Homeಕರ್ನಾಟಕಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

- Advertisement -
- Advertisement -

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್‌, “ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು” ಎಂದು ಗುರುವಾರ (ಜ.16) ಮೌಖಿಕವಾಗಿ ಹೇಳಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಿಆರ್‌ಪಿಸಿ ಸೆಕ್ಷನ್‌ 207ರ ಅಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇತ್ಯರ್ಥಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನೂ ಮೀರಿದೆ. ಈ ರೀತಿಯ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ?” ಎಂದು ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರನ್ನು ನ್ಯಾಯಾಲಯವು ವಿಚಾರಣೆಯ ವೇಳೆ ಪ್ರಶ್ನಿಸಿತು ಎಂದು ವರದಿ ಹೇಳಿದೆ.

“ಸುಪ್ರೀಂ ಕೋರ್ಟ್‌ ಗೋಪಾಲಕೃಷ್ಣ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಪ್ರಕಾರ ಹಾಲಿ ಪ್ರಕರಣಕ್ಕೆ ಅಗತ್ಯವಾದ ಫೋಟೋ, ವಿಡಿಯೋಗಳನ್ನು ಪ್ರಾಸಿಕ್ಯೂಷನ್‌ ಒದಗಿಸಲಿದೆ. ಅದನ್ನು ಹೊರತುಪಡಿಸಿ ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ಫೋಟೋ, ವಿಡಿಯೋಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ ಉಲ್ಲಂಘನೆಯಾಗುವುದಕ್ಕೆ ಅವಕಾಶ ನೀಡಲಾಗದು” ಎಂದು ನ್ಯಾಯಾಲಯ ಹೇಳಿದೆ ಎಂದಿದೆ.

ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ಜಿ ಅರುಣ್‌ ಅವರು “ನಾನು ಯಾವುದೇ ಅಶ್ಲೀಲ ಚಿತ್ರಗಳನ್ನು ಒದಗಿಸಿ ಎಂದು ಕೋರಿಲ್ಲ. ಪ್ರಾಸಿಕ್ಯೂಷನ್‌ ಎಫ್‌ಎಸ್‌ಎಲ್‌ ವರದಿಯಲ್ಲಿ ಎಷ್ಟು ಅಶ್ಲೀಲ ಚಿತ್ರಗಳಿವೆ ಎಂದು ಉಲ್ಲೇಖಿಸಿಲ್ಲ. 2024ರ ಏಪ್ರಿಲ್‌ 30ರ ಮಹಜರು ಸಂದರ್ಭ ಮಾಜಿ ಕಾರು ಚಾಲಕನ ಫೋನ್‌ ಮತ್ತು ಸಿಮ್‌ ಜಫ್ತಿ ಮಾಡಲಾಗಿದೆ” ಎಂದಿದ್ದಾರೆ.

ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ನ್ಯಾಯಾಲಯ ನಿರ್ದೇಶಿಸಿದರೆ ಕ್ಲೋನ್‌ ಮಾಡಿರುವ ಎಲ್ಲಾ ದಾಖಲೆಗಳನ್ನು ಒದಗಿಸಲಾಗುವುದು. ಆದರೆ, ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವಿಳಂಬಿಸಲು ಇಂಥ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ” ಎಂದು ಆಕ್ಷೇಪಿಸಿದರು ಎಂದು ವರದಿ ವಿವರಿಸಿದೆ.

ವಾದ-ಪ್ರತಿವಾದ ಆಲಿಸಿದ ಪೀಠವು ಹಾಲಿ ಸಲ್ಲಿಕೆ ಮಾಡಿರುವ ಅರ್ಜಿಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅರ್ಜಿ ಇತ್ಯರ್ಥಪಡಿಸಿದೆ ಎಂದು ವರದಿ ಹೇಳಿದೆ.

ಕೃಪೆ : ಬಾರ್ & ಬೆಂಚ್

ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...