Homeಕರ್ನಾಟಕಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

- Advertisement -
- Advertisement -

ವಕೀಲರಾದ ಕೆ.ಎನ್.ಜಗದೀಶ್‌ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿ ಜಗದೀಶ್ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ, ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ಅವರ ಮಗನ ಮೇಲೆ ಹಲ್ಲೆಯಾದರೂ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಆದರೆ ವಕೀಲ ಜಗದೀಶ್ ಅವರ ವಿರುದ್ಧ ದಾಖಲಾದ ದೂರನ್ನು ಮಾತ್ರ ಕ್ಷಣಮಾತ್ರದಲ್ಲೇ ಪೊಲೀಸರು ಕ್ರಮ ಜರುಗಿಸಿದ್ದು ಅನುಮಾನಗಳಿಗೆ ಕಾರಣವಾಗಿವೆ.

ಐಪಿಎಸ್ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ವಕೀಲ ಜಗದೀಶ್ ಮಾಡಿದ್ದರು. ರವಿ ಡಿ.ಚನ್ನಣ್ಣನವರ್‌ ಸಾವಿರಾರು ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ್ದಾರೆಂದು ಜಗದೀಶ್‌ ದೂರಿದ್ದರು. ಈ ಸಂಬಂಧ ರವಿ ಡಿ.ಚನ್ನಣ್ಣ ಮಾನನಷ್ಟ ಮೊಕದ್ದಮೆ ಹೂಡಿದ್ದು, ಪ್ರಕರಣ ವಿಚಾರಣೆಗೆ ನ್ಯಾಯಾಲಯಕ್ಕೆ ಜಗದೀಶ್‌‌ ಹಾಜರಾಗಿದ್ದ ವೇಳೆ ಹಲ್ಲೆ ನಡೆದಿತ್ತು.

ವಕೀಲರ ವೇಷದಲ್ಲಿದ್ದವರು ಜಗದೀಶ್ ಅವರ ಮಗನ ಮೇಲೆ ಹಲ್ಲೆ ಮಾಡಿದ್ದರು. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ 307 (ಕೊಲೆಯತ್ನ) ಪ್ರಕರಣ ದಾಖಲಾಗಬೇಕಿತ್ತು. ಆದರೆ ವಕೀಲ ಜಗದೀಶ್ ಮೇಲೆಯೇ 307 ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಲಭ್ಯವಿರುವ ಯಾವುದೇ ವಿಡಿಯೊದಲ್ಲಿಯೂ ವಕೀಲ ಜಗದೀಶ್ ಕೊಲೆಯತ್ನ ಮಾಡಿರುವುದು ಕಂಡು ಬರುವುದಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

16 ವರ್ಷದ ಯುವಕನ ಮೇಲೆ ಹಲ್ಲೆಯಾಗಿದ್ದು, ಪೊಲೀಸರು ಸುಮೊಟೊ ಪ್ರಕರಣ ದಾಖಸಬೇಕಿತ್ತು. ಆದರೆ ಪೊಲೀಸರು ಪಕ್ಷಪಾತಿಗಳಾಗಿ ವರ್ತಿಸಿದ್ದಾರೆಂಬ ಆರೋಪಗಳು ಬಂದಿವೆ. ಜಗದೀಶ್ ಅವರು ಕೊಲೆ ಬೆದರಿಕೆ ಹಾಕಿದ್ದಲ್ಲಿ ಸೆಕ್ಷನ್‌ 506, 504, 506 (ಬಿ) ಅಡಿಯಲ್ಲಿ ಪ್ರಕರಣ ದಾಖಸಬೇಕಿತ್ತು. ಆದರೆ 307 ಅಡಿ ಪ್ರಕರಣ ದಾಖಲಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣಸ್ವಾಮಿ ನೀಡಿರುವ ದೂರಿನಲ್ಲಿ, “ವಕೀಲರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದವರಲ್ಲಿ ಜಗದೀಶ್‌ ಒಬ್ಬರಾಗಿದ್ದರು. ಅವರಿಗೆ ವಕೀಲರ ಸಂಘ ಬುದ್ಧಿ ಹೇಳಿತ್ತು. ಹೀಗಾಗಿ ನನ್ನ ಮೇಲೆ ಜಗದೀಶ್‌‌ ಫೆ. 10ರಂದು ಗಲಾಟೆ ಮಾಡಿದ್ದರು. ಕೊಲೆ ಮಾಡುವುದಾಗಿ ಬೆದರಿಸಿದ್ದರು. ಫೆ. 11ರಂದು ಸಿಟಿ ಸಿವಿಲ್‌ ಕೋರ್ಟ್ ಆವರಣದಲ್ಲಿ 40-50 ಗೂಂಡಾಗಳೊಂದಿಗೆ ಬಂದು ಅಶಾಂತಿ ಸೃಷ್ಟಿಸಿದರು. ಈ ವೇಳೆ ಕೊಲೆ ಮಾಡಲು ಯತ್ನಿಸಿದರು” ಎಂದು ಆರೋಪಿಸಲಾಗಿದೆ.

