Homeಮುಖಪುಟಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಲಸಿಕೆಯಿಂದ ತೀವ್ರ ತರವಾದ ಅಡ್ಡ ಪರಿಣಾಮ ಎದುರಿಸಿದವರು ಮತ್ತು ಮರಣ ಹೊಂದಿದವರಿಗೆ ಪರಿಹಾರ ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ಕೋವಿಡ್ -19 ವಿರುದ್ಧದ AZD1222 ಲಸಿಕೆ (ಭಾರತದಲ್ಲಿ ಪರವಾನಗಿ ಪಡೆದ ಮತ್ತು ಕೋವಿಶೀಲ್ಡ್ ಎಂಬ ಹೆಸರಿನಲ್ಲಿ ಮಾರಾಟವಾದ ಲಸಿಕೆ) “ಅತ್ಯಂತ ಅಪರೂಪದ” ಪ್ರಕರಣಗಳಲ್ಲಿ ಕಡಿಮೆ ಪ್ಲೇಟ್‌ಲೆಟ್ ಕೌಂಟ್ ಮತ್ತು ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಲಸಿಕೆ ತಯಾರಿಸಿದ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂದು ವಕೀಲ ವಿಶಾಲ್ ತಿವಾರಿ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ವಿತರಣೆಗೆ ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಪರವಾನಗಿ ನೀಡಲಾಗಿತ್ತು ಮತ್ತು ದೇಶದಲ್ಲಿ 175 ಕೋಟಿಗೂ ಹೆಚ್ಚು ಡೋಸ್ ಕೋವಿಶೀಲ್ಡ್ ಲಸಿಕೆ ವಿತರಿಸಲಾಗಿದೆ. ಕೋವಿಡ್ -19 ಬಳಿಕ ದೇಶದ ಜನರು ಹೃದಯಾಘಾತಕ್ಕೊಳಗಾಗುವುದು ಮತ್ತು ಹಠಾತ್ ಕುಸಿತು ಬಿದ್ದು ಸಾವನಪ್ಪುವುದು ಹೆಚ್ಚಳವಾಗಿದೆ ಎಂದು ವಕೀಲ ವಿಶಾಲ್ ತಿವಾರಿ ಹೇಳಿದ್ದಾರೆ.

ಕೋವಿಶೀಲ್ಡ್ ಲಸಿಕೆ ಸುರಕ್ಷಿತವಾಗಿದೆ ಎಂಬ ಭಾರತ ಸರ್ಕಾರದ ಭರವಸೆಯ ಮೇಲೆ ಜನರು ಅದನ್ನು ಪಡೆದುಕೊಂಡಿದ್ದಾರೆ ಎಂದು ವಕೀಲ ವಿಶಾಲ್ ತಿವಾರಿ ಅರ್ಜಿಯಲ್ಲಿ ಹೇಳಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಉಲ್ಲೇಖಿಸಿದ ವಕೀಲ, ಲಸಿಕೆಯಿಂದ ತೀವ್ರವಾಗಿ ಅಂಗವಿಕಲರಾದವರಿಗೆ ಪರಿಹಾರ ನೀಡಬೇಕೆಂದು ಕೋರಿದ್ದಾರೆ ಮತ್ತು ಭವಿಷ್ಯದಲ್ಲಿ ಜನರ ಆರೋಗ್ಯಕ್ಕೆ ಅಪಾಯವಾಗದಂತೆ ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ವಿಷಯವನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ವಕೀಲ ವಿಶಾಲ್ ತಿವಾರಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಮುಖವಾಗಿ ಈ ಕೆಳಗಿನ ಮನವಿಗಳನ್ನು ಮಾಡಿದ್ದಾರೆ.

1. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್‌) ನ ವೈದ್ಯರನ್ನೊಳಗೊಂಡ ವೈದ್ಯಕೀಯ ತಜ್ಞರ ಸಮಿತಿ ರಚಿಸಬೇಕು. ಈ ಸಮಿತಿ ಮೂಲಕ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸಬೇಕು.

2. ಕೋವಿಡ್ 19 ಸಮಯದಲ್ಲಿ ಲಸಿಕಾ ಅಭಿಯಾನದ ಪರಿಣಾಮವಾಗಿ ತೀವ್ರವಾಗಿ ಅಶಕ್ತಗೊಂಡ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆ (ಪರಿಹಾರ ವಿತರಣೆ ವ್ಯವಸ್ಥೆ) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

3. ಕೋವಿಡ್ 19 ಸಮಯದಲ್ಲಿ ನೀಡಲಾದ ಲಸಿಕೆಯ ಅಡ್ಡ ಪರಿಣಾಮಗಳಿಂದಾಗಿ ತೀವ್ರವಾಗಿ ಅಂಗವಿಕಲರಾದ ಅಥವಾ ಮರಣ ಹೊಂದಿದ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

ಇದನ್ನೂ ಓದಿ : ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...