Homeಚಳವಳಿವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

- Advertisement -
- Advertisement -

ವರದಕ್ಷಿಣೆ ಎಂಬ ಸಾಮಾಜಿಕ ಅನಿಷ್ಟ ಕೊನೆಗೊಳಿಸಲು ಕಾನೂನುಗಳು ಮುಖ್ಯವಾಗಿದ್ದರೂ, ಜನರು ಸಹ ಒಳಗಿನಿಂದ ಬದಲಾಗಬೇಕು ಮತ್ತು ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಕಲಿಯಬೇಕು ಎಂದು ಸುಪ್ರೀಂಕೋರ್ಟ್ ಡಿಸೆಂಬರ್ 6 ರಂದು ಹೇಳಿದೆ.

ಭಾರತೀಯ ದಂಡ ಸಂಹಿತೆಯಲ್ಲಿ ಹಲವಾರು ಕ್ರಿಮಿನಲ್ ಕಾನೂನು ನಿಬಂಧನೆಗಳ ಹೊರತಾಗಿಯೂ ವರದಕ್ಷಿಣೆ ಬೆದರಿಕೆಗಳು ಮುಂದುವರೆದಿದೆ. ಹೀಗಾಗಿ ಮಾಹಿತಿ ಹಕ್ಕು (ಆರ್‌ಟಿಐ) ಅಧಿಕಾರಿಗೆ ಸಮಾನವಾದ ವರದಕ್ಷಿಣೆ ನಿಷೇಧ ಅಧಿಕಾರಿಯನ್ನು ನೇಮಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ನಡೆಸಿದೆ.

“ಕೇರಳದ ಪರಿಸ್ಥಿತಿಯಿಂದ ನಾನು ವಿಚಲಿತನಾಗಿದ್ದೇನೆ. ಆಯುರ್ವೇದ ವಿದ್ಯಾರ್ಥಿನಿ ವರದಕ್ಷಿಣೆ ಪ್ರಕರಣದಲ್ಲಿ ಕ್ರಮ ಕೈಗೊಳ್ಳದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಕೇರಳದಲ್ಲಿ ಇದೊಂದು ಅನಿಷ್ಟ ಪದ್ಧತಿಯಾಗಿದೆ. ಅತಿಯಾದ ಚಿನ್ನ ಮತ್ತು ಇತರ ವಸ್ತುಗಳಿಗೆ ಬೇಡಿಕೆ ಇಡಲಾಗುತ್ತಿದೆ” ಎಂದು ಕೇರಳದ ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ವಿ.ಕೆ.ಬಿಜು ಸುಪ್ರೀಂಕೋರ್ಟ್‌ ಪೀಠಕ್ಕೆ ಹೇಳಿದ್ದಾರೆ.

ಇದನ್ನೂ ಓದಿ: 1930 ಕ್ಕೆ ಹೋಲಿಸಿದರೆ ಈಗ ವರದಕ್ಷಿಣೆ 90% ಹೆಚ್ಚಳವಾಗಿದೆ: ಕಾರಣವೇನು?

ಆಯುರ್ವೇದ ಅಧ್ಯಯನ ಮಾಡುತ್ತಿದ್ದ 24 ವರ್ಷದ ವಿಸ್ಮಯಾ ಎಂಬ ವೈದ್ಯಕೀಯ ವಿದ್ಯಾರ್ಥಿನಿ ಕೇರಳದ ಸಾಸ್ತಮಕೋಟ್ಟಾದಲ್ಲಿನ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಆಕೆಯ ಸಾವನ್ನಪ್ಪಿದ ಒಂದು ದಿನದ ಬಳಿಕ, ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಪೊಲೀಸರು ಆಕೆಯ ಪತಿಯನ್ನು ಬಂಧಿಸಿದ್ದರು.

ದಂಪತಿಗಳಿಗೆ ವರದಕ್ಷಿಣೆಯ ವಿರುದ್ಧ ಎಚ್ಚರಿಕೆ ನೀಡಲು ಮತ್ತು ಜಾಗೃತಿ ಮೂಡಿಸಲು ಕಡ್ಡಾಯ “ವಿವಾಹಪೂರ್ವ” ಕೋರ್ಸ್‌ಗಳನ್ನು ನಡೆಸಬೇಖು. ಮದುವೆಗೆ ಈ ಕೋರ್ಸ್‌ಗಳನ್ನು ಕಡ್ಡಾಯ ಪೂರ್ವ-ಷರತ್ತಾಗಿ ಮಾಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಕಟ್ಟುನಿಟ್ಟಿನ ಕಾನೂನುಗಳ ಹೊರತಾಗಿಯೂ, ವರದಕ್ಷಿಣೆ ಸಮಾಜವನ್ನು ಹಾಳುಮಾಡುತ್ತದೆ. ಇದರಿಂದ ಅಮಾಯಕ ಯುವತಿಯರ ಜೀವ ಹೋಗುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.

“ಕಾನೂನುಗಳು ಮುಖ್ಯ, ಆದರೆ ಬದಲಾವಣೆಯು ಜನರ ಒಳಗಿನಿಂದ ಬರಬೇಕು. ಮದುವೆಯ ಮೂಲಭೂತ ಸಾಮಾಜಿಕ ಮೌಲ್ಯದ ಬಗ್ಗೆ ತಿಳುವಳಿಕೆ ಇರಬೇಕು. ಒಂದು ಕುಟುಂಬಕ್ಕೆ ಬರುವ ಮಹಿಳೆಯನ್ನು ನಾವು ಹೇಗೆ ನಡೆಸಿಕೊಳ್ಳುತ್ತೇವೆ ಮತ್ತು ಮಹಿಳೆಯ ಸಾಮಾಜಿಕ ಪ್ರಾಮುಖ್ಯತೆಯನ್ನು ಹೇಗೆ ಪರಿಗಣಿಸುತ್ತೇವೆ ಎಂಬುದು ಕೂಡ ಮುಖ್ಯ” ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ವರದಕ್ಷಿಣೆ ವಿರುದ್ಧದ ಕಾನೂನಿಗೆ “ಹೊಸ ನೋಟ” ತಂದು ಕಾನೂನು ಬಲಪಡಿಸಲು ಭಾರತದ ಕಾನೂನು ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.


ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಪರಿಶೀಲನೆಗೆ ಕರಡು ಮಸೂದೆ ಸಲ್ಲಿಸಿದ ಕೇರಳ ಮಹಿಳಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...