Homeಕರ್ನಾಟಕಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

- Advertisement -
- Advertisement -

ವಕೀಲರಾದ ಕೆ.ಎನ್.ಜಗದೀಶ್‌ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿ ಜಗದೀಶ್ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ, ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ಅವರ ಮಗನ ಮೇಲೆ ಹಲ್ಲೆಯಾದರೂ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಆದರೆ ವಕೀಲ ಜಗದೀಶ್ ಅವರ ವಿರುದ್ಧ ದಾಖಲಾದ ದೂರನ್ನು ಮಾತ್ರ ಕ್ಷಣಮಾತ್ರದಲ್ಲೇ ಪೊಲೀಸರು ಕ್ರಮ ಜರುಗಿಸಿದ್ದು ಅನುಮಾನಗಳಿಗೆ ಕಾರಣವಾಗಿವೆ.

ಐಪಿಎಸ್ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ವಕೀಲ ಜಗದೀಶ್ ಮಾಡಿದ್ದರು. ರವಿ ಡಿ.ಚನ್ನಣ್ಣನವರ್‌ ಸಾವಿರಾರು ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ್ದಾರೆಂದು ಜಗದೀಶ್‌ ದೂರಿದ್ದರು. ಈ ಸಂಬಂಧ ರವಿ ಡಿ.ಚನ್ನಣ್ಣ ಮಾನನಷ್ಟ ಮೊಕದ್ದಮೆ ಹೂಡಿದ್ದು, ಪ್ರಕರಣ ವಿಚಾರಣೆಗೆ ನ್ಯಾಯಾಲಯಕ್ಕೆ ಜಗದೀಶ್‌‌ ಹಾಜರಾಗಿದ್ದ ವೇಳೆ ಹಲ್ಲೆ ನಡೆದಿತ್ತು.

ವಕೀಲರ ವೇಷದಲ್ಲಿದ್ದವರು ಜಗದೀಶ್ ಅವರ ಮಗನ ಮೇಲೆ ಹಲ್ಲೆ ಮಾಡಿದ್ದರು. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ 307 (ಕೊಲೆಯತ್ನ) ಪ್ರಕರಣ ದಾಖಲಾಗಬೇಕಿತ್ತು. ಆದರೆ ವಕೀಲ ಜಗದೀಶ್ ಮೇಲೆಯೇ 307 ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಲಭ್ಯವಿರುವ ಯಾವುದೇ ವಿಡಿಯೊದಲ್ಲಿಯೂ ವಕೀಲ ಜಗದೀಶ್ ಕೊಲೆಯತ್ನ ಮಾಡಿರುವುದು ಕಂಡು ಬರುವುದಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

16 ವರ್ಷದ ಯುವಕನ ಮೇಲೆ ಹಲ್ಲೆಯಾಗಿದ್ದು, ಪೊಲೀಸರು ಸುಮೊಟೊ ಪ್ರಕರಣ ದಾಖಸಬೇಕಿತ್ತು. ಆದರೆ ಪೊಲೀಸರು ಪಕ್ಷಪಾತಿಗಳಾಗಿ ವರ್ತಿಸಿದ್ದಾರೆಂಬ ಆರೋಪಗಳು ಬಂದಿವೆ. ಜಗದೀಶ್ ಅವರು ಕೊಲೆ ಬೆದರಿಕೆ ಹಾಕಿದ್ದಲ್ಲಿ ಸೆಕ್ಷನ್‌ 506, 504, 506 (ಬಿ) ಅಡಿಯಲ್ಲಿ ಪ್ರಕರಣ ದಾಖಸಬೇಕಿತ್ತು. ಆದರೆ 307 ಅಡಿ ಪ್ರಕರಣ ದಾಖಲಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣಸ್ವಾಮಿ ನೀಡಿರುವ ದೂರಿನಲ್ಲಿ, “ವಕೀಲರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದವರಲ್ಲಿ ಜಗದೀಶ್‌ ಒಬ್ಬರಾಗಿದ್ದರು. ಅವರಿಗೆ ವಕೀಲರ ಸಂಘ ಬುದ್ಧಿ ಹೇಳಿತ್ತು. ಹೀಗಾಗಿ ನನ್ನ ಮೇಲೆ ಜಗದೀಶ್‌‌ ಫೆ. 10ರಂದು ಗಲಾಟೆ ಮಾಡಿದ್ದರು. ಕೊಲೆ ಮಾಡುವುದಾಗಿ ಬೆದರಿಸಿದ್ದರು. ಫೆ. 11ರಂದು ಸಿಟಿ ಸಿವಿಲ್‌ ಕೋರ್ಟ್ ಆವರಣದಲ್ಲಿ 40-50 ಗೂಂಡಾಗಳೊಂದಿಗೆ ಬಂದು ಅಶಾಂತಿ ಸೃಷ್ಟಿಸಿದರು. ಈ ವೇಳೆ ಕೊಲೆ ಮಾಡಲು ಯತ್ನಿಸಿದರು” ಎಂದು ಆರೋಪಿಸಲಾಗಿದೆ.

