Homeಮುಖಪುಟಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

- Advertisement -
- Advertisement -

ದೆಹಲಿ ಹೈಕೋರ್ಟ್‌ ಕಳೆದ ಕೆಲವು ದಿನಗಳಿಂದ CAA ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. CAA ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ ಕಾರ್ಯಕರ್ತರು ಮತ್ತು ಹೋರಾಟಗಾರರನ್ನು ಕೇಂದ್ರ ಸರ್ಕಾರ UAPA ಕಾಯ್ದೆಯಡಿ ಬಂಧಿಸಿರುವುದನ್ನು ದೆಹಲಿ ಹೈಕೋರ್ಟ್‌ ಈ ಸಂದರ್ಭದಲ್ಲಿ ವ್ಯಾಪಕವಾಗಿ ಖಂಡಿಸಿದೆ. ‘ಸಂವಿಧಾನದತ್ತ ಪ್ರತಿಭಟನೆಯ ಹಕ್ಕು ಕಸಿದುಕೊಂಡು, UAPA ಅಡಿಯಲ್ಲಿ ಅದನ್ನು ಭಯೋತ್ಪಾದನೆ ಎಂದು ಪರಿಗಣಿಸಲಾಗದು’ ಎಂದ ದೆಹಲಿ ಹೈಕೋರ್ಟ್ ಮೂವರು ಕಾರ್ಯಕರ್ತರಿಗೆ ಜಾಮೀನು ನೀಡಿದೆ. ದೇಶದ ಅನೇಕ ನ್ಯಾಯವಾದಿಗಳು ಮತ್ತು ಮಾನವ ಹಕ್ಕು ಹೋರಾಟಗಾರರು ದೆಹಲಿ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿ ಉಚ್ಛ ನ್ಯಾಯಾಲಯವು ಸರ್ಕಾರವನ್ನು ಮತ್ತು ವ್ಯವಸ್ಥೆಯನ್ನು ಟೀಕಿಸುವುದನ್ನು ದೇಶದ್ರೋಹವೆಂದು ಪರಿಗಣಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ಕೇಂದ್ರ ಸರ್ಕಾರ ಕಾನೂನುಗಳನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿದೆ. ದೇಶಾದ್ಯಂತ ಅನೇಕ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು ದೆಹಲಿ ನ್ಯಾಯಾಲಯವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಮದನ್‌ ಬಿ ಲೋಕೂರ್ ಅವರು ಸಹ ದೆಹಲಿ ಹೈ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಸರ್ಕಾರದ ವಿರುದ್ಧದ ಟೀಕೆಗೂ ದೇಶದ ವ್ಯವಸ್ಥೆಯನ್ನು ದುರ್ಬಲಗೊಳಿಸುವುದಕ್ಕೂ ನಡುವೆ ಇರುವ ವ್ಯತ್ಯಾಸವನ್ನು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರಾಳ UAPA ಮತ್ತು ದೇಶದ್ರೋಹದ ಕಾನೂನುಗಳು ಇರುವುದು ಅತ್ಯಂತ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಬಳಕೆ ಮಾಡಲಿಕ್ಕಾಗಿ. ಭಯೋತ್ಪಾದನೆ ಚಟುವಟಿಕೆಗಳನ್ನು ನಿಗ್ರಹಿಸಲು ಜಾರಿ ಮಾಡಿದ ಇಂತಹ ಕರಾಳ ಕಾಯ್ದೆಗಳನ್ನು ದೇಶದಲ್ಲಿ ಸರ್ಕಾರಗಳು ತನ್ನ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರಂತ. ಈ ಕರಾಳ ಕಾನೂನುಗಳನ್ನು ಅತ್ಯಂತ ಅಪರೂಪದ ಸಂದರ್ಭದಲ್ಲಿ ಬಳಕೆ ಮಾಡಬೇಕೆಂದು ಈ ಹಿಂದೆಯೂ ನ್ಯಾಯಾಲಯಗಳು ಹೇಳಿವೆ. ದೆಹಲಿ ಹೈಕೋರ್ಟ್ ಒಂದು ಹೆಜ್ಜೆ ಮುಂದೆ ಹೋಗಿ ಸ್ಪಷ್ಟ ಶಬ್ಧಗಳಲ್ಲಿ ಹೋರಾಟಗಾರರ ಮೇಲೆ UAPA  ಕಾಯ್ದೆ ಬಳಕೆಯನ್ನು ಖಂಡಿಸಿದೆ. ದೆಹಲಿ ನ್ಯಾಯಾಲಯದ ಹಾದಿಯಲ್ಲಿಯೇ ಇತರ ಹೈಕೋರ್ಟ್‌ಗಳು ಶೀಘ್ರವೇ ಹೆಜ್ಜೆ ಇಡುವಂತಾಗಬೇಕು. ಅತ್ಯಂತ ಪ್ರಬಲವಾದ ಸಾಕ್ಷಿಗಳಿದ್ದರೆ ಮಾತ್ರ UAPA ಕಾಯ್ದೆಯನ್ನು ಬಳಕೆ ಮಾಡಬೇಕು ಎಂದು ಜಸ್ಟಿಸ್ ಮದನ್ ಬಿ ಲೋಕೋರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ :ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

