Homeಮುಖಪುಟಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

- Advertisement -
- Advertisement -

ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ ತಜ್ಞರ ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಲಸಿಕೆಯಿಂದ ತೀವ್ರ ತರವಾದ ಅಡ್ಡ ಪರಿಣಾಮ ಎದುರಿಸಿದವರು ಮತ್ತು ಮರಣ ಹೊಂದಿದವರಿಗೆ ಪರಿಹಾರ ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ.

ಕೋವಿಡ್ -19 ವಿರುದ್ಧದ AZD1222 ಲಸಿಕೆ (ಭಾರತದಲ್ಲಿ ಪರವಾನಗಿ ಪಡೆದ ಮತ್ತು ಕೋವಿಶೀಲ್ಡ್ ಎಂಬ ಹೆಸರಿನಲ್ಲಿ ಮಾರಾಟವಾದ ಲಸಿಕೆ) “ಅತ್ಯಂತ ಅಪರೂಪದ” ಪ್ರಕರಣಗಳಲ್ಲಿ ಕಡಿಮೆ ಪ್ಲೇಟ್‌ಲೆಟ್ ಕೌಂಟ್ ಮತ್ತು ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಲಸಿಕೆ ತಯಾರಿಸಿದ ಕಂಪನಿ ಅಸ್ಟ್ರಾಜೆನೆಕಾ ಒಪ್ಪಿಕೊಂಡಿದೆ ಎಂದು ವಕೀಲ ವಿಶಾಲ್ ತಿವಾರಿ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿ ಕೋವಿಶೀಲ್ಡ್ ಲಸಿಕೆ ವಿತರಣೆಗೆ ಪುಣೆ ಮೂಲದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಪರವಾನಗಿ ನೀಡಲಾಗಿತ್ತು ಮತ್ತು ದೇಶದಲ್ಲಿ 175 ಕೋಟಿಗೂ ಹೆಚ್ಚು ಡೋಸ್ ಕೋವಿಶೀಲ್ಡ್ ಲಸಿಕೆ ವಿತರಿಸಲಾಗಿದೆ. ಕೋವಿಡ್ -19 ಬಳಿಕ ದೇಶದ ಜನರು ಹೃದಯಾಘಾತಕ್ಕೊಳಗಾಗುವುದು ಮತ್ತು ಹಠಾತ್ ಕುಸಿತು ಬಿದ್ದು ಸಾವನಪ್ಪುವುದು ಹೆಚ್ಚಳವಾಗಿದೆ ಎಂದು ವಕೀಲ ವಿಶಾಲ್ ತಿವಾರಿ ಹೇಳಿದ್ದಾರೆ.

ಕೋವಿಶೀಲ್ಡ್ ಲಸಿಕೆ ಸುರಕ್ಷಿತವಾಗಿದೆ ಎಂಬ ಭಾರತ ಸರ್ಕಾರದ ಭರವಸೆಯ ಮೇಲೆ ಜನರು ಅದನ್ನು ಪಡೆದುಕೊಂಡಿದ್ದಾರೆ ಎಂದು ವಕೀಲ ವಿಶಾಲ್ ತಿವಾರಿ ಅರ್ಜಿಯಲ್ಲಿ ಹೇಳಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಉಲ್ಲೇಖಿಸಿದ ವಕೀಲ, ಲಸಿಕೆಯಿಂದ ತೀವ್ರವಾಗಿ ಅಂಗವಿಕಲರಾದವರಿಗೆ ಪರಿಹಾರ ನೀಡಬೇಕೆಂದು ಕೋರಿದ್ದಾರೆ ಮತ್ತು ಭವಿಷ್ಯದಲ್ಲಿ ಜನರ ಆರೋಗ್ಯಕ್ಕೆ ಅಪಾಯವಾಗದಂತೆ ಕೇಂದ್ರ ಸರ್ಕಾರವು ಆದ್ಯತೆಯ ಮೇಲೆ ವಿಷಯವನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.

ವಕೀಲ ವಿಶಾಲ್ ತಿವಾರಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಮುಖವಾಗಿ ಈ ಕೆಳಗಿನ ಮನವಿಗಳನ್ನು ಮಾಡಿದ್ದಾರೆ.

1. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್‌) ನ ವೈದ್ಯರನ್ನೊಳಗೊಂಡ ವೈದ್ಯಕೀಯ ತಜ್ಞರ ಸಮಿತಿ ರಚಿಸಬೇಕು. ಈ ಸಮಿತಿ ಮೂಲಕ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸಬೇಕು.

2. ಕೋವಿಡ್ 19 ಸಮಯದಲ್ಲಿ ಲಸಿಕಾ ಅಭಿಯಾನದ ಪರಿಣಾಮವಾಗಿ ತೀವ್ರವಾಗಿ ಅಶಕ್ತಗೊಂಡ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆ (ಪರಿಹಾರ ವಿತರಣೆ ವ್ಯವಸ್ಥೆ) ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

3. ಕೋವಿಡ್ 19 ಸಮಯದಲ್ಲಿ ನೀಡಲಾದ ಲಸಿಕೆಯ ಅಡ್ಡ ಪರಿಣಾಮಗಳಿಂದಾಗಿ ತೀವ್ರವಾಗಿ ಅಂಗವಿಕಲರಾದ ಅಥವಾ ಮರಣ ಹೊಂದಿದ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

ಇದನ್ನೂ ಓದಿ : ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...