Homeಕರ್ನಾಟಕಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

ಲಾಯರ್‌ ಜಗದೀಶ್ ವಿಚಾರದಲ್ಲಿ ವಕೀಲರ ಸಂಘದ ನಡೆ ಸ್ವೀಕಾರಾರ್ಹವೇ?

- Advertisement -
- Advertisement -

ವಕೀಲರಾದ ಕೆ.ಎನ್.ಜಗದೀಶ್‌ ಅವರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿ ಜಗದೀಶ್ ಅವರು ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ. ವಕೀಲರನ್ನು ಅವ್ಯಾಚ್ಯ ಪದಗಳಿಂದ ನಿಂದಿಸಿ ವೃತ್ತಿಗೆ ಚ್ಯುತಿ ತಂದಿದ್ದಾರೆ, ನ್ಯಾಯಾಲಯ ಆವರಣದಲ್ಲಿ ಅಶಾಂತಿ ಉಂಟು ಮಾಡಿದ್ದಾರೆ, ಕೊಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ವಕೀಲರ ಸಂಘದ ಪ್ರತಿನಿಧಿಗಳು ನೀಡಿದ್ದ ದೂರಿನ ಮೇಲೆ ಜಗದೀಶ್ ಅವರನ್ನು ಹಲಸೂರು ಗೇಟ್‌‌ ಪೊಲೀಸರು ಬಂಧಿಸಿದ್ದಾರೆ.

ಜಗದೀಶ್ ಅವರ ಮಗನ ಮೇಲೆ ಹಲ್ಲೆಯಾದರೂ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಿಲ್ಲ. ಆದರೆ ವಕೀಲ ಜಗದೀಶ್ ಅವರ ವಿರುದ್ಧ ದಾಖಲಾದ ದೂರನ್ನು ಮಾತ್ರ ಕ್ಷಣಮಾತ್ರದಲ್ಲೇ ಪೊಲೀಸರು ಕ್ರಮ ಜರುಗಿಸಿದ್ದು ಅನುಮಾನಗಳಿಗೆ ಕಾರಣವಾಗಿವೆ.

ಐಪಿಎಸ್ ಅಧಿಕಾರಿ ರವಿ ಡಿ.ಚೆನ್ನಣ್ಣನವರ್‌ ವಿರುದ್ಧ ಭ್ರಷ್ಟಾಚಾರ ಆರೋಪವನ್ನು ವಕೀಲ ಜಗದೀಶ್ ಮಾಡಿದ್ದರು. ರವಿ ಡಿ.ಚನ್ನಣ್ಣನವರ್‌ ಸಾವಿರಾರು ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ್ದಾರೆಂದು ಜಗದೀಶ್‌ ದೂರಿದ್ದರು. ಈ ಸಂಬಂಧ ರವಿ ಡಿ.ಚನ್ನಣ್ಣ ಮಾನನಷ್ಟ ಮೊಕದ್ದಮೆ ಹೂಡಿದ್ದು, ಪ್ರಕರಣ ವಿಚಾರಣೆಗೆ ನ್ಯಾಯಾಲಯಕ್ಕೆ ಜಗದೀಶ್‌‌ ಹಾಜರಾಗಿದ್ದ ವೇಳೆ ಹಲ್ಲೆ ನಡೆದಿತ್ತು.

ವಕೀಲರ ವೇಷದಲ್ಲಿದ್ದವರು ಜಗದೀಶ್ ಅವರ ಮಗನ ಮೇಲೆ ಹಲ್ಲೆ ಮಾಡಿದ್ದರು. ಹೀಗಾಗಿ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ 307 (ಕೊಲೆಯತ್ನ) ಪ್ರಕರಣ ದಾಖಲಾಗಬೇಕಿತ್ತು. ಆದರೆ ವಕೀಲ ಜಗದೀಶ್ ಮೇಲೆಯೇ 307 ದಾಖಲಿಸಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಲಭ್ಯವಿರುವ ಯಾವುದೇ ವಿಡಿಯೊದಲ್ಲಿಯೂ ವಕೀಲ ಜಗದೀಶ್ ಕೊಲೆಯತ್ನ ಮಾಡಿರುವುದು ಕಂಡು ಬರುವುದಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

