Homeಮುಖಪುಟಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

- Advertisement -
- Advertisement -

ದೆಹಲಿ ಹೈಕೋರ್ಟ್‌ ಕಳೆದ ಕೆಲವು ದಿನಗಳಿಂದ CAA ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. CAA ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ ಕಾರ್ಯಕರ್ತರು ಮತ್ತು ಹೋರಾಟಗಾರರನ್ನು ಕೇಂದ್ರ ಸರ್ಕಾರ UAPA ಕಾಯ್ದೆಯಡಿ ಬಂಧಿಸಿರುವುದನ್ನು ದೆಹಲಿ ಹೈಕೋರ್ಟ್‌ ಈ ಸಂದರ್ಭದಲ್ಲಿ ವ್ಯಾಪಕವಾಗಿ ಖಂಡಿಸಿದೆ. ‘ಸಂವಿಧಾನದತ್ತ ಪ್ರತಿಭಟನೆಯ ಹಕ್ಕು ಕಸಿದುಕೊಂಡು, UAPA ಅಡಿಯಲ್ಲಿ ಅದನ್ನು ಭಯೋತ್ಪಾದನೆ ಎಂದು ಪರಿಗಣಿಸಲಾಗದು’ ಎಂದ ದೆಹಲಿ ಹೈಕೋರ್ಟ್ ಮೂವರು ಕಾರ್ಯಕರ್ತರಿಗೆ ಜಾಮೀನು ನೀಡಿದೆ. ದೇಶದ ಅನೇಕ ನ್ಯಾಯವಾದಿಗಳು ಮತ್ತು ಮಾನವ ಹಕ್ಕು ಹೋರಾಟಗಾರರು ದೆಹಲಿ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿ ಉಚ್ಛ ನ್ಯಾಯಾಲಯವು ಸರ್ಕಾರವನ್ನು ಮತ್ತು ವ್ಯವಸ್ಥೆಯನ್ನು ಟೀಕಿಸುವುದನ್ನು ದೇಶದ್ರೋಹವೆಂದು ಪರಿಗಣಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ಕೇಂದ್ರ ಸರ್ಕಾರ ಕಾನೂನುಗಳನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿದೆ. ದೇಶಾದ್ಯಂತ ಅನೇಕ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು ದೆಹಲಿ ನ್ಯಾಯಾಲಯವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಮದನ್‌ ಬಿ ಲೋಕೂರ್ ಅವರು ಸಹ ದೆಹಲಿ ಹೈ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಸರ್ಕಾರದ ವಿರುದ್ಧದ ಟೀಕೆಗೂ ದೇಶದ ವ್ಯವಸ್ಥೆಯನ್ನು ದುರ್ಬಲಗೊಳಿಸುವುದಕ್ಕೂ ನಡುವೆ ಇರುವ ವ್ಯತ್ಯಾಸವನ್ನು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರಾಳ UAPA ಮತ್ತು ದೇಶದ್ರೋಹದ ಕಾನೂನುಗಳು ಇರುವುದು ಅತ್ಯಂತ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಬಳಕೆ ಮಾಡಲಿಕ್ಕಾಗಿ. ಭಯೋತ್ಪಾದನೆ ಚಟುವಟಿಕೆಗಳನ್ನು ನಿಗ್ರಹಿಸಲು ಜಾರಿ ಮಾಡಿದ ಇಂತಹ ಕರಾಳ ಕಾಯ್ದೆಗಳನ್ನು ದೇಶದಲ್ಲಿ ಸರ್ಕಾರಗಳು ತನ್ನ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರಂತ. ಈ ಕರಾಳ ಕಾನೂನುಗಳನ್ನು ಅತ್ಯಂತ ಅಪರೂಪದ ಸಂದರ್ಭದಲ್ಲಿ ಬಳಕೆ ಮಾಡಬೇಕೆಂದು ಈ ಹಿಂದೆಯೂ ನ್ಯಾಯಾಲಯಗಳು ಹೇಳಿವೆ. ದೆಹಲಿ ಹೈಕೋರ್ಟ್ ಒಂದು ಹೆಜ್ಜೆ ಮುಂದೆ ಹೋಗಿ ಸ್ಪಷ್ಟ ಶಬ್ಧಗಳಲ್ಲಿ ಹೋರಾಟಗಾರರ ಮೇಲೆ UAPA  ಕಾಯ್ದೆ ಬಳಕೆಯನ್ನು ಖಂಡಿಸಿದೆ. ದೆಹಲಿ ನ್ಯಾಯಾಲಯದ ಹಾದಿಯಲ್ಲಿಯೇ ಇತರ ಹೈಕೋರ್ಟ್‌ಗಳು ಶೀಘ್ರವೇ ಹೆಜ್ಜೆ ಇಡುವಂತಾಗಬೇಕು. ಅತ್ಯಂತ ಪ್ರಬಲವಾದ ಸಾಕ್ಷಿಗಳಿದ್ದರೆ ಮಾತ್ರ UAPA ಕಾಯ್ದೆಯನ್ನು ಬಳಕೆ ಮಾಡಬೇಕು ಎಂದು ಜಸ್ಟಿಸ್ ಮದನ್ ಬಿ ಲೋಕೋರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ :ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

