Homeಮುಖಪುಟಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! 'ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ' ಎಂದು ಕಿರುಚಾಡಿದ...

ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಪ್ರಯತ್ನ! ‘ಸನಾತನ ಧರ್ಮದ ಅವಮಾನ ಸಹಿಸುವುದಿಲ್ಲ’ ಎಂದು ಕಿರುಚಾಡಿದ ವಕೀಲ

- Advertisement -
- Advertisement -

ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯುತ್ತಿದ್ದ ವಿಚಾರಣೆ ಸಮಯದಲ್ಲಿ ವಕೀಲರೊಬ್ಬರು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿದ ನಾಟಕೀಯ ದೃಶ್ಯ ನಡೆಯಿತು. ಆರೋಪಿಯನ್ನು ನ್ಯಾಯಾಲಯದ ಕೊಠಡಿಯಿಂದ ಹೊರಗೆ ಕರೆದೊಯ್ಯುತ್ತಿದ್ದಾಗ, ‘ಭಾರತ ಸನಾತನ ಧರ್ಮದ ಅವಮಾನವನ್ನು ಸಹಿಸುವುದಿಲ್ಲ’ ಎಂದು ಕಿರುಚಾಡಿದ್ದಾನೆ.

ಮಧ್ಯಪ್ರದೇಶದಲ್ಲಿ ಹಾನಿಗೊಳಗಾದ ವಿಷ್ಣು ವಿಗ್ರಹದ ಪುನಃಸ್ಥಾಪನೆಗೆ ಸಂಬಂಧಿಸಿದ ಅರ್ಜಿಯನ್ನು ಆಲಿಸುವಾಗ ಮುಖ್ಯ ನ್ಯಾಯಮೂರ್ತಿಗಳು ‘ದೇವರನ್ನೇ ಕೇಳಿ’ ಎಂಬ ಹೇಳಿಕೆ ನೀಡಿದ ಕೆಲವೇ ವಾರಗಳ ನಂತರ ವಕೀಲನಿಂದ ಇಂದು ಕೃತ್ಯ ನಡೆದಿದೆ.

ಆರೋಪಿಯನ್ನು ತಕ್ಷಣವೇ ಬಂಧಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಶಾಂತಚಿತ್ತರಾಗಿದ್ದರು, ಯಾವುದೇ ಅಡೆತಡೆಯಿಲ್ಲದೆ ತಮ್ಮ ವಿಚಾರಣೆಯನ್ನು ಮುಂದುವರೆಸಿದರು.

ಘಟನೆಯ ನಂತರ ಮಾತನಾಡಿದ ಅವರು, “ಇದೆಲ್ಲದರಿಂದ ವಿಚಲಿತರಾಗಬೇಡಿ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ವಿಚಾರಣೆಯನ್ನು ಮುಂದುವರಿಸಿ” ಎಂದು ಶಾಂತವಾಗಿ ಹೇಳಿದರು.

ಸುಪ್ರೀಂ ಕೋರ್ಟ್ ವಕೀಲ ರೋಹಿತ್ ಪಾಂಡೆ ಅವರು, ಆರೋಪಿಯನ್ನು 2011 ರಿಂದ ಬಾರ್ ಅಸೋಸಿಯೇಷನ್‌ನ ಸದಸ್ಯ ಎಂದು ಗುರುತಿಸಿದ್ದಾರೆ. “ಮುಖ್ಯ ನ್ಯಾಯಮೂರ್ತಿಗಳ ದೇವರ ಕುರಿತ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ಈ ಕೃತ್ಯ ನಡೆದಿದೆ ಎಂದು ತೋರುತ್ತದೆ. ನಾನು ಈ ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದರು.

ಸೆಪ್ಟೆಂಬರ್‌ನಲ್ಲಿ, ಮಧ್ಯಪ್ರದೇಶದ ಜವಾರಿ ದೇವಸ್ಥಾನದಲ್ಲಿ 7 ಅಡಿ ಎತ್ತರದ ವಿಷ್ಣು ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸುತ್ತಾ, ಮುಖ್ಯ ನ್ಯಾಯಮೂರ್ತಿ ಗವಾಯಿ ಅರ್ಜಿದಾರರಿಗೆ, “ಇದು ಸಂಪೂರ್ಣವಾಗಿ ಪ್ರಚಾರ ಹಿತಾಸಕ್ತಿ ಮೊಕದ್ದಮೆ. ಹೋಗಿ ದೇವರನ್ನೇ ಈಗ ಏನಾದರೂ ಮಾಡಲು ಕೇಳಿ. ನೀವು ವಿಷ್ಣುವಿನ ಕಟ್ಟಾ ಭಕ್ತ ಎಂದು ಹೇಳುತ್ತೀರಿ. ಆದ್ದರಿಂದ ಈಗಲೇ ಹೋಗಿ ಪ್ರಾರ್ಥಿಸಿ” ಎಂದು ಹೇಳಿದರು.