ದೆಹಲಿ ಹೈಕೋರ್ಟ್ ಹೊಸದಾಗಿ ಏನನ್ನೂ ಹೇಳಿಲ್ಲ. ಇರುವ ಕಾನೂನುಗಳನ್ನು ನಿರ್ದಿಷ್ಟ ಪ್ರಕರಣಕ್ಕೆ ಅನ್ವಯಿಸಿದೆ. ನ್ಯಾಯಾಂಗವು ಕಾರ್ಯಶೀಲವಾಗಿ ಮತ್ತು ಪ್ರಗತಿಪರವಾಗಿ ವರ್ತಿಸಿದೆ. ಹೋರಾಟಗಾರರು ಈಗಾಗಲೇ 1 ವರ್ಷವನ್ನು ಜೈಲಿನಲ್ಲಿ ಕಳೆದಿದ್ದಾರೆ ಎಂದು ಹಿರಿಯ ನ್ಯಾಯವಾದಿ ದುಶ್ಯಂತ್ ದವೆ ಅವರು ತಿಳಿಸಿದ್ದಾರೆ.

ನಮ್ಮದು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ನಾವು UAPA ನಂತಹ ಕರಾಳ ಕಾನೂನುಗಳನ್ನು ಹೋರಾಟಗಾರರ ವಿರುದ್ಧ ಬಳಸಿಕೊಂಡರೆ ದೇಶವನ್ನು ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆಯಲು ಸಾಧ್ಯವಾಗುವುದಿಲ್ಲ ಎಂದು ದುಶ್ಯಂತ್ ದವೆ ದೆಹಲಿ ನ್ಯಾಯಾಲಯದ ತೀರ್ಪಿನ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸರ್ಕಾರವೊಂದೆ UAPA ಕಾನೂನನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಕಾಂಗ್ರೆಸ್ ಕೂಡ POTA ಕಾಯ್ದೆಯ ಮೂಲಕ ಹಿಂದೆ ನೂರಾರು ಜನರನ್ನು ಜೈಲಿಗೆ ಕಳುಹಿಸಿತ್ತು ಎಂದು ದುಶ್ಯಂತ್ ದವೆ ನೆನಪಿಸಿಕೊಂಡಿದ್ದಾರೆ.

