Homeಮುಖಪುಟನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಅಂಕಿತ ಹಾಕಿದ್ದ ನೂತನ 3 ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಲಾಗಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ.25 ರಂದು ಅಂಕಿತವನ್ನು ಹಾಕಿದ್ದಾರೆ.

ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದ್ದು,  3 ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ತಡೆ ಮತ್ತು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ತಕ್ಷಣ  ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಿದ್ದಾರೆ.

ಹೆಚ್ಚಿನ ಸಂಸದರು ಅಮಾನತಿನಲ್ಲಿದ್ದಾಗ ಸಂಸತ್ತಿನಲ್ಲಿ ಸರಿಯಾದ ಚರ್ಚೆಯಿಲ್ಲದೆ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಡಿ.20 ರಂದು ಲೋಕಸಭೆಯಲ್ಲಿ ನೂತನ ಕ್ರಿಮಿನಲ್‌ ಮಸೂದೆಗಳನ್ನು ಅಂಗೀಕರಿಸಿದಾಗ 141 ಪ್ರತಿಪಕ್ಷ ಸಂಸದರು (ಎರಡೂ ಸದನಗಳಿಂದ) ಅಮಾನತುಗೊಂಡಿದ್ದರು. 2021ರಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳಿಲ್ಲದೆ ಮಸೂದೆಗಳ ಅಂಗೀಕಾರದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು ಎಂದು ತಿವಾರಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಸಂಸತ್ತಿನಲ್ಲಿ ಚರ್ಚೆಯು ಪ್ರಜಾಸತ್ತಾತ್ಮಕ ಕಾನೂನು ರಚನೆಯ ಮೂಲಭೂತ ಭಾಗವಾಗಿದೆ. ಚರ್ಚೆಗಳ ಮೂಲಕ ಮಸೂದೆಗೆ ಅಗತ್ಯವಾದ ತಿದ್ದುಪಡಿಗಳನ್ನು ಮಾಡಲು ಸಹಾಯ ಮಾಡುತ್ತದೆ. ಈ ಮೂಲಕ ಮಸೂದೆಯು ಪರಿಪೂರ್ಣವಾಗುತ್ತದೆ. ಹೊಸ ಕ್ರಿಮಿನಲ್ ಕಾನೂನುಗಳ ಮೂಲಕ ತಂದ ಬದಲಾವಣೆಗಳು ಕಠೋರವಾಗಿವೆ ಮತ್ತು ವಾಸ್ತವದಲ್ಲಿ ಪೊಲೀಸ್ ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿವೆ ಎಂದು ಅದು ಹೇಳುತ್ತದೆ. ಜೊತೆಗೆ ಅವು ಭಾರತದ ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಬ್ರಿಟೀಷ್ ಕಾನೂನುಗಳನ್ನು ವಸಾಹತುಶಾಹಿ ಯುಗದ ಕಠೋರ ಕಾನೂನೆಂದು ಪರಿಗಣಿಸಿದ್ದರೆ, ಬ್ರಿಟಿಷರ ಅವಧಿಯಲ್ಲಿ ನೀವು ಒಬ್ಬ ವ್ಯಕ್ತಿಯನ್ನು ಗರಿಷ್ಠ 15 ದಿನಗಳವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಬಹುದು. ಇದೀಗ 15 ದಿನಗಳಿಂದ 90 ದಿನಗಳವರೆಗೆ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ವಿಸ್ತರಿಸುವುದು. ಆಘಾತಕಾರಿ ನಿಬಂಧನೆಯು ಪೊಲೀಸ್ ಚಿತ್ರಹಿಂಸೆಗೆ ದಾರಿಯಾಗುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ.

3 ಕ್ರಿಮಿನಲ್ ಕಾನೂನುಗಳಿಗೆ ಸಂಬಂಧಿಸಿ ಈ ಹಿಂದೆ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮಾತನಾಡಿ ಮಾನವ ಹಕ್ಕುಗಳ ಸಂಭಾವ್ಯ ಉಲ್ಲಂಘನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಏನಿದು ಮಸೂದೆ?

ಈ ಬಾರಿಯ ಚಳಿಗಾದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯನ್ನು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ. ಈ ಮಸೂದೆ ಡಿ.21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದವು.

ಇದು ಪೊಲೀಸ್ ಬಲವನ್ನು ಮಿತಿಮೀರಿದ ಬಳಕೆಗೆ ಕಾರಣವಾಗಬಹುದು ಮತ್ತು ಮಾನವ ಹಕ್ಕುಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ಕಳವಳದ ನಡುವೆ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಸೂದೆಗಳ ಬಗ್ಗೆ ಚರ್ಚಿಸುವಾಗ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದ್ದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದರು.

ಭಾರತೀಯ ನ್ಯಾಯ (ಎರಡನೇ) ಸಂಹಿತಾ ಪ್ರಸ್ತುತ 358 ವಿಭಾಗಗಳನ್ನು ಹೊಂದಿದೆ. ಭಾರತೀಯ ನಾಗರಿಕಾ ಸುರಕ್ಷಾ (ಎರಡನೇ) ಸಂಹಿತಾ 531 ವಿಭಾಗಗಳನ್ನು ಹೊಂದಿದೆ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾ 170 ವಿಭಾಗಗಳನ್ನು ಹೊಂದಿದೆ. ಮಸೂದೆಗಳನ್ನು ಮೊದಲು ಆ.11ರಂದು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ನಂತರ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ಬಗ್ಗೆ ಹೆಚ್ಚಿನ ಶಿಫಾರಸುಗಳನ್ನು ಮಾಡಿದ ನಂತರ ಸರ್ಕಾರವು ಮಸೂದೆಯನ್ನು ಹಿಂಪಡೆದಿತ್ತು.

ಭಾರತೀಯ ನ್ಯಾಯ ಸಂಹಿತಾ (BNS2) ಅಡಿಯಲ್ಲಿ ದೇಶದ್ರೋಹವನ್ನು ‘ರಾಜ್ಯದ್ರೋಹದ’ (ಸರ್ಕಾರದ ವಿರುದ್ಧ) ಬದಲಾಗಿ ‘ದೇಶದ್ರೋಹ’ (ರಾಷ್ಟ್ರದ ವಿರುದ್ಧ) ಎಂದು ಬದಲಾಯಿಸಲಾಗಿದೆ. ಇದಲ್ಲದೆ, ‘ಸಂಘಟಿತ ಅಪರಾಧ’ವನ್ನು ಅಪರಾಧ ಎಂದು ಸೇರಿಸಲಾಗಿದೆ. ಐದು ಅಥವಾ ಹೆಚ್ಚು ಜನರ ಗುಂಪು ಒಬ್ಬ ವ್ಯಕ್ತಿಯ ಜನಾಂಗ, ಜಾತಿ, ಲಿಂಗ, ಭಾಷೆ ಅಥವಾ ವೈಯಕ್ತಿಕ ನಂಬಿಕೆಯ ಆಧಾರಗಳ ಮೇಲೆ ಕೊಲೆ ಅಥವಾ ಗಂಭೀರ ಗಾಯ ಮಾಡಿದರೆ ಅದು ಗುಂಪು ಹತ್ಯೆಯಾಗಲಿದೆ. ಇಂತಹ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ನೂತನ ಕಾನೂನಿನಲ್ಲಿ ಅವಕಾಶವಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...