Homeಕರ್ನಾಟಕಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

- Advertisement -
- Advertisement -

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್‌, “ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು” ಎಂದು ಗುರುವಾರ (ಜ.16) ಮೌಖಿಕವಾಗಿ ಹೇಳಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಿಆರ್‌ಪಿಸಿ ಸೆಕ್ಷನ್‌ 207ರ ಅಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇತ್ಯರ್ಥಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನೂ ಮೀರಿದೆ. ಈ ರೀತಿಯ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ?” ಎಂದು ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರನ್ನು ನ್ಯಾಯಾಲಯವು ವಿಚಾರಣೆಯ ವೇಳೆ ಪ್ರಶ್ನಿಸಿತು ಎಂದು ವರದಿ ಹೇಳಿದೆ.

“ಸುಪ್ರೀಂ ಕೋರ್ಟ್‌ ಗೋಪಾಲಕೃಷ್ಣ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಪ್ರಕಾರ ಹಾಲಿ ಪ್ರಕರಣಕ್ಕೆ ಅಗತ್ಯವಾದ ಫೋಟೋ, ವಿಡಿಯೋಗಳನ್ನು ಪ್ರಾಸಿಕ್ಯೂಷನ್‌ ಒದಗಿಸಲಿದೆ. ಅದನ್ನು ಹೊರತುಪಡಿಸಿ ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ಫೋಟೋ, ವಿಡಿಯೋಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ ಉಲ್ಲಂಘನೆಯಾಗುವುದಕ್ಕೆ ಅವಕಾಶ ನೀಡಲಾಗದು” ಎಂದು ನ್ಯಾಯಾಲಯ ಹೇಳಿದೆ ಎಂದಿದೆ.

ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ಜಿ ಅರುಣ್‌ ಅವರು “ನಾನು ಯಾವುದೇ ಅಶ್ಲೀಲ ಚಿತ್ರಗಳನ್ನು ಒದಗಿಸಿ ಎಂದು ಕೋರಿಲ್ಲ. ಪ್ರಾಸಿಕ್ಯೂಷನ್‌ ಎಫ್‌ಎಸ್‌ಎಲ್‌ ವರದಿಯಲ್ಲಿ ಎಷ್ಟು ಅಶ್ಲೀಲ ಚಿತ್ರಗಳಿವೆ ಎಂದು ಉಲ್ಲೇಖಿಸಿಲ್ಲ. 2024ರ ಏಪ್ರಿಲ್‌ 30ರ ಮಹಜರು ಸಂದರ್ಭ ಮಾಜಿ ಕಾರು ಚಾಲಕನ ಫೋನ್‌ ಮತ್ತು ಸಿಮ್‌ ಜಫ್ತಿ ಮಾಡಲಾಗಿದೆ” ಎಂದಿದ್ದಾರೆ.

ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ನ್ಯಾಯಾಲಯ ನಿರ್ದೇಶಿಸಿದರೆ ಕ್ಲೋನ್‌ ಮಾಡಿರುವ ಎಲ್ಲಾ ದಾಖಲೆಗಳನ್ನು ಒದಗಿಸಲಾಗುವುದು. ಆದರೆ, ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವಿಳಂಬಿಸಲು ಇಂಥ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ” ಎಂದು ಆಕ್ಷೇಪಿಸಿದರು ಎಂದು ವರದಿ ವಿವರಿಸಿದೆ.

ವಾದ-ಪ್ರತಿವಾದ ಆಲಿಸಿದ ಪೀಠವು ಹಾಲಿ ಸಲ್ಲಿಕೆ ಮಾಡಿರುವ ಅರ್ಜಿಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅರ್ಜಿ ಇತ್ಯರ್ಥಪಡಿಸಿದೆ ಎಂದು ವರದಿ ಹೇಳಿದೆ.

ಕೃಪೆ : ಬಾರ್ & ಬೆಂಚ್

ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...