ಪೊಲೀಸ್ ಅಧಿಕಾರಿಗಳನ್ನು ಎದುರು ಹಾಕಿಕೊಂಡಿದ್ದೇ ಜಗದೀಶ್ ಅವರ ವಿರುದ್ಧ ಏಕಪಕ್ಷೀಯವಾಗಿ ಪೊಲೀಸರು ನಡೆದುಕೊಳ್ಳಲು ಕಾರಣವೇ ಎಂಬ ಪ್ರಶ್ನೆಯನ್ನು ಜನರು ಕೇಳಿದ್ದಾರೆ. ಆದರೆ ಇದಕ್ಕಿಂತ ಮುಖ್ಯವಾಗಿ ವಕೀಲರ ಸಂಘದ ವರ್ತನೆಯೂ ಟೀಕೆಗೆ ಗುರಿಯಾಗಿದೆ.

ಜಗದೀಶ್‌ ಅವರು ಕೆಲವೊಮ್ಮೆ ಅತಿರೇಕಕ್ಕೆ ಹೋಗಿ ಮಾತನಾಡಿದ್ದಿದೆ. ಏಕವಚನದಲ್ಲಿ ನಿಂದಿಸಿದ್ದನ್ನು ಯಾರೂ ಸಮರ್ಥಿಸಲಾರರು. ಆದರೆ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಗಳೂ ಗಂಭೀರವಾಗಿವೆ ಎಂಬುದನ್ನು ಜನರು ಗುರುತಿಸುತ್ತಿದ್ದಾರೆ.

ಸಾಮಾನ್ಯವಾಗಿ ಪೊಲೀಸರು ಸುಳ್ಳು ಕೇಸ್‌ಗಳನ್ನು ದಾಖಲಿಸಿದಾಗ ವಕೀಲರು ಧ್ವನಿ ಎತ್ತುತ್ತಾರೆ. ಹೀಗಾಗಿ ವಕೀಲರು ವರ್ಸಸ್‌ ಪೊಲೀಸ್‌ ಎಂಬ ಸಾಮಾನ್ಯ ಗ್ರಹಿಕೆ ಇದೆ. ಆದರೆ ಜಗದೀಶ್ ವಿಚಾರದಲ್ಲಿ ಬೆಂಗಳೂರು ವಕೀಲರ ಸಂಘ ಈ ರೀತಿಯ ದೂರು ನೀಡಿದ್ದು ಏತಕ್ಕೆ? ಇಲ್ಲಿ ಯಾವುದಾದರೂ ಮಾಫಿಯಾ ಕೆಲಸ ಮಾಡಿದೆಯೇ? ಈ ಪ್ರಕರಣಕ್ಕೆ ಯಾವುದಾದರೂ ರಾಜಕೀಯ ಆಯಾಮಗಳಿವೆಯೇ? ಇತ್ಯಾದಿ ಪ್ರಶ್ನೆಗಳು ಮೂಡುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿರುವ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌, “ವಕೀಲ ಜಗದೀಶ್ ಅವರ ವಿರುದ್ಧ 307 ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಅವರು ಎಷ್ಟು ತಪ್ಪು ಮಾಡಿದ್ದಾರೋ ಅಷ್ಟಕ್ಕೆ ಮಾತ್ರ ಪ್ರಕರಣ ದಾಖಲಿಸಬೇಕು. ಆದರೆ ಸುಳ್ಳು ಪ್ರಕರಣ ದಾಖಲಿಸಿರುವುದು ಕಂಡುಬರುತ್ತಿದೆ. ಜಗದೀಶ್ ಅವರು ಲಾಯರ್‌ಗಳನ್ನು ಬೈದಿರುವುದನ್ನು ನಾವು ಒಪ್ಪುವುದಿಲ್ಲ” ಎಂದಿದ್ದಾರೆ.

“ಸುಳ್ಳು ಕೇಸ್‌ಗಳ ವಿರುದ್ಧ ರಾಜ್ಯಾದ್ಯಂತ ವಕೀಲರು ಹೋರಾಡುತ್ತಿದ್ದೇವೆ. ಸಾರ್ವಜನಿಕರನ್ನು ರಕ್ಷಿಸುತ್ತಿದ್ದೇವೆ. ಹೀಗಿರುವ ವಕೀಲರ ಸಂಘ ಹಾಗೂ ಪದಾಧಿಕಾರಿಗಳೇ ನಿಂತು ಸುಳ್ಳು ಕೇಸು ದಾಖಲಾಗಲು ಕಾರಣವಾಗಿರುವುದು ವಕೀಲರ ವಿರುದ್ಧ ತಪ್ಪು ಸಂದೇಶ ಹೋಗಲು ಕಾರಣವಾಗುತ್ತದೆ. ಜಗದೀಶ್ ಅವರನ್ನು ವಕೀಲರ ಪರಿಷತ್‌ ಅಮಾನತು ಮಾಡಿರುವುದೂ ಸರಿಯಲ್ಲ. ಈ ಬೆಳವಣಿಗೆಯನ್ನು ವಕೀಲರ ಒಕ್ಕೂಟ ಖಂಡಿಸುತ್ತದೆ” ಎಂದು ಶ್ರೀನಿವಾಸ್‌ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್‌ ಸುಬ್ಬಾರೆಡ್ಡಿ ಅವರ ಹೇಳಿಕೆಯನ್ನು ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿದೆ. ಅಧ್ಯಕ್ಷರು ಸಂಪರ್ಕಕ್ಕೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಂಧ್ರದ ಮೂಲದವರು ಕರ್ನಾಟಕದಲ್ಲಿ ರೈತರ ಭೂಮಿಯನ್ನು ನೂರಾರು ಕಬಳಿಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಆಂಧ್ರದ ಮೂಲದವರು ಮಾಡಿದ ಕುತಂತ್ರವೇ ಜಗದೀಶ್ ರವರ ಬಂಧನ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...