Homeಮುಖಪುಟಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

- Advertisement -
- Advertisement -

ದೆಹಲಿ ಹೈಕೋರ್ಟ್‌ ಕಳೆದ ಕೆಲವು ದಿನಗಳಿಂದ CAA ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. CAA ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ ಕಾರ್ಯಕರ್ತರು ಮತ್ತು ಹೋರಾಟಗಾರರನ್ನು ಕೇಂದ್ರ ಸರ್ಕಾರ UAPA ಕಾಯ್ದೆಯಡಿ ಬಂಧಿಸಿರುವುದನ್ನು ದೆಹಲಿ ಹೈಕೋರ್ಟ್‌ ಈ ಸಂದರ್ಭದಲ್ಲಿ ವ್ಯಾಪಕವಾಗಿ ಖಂಡಿಸಿದೆ. ‘ಸಂವಿಧಾನದತ್ತ ಪ್ರತಿಭಟನೆಯ ಹಕ್ಕು ಕಸಿದುಕೊಂಡು, UAPA ಅಡಿಯಲ್ಲಿ ಅದನ್ನು ಭಯೋತ್ಪಾದನೆ ಎಂದು ಪರಿಗಣಿಸಲಾಗದು’ ಎಂದ ದೆಹಲಿ ಹೈಕೋರ್ಟ್ ಮೂವರು ಕಾರ್ಯಕರ್ತರಿಗೆ ಜಾಮೀನು ನೀಡಿದೆ. ದೇಶದ ಅನೇಕ ನ್ಯಾಯವಾದಿಗಳು ಮತ್ತು ಮಾನವ ಹಕ್ಕು ಹೋರಾಟಗಾರರು ದೆಹಲಿ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿ ಉಚ್ಛ ನ್ಯಾಯಾಲಯವು ಸರ್ಕಾರವನ್ನು ಮತ್ತು ವ್ಯವಸ್ಥೆಯನ್ನು ಟೀಕಿಸುವುದನ್ನು ದೇಶದ್ರೋಹವೆಂದು ಪರಿಗಣಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ಕೇಂದ್ರ ಸರ್ಕಾರ ಕಾನೂನುಗಳನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿದೆ. ದೇಶಾದ್ಯಂತ ಅನೇಕ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು ದೆಹಲಿ ನ್ಯಾಯಾಲಯವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಮದನ್‌ ಬಿ ಲೋಕೂರ್ ಅವರು ಸಹ ದೆಹಲಿ ಹೈ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಸರ್ಕಾರದ ವಿರುದ್ಧದ ಟೀಕೆಗೂ ದೇಶದ ವ್ಯವಸ್ಥೆಯನ್ನು ದುರ್ಬಲಗೊಳಿಸುವುದಕ್ಕೂ ನಡುವೆ ಇರುವ ವ್ಯತ್ಯಾಸವನ್ನು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರಾಳ UAPA ಮತ್ತು ದೇಶದ್ರೋಹದ ಕಾನೂನುಗಳು ಇರುವುದು ಅತ್ಯಂತ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಬಳಕೆ ಮಾಡಲಿಕ್ಕಾಗಿ. ಭಯೋತ್ಪಾದನೆ ಚಟುವಟಿಕೆಗಳನ್ನು ನಿಗ್ರಹಿಸಲು ಜಾರಿ ಮಾಡಿದ ಇಂತಹ ಕರಾಳ ಕಾಯ್ದೆಗಳನ್ನು ದೇಶದಲ್ಲಿ ಸರ್ಕಾರಗಳು ತನ್ನ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರಂತ. ಈ ಕರಾಳ ಕಾನೂನುಗಳನ್ನು ಅತ್ಯಂತ ಅಪರೂಪದ ಸಂದರ್ಭದಲ್ಲಿ ಬಳಕೆ ಮಾಡಬೇಕೆಂದು ಈ ಹಿಂದೆಯೂ ನ್ಯಾಯಾಲಯಗಳು ಹೇಳಿವೆ. ದೆಹಲಿ ಹೈಕೋರ್ಟ್ ಒಂದು ಹೆಜ್ಜೆ ಮುಂದೆ ಹೋಗಿ ಸ್ಪಷ್ಟ ಶಬ್ಧಗಳಲ್ಲಿ ಹೋರಾಟಗಾರರ ಮೇಲೆ UAPA  ಕಾಯ್ದೆ ಬಳಕೆಯನ್ನು ಖಂಡಿಸಿದೆ. ದೆಹಲಿ ನ್ಯಾಯಾಲಯದ ಹಾದಿಯಲ್ಲಿಯೇ ಇತರ ಹೈಕೋರ್ಟ್‌ಗಳು ಶೀಘ್ರವೇ ಹೆಜ್ಜೆ ಇಡುವಂತಾಗಬೇಕು. ಅತ್ಯಂತ ಪ್ರಬಲವಾದ ಸಾಕ್ಷಿಗಳಿದ್ದರೆ ಮಾತ್ರ UAPA ಕಾಯ್ದೆಯನ್ನು ಬಳಕೆ ಮಾಡಬೇಕು ಎಂದು ಜಸ್ಟಿಸ್ ಮದನ್ ಬಿ ಲೋಕೋರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ :ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