16 ವರ್ಷದ ಯುವಕನ ಮೇಲೆ ಹಲ್ಲೆಯಾಗಿದ್ದು, ಪೊಲೀಸರು ಸುಮೊಟೊ ಪ್ರಕರಣ ದಾಖಸಬೇಕಿತ್ತು. ಆದರೆ ಪೊಲೀಸರು ಪಕ್ಷಪಾತಿಗಳಾಗಿ ವರ್ತಿಸಿದ್ದಾರೆಂಬ ಆರೋಪಗಳು ಬಂದಿವೆ. ಜಗದೀಶ್ ಅವರು ಕೊಲೆ ಬೆದರಿಕೆ ಹಾಕಿದ್ದಲ್ಲಿ ಸೆಕ್ಷನ್‌ 506, 504, 506 (ಬಿ) ಅಡಿಯಲ್ಲಿ ಪ್ರಕರಣ ದಾಖಸಬೇಕಿತ್ತು. ಆದರೆ 307 ಅಡಿ ಪ್ರಕರಣ ದಾಖಲಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ನಾರಾಯಣಸ್ವಾಮಿ ನೀಡಿರುವ ದೂರಿನಲ್ಲಿ, “ವಕೀಲರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದವರಲ್ಲಿ ಜಗದೀಶ್‌ ಒಬ್ಬರಾಗಿದ್ದರು. ಅವರಿಗೆ ವಕೀಲರ ಸಂಘ ಬುದ್ಧಿ ಹೇಳಿತ್ತು. ಹೀಗಾಗಿ ನನ್ನ ಮೇಲೆ ಜಗದೀಶ್‌‌ ಫೆ. 10ರಂದು ಗಲಾಟೆ ಮಾಡಿದ್ದರು. ಕೊಲೆ ಮಾಡುವುದಾಗಿ ಬೆದರಿಸಿದ್ದರು. ಫೆ. 11ರಂದು ಸಿಟಿ ಸಿವಿಲ್‌ ಕೋರ್ಟ್ ಆವರಣದಲ್ಲಿ 40-50 ಗೂಂಡಾಗಳೊಂದಿಗೆ ಬಂದು ಅಶಾಂತಿ ಸೃಷ್ಟಿಸಿದರು. ಈ ವೇಳೆ ಕೊಲೆ ಮಾಡಲು ಯತ್ನಿಸಿದರು” ಎಂದು ಆರೋಪಿಸಲಾಗಿದೆ.

ಪೊಲೀಸ್ ಅಧಿಕಾರಿಗಳನ್ನು ಎದುರು ಹಾಕಿಕೊಂಡಿದ್ದೇ ಜಗದೀಶ್ ಅವರ ವಿರುದ್ಧ ಏಕಪಕ್ಷೀಯವಾಗಿ ಪೊಲೀಸರು ನಡೆದುಕೊಳ್ಳಲು ಕಾರಣವೇ ಎಂಬ ಪ್ರಶ್ನೆಯನ್ನು ಜನರು ಕೇಳಿದ್ದಾರೆ. ಆದರೆ ಇದಕ್ಕಿಂತ ಮುಖ್ಯವಾಗಿ ವಕೀಲರ ಸಂಘದ ವರ್ತನೆಯೂ ಟೀಕೆಗೆ ಗುರಿಯಾಗಿದೆ.

ಜಗದೀಶ್‌ ಅವರು ಕೆಲವೊಮ್ಮೆ ಅತಿರೇಕಕ್ಕೆ ಹೋಗಿ ಮಾತನಾಡಿದ್ದಿದೆ. ಏಕವಚನದಲ್ಲಿ ನಿಂದಿಸಿದ್ದನ್ನು ಯಾರೂ ಸಮರ್ಥಿಸಲಾರರು. ಆದರೆ ಅವರು ಮಾಡಿರುವ ಭ್ರಷ್ಟಾಚಾರದ ಆರೋಪಗಳೂ ಗಂಭೀರವಾಗಿವೆ ಎಂಬುದನ್ನು ಜನರು ಗುರುತಿಸುತ್ತಿದ್ದಾರೆ.