ಈ ತೀರ್ಪಿನ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ, ವಿವಾದಾತ್ಮಕ ಹೇಳಿಕೆಗಳು ಬಂದವು. ಬಳಿಕ, ಮುಖ್ಯ ನ್ಯಾಯಮೂರ್ತಿ ತಮ್ಮ ಹೇಳಿಕೆಗಳನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂದು ಹೇಳಿದರು. “ನಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ” ಎಂದು ಒತ್ತಿ ಹೇಳಿದರು.

ಕೋರ್ಟ್‌ ಹಾಲ್‌ನಲ್ಲಿ ನಡೆದದ್ದೇನು?

ಸಿಜೆಐ ನೇತೃತ್ವದ ಪೀಠವು ವಕೀಲರ ಪ್ರಕರಣಗಳ ಪ್ರಸ್ತಾಪವನ್ನು ಆಲಿಸುತ್ತಿದ್ದಾಗ ನಾಟಕೀಯ ಘಟನೆ ನಡೆಯಿತು. ಸ್ಥಳದಲ್ಲದಿfದವರ ಪ್ರಕಾರ, ವಕೀಲರು ವೇದಿಕೆಯ ಬಳಿಗೆ ಹೋಗಿ ತಮ್ಮ ಶೂ ತೆಗೆದು ನ್ಯಾಯಾಧೀಶರ ಮೇಲೆ ಎಸೆಯಲು ಪ್ರಯತ್ನಿಸಿದರು.

ಆದರೂ, ನ್ಯಾಯಾಲಯದಲ್ಲಿ ಹಾಜರಿದ್ದ ಭದ್ರತಾ ಸಿಬ್ಬಂದಿ ಸಕಾಲದಲ್ಲಿ ಮಧ್ಯಪ್ರವೇಶಿಸಿ ವಕೀಲರನ್ನು ಹೊರಗೆ ಕರೆದೊಯ್ದರು. ಹೊರನಡೆಯುವಾಗ, ವಕೀಲನು “ಸನಾತನ ಧರ್ಮದ ಅಪಮಾನ ಸಹಿಸುವುದಿಲ್ಲ” ಎಂದು ಕಿರುಚಾಡಿದ್ದಾನೆ.

ಸಿಜೆಐ ಯಾವುದೇ ಮುಜುಗರಕ್ಕೊಳಗಾಗದೆ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ತಮ್ಮ ವಾದಗಳನ್ನು ಮುಂದುವರಿಸುವಂತೆ ಸೂಚಿಸಿದರು.

“ಇದೆಲ್ಲದರಿಂದ ವಿಚಲಿತರಾಗಬೇಡಿ. ನಾವು ವಿಚಲಿತರಾಗುವುದಿಲ್ಲ. ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಅವರು ಹೇಳಿದರು.

ಕೃತ್ಯ ಖಂಡಿಸಿದ ಹಿರಿಯ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ

ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಲೀಕನ ಕೃತ್ಯವನ್ನು ಹಿರಿಯ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ ಖಂಡಿಸಿದ್ದಾರೆ. “ಸನಾತನ ವಿರೋಧಿ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ವಕೀಲರೊಬ್ಬರು ನ್ಯಾಯಾಲಯದಲ್ಲಿ ಸಿಜೆಐ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ಶೂ ಎಸೆದ ಘಟನೆ ನಡೆದಿದೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲದ ವರ್ತನೆ. ನ್ಯಾಯಾಲಯದ ವಿಚಾರಣೆಯಲ್ಲಿ ವಿಷ್ಣುವಿನ ವಿಗ್ರಹದ ಬಗ್ಗೆ ಸಿಜೆಐ ಅವರ ಹೇಳಿಕೆಗಳು ಈ ರೀತಿಯ ಹಿಂಸಾತ್ಮಕ ನಡವಳಿಕೆಯನ್ನು ಪ್ರಚೋದಿಸಿದರೆ, ಅದು ತೀವ್ರ ಕಳವಳಕಾರಿ. ದುಃಖಕರವೆಂದರೆ, ಜಾತಿ ದ್ವೇಷ ಮತ್ತು ಧಾರ್ಮಿಕ ಅಸಹಿಷ್ಣುತೆಯ ಸಂಸ್ಕೃತಿಯನ್ನು ‘ಸಾಮಾನ್ಯಗೊಳಿಸಲಾಗುತ್ತಿದೆ’. ಸಾಮಾಜಿಕ ಮಾಧ್ಯಮ ಸೇನೆಗಳು ಮತ್ತು ವಿಷಕಾರಿ ಟಿವಿ ‘ಚರ್ಚೆ’ಗಳೊಂದಿಗೆ ಹಿಂಸಾಚಾರವನ್ನು ಉತ್ತೇಜಿಸುತ್ತಿದೆ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ| ಕಳ್ಳನೆಂದು ಭಾವಿಸಿ ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...