ಪೊಲೀಸ್ ಅಧಿಕಾರಿಗಳನ್ನು ಎದುರು ಹಾಕಿಕೊಂಡಿದ್ದೇ ಜಗದೀಶ್ ಅವರ ವಿರುದ್ಧ ಏಕಪಕ್ಷೀಯವಾಗಿ ಪೊಲೀಸರು ನಡೆದುಕೊಳ್ಳಲು ಕಾರಣವೇ ಎಂಬ ಪ್ರಶ್ನೆಯನ್ನು ಜನರು ಕೇಳಿದ್ದಾರೆ. ಆದರೆ ಇದಕ್ಕಿಂತ ಮುಖ್ಯವಾಗಿ ವಕೀಲರ ಸಂಘದ ವರ್ತನೆಯೂ ಟೀಕೆಗೆ ಗುರಿಯಾಗಿದೆ.

ಜಗದೀಶ್‌ ಅವರು ಕೆಲವೊಮ್ಮೆ ಅತಿರೇಕಕ್ಕೆ ಹೋಗಿ ಮಾತನಾಡಿದ್ದಿದೆ. ಏಕವಚನದಲ್ಲಿ ನಿಂದಿಸಿದ್ದನ್ನು ಯಾರೂ ಸಮರ್ಥಿಸಲಾರರು. ಆದರೆ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಗಳೂ ಗಂಭೀರವಾಗಿವೆ ಎಂಬುದನ್ನು ಜನರು ಗುರುತಿಸುತ್ತಿದ್ದಾರೆ.

ಸಾಮಾನ್ಯವಾಗಿ ಪೊಲೀಸರು ಸುಳ್ಳು ಕೇಸ್‌ಗಳನ್ನು ದಾಖಲಿಸಿದಾಗ ವಕೀಲರು ಧ್ವನಿ ಎತ್ತುತ್ತಾರೆ. ಹೀಗಾಗಿ ವಕೀಲರು ವರ್ಸಸ್‌ ಪೊಲೀಸ್‌ ಎಂಬ ಸಾಮಾನ್ಯ ಗ್ರಹಿಕೆ ಇದೆ. ಆದರೆ ಜಗದೀಶ್ ವಿಚಾರದಲ್ಲಿ ಬೆಂಗಳೂರು ವಕೀಲರ ಸಂಘ ಈ ರೀತಿಯ ದೂರು ನೀಡಿದ್ದು ಏತಕ್ಕೆ? ಇಲ್ಲಿ ಯಾವುದಾದರೂ ಮಾಫಿಯಾ ಕೆಲಸ ಮಾಡಿದೆಯೇ? ಈ ಪ್ರಕರಣಕ್ಕೆ ಯಾವುದಾದರೂ ರಾಜಕೀಯ ಆಯಾಮಗಳಿವೆಯೇ? ಇತ್ಯಾದಿ ಪ್ರಶ್ನೆಗಳು ಮೂಡುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿರುವ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌, “ವಕೀಲ ಜಗದೀಶ್ ಅವರ ವಿರುದ್ಧ 307 ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಅವರು ಎಷ್ಟು ತಪ್ಪು ಮಾಡಿದ್ದಾರೋ ಅಷ್ಟಕ್ಕೆ ಮಾತ್ರ ಪ್ರಕರಣ ದಾಖಲಿಸಬೇಕು. ಆದರೆ ಸುಳ್ಳು ಪ್ರಕರಣ ದಾಖಲಿಸಿರುವುದು ಕಂಡುಬರುತ್ತಿದೆ. ಜಗದೀಶ್ ಅವರು ಲಾಯರ್‌ಗಳನ್ನು ಬೈದಿರುವುದನ್ನು ನಾವು ಒಪ್ಪುವುದಿಲ್ಲ” ಎಂದಿದ್ದಾರೆ.

“ಸುಳ್ಳು ಕೇಸ್‌ಗಳ ವಿರುದ್ಧ ರಾಜ್ಯಾದ್ಯಂತ ವಕೀಲರು ಹೋರಾಡುತ್ತಿದ್ದೇವೆ. ಸಾರ್ವಜನಿಕರನ್ನು ರಕ್ಷಿಸುತ್ತಿದ್ದೇವೆ. ಹೀಗಿರುವ ವಕೀಲರ ಸಂಘ ಹಾಗೂ ಪದಾಧಿಕಾರಿಗಳೇ ನಿಂತು ಸುಳ್ಳು ಕೇಸು ದಾಖಲಾಗಲು ಕಾರಣವಾಗಿರುವುದು ವಕೀಲರ ವಿರುದ್ಧ ತಪ್ಪು ಸಂದೇಶ ಹೋಗಲು ಕಾರಣವಾಗುತ್ತದೆ. ಜಗದೀಶ್ ಅವರನ್ನು ವಕೀಲರ ಪರಿಷತ್‌ ಅಮಾನತು ಮಾಡಿರುವುದೂ ಸರಿಯಲ್ಲ. ಈ ಬೆಳವಣಿಗೆಯನ್ನು ವಕೀಲರ ಒಕ್ಕೂಟ ಖಂಡಿಸುತ್ತದೆ” ಎಂದು ಶ್ರೀನಿವಾಸ್‌ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್‌ ಸುಬ್ಬಾರೆಡ್ಡಿ ಅವರ ಹೇಳಿಕೆಯನ್ನು ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿದೆ. ಅಧ್ಯಕ್ಷರು ಸಂಪರ್ಕಕ್ಕೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಂಧ್ರದ ಮೂಲದವರು ಕರ್ನಾಟಕದಲ್ಲಿ ರೈತರ ಭೂಮಿಯನ್ನು ನೂರಾರು ಕಬಳಿಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಆಂಧ್ರದ ಮೂಲದವರು ಮಾಡಿದ ಕುತಂತ್ರವೇ ಜಗದೀಶ್ ರವರ ಬಂಧನ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...