ದೆಹಲಿ ಹೈಕೋರ್ಟ್ ಹೊಸದಾಗಿ ಏನನ್ನೂ ಹೇಳಿಲ್ಲ. ಇರುವ ಕಾನೂನುಗಳನ್ನು ನಿರ್ದಿಷ್ಟ ಪ್ರಕರಣಕ್ಕೆ ಅನ್ವಯಿಸಿದೆ. ನ್ಯಾಯಾಂಗವು ಕಾರ್ಯಶೀಲವಾಗಿ ಮತ್ತು ಪ್ರಗತಿಪರವಾಗಿ ವರ್ತಿಸಿದೆ. ಹೋರಾಟಗಾರರು ಈಗಾಗಲೇ 1 ವರ್ಷವನ್ನು ಜೈಲಿನಲ್ಲಿ ಕಳೆದಿದ್ದಾರೆ ಎಂದು ಹಿರಿಯ ನ್ಯಾಯವಾದಿ ದುಶ್ಯಂತ್ ದವೆ ಅವರು ತಿಳಿಸಿದ್ದಾರೆ.

ನಮ್ಮದು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ನಾವು UAPA ನಂತಹ ಕರಾಳ ಕಾನೂನುಗಳನ್ನು ಹೋರಾಟಗಾರರ ವಿರುದ್ಧ ಬಳಸಿಕೊಂಡರೆ ದೇಶವನ್ನು ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆಯಲು ಸಾಧ್ಯವಾಗುವುದಿಲ್ಲ ಎಂದು ದುಶ್ಯಂತ್ ದವೆ ದೆಹಲಿ ನ್ಯಾಯಾಲಯದ ತೀರ್ಪಿನ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸರ್ಕಾರವೊಂದೆ UAPA ಕಾನೂನನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಕಾಂಗ್ರೆಸ್ ಕೂಡ POTA ಕಾಯ್ದೆಯ ಮೂಲಕ ಹಿಂದೆ ನೂರಾರು ಜನರನ್ನು ಜೈಲಿಗೆ ಕಳುಹಿಸಿತ್ತು ಎಂದು ದುಶ್ಯಂತ್ ದವೆ ನೆನಪಿಸಿಕೊಂಡಿದ್ದಾರೆ.

