Homeಕರ್ನಾಟಕಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

- Advertisement -
- Advertisement -

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್‌, “ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು” ಎಂದು ಗುರುವಾರ (ಜ.16) ಮೌಖಿಕವಾಗಿ ಹೇಳಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಿಆರ್‌ಪಿಸಿ ಸೆಕ್ಷನ್‌ 207ರ ಅಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇತ್ಯರ್ಥಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನೂ ಮೀರಿದೆ. ಈ ರೀತಿಯ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ?” ಎಂದು ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರನ್ನು ನ್ಯಾಯಾಲಯವು ವಿಚಾರಣೆಯ ವೇಳೆ ಪ್ರಶ್ನಿಸಿತು ಎಂದು ವರದಿ ಹೇಳಿದೆ.

“ಸುಪ್ರೀಂ ಕೋರ್ಟ್‌ ಗೋಪಾಲಕೃಷ್ಣ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಪ್ರಕಾರ ಹಾಲಿ ಪ್ರಕರಣಕ್ಕೆ ಅಗತ್ಯವಾದ ಫೋಟೋ, ವಿಡಿಯೋಗಳನ್ನು ಪ್ರಾಸಿಕ್ಯೂಷನ್‌ ಒದಗಿಸಲಿದೆ. ಅದನ್ನು ಹೊರತುಪಡಿಸಿ ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ಫೋಟೋ, ವಿಡಿಯೋಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ ಉಲ್ಲಂಘನೆಯಾಗುವುದಕ್ಕೆ ಅವಕಾಶ ನೀಡಲಾಗದು” ಎಂದು ನ್ಯಾಯಾಲಯ ಹೇಳಿದೆ ಎಂದಿದೆ.

ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ಜಿ ಅರುಣ್‌ ಅವರು “ನಾನು ಯಾವುದೇ ಅಶ್ಲೀಲ ಚಿತ್ರಗಳನ್ನು ಒದಗಿಸಿ ಎಂದು ಕೋರಿಲ್ಲ. ಪ್ರಾಸಿಕ್ಯೂಷನ್‌ ಎಫ್‌ಎಸ್‌ಎಲ್‌ ವರದಿಯಲ್ಲಿ ಎಷ್ಟು ಅಶ್ಲೀಲ ಚಿತ್ರಗಳಿವೆ ಎಂದು ಉಲ್ಲೇಖಿಸಿಲ್ಲ. 2024ರ ಏಪ್ರಿಲ್‌ 30ರ ಮಹಜರು ಸಂದರ್ಭ ಮಾಜಿ ಕಾರು ಚಾಲಕನ ಫೋನ್‌ ಮತ್ತು ಸಿಮ್‌ ಜಫ್ತಿ ಮಾಡಲಾಗಿದೆ” ಎಂದಿದ್ದಾರೆ.

ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ನ್ಯಾಯಾಲಯ ನಿರ್ದೇಶಿಸಿದರೆ ಕ್ಲೋನ್‌ ಮಾಡಿರುವ ಎಲ್ಲಾ ದಾಖಲೆಗಳನ್ನು ಒದಗಿಸಲಾಗುವುದು. ಆದರೆ, ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವಿಳಂಬಿಸಲು ಇಂಥ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ” ಎಂದು ಆಕ್ಷೇಪಿಸಿದರು ಎಂದು ವರದಿ ವಿವರಿಸಿದೆ.

ವಾದ-ಪ್ರತಿವಾದ ಆಲಿಸಿದ ಪೀಠವು ಹಾಲಿ ಸಲ್ಲಿಕೆ ಮಾಡಿರುವ ಅರ್ಜಿಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅರ್ಜಿ ಇತ್ಯರ್ಥಪಡಿಸಿದೆ ಎಂದು ವರದಿ ಹೇಳಿದೆ.

ಕೃಪೆ : ಬಾರ್ & ಬೆಂಚ್

ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...