Homeಮುಖಪುಟಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! 'ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ' ಎಂದು ಕಿರುಚಾಡಿದ...

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! ‘ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ’ ಎಂದು ಕಿರುಚಾಡಿದ ವಕೀಲ

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯುತ್ತಿದ್ದ ವಿಚಾರಣೆ ಸಮಯದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ನಾಟಕೀಯ ದೃಶ್ಯ ನಡೆಯಿತು. ಆರೋಪಿಯನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ‘ಭಾರತ ಸನಾತನ ಧರ್ಮದ ಅವಮಾನವನ್ನು ಸಹಿಸುವುದಿಲ್ಲ’ ಎಂದು ಕಿರುಚಾಡಿದ್ದಾನೆ.

ಮಧ್ಯಪ್ರದೇಶದಲ್ಲಿ ಹಾನಿಗೊಳಗಾದ ವಿಷ್ಣು ವಿಗ್ರಹದ ಪುನಃಸ್ಥಾಪನೆಗೆ ಸಂಬಂಧಿಸಿದ ಅರ್ಜಿಯನ್ನು ಆಲಿಸುವಾಗ ಮುಖ್ಯ ನ್ಯಾಯಮೂರ್ತಿಗಳು ‘ದೇವರನ್ನೇ ಕೇಳಿ’ ಎಂಬ ಹೇಳಿಕೆ ನೀಡಿದ ಕೆಲವೇ ವಾರಗಳ ನಂತರ ವಕೀಲನಿಂದ ಇಂದು ಕೃತ್ಯ ನಡೆದಿದೆ.

ಆರೋಪಿಯನ್ನು ತಕ್ಷಣವೇ ಬಂಧಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಶಾಂತಚಿತ್ತರಾಗಿದ್ದರು, ಯಾವುದೇ ಅಡೆತಡೆಯಿಲ್ಲದೆ ತಮ್ಮ ವಿಚಾರಣೆಯನ್ನು ಮುಂದುವರೆಸಿದರು.

ಘಟನೆಯ ನಂತರ ಮಾತನಾಡಿದ ಅವರು, “ಇದೆಲ್ಲದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ವಿಚಾರಣೆಯನ್ನು ಮುಂದುವರಿಸಿ” ಎಂದು ಶಾಂತವಾಗಿ ಹೇಳಿದರು.

ಸುಪ್ರೀಂ ಕೋರ್ಟ್ ವಕೀಲ ರೋಹಿತ್ ಪಾಂಡೆ ಅವರು, ಆರೋಪಿಯನ್ನು 2011 ರಿಂದ ಬಾರ್ ಅಸೋಸಿಯೇಷನ್‌ನ ಸದಸ್ಯ ಎಂದು ಗುರುತಿಸಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳ ದೇವರ ಕುರಿತ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕೃತ್ಯ ನಡೆದಿದೆ ಎಂದು ತೋರುತ್ತದೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದರು.

ಸೆಪ್ಟೆಂಬರ್‌ನಲ್ಲಿ, ಮಧ್ಯಪ್ರದೇಶದ ಜವಾರಿ ದೇವಸ್ಥಾನದಲ್ಲಿ 7 ಅಡಿ ಎತ್ತರದ ವಿಷ್ಣು ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸುತ್ತಾ, ಮುಖ್ಯ ನ್ಯಾಯಮೂರ್ತಿ ಗವಾಯಿ ಅರ್ಜಿದಾರರಿಗೆ, “ಇದು ಸಂಪೂರ್ಣವಾಗಿ ಪ್ರಚಾರ ಹಿತಾಸಕ್ತಿ ಮೊಕದ್ದಮೆ. ಹೋಗಿ ದೇವರನ್ನೇ ಈಗ ಏನಾದರೂ ಮಾಡಲು ಕೇಳಿ. ನೀವು ವಿಷ್ಣುವಿನ ಕಟ್ಟಾ ಭಕ್ತ ಎಂದು ಹೇಳುತ್ತೀರಿ. ಆದ್ದರಿಂದ ಈಗಲೇ ಹೋಗಿ ಪ್ರಾರ್ಥಿಸಿ” ಎಂದು ಹೇಳಿದರು.