ದೆಹಲಿ ಹೈಕೋರ್ಟ್ ತೀರ್ಪು ಅತ್ಯಂತ ಮಹತ್ವವಾದದ್ದು.  ದೇಶದಲ್ಲಿ ಎಲ್ಲರ ಮೇಲೂ ದೇಸದ್ರೋಹದ ಕಾನೂನು ಬಳಕೆಯಾಗುತ್ತಿರುವ ಹೊತ್ತಿನಲ್ಲಿ ದೆಹಲಿ ಹೈಕೋರ್ಟ್ ತೀರ್ಪು ದೊಡ್ಡ ಮೈಲಿಗಲ್ಲಾಗಿದೆ ಎಂದು ನ್ಯಾಯವಾದಿ ವೃಂದಾ ಗ್ರೋವರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಪೊಲೀಸರು ಹೋರಾಟಗಾರರ ಮೇಲೆ ಕರಾಳ UAPA ಮತ್ತು ದೇಶದ್ರೋಹದ ಪ್ರಕರಣವನ್ನು ದಾಖಲಿಸುತ್ತಿರುವುದನ್ನು ನೋಡಿದ್ದೇವೆ. ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ಸಾಮಾನ್ಯ ಸಂದರ್ಭದಲ್ಲಿ ಬಳಸಿಕೊಳ್ಳುವುದನ್ನು ದೆಹಲಿ ಹೈಕೋರ್ಟ್ ಖಂಡಿಸಿದೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಸರ್ಕಾರದ ನೀತಿ ನಿಯಮಮಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ. ಅದನ್ನು UAPA ಮೂಲಕ ಮೊಟಕುಗಳಿಸಲು ಸಾಧ್ಯವಿಲ್ಲ. ತ್ವರಿತವಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲವಾದರೆ ಆರೋಪಿಗಳಿಗೆ ಜಾಮೀನು ಸಿಗಬೇಕು ಎಂದು ಹೈ ಕೋರ್ಟ್ ಹೇಳಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ವೃಂದಾ ಗ್ರೋವರ್ ಹೈ ಕೋರ್ಟ್‌ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾನೂನುಗಳು ಅತ್ಯಂತ ಕಠಿಣವಾಗಿರುತ್ತವೆ. ಅವು ಉಗ್ರಗಾಮಿ ಚಟುವಟಿಕೆಗಳನ್ನು ನಿಯಂತ್ರಿಸಲು ರೋಪಿಸಿದ ಕಾನೂನುಗಳಾಗಿರುತ್ತವೆ. ಸರ್ಕಾರ ಜನರ ಟೀಕೆ, ಭಿನ್ನಾಭಿಪ್ರಾಯಗಳನ್ನು  ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಬಾರದು. ಜನರ ಸಂವಿಧಾನಬದ್ದ ಹಕ್ಕು ಮತ್ತು ಸರ್ಕಾರದ ಬಯಕೆಗಳ ನಡುವೆ ಸ್ಪಷ್ಟ ಗೆರೆಗಳನ್ನು ಸರ್ಕಾರ ಗುರುತಿಸಬೇಕು ಎಂದು ಹಿರಿಯ ನ್ಯಾಯವಾದಿ ಗೀತಾ ಲುತ್ರಾ ಪ್ರತಿಕ್ರಿಯಿಸಿದ್ದಾರೆ.

UAPA ಬಳಕೆಯನ್ನು ಅತ್ಯಂತ ವಿವೇಚನೆಯಿಂದ ಮಾಡಬೇಕು. ಕಾನೂನು ದುರ್ಬಳಕೆಯಾಗುತ್ತಿದೆ ಎಂಬ ಕಾರಣಕ್ಕೆ ಕಾನೂನನ್ನು ರದ್ದು ಮಾಡಲು ಸಾಧ್ಯವಿಲ್ಲ. ಆದರೆ ನ್ಯಾಯಾಲಯಗಳು UAPA ಮತ್ತು ದೇಶದ್ರೋಹದ ಕಾನೂನುಗಳನ್ನು ಯಾವ ಸಂದರ್ಭದಲ್ಲಿ ಬಳಸಿಕೊಳ್ಳಬಹುದೆಂದು ನ್ಯಾಯಾಲಯಗಳು ಸರಿಯಾದ ಮಾರ್ಗಸೂಚಿಗಳನ್ನು ಹಾಕಬೇಕು ಎಂದು ಕಾನೂನು ಆಯೋಗದ ಮಾಜಿ ಅಧ್ಯಕ್ಷ ಬಿ.ಎಸ್. ಚೌಹಾಣ್ UAPA ಕಾನೂನಿನ ಬಳಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ :ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಮಂಡ್ಯದಲ್ಲಿ ಈಡುಗಾಯಿ ಸೇವೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...