Homeಕರ್ನಾಟಕಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು : ಹೈಕೋರ್ಟ್‌

- Advertisement -
- Advertisement -

ಎಲೆಕ್ಟ್ರಾನಿಕ್ ಎವಿಡೆನ್ಸ್ ಅಥವಾ ಮೊಬೈಲ್ ಫೋನ್‌ನಿಂದ ವಶಪಡಿಸಿಕೊಂಡಿರುವ ಫೋಟೋ, ವಿಡಿಯೋಗಳು ಒದಗಿಸುವಂತೆ ಕೋರಿದ್ದ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್‌, “ಪ್ರಜ್ವಲ್‌ ರೇವಣ್ಣ ಎಂದ ಮಾತ್ರಕ್ಕೆ ಕಾನೂನು ಬದಲಿಸಲಾಗದು” ಎಂದು ಗುರುವಾರ (ಜ.16) ಮೌಖಿಕವಾಗಿ ಹೇಳಿದೆ.

ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್‌ ರೇವಣ್ಣ ಸಿಆರ್‌ಪಿಸಿ ಸೆಕ್ಷನ್‌ 207ರ ಅಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇತ್ಯರ್ಥಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರಕರಣಕ್ಕೆ ಸಂಬಂಧಿಸಿದ ಫೋಟೋ, ವಿಡಿಯೋಗಳು ಎಲ್ಲವೂ ಅಶ್ಲೀಲವಾಗಿದೆ. ಅಶ್ಲೀಲಕ್ಕೂ ಒಂದು ಮಿತಿ ಇರಬೇಕು. ಇದು ಎಲ್ಲವನ್ನೂ ಮೀರಿದೆ. ಈ ರೀತಿಯ ಫೋಟೋಗಳನ್ನು ಯಾರು ಸೆರೆ ಹಿಡಿಯಲು ಸಾಧ್ಯ?” ಎಂದು ಪ್ರಜ್ವಲ್‌ ಪರ ವಕೀಲ ಜಿ ಅರುಣ್‌ ಅವರನ್ನು ನ್ಯಾಯಾಲಯವು ವಿಚಾರಣೆಯ ವೇಳೆ ಪ್ರಶ್ನಿಸಿತು ಎಂದು ವರದಿ ಹೇಳಿದೆ.

“ಸುಪ್ರೀಂ ಕೋರ್ಟ್‌ ಗೋಪಾಲಕೃಷ್ಣ ಪ್ರಕರಣದಲ್ಲಿ ನೀಡಿರುವ ತೀರ್ಪಿನ ಪ್ರಕಾರ ಹಾಲಿ ಪ್ರಕರಣಕ್ಕೆ ಅಗತ್ಯವಾದ ಫೋಟೋ, ವಿಡಿಯೋಗಳನ್ನು ಪ್ರಾಸಿಕ್ಯೂಷನ್‌ ಒದಗಿಸಲಿದೆ. ಅದನ್ನು ಹೊರತುಪಡಿಸಿ ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುವ ಫೋಟೋ, ವಿಡಿಯೋಗಳನ್ನು ನೀಡಲಾಗದು. ನೀವು ಏನೋ ಮಾಡಬೇಕು ಎಂಬುದಕ್ಕೆ ಬೇರೊಬ್ಬ ಮಹಿಳೆಯ ಖಾಸಗಿತನದ ಉಲ್ಲಂಘನೆಯಾಗುವುದಕ್ಕೆ ಅವಕಾಶ ನೀಡಲಾಗದು” ಎಂದು ನ್ಯಾಯಾಲಯ ಹೇಳಿದೆ ಎಂದಿದೆ.

ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ಜಿ ಅರುಣ್‌ ಅವರು “ನಾನು ಯಾವುದೇ ಅಶ್ಲೀಲ ಚಿತ್ರಗಳನ್ನು ಒದಗಿಸಿ ಎಂದು ಕೋರಿಲ್ಲ. ಪ್ರಾಸಿಕ್ಯೂಷನ್‌ ಎಫ್‌ಎಸ್‌ಎಲ್‌ ವರದಿಯಲ್ಲಿ ಎಷ್ಟು ಅಶ್ಲೀಲ ಚಿತ್ರಗಳಿವೆ ಎಂದು ಉಲ್ಲೇಖಿಸಿಲ್ಲ. 2024ರ ಏಪ್ರಿಲ್‌ 30ರ ಮಹಜರು ಸಂದರ್ಭ ಮಾಜಿ ಕಾರು ಚಾಲಕನ ಫೋನ್‌ ಮತ್ತು ಸಿಮ್‌ ಜಫ್ತಿ ಮಾಡಲಾಗಿದೆ” ಎಂದಿದ್ದಾರೆ.

ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ನ್ಯಾಯಾಲಯ ನಿರ್ದೇಶಿಸಿದರೆ ಕ್ಲೋನ್‌ ಮಾಡಿರುವ ಎಲ್ಲಾ ದಾಖಲೆಗಳನ್ನು ಒದಗಿಸಲಾಗುವುದು. ಆದರೆ, ಬೇರೆ ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವಿಳಂಬಿಸಲು ಇಂಥ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ” ಎಂದು ಆಕ್ಷೇಪಿಸಿದರು ಎಂದು ವರದಿ ವಿವರಿಸಿದೆ.

ವಾದ-ಪ್ರತಿವಾದ ಆಲಿಸಿದ ಪೀಠವು ಹಾಲಿ ಸಲ್ಲಿಕೆ ಮಾಡಿರುವ ಅರ್ಜಿಗೂ, ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅರ್ಜಿ ಇತ್ಯರ್ಥಪಡಿಸಿದೆ ಎಂದು ವರದಿ ಹೇಳಿದೆ.

ಕೃಪೆ : ಬಾರ್ & ಬೆಂಚ್

ಬೀದರ್‌| ಗುಂಡು ಹಾರಿಸಿ ₹93 ಲಕ್ಷ ಹಣ ದೋಚಿದ ಬಂದೂಕುದಾರಿಗಳು; ಓರ್ವ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...