ಸಾಮಾನ್ಯವಾಗಿ ಪೊಲೀಸರು ಸುಳ್ಳು ಕೇಸ್‌ಗಳನ್ನು ದಾಖಲಿಸಿದಾಗ ವಕೀಲರು ಧ್ವನಿ ಎತ್ತುತ್ತಾರೆ. ಹೀಗಾಗಿ ವಕೀಲರು ವರ್ಸಸ್‌ ಪೊಲೀಸ್‌ ಎಂಬ ಸಾಮಾನ್ಯ ಗ್ರಹಿಕೆ ಇದೆ. ಆದರೆ ಜಗದೀಶ್ ವಿಚಾರದಲ್ಲಿ ಬೆಂಗಳೂರು ವಕೀಲರ ಸಂಘ ಈ ರೀತಿಯ ದೂರು ನೀಡಿದ್ದು ಏತಕ್ಕೆ? ಇಲ್ಲಿ ಯಾವುದಾದರೂ ಮಾಫಿಯಾ ಕೆಲಸ ಮಾಡಿದೆಯೇ? ಈ ಪ್ರಕರಣಕ್ಕೆ ಯಾವುದಾದರೂ ರಾಜಕೀಯ ಆಯಾಮಗಳಿವೆಯೇ? ಇತ್ಯಾದಿ ಪ್ರಶ್ನೆಗಳು ಮೂಡುತ್ತಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿರುವ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಶ್ರೀನಿವಾಸ ಕುಮಾರ್‌, “ವಕೀಲ ಜಗದೀಶ್ ಅವರ ವಿರುದ್ಧ 307 ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಅವರು ಎಷ್ಟು ತಪ್ಪು ಮಾಡಿದ್ದಾರೋ ಅಷ್ಟಕ್ಕೆ ಮಾತ್ರ ಪ್ರಕರಣ ದಾಖಲಿಸಬೇಕು. ಆದರೆ ಸುಳ್ಳು ಪ್ರಕರಣ ದಾಖಲಿಸಿರುವುದು ಕಂಡುಬರುತ್ತಿದೆ. ಜಗದೀಶ್ ಅವರು ಲಾಯರ್‌ಗಳನ್ನು ಬೈದಿರುವುದನ್ನು ನಾವು ಒಪ್ಪುವುದಿಲ್ಲ” ಎಂದಿದ್ದಾರೆ.

“ಸುಳ್ಳು ಕೇಸ್‌ಗಳ ವಿರುದ್ಧ ರಾಜ್ಯಾದ್ಯಂತ ವಕೀಲರು ಹೋರಾಡುತ್ತಿದ್ದೇವೆ. ಸಾರ್ವಜನಿಕರನ್ನು ರಕ್ಷಿಸುತ್ತಿದ್ದೇವೆ. ಹೀಗಿರುವ ವಕೀಲರ ಸಂಘ ಹಾಗೂ ಪದಾಧಿಕಾರಿಗಳೇ ನಿಂತು ಸುಳ್ಳು ಕೇಸು ದಾಖಲಾಗಲು ಕಾರಣವಾಗಿರುವುದು ವಕೀಲರ ವಿರುದ್ಧ ತಪ್ಪು ಸಂದೇಶ ಹೋಗಲು ಕಾರಣವಾಗುತ್ತದೆ. ಜಗದೀಶ್ ಅವರನ್ನು ವಕೀಲರ ಪರಿಷತ್‌ ಅಮಾನತು ಮಾಡಿರುವುದೂ ಸರಿಯಲ್ಲ. ಈ ಬೆಳವಣಿಗೆಯನ್ನು ವಕೀಲರ ಒಕ್ಕೂಟ ಖಂಡಿಸುತ್ತದೆ” ಎಂದು ಶ್ರೀನಿವಾಸ್‌ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್‌ ಸುಬ್ಬಾರೆಡ್ಡಿ ಅವರ ಹೇಳಿಕೆಯನ್ನು ಪಡೆಯಲು ನಾನುಗೌರಿ.ಕಾಂ ಪ್ರಯತ್ನಿಸಿದೆ. ಅಧ್ಯಕ್ಷರು ಸಂಪರ್ಕಕ್ಕೆ ಲಭ್ಯವಾಗಿಲ್ಲ.


ಇದನ್ನೂ ಓದಿರಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆಂಧ್ರದ ಮೂಲದವರು ಕರ್ನಾಟಕದಲ್ಲಿ ರೈತರ ಭೂಮಿಯನ್ನು ನೂರಾರು ಕಬಳಿಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದರು. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಆಂಧ್ರದ ಮೂಲದವರು ಮಾಡಿದ ಕುತಂತ್ರವೇ ಜಗದೀಶ್ ರವರ ಬಂಧನ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...