ಈ ತೀರ್ಪಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ, ವಿವಾದಾತ್ಮಕ ಹೇಳಿಕೆಗಳು ಬಂದವು. ಬಳಿಕ, ಮುಖ್ಯ ನ್ಯಾಯಮೂರ್ತಿ ತಮ್ಮ ಹೇಳಿಕೆಗಳನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂದು ಹೇಳಿದರು. “ನಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ” ಎಂದು ಒತ್ತಿ ಹೇಳಿದರು.

ಕೋರ್ಟ್‌ ಹಾಲ್‌ನಲ್ಲಿ ನಡೆದದ್ದೇನು?

ಸಿಜೆಐ ನೇತೃತ್ವದ ಪೀಠವು ವಕೀಲರ ಪ್ರಕರಣಗಳ ಪ್ರಸ್ತಾಪವನ್ನು ಆಲಿಸುತ್ತಿದ್ದಾಗ ನಾಟಕೀಯ ಘಟನೆ ನಡೆಯಿತು. ಸ್ಥಳದಲ್ಲದಿfದವರ ಪ್ರಕಾರ, ವಕೀಲರು ವೇದಿಕೆಯ ಬಳಿಗೆ ಹೋಗಿ ತಮ್ಮ ಶೂ ತೆಗೆದು ನ್ಯಾಯಾಧೀಶರ ಮೇಲೆ ಎಸೆಯಲು ಪ್ರಯತ್ನಿಸಿದರು.

ಆದರೂ, ನ್ಯಾಯಾಲಯದಲ್ಲಿ ಹಾಜರಿದ್ದ ಭದ್ರತಾ ಸಿಬ್ಬಂದಿ ಸಕಾಲದಲ್ಲಿ ಮಧ್ಯಪ್ರವೇಶಿಸಿ ವಕೀಲರನ್ನು ಹೊರಗೆ ಕರೆದೊಯ್ದರು. ಹೊರನಡೆಯುವಾಗ, ವಕೀಲನು “ಸನಾತನ ಧರ್ಮದ ಅಪಮಾನ ಸಹಿಸುವುದಿಲ್ಲ” ಎಂದು ಕಿರುಚಾಡಿದ್ದಾನೆ.

ಸಿಜೆಐ ಯಾವುದೇ ಮುಜುಗರಕ್ಕೊಳಗಾಗದೆ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ತಮ್ಮ ವಾದಗಳನ್ನು ಮುಂದುವರಿಸುವಂತೆ ಸೂಚಿಸಿದರು.

“ಇದೆಲ್ಲದರಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗುವುದಿಲ್ಲ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಅವರು ಹೇಳಿದರು.

ಕೃತ್ಯ ಖಂಡಿಸಿದ ಹಿರಿಯ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಲೀಕನ ಕೃತ್ಯವನ್ನು ಹಿರಿಯ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ ಖಂಡಿಸಿದ್ದಾರೆ. “ಸನಾತನ ವಿರೋಧಿ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ವಕೀಲರೊಬ್ಬರು ನ್ಯಾಯಾಲಯದಲ್ಲಿ ಸಿಜೆಐ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ವರ್ತನೆ. ನ್ಯಾಯಾಲಯದ ವಿಚಾರಣೆಯಲ್ಲಿ ವಿಷ್ಣುವಿನ ವಿಗ್ರಹದ ಬಗ್ಗೆ ಸಿಜೆಐ ಅವರ ಹೇಳಿಕೆಗಳು ಈ ರೀತಿಯ ಹಿಂಸಾತ್ಮಕ ನಡವಳಿಕೆಯನ್ನು ಪ್ರಚೋದಿಸಿದರೆ, ಅದು ತೀವ್ರ ಕಳವಳಕಾರಿ. ದುಃಖಕರವೆಂದರೆ, ಜಾತಿ ದ್ವೇಷ ಮತ್ತು ಧಾರ್ಮಿಕ ಅಸಹಿಷ್ಣುತೆಯ ಸಂಸ್ಕೃತಿಯನ್ನು ‘ಸಾಮಾನ್ಯಗೊಳಿಸಲಾಗುತ್ತಿದೆ’. ಸಾಮಾಜಿಕ ಮಾಧ್ಯಮ ಸೇನೆಗಳು ಮತ್ತು ವಿಷಕಾರಿ ಟಿವಿ ‘ಚರ್ಚೆ’ಗಳೊಂದಿಗೆ ಹಿಂಸಾಚಾರವನ್ನು ಉತ್ತೇಜಿಸುತ್ತಿದೆ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ| ಕಳ್ಳನೆಂದು ಭಾವಿಸಿ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...