Homeಮುಖಪುಟಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

ಪ್ರತಿಭಟಿಸುವುದು ಭಯೋತ್ಪಾದನೆಯಲ್ಲ ಎಂದ ದೆಹಲಿ ಹೈಕೋರ್ಟ್: ಸ್ವಾಗತಿಸಿದ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು

- Advertisement -
- Advertisement -

ದೆಹಲಿ ಹೈಕೋರ್ಟ್‌ ಕಳೆದ ಕೆಲವು ದಿನಗಳಿಂದ CAA ವಿರುದ್ಧದ ಪ್ರಕರಣಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. CAA ವಿರುದ್ಧದ ಹೋರಾಟದಲ್ಲಿ ಭಾಗವಹಿಸಿದ ಕಾರ್ಯಕರ್ತರು ಮತ್ತು ಹೋರಾಟಗಾರರನ್ನು ಕೇಂದ್ರ ಸರ್ಕಾರ UAPA ಕಾಯ್ದೆಯಡಿ ಬಂಧಿಸಿರುವುದನ್ನು ದೆಹಲಿ ಹೈಕೋರ್ಟ್‌ ಈ ಸಂದರ್ಭದಲ್ಲಿ ವ್ಯಾಪಕವಾಗಿ ಖಂಡಿಸಿದೆ. ‘ಸಂವಿಧಾನದತ್ತ ಪ್ರತಿಭಟನೆಯ ಹಕ್ಕು ಕಸಿದುಕೊಂಡು, UAPA ಅಡಿಯಲ್ಲಿ ಅದನ್ನು ಭಯೋತ್ಪಾದನೆ ಎಂದು ಪರಿಗಣಿಸಲಾಗದು’ ಎಂದ ದೆಹಲಿ ಹೈಕೋರ್ಟ್ ಮೂವರು ಕಾರ್ಯಕರ್ತರಿಗೆ ಜಾಮೀನು ನೀಡಿದೆ. ದೇಶದ ಅನೇಕ ನ್ಯಾಯವಾದಿಗಳು ಮತ್ತು ಮಾನವ ಹಕ್ಕು ಹೋರಾಟಗಾರರು ದೆಹಲಿ ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿ ಉಚ್ಛ ನ್ಯಾಯಾಲಯವು ಸರ್ಕಾರವನ್ನು ಮತ್ತು ವ್ಯವಸ್ಥೆಯನ್ನು ಟೀಕಿಸುವುದನ್ನು ದೇಶದ್ರೋಹವೆಂದು ಪರಿಗಣಿಸಲು ಸಾಧ್ಯವಿಲ್ಲ ಎನ್ನುವ ಮೂಲಕ ಕೇಂದ್ರ ಸರ್ಕಾರ ಕಾನೂನುಗಳನ್ನು ದುರ್ಬಳಕೆ ಮಾಡುತ್ತಿರುವುದನ್ನು ಖಂಡಿಸಿದೆ. ದೇಶಾದ್ಯಂತ ಅನೇಕ ನ್ಯಾಯವಾದಿಗಳು ಮತ್ತು ಕಾನೂನು ತಜ್ಞರು ದೆಹಲಿ ನ್ಯಾಯಾಲಯವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಮದನ್‌ ಬಿ ಲೋಕೂರ್ ಅವರು ಸಹ ದೆಹಲಿ ಹೈ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಸರ್ಕಾರದ ವಿರುದ್ಧದ ಟೀಕೆಗೂ ದೇಶದ ವ್ಯವಸ್ಥೆಯನ್ನು ದುರ್ಬಲಗೊಳಿಸುವುದಕ್ಕೂ ನಡುವೆ ಇರುವ ವ್ಯತ್ಯಾಸವನ್ನು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರಾಳ UAPA ಮತ್ತು ದೇಶದ್ರೋಹದ ಕಾನೂನುಗಳು ಇರುವುದು ಅತ್ಯಂತ ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಬಳಕೆ ಮಾಡಲಿಕ್ಕಾಗಿ. ಭಯೋತ್ಪಾದನೆ ಚಟುವಟಿಕೆಗಳನ್ನು ನಿಗ್ರಹಿಸಲು ಜಾರಿ ಮಾಡಿದ ಇಂತಹ ಕರಾಳ ಕಾಯ್ದೆಗಳನ್ನು ದೇಶದಲ್ಲಿ ಸರ್ಕಾರಗಳು ತನ್ನ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರಂತ. ಈ ಕರಾಳ ಕಾನೂನುಗಳನ್ನು ಅತ್ಯಂತ ಅಪರೂಪದ ಸಂದರ್ಭದಲ್ಲಿ ಬಳಕೆ ಮಾಡಬೇಕೆಂದು ಈ ಹಿಂದೆಯೂ ನ್ಯಾಯಾಲಯಗಳು ಹೇಳಿವೆ. ದೆಹಲಿ ಹೈಕೋರ್ಟ್ ಒಂದು ಹೆಜ್ಜೆ ಮುಂದೆ ಹೋಗಿ ಸ್ಪಷ್ಟ ಶಬ್ಧಗಳಲ್ಲಿ ಹೋರಾಟಗಾರರ ಮೇಲೆ UAPA  ಕಾಯ್ದೆ ಬಳಕೆಯನ್ನು ಖಂಡಿಸಿದೆ. ದೆಹಲಿ ನ್ಯಾಯಾಲಯದ ಹಾದಿಯಲ್ಲಿಯೇ ಇತರ ಹೈಕೋರ್ಟ್‌ಗಳು ಶೀಘ್ರವೇ ಹೆಜ್ಜೆ ಇಡುವಂತಾಗಬೇಕು. ಅತ್ಯಂತ ಪ್ರಬಲವಾದ ಸಾಕ್ಷಿಗಳಿದ್ದರೆ ಮಾತ್ರ UAPA ಕಾಯ್ದೆಯನ್ನು ಬಳಕೆ ಮಾಡಬೇಕು ಎಂದು ಜಸ್ಟಿಸ್ ಮದನ್ ಬಿ ಲೋಕೋರ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ :ಬಿಬಿಸಿ ಪತ್ರಕರ್ತನ್ನು ಬೆನ್ನಟ್ಟಿ ‘ದೇಶದ್ರೋಹಿ’ ಎಂದ ಪ್ರತಿಭಟನಾಕಾರರು!

