Homeಮುಖಪುಟನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

ನೂತನ ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಅಂಕಿತ ಹಾಕಿದ್ದ ನೂತನ 3 ಕ್ರಿಮಿನಲ್ ಕಾನೂನುಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದ್ದು, ತಜ್ಞರ ಸಮಿತಿಯನ್ನು ತಕ್ಷಣ ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಲಾಗಿದೆ.

ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ.25 ರಂದು ಅಂಕಿತವನ್ನು ಹಾಕಿದ್ದಾರೆ.

ವಕೀಲ ವಿಶಾಲ್ ತಿವಾರಿ ಅವರು ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿಯನ್ನು ಸಲ್ಲಿಸಿದ್ದು,  3 ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನಕ್ಕೆ ತಡೆ ಮತ್ತು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ತಕ್ಷಣ  ರಚನೆ ಮಾಡಿ ಕಾನೂನಿನ ಕುರಿತು ಪರಿಶೀಲನೆಗೆ ನಿರ್ದೇಶಿಸುವಂತೆ ಆಗ್ರಹಿಸಿದ್ದಾರೆ.

ಹೆಚ್ಚಿನ ಸಂಸದರು ಅಮಾನತಿನಲ್ಲಿದ್ದಾಗ ಸಂಸತ್ತಿನಲ್ಲಿ ಸರಿಯಾದ ಚರ್ಚೆಯಿಲ್ಲದೆ ಈ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಡಿ.20 ರಂದು ಲೋಕಸಭೆಯಲ್ಲಿ ನೂತನ ಕ್ರಿಮಿನಲ್‌ ಮಸೂದೆಗಳನ್ನು ಅಂಗೀಕರಿಸಿದಾಗ 141 ಪ್ರತಿಪಕ್ಷ ಸಂಸದರು (ಎರಡೂ ಸದನಗಳಿಂದ) ಅಮಾನತುಗೊಂಡಿದ್ದರು. 2021ರಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳಿಲ್ಲದೆ ಮಸೂದೆಗಳ ಅಂಗೀಕಾರದ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ್ದರು ಎಂದು ತಿವಾರಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಸಂಸತ್ತಿನಲ್ಲಿ ಚರ್ಚೆಯು ಪ್ರಜಾಸತ್ತಾತ್ಮಕ ಕಾನೂನು ರಚನೆಯ ಮೂಲಭೂತ ಭಾಗವಾಗಿದೆ. ಚರ್ಚೆಗಳ ಮೂಲಕ ಮಸೂದೆಗೆ ಅಗತ್ಯವಾದ ತಿದ್ದುಪಡಿಗಳನ್ನು ಮಾಡಲು ಸಹಾಯ ಮಾಡುತ್ತದೆ. ಈ ಮೂಲಕ ಮಸೂದೆಯು ಪರಿಪೂರ್ಣವಾಗುತ್ತದೆ. ಹೊಸ ಕ್ರಿಮಿನಲ್ ಕಾನೂನುಗಳ ಮೂಲಕ ತಂದ ಬದಲಾವಣೆಗಳು ಕಠೋರವಾಗಿವೆ ಮತ್ತು ವಾಸ್ತವದಲ್ಲಿ ಪೊಲೀಸ್ ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಿಸುತ್ತಿವೆ ಎಂದು ಅದು ಹೇಳುತ್ತದೆ. ಜೊತೆಗೆ ಅವು ಭಾರತದ ಜನರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಬ್ರಿಟೀಷ್ ಕಾನೂನುಗಳನ್ನು ವಸಾಹತುಶಾಹಿ ಯುಗದ ಕಠೋರ ಕಾನೂನೆಂದು ಪರಿಗಣಿಸಿದ್ದರೆ, ಬ್ರಿಟಿಷರ ಅವಧಿಯಲ್ಲಿ ನೀವು ಒಬ್ಬ ವ್ಯಕ್ತಿಯನ್ನು ಗರಿಷ್ಠ 15 ದಿನಗಳವರೆಗೆ ಪೊಲೀಸ್ ಕಸ್ಟಡಿಯಲ್ಲಿ ಇರಿಸಬಹುದು. ಇದೀಗ 15 ದಿನಗಳಿಂದ 90 ದಿನಗಳವರೆಗೆ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ವಿಸ್ತರಿಸುವುದು. ಆಘಾತಕಾರಿ ನಿಬಂಧನೆಯು ಪೊಲೀಸ್ ಚಿತ್ರಹಿಂಸೆಗೆ ದಾರಿಯಾಗುತ್ತದೆ ಎಂದು ಮನವಿಯಲ್ಲಿ ಹೇಳಲಾಗಿದೆ.

