Homeಮುಖಪುಟಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಲಸಿಕೆಯಿಂದ ತೀವ್ರ ತರವಾದ ಅಡ್ಡ ಪರಿಣಾಮ ಎದುರಿಸಿದವರು ಮತ್ತು ಮರಣ ಹೊಂದಿದವರಿಗೆ ಪರಿಹಾರ ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ಕೋವಿಡ್ -19 ವಿರುದ್ಧದ AZD1222 ಲಸಿಕೆ (ಭಾರತದಲ್ಲಿ ಪರವಾನಗಿ ಪಡೆದ ಮತ್ತು ಕೋವಿಶೀಲ್ಡ್ ಎಂಬ ಹೆಸರಿನಲ್ಲಿ ಮಾರಾಟವಾದ ಲಸಿಕೆ) “ಅತ್ಯಂತ ಅಪರೂಪದ” ಪ್ರಕರಣಗಳಲ್ಲಿ ಕಡಿಮೆ ಪ್ಲೇಟ್‌ಲೆಟ್ ಕೌಂಟ್ ಮತ್ತು ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಲಸಿಕೆ ತಯಾರಿಸಿದ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂದು ವಕೀಲ ವಿಶಾಲ್ ತಿವಾರಿ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ವಿತರಣೆಗೆ ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಪರವಾನಗಿ ನೀಡಲಾಗಿತ್ತು ಮತ್ತು ದೇಶದಲ್ಲಿ 175 ಕೋಟಿಗೂ ಹೆಚ್ಚು ಡೋಸ್ ಕೋವಿಶೀಲ್ಡ್ ಲಸಿಕೆ ವಿತರಿಸಲಾಗಿದೆ. ಕೋವಿಡ್ -19 ಬಳಿಕ ದೇಶದ ಜನರು ಹೃದಯಾಘಾತಕ್ಕೊಳಗಾಗುವುದು ಮತ್ತು ಹಠಾತ್ ಕುಸಿತು ಬಿದ್ದು ಸಾವನಪ್ಪುವುದು ಹೆಚ್ಚಳವಾಗಿದೆ ಎಂದು ವಕೀಲ ವಿಶಾಲ್ ತಿವಾರಿ ಹೇಳಿದ್ದಾರೆ.

ಕೋವಿಶೀಲ್ಡ್ ಲಸಿಕೆ ಸುರಕ್ಷಿತವಾಗಿದೆ ಎಂಬ ಭಾರತ ಸರ್ಕಾರದ ಭರವಸೆಯ ಮೇಲೆ ಜನರು ಅದನ್ನು ಪಡೆದುಕೊಂಡಿದ್ದಾರೆ ಎಂದು ವಕೀಲ ವಿಶಾಲ್ ತಿವಾರಿ ಅರ್ಜಿಯಲ್ಲಿ ಹೇಳಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಉಲ್ಲೇಖಿಸಿದ ವಕೀಲ, ಲಸಿಕೆಯಿಂದ ತೀವ್ರವಾಗಿ ಅಂಗವಿಕಲರಾದವರಿಗೆ ಪರಿಹಾರ ನೀಡಬೇಕೆಂದು ಕೋರಿದ್ದಾರೆ ಮತ್ತು ಭವಿಷ್ಯದಲ್ಲಿ ಜನರ ಆರೋಗ್ಯಕ್ಕೆ ಅಪಾಯವಾಗದಂತೆ ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ವಿಷಯವನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ವಕೀಲ ವಿಶಾಲ್ ತಿವಾರಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಮುಖವಾಗಿ ಈ ಕೆಳಗಿನ ಮನವಿಗಳನ್ನು ಮಾಡಿದ್ದಾರೆ.

1. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್‌) ನ ವೈದ್ಯರನ್ನೊಳಗೊಂಡ ವೈದ್ಯಕೀಯ ತಜ್ಞರ ಸಮಿತಿ ರಚಿಸಬೇಕು. ಈ ಸಮಿತಿ ಮೂಲಕ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸಬೇಕು.

2. ಕೋವಿಡ್ 19 ಸಮಯದಲ್ಲಿ ಲಸಿಕಾ ಅಭಿಯಾನದ ಪರಿಣಾಮವಾಗಿ ತೀವ್ರವಾಗಿ ಅಶಕ್ತಗೊಂಡ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆ (ಪರಿಹಾರ ವಿತರಣೆ ವ್ಯವಸ್ಥೆ) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

3. ಕೋವಿಡ್ 19 ಸಮಯದಲ್ಲಿ ನೀಡಲಾದ ಲಸಿಕೆಯ ಅಡ್ಡ ಪರಿಣಾಮಗಳಿಂದಾಗಿ ತೀವ್ರವಾಗಿ ಅಂಗವಿಕಲರಾದ ಅಥವಾ ಮರಣ ಹೊಂದಿದ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

ಇದನ್ನೂ ಓದಿ : ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...