HomeUncategorizedತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

ತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

- Advertisement -
- Advertisement -

ಉತ್ತರ ಪ್ರದೇಶದಲ್ಲಿ 2010ರಲ್ಲಿ ನಡೆದ ಹಿಂಸಾಚಾರ ಪ್ರಕರಣದ ತೀರ್ಪನ್ನು ನೀಡುವ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಧಾರ್ಮಿಕ ಹಿನ್ನೆಲೆಯನ್ನು ಶ್ಲಾಘಿಸಿ ಮತ್ತು ದೇಶದಲ್ಲಿ ಮತೀಯ ಹಿಂಸಾಚಾರಕ್ಕೆ ಮುಸ್ಲಿಮರನ್ನು ದೂಷಿಸಿದ ನ್ಯಾಯಾಧೀಶ ರವಿ ಕುಮಾರ್‌ ದಿವಾಕರ್‌ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರಿಗೆ ಆಲ್‌ ಇಂಡಿಯಾ ಲಾಯರ್ಸ್‌ ಅಸೋಸಿಯೇಶನ್‌ ಫಾರ್‌ ಜಸ್ಟಿಸ್‌ ( ಎಐಎಲ್‌ಎಜೆ) ಪತ್ರ ಬರೆದಿದೆ.

ಮಾರ್ಚ್‌ 5ರ ಆದೇಶದಲ್ಲಿ ರವಿ ಕುಮಾರ್‌ ದಿವಾಕರ್‌ ಮಾಡಿರುವ ಅನಗತ್ಯ ಹೇಳಿಕೆಗಳನ್ನು ದಾಖಲೆಗಳಿಂದ ತೆಗೆಸಬೇಕು ಎಂದು ಎಐಎಲ್‌ಎಜೆ ಕೋರಿದೆ. ಈ ತೀರ್ಪಿನಲ್ಲಿ ನ್ಯಾಯಾಧೀಶರ ಹೇಳಿಕೆಗಳು ಮತ್ತು ತೀರ್ಮಾನಗಳು ವಿವಾದಿತ, ಪಕ್ಷಪಾತದಿಂದ ಕೂಡಿವೆ ಮತ್ತು ಅಸಂವಿಧಾನಿಕವಾಗಿದೆ ಎಂದು ಹೇಳಿದೆ.

ನ್ಯಾಯಾಧೀಶ ದಿವಾಕರ್ ಅವರು ಸಂವಿಧಾನ ಮತ್ತು ಅದರ ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯುವ ಕರ್ತವ್ಯಕ್ಕೆ ವಿರುದ್ಧವಾಗಿ “ಬಹು ಸಂಖ್ಯಾತರ ದೃಷ್ಟಿಕೋನಕ್ಕೆ ಸಹಾನುಭೂತಿ” ಪ್ರದರ್ಶಿಸುತ್ತಿದ್ದಾರೆ ಮತ್ತು “ಸಾಂವಿಧಾನಿಕ ನೈತಿಕತೆಯ ಕಡೆಗಣನೆ” ಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಎಐಎಲ್‌ಎಜೆ ಆರೋಪಿಸಿದೆ. ಇದಕ್ಕೆ ಶಿಕ್ಷೆ ವಿಧಿಸದಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಬರೇಲಿಯ ತ್ವರಿತಗತಿ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿರುವ ದಿವಾಕರ್‌ ಮಾರ್ಚ್‌ 5ರಂದು ಈ ತೀರ್ಪು ನೀಡಿದ್ದರು. ಬರೇಲಿಯಲ್ಲಿ 2010ರಲ್ಲಿ ನಡೆದ ಮತೀಯ ಹಿಂಸಾಚಾರ ಪ್ರಕರಣದಲ್ಲಿ ಖ್ಯಾತ ಮುಸ್ಲಿಂ ಧರ್ಮಗುರು-ರಾಜಕಾರಣಿ ಮೌಲಾನ ತೌಖೀರ್‌ ರಝಾ ಖಾನ್‌ ಅವರ ಹೆಸರನ್ನು ಈ ಪ್ರಕರಣದ ಚಾರ್ಚ್‌ಶೀಟ್‌ನಲ್ಲಿ ಸೇರಿಸಿ ಅವರಿಗೆ ಮಾರ್ಚ್‌ 11ರಂದು ಹಾಜರಾಗುವಂತೆ ಸೂಚಿಸಿದ್ದರು. ಅವರನ್ನು ದಂಗೆಗಳ ಪ್ರಮುಖ ಸಂಚುಕೋರ ಎಂದು ನ್ಯಾಯಾಧೀಶರು ಬಣ್ಣಿಸಿದ್ದರು.