3 ಕ್ರಿಮಿನಲ್ ಕಾನೂನುಗಳಿಗೆ ಸಂಬಂಧಿಸಿ ಈ ಹಿಂದೆ ವಿರೋಧ ಪಕ್ಷದ ನಾಯಕರಾದ ಅಧೀರ್ ರಂಜನ್ ಚೌಧರಿ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಮಾತನಾಡಿ ಮಾನವ ಹಕ್ಕುಗಳ ಸಂಭಾವ್ಯ ಉಲ್ಲಂಘನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಏನಿದು ಮಸೂದೆ?

ಈ ಬಾರಿಯ ಚಳಿಗಾದ ಅಧಿವೇಶನದಲ್ಲಿ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯನ್ನು ಮಂಡಿಸಿದ್ದರು. ಈ ಮಸೂದೆಗಳು ಕ್ರಮವಾಗಿ ಭಾರತೀಯ ದಂಡ ಸಂಹಿತೆ-1860, ಕ್ರಿಮಿನಲ್ ಪ್ರೊಸೀಜರ್ ಆಕ್ಟ್-1898 ಮತ್ತು 1872ರ ಭಾರತೀಯ ಸಾಕ್ಷ್ಯ ಕಾಯಿದೆಗೆ ಬದಲಾವಣೆಗಳನ್ನು ಸೂಚಿಸುತ್ತದೆ. ಈ ಮಸೂದೆ ಡಿ.21ರಂದು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದ್ದವು.

ಇದು ಪೊಲೀಸ್ ಬಲವನ್ನು ಮಿತಿಮೀರಿದ ಬಳಕೆಗೆ ಕಾರಣವಾಗಬಹುದು ಮತ್ತು ಮಾನವ ಹಕ್ಕುಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂಬ ಕಳವಳದ ನಡುವೆ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಸೂದೆಗಳ ಬಗ್ಗೆ ಚರ್ಚಿಸುವಾಗ, ಪ್ರಸ್ತಾವಿತ ಕಾನೂನುಗಳನ್ನು ಸಮಗ್ರ ಸಮಾಲೋಚನೆಯ ನಂತರ ರಚಿಸಲಾಗಿದೆ ಮತ್ತು ಸದನದ ಅನುಮೋದನೆಗೆ ತರುವ ಮೊದಲು ಕರಡು ಶಾಸನಗಳ ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಹೇಳಿದ್ದರು. ಅಸ್ತಿತ್ವದಲ್ಲಿರುವ ಕ್ರಿಮಿನಲ್ ಕಾನೂನುಗಳು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತವೆ ಮತ್ತು ಶಿಕ್ಷಿಸುವ ಉದ್ದೇಶವನ್ನು ಹೊಂದಿದೆ ನ್ಯಾಯವನ್ನು ನೀಡುವ ಉದ್ದೇಶ ಹೊಂದಿರಲಿಲ್ಲ ಎಂದು ಹೇಳಿದ್ದರು.

