆ ಸಾರ್ವಜನಿಕ ಬೆಂಬಲಕ್ಕಾಗಿ ಮನವಿ ಮಾಡಿದ್ದರು. ಅದರ ನಂತರ ಇತ್ತೀಚಿನ ವಾರಗಳಲ್ಲಿ ರಾಜಪ್ರಭುತ್ವದ ಪುನಃಸ್ಥಾಪನೆಗೆ ಬೇಡಿಕೆಗಳು ಎದ್ದಿವೆ ಎಂದು ಪಿಟಿಐ ವರದಿ ಮಾಡಿದೆ.

“ಅವರಿಗೆ [ಶಾ] ಶಿಕ್ಷೆಯಿಂದ ವಿನಾಯಿತಿ ನೀಡಲಾಗುವುದಿಲ್ಲ. ಪ್ರಸ್ತುತ ವ್ಯವಸ್ಥೆಯನ್ನು ಉರುಳಿಸಲು ಮತ್ತು ರಾಜಪ್ರಭುತ್ವವನ್ನು ಪುನಃಸ್ಥಾಪಿಸಲು ಪ್ರಯತ್ನಿಸುತ್ತಿರುವವರು ಮಾರ್ಚ್ 28 ರ ಘಟನೆಗಳ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು.” ಎಂದು ಪ್ರಧಾನಿ ಓಲಿ ಸೋಮವಾರ ಹೇಳಿರುವುದಾಗಿ ಕಠ್ಮಂಡು ಪೋಸ್ಟ್ ಉಲ್ಲೇಖಿಸಿದೆ.

“ಘರ್ಷಣೆಗಳ ಕುರಿತು ತನಿಖೆಗಳು ನಡೆಯುತ್ತಿವೆ. ದೇಶದ ಗೃಹ ವ್ಯವಹಾರಗಳ ಸಚಿವಾಲಯವು ಸಾವುನೋವುಗಳು, ಆಸ್ತಿ ನಾಶ ಮತ್ತು ಬೆಂಕಿ ಹಚ್ಚುವಿಕೆಯನ್ನು ಪರಿಶೀಲಿಸಿದೆ. ಶೀಘ್ರದಲ್ಲೇ ವಿವರವಾದ ವರದಿಯನ್ನು ಸಲ್ಲಿಸಲಾಗುವುದು. ಈ ಭಯಾನಕ ಕೃತ್ಯಗಳ ಅಪರಾಧಿಗಳು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪ್ರಧಾನಿ ಓಲಿ ಹೇಳಿದ್ದಾರೆ. ಕಾನೂನು ಕ್ರಮ ಕೈಗೊಳ್ಳುತ್ತೇವೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ವಿಟ್ಲ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ | ಪೋಕ್ಸೋ ದಾಖಲಾಗಿದ್ದರೂ ಬಿಜೆಪಿ ಮುಖಂಡನ ಬಂಧನವಿಲ್ಲ; ಹೋರಾಟಕ್ಕೆ ಮುಂದಾದ ಡಿಎಚ್‌ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...