Homeಮುಖಪುಟಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

- Advertisement -
- Advertisement -

ಸಾವಿನ ಅಂಚಿನಲ್ಲಿರುವ ವ್ಯಕ್ತಿಗಳು ಅಪರೂಪಕ್ಕೆ ಸುಳ್ಳು ಹೇಳುತ್ತಾರೆ ಮತ್ತು ಅವರ ಕೊನೆಯ ಮಾತುಗಳು ಕಾನೂನಿನ ದೃಷ್ಟಿಯಲ್ಲಿ ಹೆಚ್ಚು ಸ್ವೀಕಾರಾರ್ಹತೆಯನ್ನು ಮತ್ತು ಅಪಾರವಾದ ಮಾನ್ಯತೆಯನ್ನು ಹೊಂದಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಮಹಾರಾಷ್ಟ್ರದಲ್ಲಿ ಓರ್ವ ಅಪರಾಧಿಗೆ ಪತ್ನಿಯ ಹತ್ಯೆಗೆ ಸಂಬಂಧಿಸಿ ಜೀವಾವಧಿ ಶಿಕ್ಷೆಯನ್ನು ವಿಧಿಸುವಾಗ, ಸಾಯುತ್ತಿರುವ ವ್ಯಕ್ತಿಯ ಕೊನೆಯ ಮಾತುಗಳು ಪ್ರಾಮಾಣಿಕವಾಗಿರುತ್ತವೆ ಎಂದು ಕಾನೂನು ನಂಬುತ್ತದೆ ಎಂದು ಹೇಳಿದ್ದಾರೆ.

ಪೊಲೀಸ್ ಪೇದೆಯಾಗಿದ್ದ ಪತ್ನಿಯನ್ನು ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ 2002ರಲ್ಲಿ ಅಂಬಾಜೋಗಿಯಲ್ಲಿ ಸಹೋದರನ ಜೊತೆ ಸೇರಿ ಕಟ್ಟಿಹಾಕಿ ಮತ್ತು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಆಕೆ ಸುಟ್ಟ ಗಾಯಗಳಿಂದ ಸಾಯುವ ಮೊದಲು ಆಕೆ ನೀಡಿದ ಹೇಳಿಕೆಯನ್ನು ಸುಪ್ರೀಂಕೋರ್ಟ್ ವಿಚಾರಣೆ ವೇಳೆ ಮಹತ್ವದ್ದಾಗಿ ಪರಿಗಣಿಸಿತ್ತು. ಸಾಯುತ್ತಿರುವ ವೇಳೆ ನೀಡುವ ಹೇಳಿಕೆಗೆ ಸ್ವೀಕಾರಾರ್ಹತೆ ಹೆಚ್ಚಾಗಿರುತ್ತದೆ. ಏಕೆಂದರೆ ಸಾವಿನ ಅಂಚಿನಲ್ಲಿರುವಾಗ, ಸುಳ್ಳು ಹೇಳುವ ಪ್ರಸಂಗವು ಅಪರೂಪವಾಗಿ ಮಾತ್ರ ಕಂಡುಬರುತ್ತದೆ ಎಂದು ನ್ಯಾಯಮೂರ್ತಿ ಭುಯಾನ್ ತನ್ನ ತೀರ್ಪಿನಲ್ಲಿ ಹೇಳಿದ್ದಾರೆ.

ನ್ಯಾಯಾಲಯವು ವ್ಯಕ್ತಿಯ ಅಂತಿಮ ಹೇಳಿಕೆಯನ್ನು ಅತ್ಯಂತ ಜಾಗರೂಕತೆಯಿಂದ ಪರಿಶೀಲಿಸಬೇಕು.  ಸಾಯುವ ಸಮಯದಲ್ಲಿ ನೀಡಿದ ಹೇಳಿಕೆಯನ್ನು ಪುರಾವೆಯ ತುಣುಕಾಗಿ ಅಥವಾ ಒಂದು ಸ್ವತಂತ್ರ ಸಾಕ್ಷಿಯಾಗಿ ಪರಿಗಣಿಸಬಹುದೆಂದು ಎಂದು ನ್ಯಾಯಾಲಯ ಹೇಳಿದೆ. ಸಾವಿನ ಸಮಯದಲ್ಲಿ ವ್ಯಕ್ತಿಯು ನೀಡುವ ಹೇಳಿಕೆಯು ದೃಢೀಕರಿಸಲ್ಪಡದೆ ಇದ್ದಲ್ಲಿ ಅದನ್ನು ಪುರಾವೆಯಾಗಿ ಪರಿಗಣಿಸಲಾಗದು ಎಂಬುದಕ್ಕೆ ಯಾವುದೇ ಕಾನೂನಿಲ್ಲವೆಂದು ಹೇಳಿದ್ದಾರೆ.

ಸಾವಿನಂಚಿನ ವ್ಯಕ್ತಿಯ ಹೇಳಿಕೆಯು ಪ್ರೇರಣೆ ಅಥವಾ ಕಲ್ಪನೆಯಲ್ಲ ಎಂದು ಖಚಿತಪಡಿಸಿಕೊಳ್ಳಬೇಕು, ಮೃತರು ಹೇಳಿಕೆ ನೀಡಲು ಯೋಗ್ಯ ಮತ್ತು ಸರಿಯಾದ ಸ್ಥಿತಿಯಲ್ಲಿರಬೇಕು. ಸಾವಿನಂಚಿನಲ್ಲಿರುವ ವ್ಯಕ್ತಿ ನೀಡುವ ಹೇಳಿಕೆ ನಿಜ ಮತ್ತು ಸ್ವಯಂಪ್ರೇರಿತವಾಗಿದೆ ಎಂದು ನ್ಯಾಯಾಲಯಕ್ಕೆ ದೃಢಪಟ್ಟರೆ ಅದನ್ನು ಆಧರಿಸಿ ಅಪರಾಧ ನಿರ್ಣಯವನ್ನು ಮಾಡಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಒಂದು ವೇಳೆ ಸಾಯುವ ಮುನ್ನ ವ್ಯಕ್ತಿ ಕೊನೆಯ ಬಾರಿಗೆ ಹಲವು ಹೇಳಿಕೆಯನ್ನು ನೀಡಿದ್ದರೆ, ಈ ಪ್ರತಿಯೊಂದು ಹೇಳಿಕೆಗಳನ್ನು ಪ್ರತ್ಯೇಕವಾಗಿ ಮೌಲ್ಯಮಾಪನ ಮಾಡಬೇಕು. ಹೇಳಿಕೆಯಲ್ಲಿ ಕೆಲವು ವ್ಯತ್ಯಾಸಗಳ ಕಾರಣದಿಂದ ಒಂದು ಹೇಳಿಕೆಯನ್ನು ತಿರಸ್ಕರಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...