ದೆಹಲಿ ಹೈಕೋರ್ಟ್ ಹೊಸದಾಗಿ ಏನನ್ನೂ ಹೇಳಿಲ್ಲ. ಇರುವ ಕಾನೂನುಗಳನ್ನು ನಿರ್ದಿಷ್ಟ ಪ್ರಕರಣಕ್ಕೆ ಅನ್ವಯಿಸಿದೆ. ನ್ಯಾಯಾಂಗವು ಕಾರ್ಯಶೀಲವಾಗಿ ಮತ್ತು ಪ್ರಗತಿಪರವಾಗಿ ವರ್ತಿಸಿದೆ. ಹೋರಾಟಗಾರರು ಈಗಾಗಲೇ 1 ವರ್ಷವನ್ನು ಜೈಲಿನಲ್ಲಿ ಕಳೆದಿದ್ದಾರೆ ಎಂದು ಹಿರಿಯ ನ್ಯಾಯವಾದಿ ದುಶ್ಯಂತ್ ದವೆ ಅವರು ತಿಳಿಸಿದ್ದಾರೆ.

ನಮ್ಮದು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ನಾವು UAPA ನಂತಹ ಕರಾಳ ಕಾನೂನುಗಳನ್ನು ಹೋರಾಟಗಾರರ ವಿರುದ್ಧ ಬಳಸಿಕೊಂಡರೆ ದೇಶವನ್ನು ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆಯಲು ಸಾಧ್ಯವಾಗುವುದಿಲ್ಲ ಎಂದು ದುಶ್ಯಂತ್ ದವೆ ದೆಹಲಿ ನ್ಯಾಯಾಲಯದ ತೀರ್ಪಿನ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸರ್ಕಾರವೊಂದೆ UAPA ಕಾನೂನನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಕಾಂಗ್ರೆಸ್ ಕೂಡ POTA ಕಾಯ್ದೆಯ ಮೂಲಕ ಹಿಂದೆ ನೂರಾರು ಜನರನ್ನು ಜೈಲಿಗೆ ಕಳುಹಿಸಿತ್ತು ಎಂದು ದುಶ್ಯಂತ್ ದವೆ ನೆನಪಿಸಿಕೊಂಡಿದ್ದಾರೆ.