ಮುಖ್ಯಮಂತ್ರಿ ಆದಿತ್ಯನಾಥ್‌ ಅವರನ್ನು ಶ್ಲಾಘಿಸಿ, ಧಾರ್ಮಿಕ ವ್ಯಕ್ತಿಯೊಬ್ಬರು ಅಧಿಕಾರದ ಗದ್ದುಗೆಯಲ್ಲಿರುವುದಕ್ಕೆ ಅವರು ದೊಡ್ಡ ಉದಾಹರಣೆ ಎಂದಿದ್ದರು.

ಈ ಹಿಂದೆ ವಾರಣಾಸಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಿವಾದಿತ ಆದೇಶ ನೀಡಿದ್ದ ದಿವಾಕರ್‌, ಮಾರ್ಚ್‌ 5ರ ತೀರ್ಪಿನಲ್ಲಿ ಹೇಳಿಕೆ ನೀಡಿ ರಾಜಕೀಯ ಪಕ್ಷಗಳು ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುವುದರಿಂದ ದಂಗೆಗಳು ನಡೆಯುತ್ತಿವೆ ಎಂದಿದ್ದರಲ್ಲದೆ ಜ್ಞಾನವಾಪಿ ಪ್ರಕರಣ ಉಲ್ಲೇಖಿಸಿ ಮುಸ್ಲಿಂ ಗುಂಪುಗಳಿಂದ ಬೆದರಿಕೆ ಎದುರಿಸಿ ತಾವು ಮತ್ತು ತಮ್ಮ ಕುಟುಂಬ ಭಯದಲ್ಲಿ ಜೀವಿಸುವಂತಾಗಿತ್ತು ಎಂದಿದ್ದರು.

ನ್ಯಾಯಾಧೀಶರು ನೀಡಿದ ಹೇಳಿಕೆಗಳು ‘ಮುಸ್ಲಿಮ್ ಸಮುದಾಯದ ಬಗ್ಗೆ ತಪ್ಪಾದ ಮತ್ತು ಮತಾಂಧ ಭಾವನೆಯನ್ನು ಮೂಡಿಸಿದೆ. ಮುಸ್ಲಿಂ ಸಮುದಾಯದ ವಿರುದ್ಧ ಸ್ಪಷ್ಟವಾದ ಪಕ್ಷಪಾತ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆ ನೀಡುವ ಮೂಲಕ ನ್ಯಾಯಾಧೀಶರು ನ್ಯಾಯಾಂಗ ನಡವಳಿಕೆಯ ಮೂಲಭೂತ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಂದಿಸಿದ್ದಾರೆ ಎಂದು ಎಐಎಲ್‌ಎಜೆ ಖಂಡನೆ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರೀನ್ ಕೇವ್ ನಿಂದ ಪ್ರವಾಸಿಗರನ್ನು ದೂರವಿಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಪರಿಸರವಾದಿಗಳ ಎಚ್ಚರಿಕೆ

ರಾಯ್‌ಪುರ: ಒಂದು ಕಾಲದಲ್ಲಿ ಮಾವೋವಾದಿ ಪೀಡಿತ ಬಸ್ತಾರ್ ಜಿಲ್ಲೆಯ ಕಾಂಗರ್ ಕಣಿವೆ ರಾಷ್ಟ್ರೀಯ ಉದ್ಯಾನವನದಲ್ಲಿರುವ ಅಪರೂಪದ ಮತ್ತು ಪರಿಸರ ಸೂಕ್ಷ್ಮ 'ಹಸಿರು ಗುಹೆ'ಯನ್ನು ಪ್ರವಾಸಿಗರಿಗೆ ತೆರೆಯಲು ಛತ್ತೀಸ್‌ಗಢ ಸರ್ಕಾರ ನಿರ್ಧರಿಸಿದ್ದು, ಈ ಕ್ರಮಕ್ಕೆ...

ಅಹಮದಾಬಾದ್: ಅಮೃತಸರದಿಂದ ಮುಂಬೈಗೆ ಚಲಿಸುತ್ತಿದ್ದ ರೈಲಿನಲ್ಲಿ ಭಾರೀ ಮೌಲ್ಯದ ಕೊಕೇನ್ ಜಾಲ ಪತ್ತೆ

ಅಹಮದಾಬಾದ್: ಅಮೃತಸರ-ಮುಂಬೈ ಗೋಲ್ಡನ್ ಟೆಂಪಲ್ ಮೇಲ್ ರೈಲಿನ ಮೇಲೆ ತಡರಾತ್ರಿ ನಡೆದ ದಾಳಿಯಲ್ಲಿ ಮಿಜೋರಾಂ ಯುವಕನೊಬ್ಬ 2.19 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಕೊಕೇನ್ ಮತ್ತು ಮೆಥಾಂಫೆಟಮೈನ್‌ನೊಂದಿಗೆ ಸಿಕ್ಕಿಬಿದ್ದ ನಂತರ ಬಹು ನಗರ,...