ದೆಹಲಿ ಹೈಕೋರ್ಟ್ ಹೊಸದಾಗಿ ಏನನ್ನೂ ಹೇಳಿಲ್ಲ. ಇರುವ ಕಾನೂನುಗಳನ್ನು ನಿರ್ದಿಷ್ಟ ಪ್ರಕರಣಕ್ಕೆ ಅನ್ವಯಿಸಿದೆ. ನ್ಯಾಯಾಂಗವು ಕಾರ್ಯಶೀಲವಾಗಿ ಮತ್ತು ಪ್ರಗತಿಪರವಾಗಿ ವರ್ತಿಸಿದೆ. ಹೋರಾಟಗಾರರು ಈಗಾಗಲೇ 1 ವರ್ಷವನ್ನು ಜೈಲಿನಲ್ಲಿ ಕಳೆದಿದ್ದಾರೆ ಎಂದು ಹಿರಿಯ ನ್ಯಾಯವಾದಿ ದುಶ್ಯಂತ್ ದವೆ ಅವರು ತಿಳಿಸಿದ್ದಾರೆ.

ನಮ್ಮದು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ನಾವು UAPA ನಂತಹ ಕರಾಳ ಕಾನೂನುಗಳನ್ನು ಹೋರಾಟಗಾರರ ವಿರುದ್ಧ ಬಳಸಿಕೊಂಡರೆ ದೇಶವನ್ನು ಪ್ರಜಾಪ್ರಭುತ್ವ ರಾಷ್ಟ್ರ ಎಂದು ಕರೆಯಲು ಸಾಧ್ಯವಾಗುವುದಿಲ್ಲ ಎಂದು ದುಶ್ಯಂತ್ ದವೆ ದೆಹಲಿ ನ್ಯಾಯಾಲಯದ ತೀರ್ಪಿನ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸರ್ಕಾರವೊಂದೆ UAPA ಕಾನೂನನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಕಾಂಗ್ರೆಸ್ ಕೂಡ POTA ಕಾಯ್ದೆಯ ಮೂಲಕ ಹಿಂದೆ ನೂರಾರು ಜನರನ್ನು ಜೈಲಿಗೆ ಕಳುಹಿಸಿತ್ತು ಎಂದು ದುಶ್ಯಂತ್ ದವೆ ನೆನಪಿಸಿಕೊಂಡಿದ್ದಾರೆ.