ಭಾರತೀಯ ನ್ಯಾಯ (ಎರಡನೇ) ಸಂಹಿತಾ ಪ್ರಸ್ತುತ 358 ವಿಭಾಗಗಳನ್ನು ಹೊಂದಿದೆ. ಭಾರತೀಯ ನಾಗರಿಕಾ ಸುರಕ್ಷಾ (ಎರಡನೇ) ಸಂಹಿತಾ 531 ವಿಭಾಗಗಳನ್ನು ಹೊಂದಿದೆ ಮತ್ತು ಭಾರತೀಯ ಸಾಕ್ಷಿ (ಎರಡನೇ) ಸಂಹಿತಾ 170 ವಿಭಾಗಗಳನ್ನು ಹೊಂದಿದೆ. ಮಸೂದೆಗಳನ್ನು ಮೊದಲು ಆ.11ರಂದು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ನಂತರ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಈ ಬಗ್ಗೆ ಹೆಚ್ಚಿನ ಶಿಫಾರಸುಗಳನ್ನು ಮಾಡಿದ ನಂತರ ಸರ್ಕಾರವು ಮಸೂದೆಯನ್ನು ಹಿಂಪಡೆದಿತ್ತು.

ಭಾರತೀಯ ನ್ಯಾಯ ಸಂಹಿತಾ (BNS2) ಅಡಿಯಲ್ಲಿ ದೇಶದ್ರೋಹವನ್ನು ‘ರಾಜ್ಯದ್ರೋಹದ’ (ಸರ್ಕಾರದ ವಿರುದ್ಧ) ಬದಲಾಗಿ ‘ದೇಶದ್ರೋಹ’ (ರಾಷ್ಟ್ರದ ವಿರುದ್ಧ) ಎಂದು ಬದಲಾಯಿಸಲಾಗಿದೆ. ಇದಲ್ಲದೆ, ‘ಸಂಘಟಿತ ಅಪರಾಧ’ವನ್ನು ಅಪರಾಧ ಎಂದು ಸೇರಿಸಲಾಗಿದೆ. ಐದು ಅಥವಾ ಹೆಚ್ಚು ಜನರ ಗುಂಪು ಒಬ್ಬ ವ್ಯಕ್ತಿಯ ಜನಾಂಗ, ಜಾತಿ, ಲಿಂಗ, ಭಾಷೆ ಅಥವಾ ವೈಯಕ್ತಿಕ ನಂಬಿಕೆಯ ಆಧಾರಗಳ ಮೇಲೆ ಕೊಲೆ ಅಥವಾ ಗಂಭೀರ ಗಾಯ ಮಾಡಿದರೆ ಅದು ಗುಂಪು ಹತ್ಯೆಯಾಗಲಿದೆ. ಇಂತಹ ಅಪರಾಧಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಲು ನೂತನ ಕಾನೂನಿನಲ್ಲಿ ಅವಕಾಶವಿದೆ.

ಇದನ್ನು ಓದಿ: ಬಿಜೆಪಿ ನಾಯಕನ ವಿರುದ್ಧ ಕಾನೂನು ಹೋರಾಟ ನಡೆಸುತ್ತಿದ್ದ ದಲಿತ ರೈತರಿಗೆ ‘ED’ಯಿಂದ ಸಮನ್ಸ್‌!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

’ಆದಿವಾಸಿಗಳ ಅಭಿವೃದ್ಧಿ’ ಪುಸ್ತಕದಿಂದ ಆಯ್ದ ಅಧ್ಯಾಯ; ಆದಿವಾಸಿಗಳೊಡನೆ ಅನುಸಂಧಾನ ವಿಧಾನ ಯಾವುದಾಗಿರಬೇಕು?

0
ಶ್ರೀಮತಿ ಖೋಂಗಮೆನ್ (1) ಅವರು, ಈಗ್ಗೆ ಮೂರು ದಿನಗಳ ಹಿಂದೆ ಈ ಸಮ್ಮೇಳನದ ಕುರಿತು ನನಗೆ ವಿವರಗಳನ್ನು ನೀಡಿದರು. ಈ ಕಾರ್ಯಕ್ರಮದ ಆಯೋಜನೆ ಮತ್ತು ವಿವರಗಳನ್ನು ನೋಡಿ ನನಗೆ ಸಂತೋಷವಾಯಿತು. ಈ ತರಹದ...