Homeಮುಖಪುಟನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಅಂಕಿತ ಹಾಕಿದ್ದ ನೂತನ 3 ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಲಾಗಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ.25 ರಂದು ಅಂಕಿತವನ್ನು ಹಾಕಿದ್ದಾರೆ.

ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದ್ದು,  3 ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ತಡೆ ಮತ್ತು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ತಕ್ಷಣ  ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಿದ್ದಾರೆ.

ಹೆಚ್ಚಿನ ಸಂಸದರು ಅಮಾನತಿನಲ್ಲಿದ್ದಾಗ ಸಂಸತ್ತಿನಲ್ಲಿ ಸರಿಯಾದ ಚರ್ಚೆಯಿಲ್ಲದೆ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಡಿ.20 ರಂದು ಲೋಕಸಭೆಯಲ್ಲಿ ನೂತನ ಕ್ರಿಮಿನಲ್‌ ಮಸೂದೆಗಳನ್ನು ಅಂಗೀಕರಿಸಿದಾಗ 141 ಪ್ರತಿಪಕ್ಷ ಸಂಸದರು (ಎರಡೂ ಸದನಗಳಿಂದ) ಅಮಾನತುಗೊಂಡಿದ್ದರು. 2021ರಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳಿಲ್ಲದೆ ಮಸೂದೆಗಳ ಅಂಗೀಕಾರದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು ಎಂದು ತಿವಾರಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಸಂಸತ್ತಿನಲ್ಲಿ ಚರ್ಚೆಯು ಪ್ರಜಾಸತ್ತಾತ್ಮಕ ಕಾನೂನು ರಚನೆಯ ಮೂಲಭೂತ ಭಾಗವಾಗಿದೆ. ಚರ್ಚೆಗಳ ಮೂಲಕ ಮಸೂದೆಗೆ ಅಗತ್ಯವಾದ ತಿದ್ದುಪಡಿಗಳನ್ನು ಮಾಡಲು ಸಹಾಯ ಮಾಡುತ್ತದೆ. ಈ ಮೂಲಕ ಮಸೂದೆಯು ಪರಿಪೂರ್ಣವಾಗುತ್ತದೆ. ಹೊಸ ಕ್ರಿಮಿನಲ್ ಕಾನೂನುಗಳ ಮೂಲಕ ತಂದ ಬದಲಾವಣೆಗಳು ಕಠೋರವಾಗಿವೆ ಮತ್ತು ವಾಸ್ತವದಲ್ಲಿ ಪೊಲೀಸ್ ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿವೆ ಎಂದು ಅದು ಹೇಳುತ್ತದೆ. ಜೊತೆಗೆ ಅವು ಭಾರತದ ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಬ್ರಿಟೀಷ್ ಕಾನೂನುಗಳನ್ನು ವಸಾಹತುಶಾಹಿ ಯುಗದ ಕಠೋರ ಕಾನೂನೆಂದು ಪರಿಗಣಿಸಿದ್ದರೆ, ಬ್ರಿಟಿಷರ ಅವಧಿಯಲ್ಲಿ ನೀವು ಒಬ್ಬ ವ್ಯಕ್ತಿಯನ್ನು ಗರಿಷ್ಠ 15 ದಿನಗಳವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಬಹುದು. ಇದೀಗ 15 ದಿನಗಳಿಂದ 90 ದಿನಗಳವರೆಗೆ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ವಿಸ್ತರಿಸುವುದು. ಆಘಾತಕಾರಿ ನಿಬಂಧನೆಯು ಪೊಲೀಸ್ ಚಿತ್ರಹಿಂಸೆಗೆ ದಾರಿಯಾಗುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ.

3 ಕ್ರಿಮಿನಲ್ ಕಾನೂನುಗಳಿಗೆ ಸಂಬಂಧಿಸಿ ಈ ಹಿಂದೆ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮಾತನಾಡಿ ಮಾನವ ಹಕ್ಕುಗಳ ಸಂಭಾವ್ಯ ಉಲ್ಲಂಘನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಏನಿದು ಮಸೂದೆ?

ಈ ಬಾರಿಯ ಚಳಿಗಾದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯನ್ನು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ. ಈ ಮಸೂದೆ ಡಿ.21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದವು.

ಇದು ಪೊಲೀಸ್ ಬಲವನ್ನು ಮಿತಿಮೀರಿದ ಬಳಕೆಗೆ ಕಾರಣವಾಗಬಹುದು ಮತ್ತು ಮಾನವ ಹಕ್ಕುಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ಕಳವಳದ ನಡುವೆ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಸೂದೆಗಳ ಬಗ್ಗೆ ಚರ್ಚಿಸುವಾಗ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದ್ದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದರು.

ಭಾರತೀಯ ನ್ಯಾಯ (ಎರಡನೇ) ಸಂಹಿತಾ ಪ್ರಸ್ತುತ 358 ವಿಭಾಗಗಳನ್ನು ಹೊಂದಿದೆ. ಭಾರತೀಯ ನಾಗರಿಕಾ ಸುರಕ್ಷಾ (ಎರಡನೇ) ಸಂಹಿತಾ 531 ವಿಭಾಗಗಳನ್ನು ಹೊಂದಿದೆ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾ 170 ವಿಭಾಗಗಳನ್ನು ಹೊಂದಿದೆ. ಮಸೂದೆಗಳನ್ನು ಮೊದಲು ಆ.11ರಂದು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ನಂತರ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ಬಗ್ಗೆ ಹೆಚ್ಚಿನ ಶಿಫಾರಸುಗಳನ್ನು ಮಾಡಿದ ನಂತರ ಸರ್ಕಾರವು ಮಸೂದೆಯನ್ನು ಹಿಂಪಡೆದಿತ್ತು.

ಭಾರತೀಯ ನ್ಯಾಯ ಸಂಹಿತಾ (BNS2) ಅಡಿಯಲ್ಲಿ ದೇಶದ್ರೋಹವನ್ನು ‘ರಾಜ್ಯದ್ರೋಹದ’ (ಸರ್ಕಾರದ ವಿರುದ್ಧ) ಬದಲಾಗಿ ‘ದೇಶದ್ರೋಹ’ (ರಾಷ್ಟ್ರದ ವಿರುದ್ಧ) ಎಂದು ಬದಲಾಯಿಸಲಾಗಿದೆ. ಇದಲ್ಲದೆ, ‘ಸಂಘಟಿತ ಅಪರಾಧ’ವನ್ನು ಅಪರಾಧ ಎಂದು ಸೇರಿಸಲಾಗಿದೆ. ಐದು ಅಥವಾ ಹೆಚ್ಚು ಜನರ ಗುಂಪು ಒಬ್ಬ ವ್ಯಕ್ತಿಯ ಜನಾಂಗ, ಜಾತಿ, ಲಿಂಗ, ಭಾಷೆ ಅಥವಾ ವೈಯಕ್ತಿಕ ನಂಬಿಕೆಯ ಆಧಾರಗಳ ಮೇಲೆ ಕೊಲೆ ಅಥವಾ ಗಂಭೀರ ಗಾಯ ಮಾಡಿದರೆ ಅದು ಗುಂಪು ಹತ್ಯೆಯಾಗಲಿದೆ. ಇಂತಹ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ನೂತನ ಕಾನೂನಿನಲ್ಲಿ ಅವಕಾಶವಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...