ದೆಹಲಿ ಹೈಕೋರ್ಟ್ ತೀರ್ಪು ಅತ್ಯಂತ ಮಹತ್ವವಾದದ್ದು.  ದೇಶದಲ್ಲಿ ಎಲ್ಲರ ಮೇಲೂ ದೇಸದ್ರೋಹದ ಕಾನೂನು ಬಳಕೆಯಾಗುತ್ತಿರುವ ಹೊತ್ತಿನಲ್ಲಿ ದೆಹಲಿ ಹೈಕೋರ್ಟ್ ತೀರ್ಪು ದೊಡ್ಡ ಮೈಲಿಗಲ್ಲಾಗಿದೆ ಎಂದು ನ್ಯಾಯವಾದಿ ವೃಂದಾ ಗ್ರೋವರ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಪೊಲೀಸರು ಹೋರಾಟಗಾರರ ಮೇಲೆ ಕರಾಳ UAPA ಮತ್ತು ದೇಶದ್ರೋಹದ ಪ್ರಕರಣವನ್ನು ದಾಖಲಿಸುತ್ತಿರುವುದನ್ನು ನೋಡಿದ್ದೇವೆ. ಭಯೋತ್ಪಾದನಾ ವಿರೋಧಿ ಕಾನೂನುಗಳನ್ನು ಸಾಮಾನ್ಯ ಸಂದರ್ಭದಲ್ಲಿ ಬಳಸಿಕೊಳ್ಳುವುದನ್ನು ದೆಹಲಿ ಹೈಕೋರ್ಟ್ ಖಂಡಿಸಿದೆ. ದೇಶದಲ್ಲಿ ಪ್ರತಿಯೊಬ್ಬರಿಗೂ ಸರ್ಕಾರದ ನೀತಿ ನಿಯಮಮಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ. ಅದನ್ನು UAPA ಮೂಲಕ ಮೊಟಕುಗಳಿಸಲು ಸಾಧ್ಯವಿಲ್ಲ. ತ್ವರಿತವಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲವಾದರೆ ಆರೋಪಿಗಳಿಗೆ ಜಾಮೀನು ಸಿಗಬೇಕು ಎಂದು ಹೈ ಕೋರ್ಟ್ ಹೇಳಿರುವುದು ನಿಜಕ್ಕೂ ಸ್ವಾಗತಾರ್ಹ ಎಂದು ವೃಂದಾ ಗ್ರೋವರ್ ಹೈ ಕೋರ್ಟ್‌ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾನೂನುಗಳು ಅತ್ಯಂತ ಕಠಿಣವಾಗಿರುತ್ತವೆ. ಅವು ಉಗ್ರಗಾಮಿ ಚಟುವಟಿಕೆಗಳನ್ನು ನಿಯಂತ್ರಿಸಲು ರೋಪಿಸಿದ ಕಾನೂನುಗಳಾಗಿರುತ್ತವೆ. ಸರ್ಕಾರ ಜನರ ಟೀಕೆ, ಭಿನ್ನಾಭಿಪ್ರಾಯಗಳನ್ನು  ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಬಾರದು. ಜನರ ಸಂವಿಧಾನಬದ್ದ ಹಕ್ಕು ಮತ್ತು ಸರ್ಕಾರದ ಬಯಕೆಗಳ ನಡುವೆ ಸ್ಪಷ್ಟ ಗೆರೆಗಳನ್ನು ಸರ್ಕಾರ ಗುರುತಿಸಬೇಕು ಎಂದು ಹಿರಿಯ ನ್ಯಾಯವಾದಿ ಗೀತಾ ಲುತ್ರಾ ಪ್ರತಿಕ್ರಿಯಿಸಿದ್ದಾರೆ.

UAPA ಬಳಕೆಯನ್ನು ಅತ್ಯಂತ ವಿವೇಚನೆಯಿಂದ ಮಾಡಬೇಕು. ಕಾನೂನು ದುರ್ಬಳಕೆಯಾಗುತ್ತಿದೆ ಎಂಬ ಕಾರಣಕ್ಕೆ ಕಾನೂನನ್ನು ರದ್ದು ಮಾಡಲು ಸಾಧ್ಯವಿಲ್ಲ. ಆದರೆ ನ್ಯಾಯಾಲಯಗಳು UAPA ಮತ್ತು ದೇಶದ್ರೋಹದ ಕಾನೂನುಗಳನ್ನು ಯಾವ ಸಂದರ್ಭದಲ್ಲಿ ಬಳಸಿಕೊಳ್ಳಬಹುದೆಂದು ನ್ಯಾಯಾಲಯಗಳು ಸರಿಯಾದ ಮಾರ್ಗಸೂಚಿಗಳನ್ನು ಹಾಕಬೇಕು ಎಂದು ಕಾನೂನು ಆಯೋಗದ ಮಾಜಿ ಅಧ್ಯಕ್ಷ ಬಿ.ಎಸ್. ಚೌಹಾಣ್ UAPA ಕಾನೂನಿನ ಬಳಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ :ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಮಂಡ್ಯದಲ್ಲಿ ಈಡುಗಾಯಿ ಸೇವೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...