ದೆಹಲಿ ಹೈಕೋರ್ಟ್ ತೀರ್ಪು ಅತ್ಯಂತ ಮಹತ್ವವಾದದ್ದು.  ದೇಶದಲ್ಲಿ ಎಲ್ಲರ ಮೇಲೂ ದೇಸದ್ರೋಹದ ಕಾನೂನು ಬಳಕೆಯಾಗುತ್ತಿರುವ ಹೊತ್ತಿನಲ್ಲಿ ದೆಹಲಿ ಹೈಕೋರ್ಟ್ ತೀರ್ಪು ದೊಡ್ಡ ಮೈಲಿಗಲ್ಲಾಗಿದೆ ಎಂದು ನ್ಯಾಯವಾದಿ ವೃಂದಾ ಗ್ರೋವರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಪೊಲೀಸರು ಹೋರಾಟಗಾರರ ಮೇಲೆ ಕರಾಳ UAPA ಮತ್ತು ದೇಶದ್ರೋಹದ ಪ್ರಕರಣವನ್ನು ದಾಖಲಿಸುತ್ತಿರುವುದನ್ನು ನೋಡಿದ್ದೇವೆ. ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ಸಾಮಾನ್ಯ ಸಂದರ್ಭದಲ್ಲಿ ಬಳಸಿಕೊಳ್ಳುವುದನ್ನು ದೆಹಲಿ ಹೈಕೋರ್ಟ್ ಖಂಡಿಸಿದೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಸರ್ಕಾರದ ನೀತಿ ನಿಯಮಮಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ. ಅದನ್ನು UAPA ಮೂಲಕ ಮೊಟಕುಗಳಿಸಲು ಸಾಧ್ಯವಿಲ್ಲ. ತ್ವರಿತವಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲವಾದರೆ ಆರೋಪಿಗಳಿಗೆ ಜಾಮೀನು ಸಿಗಬೇಕು ಎಂದು ಹೈ ಕೋರ್ಟ್ ಹೇಳಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ವೃಂದಾ ಗ್ರೋವರ್ ಹೈ ಕೋರ್ಟ್‌ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾನೂನುಗಳು ಅತ್ಯಂತ ಕಠಿಣವಾಗಿರುತ್ತವೆ. ಅವು ಉಗ್ರಗಾಮಿ ಚಟುವಟಿಕೆಗಳನ್ನು ನಿಯಂತ್ರಿಸಲು ರೋಪಿಸಿದ ಕಾನೂನುಗಳಾಗಿರುತ್ತವೆ. ಸರ್ಕಾರ ಜನರ ಟೀಕೆ, ಭಿನ್ನಾಭಿಪ್ರಾಯಗಳನ್ನು  ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಬಾರದು. ಜನರ ಸಂವಿಧಾನಬದ್ದ ಹಕ್ಕು ಮತ್ತು ಸರ್ಕಾರದ ಬಯಕೆಗಳ ನಡುವೆ ಸ್ಪಷ್ಟ ಗೆರೆಗಳನ್ನು ಸರ್ಕಾರ ಗುರುತಿಸಬೇಕು ಎಂದು ಹಿರಿಯ ನ್ಯಾಯವಾದಿ ಗೀತಾ ಲುತ್ರಾ ಪ್ರತಿಕ್ರಿಯಿಸಿದ್ದಾರೆ.

UAPA ಬಳಕೆಯನ್ನು ಅತ್ಯಂತ ವಿವೇಚನೆಯಿಂದ ಮಾಡಬೇಕು. ಕಾನೂನು ದುರ್ಬಳಕೆಯಾಗುತ್ತಿದೆ ಎಂಬ ಕಾರಣಕ್ಕೆ ಕಾನೂನನ್ನು ರದ್ದು ಮಾಡಲು ಸಾಧ್ಯವಿಲ್ಲ. ಆದರೆ ನ್ಯಾಯಾಲಯಗಳು UAPA ಮತ್ತು ದೇಶದ್ರೋಹದ ಕಾನೂನುಗಳನ್ನು ಯಾವ ಸಂದರ್ಭದಲ್ಲಿ ಬಳಸಿಕೊಳ್ಳಬಹುದೆಂದು ನ್ಯಾಯಾಲಯಗಳು ಸರಿಯಾದ ಮಾರ್ಗಸೂಚಿಗಳನ್ನು ಹಾಕಬೇಕು ಎಂದು ಕಾನೂನು ಆಯೋಗದ ಮಾಜಿ ಅಧ್ಯಕ್ಷ ಬಿ.ಎಸ್. ಚೌಹಾಣ್ UAPA ಕಾನೂನಿನ ಬಳಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ :ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಮಂಡ್ಯದಲ್ಲಿ ಈಡುಗಾಯಿ ಸೇವೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...