ನಿಲುವು ಬದಲಿಸಿದ ಸಿಪಿಐ(ಎಂ) : ವಿಎಸ್ ಅಚ್ಯುತಾನಂದನ್ ಅವರ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಲು ನಿರ್ಧಾರ

ತನ್ನ ದೀರ್ಘಕಾಲದ ಸೈದ್ಧಾಂತಿಕ ನಿಲುವಿಗಿಂತ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಸಿಪಿಐ(ಎಂ), ಪಕ್ಷದ ದಂತಕಥೆ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದನ್ ಅವರಿಗೆ ಮರಣೋತ್ತರವಾಗಿ ನೀಡಲಾಗುವ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರ್ಧರಿಸಿದೆ. ಕಮ್ಯುನಿಸ್ಟರು ಆಡಳಿತ ಅಥವಾ...

2024ರ ಪ್ರತಿಭಟನೆ ದಮನ ಪ್ರಕರಣ: ಬಾಂಗ್ಲಾದೇಶದ ಮಾಜಿ ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್‌ಗೆ ಮರಣದಂಡನೆ

ಢಾಕಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಆಳ್ವಿಕೆಯಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶ ನ್ಯಾಯಾಲಯವು ಸೋಮವಾರ ಢಾಕಾದ ಮಾಜಿ ಪೊಲೀಸ್ ಮುಖ್ಯಸ್ಥ ಮತ್ತು ಇಬ್ಬರು ಹಿರಿಯ ಸಹೋದ್ಯೋಗಿಗಳಿಗೆ ಮರಣದಂಡನೆ ವಿಧಿಸಲಾಗಿದೆ.  ರಾಜಧಾನಿಯ...

ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾದ 131 'ಪದ್ಮ ಪ್ರಶಸ್ತಿ'ಗಳಲ್ಲಿ, 38 ಪ್ರಶಸ್ತಿಗಳು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಪಾಲಾಗಿವೆ. ದೇಶದ ಎರಡನೇ ಅತ್ಯುನ್ನತ...

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...

ಉತ್ತರಾಖಂಡ: ಸೂಫಿ ಕವಿ ಬಾಬಾ ಬುಲ್ಲೆ ಶಾ ಅವರ ಮಂದಿರವನ್ನು ಧ್ವಂಸಗೊಳಿಸಿದ ಹಿಂದೂ ರಕ್ಷಣಾ ದಳದ ದುಷ್ಕರ್ಮಿಗಳು

ಉತ್ತರಾಖಂಡದ ಮಸ್ಸೂರಿಯಲ್ಲಿರುವ 18 ನೇ ಶತಮಾನದ ಸೂಫಿ ಕವಿ ಬಾಬಾ ಬುಲ್ಲೆಹ್ ಷಾ ಅವರ ದೇವಾಲಯವನ್ನು ಶುಕ್ರವಾರ ಹಿಂದೂ ರಕ್ಷಾ ದಳದೊಂದಿಗೆ ಸಂಪರ್ಕ ಹೊಂದಿರುವವರು ಧ್ವಂಸಗೊಳಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. "ಜೈ...

ಅಕ್ಷರಧಾಮ ದೇವಾಲಯ ದಾಳಿ ಪ್ರಕರಣ: 6 ವರ್ಷಗಳ ನಂತರ ಮೂವರ ಮುಸ್ಲಿಂ ವ್ಯಕ್ತಿಗಳನ್ನು ಖುಲಾಸೆಗೊಳಿಸಿದ ಅಹಮದಾಬಾದ್ ಪೋಟಾ ನ್ಯಾಯಾಲಯ

ಅಕ್ಷರಧಾಮ ದೇವಾಲಯದ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಮೂವರು ಮುಸ್ಲಿಂ ಪುರುಷರನ್ನು ಕಳೆದ ವಾರ ಅಹಮದಾಬಾದ್‌ನ ವಿಶೇಷ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ) ನ್ಯಾಯಾಲಯವು ಖುಲಾಸೆಗೊಳಿಸಿದ್ದು, ವರ್ಷಗಳ ಕಾನೂನು ಪ್ರಕ್ರಿಯೆಗಳ ನಂತರ...

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...