ದೆಹಲಿ ಹೈಕೋರ್ಟ್ ತೀರ್ಪು ಅತ್ಯಂತ ಮಹತ್ವವಾದದ್ದು.  ದೇಶದಲ್ಲಿ ಎಲ್ಲರ ಮೇಲೂ ದೇಸದ್ರೋಹದ ಕಾನೂನು ಬಳಕೆಯಾಗುತ್ತಿರುವ ಹೊತ್ತಿನಲ್ಲಿ ದೆಹಲಿ ಹೈಕೋರ್ಟ್ ತೀರ್ಪು ದೊಡ್ಡ ಮೈಲಿಗಲ್ಲಾಗಿದೆ ಎಂದು ನ್ಯಾಯವಾದಿ ವೃಂದಾ ಗ್ರೋವರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಪೊಲೀಸರು ಹೋರಾಟಗಾರರ ಮೇಲೆ ಕರಾಳ UAPA ಮತ್ತು ದೇಶದ್ರೋಹದ ಪ್ರಕರಣವನ್ನು ದಾಖಲಿಸುತ್ತಿರುವುದನ್ನು ನೋಡಿದ್ದೇವೆ. ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ಸಾಮಾನ್ಯ ಸಂದರ್ಭದಲ್ಲಿ ಬಳಸಿಕೊಳ್ಳುವುದನ್ನು ದೆಹಲಿ ಹೈಕೋರ್ಟ್ ಖಂಡಿಸಿದೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಸರ್ಕಾರದ ನೀತಿ ನಿಯಮಮಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ. ಅದನ್ನು UAPA ಮೂಲಕ ಮೊಟಕುಗಳಿಸಲು ಸಾಧ್ಯವಿಲ್ಲ. ತ್ವರಿತವಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲವಾದರೆ ಆರೋಪಿಗಳಿಗೆ ಜಾಮೀನು ಸಿಗಬೇಕು ಎಂದು ಹೈ ಕೋರ್ಟ್ ಹೇಳಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ವೃಂದಾ ಗ್ರೋವರ್ ಹೈ ಕೋರ್ಟ್‌ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾನೂನುಗಳು ಅತ್ಯಂತ ಕಠಿಣವಾಗಿರುತ್ತವೆ. ಅವು ಉಗ್ರಗಾಮಿ ಚಟುವಟಿಕೆಗಳನ್ನು ನಿಯಂತ್ರಿಸಲು ರೋಪಿಸಿದ ಕಾನೂನುಗಳಾಗಿರುತ್ತವೆ. ಸರ್ಕಾರ ಜನರ ಟೀಕೆ, ಭಿನ್ನಾಭಿಪ್ರಾಯಗಳನ್ನು  ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಬಾರದು. ಜನರ ಸಂವಿಧಾನಬದ್ದ ಹಕ್ಕು ಮತ್ತು ಸರ್ಕಾರದ ಬಯಕೆಗಳ ನಡುವೆ ಸ್ಪಷ್ಟ ಗೆರೆಗಳನ್ನು ಸರ್ಕಾರ ಗುರುತಿಸಬೇಕು ಎಂದು ಹಿರಿಯ ನ್ಯಾಯವಾದಿ ಗೀತಾ ಲುತ್ರಾ ಪ್ರತಿಕ್ರಿಯಿಸಿದ್ದಾರೆ.

UAPA ಬಳಕೆಯನ್ನು ಅತ್ಯಂತ ವಿವೇಚನೆಯಿಂದ ಮಾಡಬೇಕು. ಕಾನೂನು ದುರ್ಬಳಕೆಯಾಗುತ್ತಿದೆ ಎಂಬ ಕಾರಣಕ್ಕೆ ಕಾನೂನನ್ನು ರದ್ದು ಮಾಡಲು ಸಾಧ್ಯವಿಲ್ಲ. ಆದರೆ ನ್ಯಾಯಾಲಯಗಳು UAPA ಮತ್ತು ದೇಶದ್ರೋಹದ ಕಾನೂನುಗಳನ್ನು ಯಾವ ಸಂದರ್ಭದಲ್ಲಿ ಬಳಸಿಕೊಳ್ಳಬಹುದೆಂದು ನ್ಯಾಯಾಲಯಗಳು ಸರಿಯಾದ ಮಾರ್ಗಸೂಚಿಗಳನ್ನು ಹಾಕಬೇಕು ಎಂದು ಕಾನೂನು ಆಯೋಗದ ಮಾಜಿ ಅಧ್ಯಕ್ಷ ಬಿ.ಎಸ್. ಚೌಹಾಣ್ UAPA ಕಾನೂನಿನ ಬಳಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ :ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಮಂಡ್ಯದಲ್ಲಿ ಈಡುಗಾಯಿ ಸೇವೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...