Homeಕರ್ನಾಟಕದೇವನಹಳ್ಳಿ: ಕಕ್ಷಿದಾರರ ದೂರು ಪರಿಶೀಲಿಸಲು ತೆರಳಿದ್ದ ವಕೀಲನ ಮೇಲೆ ಹಲ್ಲೆ, ಜೀವ ಬೆದರಿಕೆ

ದೇವನಹಳ್ಳಿ: ಕಕ್ಷಿದಾರರ ದೂರು ಪರಿಶೀಲಿಸಲು ತೆರಳಿದ್ದ ವಕೀಲನ ಮೇಲೆ ಹಲ್ಲೆ, ಜೀವ ಬೆದರಿಕೆ

- Advertisement -
- Advertisement -

ಕಕ್ಷಿದಾರರ ಜಮೀನಿನಲ್ಲಿ ಅನಧಿಕೃತವಾಗಿ ವಿದ್ಯುತ್ ಕಂಬ ಹಾಕಿದ್ದನ್ನು ಪರಿಶೀಲಿಸಲು ತೆರಳಿದ್ದ ವಕೀಲನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಶುಕ್ರವಾರ (ಜೂನ್‌.27) ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಬೈಪಾಸ್ ರಸ್ತೆ ಸಮೀಪ ನಡೆದಿದೆ.

ಸಂದೀಪ್ ಹಲ್ಲೆಗೊಳಗಾದ ಯುವ ವಕೀಲ. ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್‌ ಉದ್ಯಮಿ ಜಿ.ಎನ್‌ ವೇಣುಗೋಪಾಲ್‌ ಹಾಗೂ ಅವರ ಮಗ ವಿವೇಕ್‌ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇವರ ವಿರುದ್ದ ದೇವನಹಳ್ಳಿ ಟೌನ್‌ ಪೊಲೀಸ್ ಠಾಣೆಯಲ್ಲಿ ಸಂದೀಪ್ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ಕುರಿತು ನಾನುಗೌರಿ.ಕಾಂಗೆ ಮಾಹಿತಿ ನೀಡಿರುವ ಹಲ್ಲೆಗೊಳಗಾದ ವಕೀಲ ಸಂದೀಪ್, “ನನ್ನ ಕಕ್ಷಿದಾರ ಎನ್‌. ಗೋಪಾಲಕೃಷ್ಣ ಅವರ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಪಕ್ಕದ ಸಿಗ್ನೇಚರ್ ಒನ್‌ ಕಂಪನಿ ಲೇಔಟ್ ಪರವಾಗಿ ಹೈಟೆಂಶನ್ ವಿದ್ಯುತ್ ವೈರ್ ಹಾಕಲಾಗುತ್ತಿತ್ತು. ಇದರ ವಿರುದ್ದ ಗುತ್ತಿಗೆದಾರ ಗಣೇಶ್ ಬಾಬು ಅವರ ಮೇಲೆ ನಮ್ಮ ಕಕ್ಷಿದಾರ ಶುಕ್ರವಾರ ಬೆಳಿಗ್ಗೆ ದೂರು ನೀಡಿದ್ದರು” ಎಂದು ತಿಳಿಸಿದ್ದಾರೆ.

“ದೂರು ದಾಖಲಿಸಿಕೊಂಡ ಪೊಲೀಸರು ಸಂಜೆ 3.30ರ ಸುಮಾರಿಗೆ ಪರಿಶೀಲನೆಗೆಂದು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಮಗೂ ಮಾಹಿತಿ ಕೊಟ್ಟಿದ್ದರು. ನನ್ನ ಕ್ಷಕ್ಷಿದಾರರ ಪರವಾಗಿ ನಾನು ಪೊಲೀಸರ ಜೊತೆ ತೆರಳಿದ್ದೆ. ಪೊಲೀಸರು ಸುಮಾರು 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿ ತೆರಳಿದ್ದರು. ಅವರ ಬೆನ್ನಲ್ಲೇ ನನ್ನ ಕಕ್ಷಿದಾರ ಗೋಪಾಲಕೃಷ್ಣ ಕೂಡ ಹೋಗಿದ್ದರು. ನಂತರ ನಾನೂ ಕಾರು ಹತ್ತಿ ಹೋಗಲು ಮುಂದಾದಾಗ ಜಿ.ಎನ್‌ ವೇಣುಗೋಪಾಲ್‌ ಹಾಗೂ ಅವರ ಮಗ ವಿವೇಕ್‌ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ನಾನು ನನ್ನ ಕಕ್ಷಿದಾರರ ಪರವಾಗಿ ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರೂ ಕೇಳಲಿಲ್ಲ. ರೌಡಿಗಳನ್ನು ಬಿಟ್ಟು ಹೊಡೆಸುತ್ತೇನೆ. ಕೋರ್ಟ್‌ಗೆ ನುಗ್ಗಿ ಸಾಯಿಸುತ್ತೇವೆ ಎಂದು ಪ್ರಾಣ ಬೆದರಿಕೆ ಹಾಕಿದ್ದಾರೆ. ಕಾನೂನು ತಕರಾರು ಇರುವುದು ಸಿಗ್ನೇಚರ್ ಒನ್ ಕಂಪನಿ ಮತ್ತು ನನ್ನ ಕಕ್ಷಿದಾರ ಗೋಪಾಲಕೃಷ್ಣ ಅವರ ನಡುವೆಯಾಗಿದೆ. ನನ್ನ ಕಕ್ಷಿದಾರ ದೂರು ಕೊಟ್ಟಿರುವುದು ಗುತ್ತಿಗೆದಾರ ಗಣೇಶ್ ಬಾಬು ಮೇಲೆ. ಹಾಗಾಗಿ, ಈ ಪ್ರಕರಣಕ್ಕೂ ಜಿ.ಎನ್‌ ವೇಣುಗೋಪಾಲ್‌ಗೂ ಸಂಬಂಧವಿಲ್ಲ. ಅವರು ಸುಖಾಸುಮ್ಮನೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ” ಎಂದು ಸಂದೀಪ್ ಹೇಳಿದ್ದಾರೆ.

ತನ್ನ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಪರ ವಕಾಲತ್ತು ವಹಿಸದಂತೆ ದೇವನಹಳ್ಳಿ ವಕೀಲರ ಸಂಘ ತನ್ನ ಸದಸ್ಯರಿಗೆ ಸೂಚನೆ ನೀಡಿದೆ ಎಂದು ಸಂದೀಪ್ ತಿಳಿಸಿದ್ದಾರೆ.

ಮಂಗಳೂರಿನ ಕುಡುಪುವಿನಲ್ಲಿ ಅಶ್ರಫ್ ಗುಂಪು ಹತ್ಯೆ: ಸತ್ಯಶೋಧನಾ ವರದಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...