HomeUncategorizedತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

ತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

- Advertisement -
- Advertisement -

ಉತ್ತರ ಪ್ರದೇಶದಲ್ಲಿ 2010ರಲ್ಲಿ ನಡೆದ ಹಿಂಸಾಚಾರ ಪ್ರಕರಣದ ತೀರ್ಪನ್ನು ನೀಡುವ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಧಾರ್ಮಿಕ ಹಿನ್ನೆಲೆಯನ್ನು ಶ್ಲಾಘಿಸಿ ಮತ್ತು ದೇಶದಲ್ಲಿ ಮತೀಯ ಹಿಂಸಾಚಾರಕ್ಕೆ ಮುಸ್ಲಿಮರನ್ನು ದೂಷಿಸಿದ ನ್ಯಾಯಾಧೀಶ ರವಿ ಕುಮಾರ್‌ ದಿವಾಕರ್‌ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರಿಗೆ ಆಲ್‌ ಇಂಡಿಯಾ ಲಾಯರ್ಸ್‌ ಅಸೋಸಿಯೇಶನ್‌ ಫಾರ್‌ ಜಸ್ಟಿಸ್‌ ( ಎಐಎಲ್‌ಎಜೆ) ಪತ್ರ ಬರೆದಿದೆ.

ಮಾರ್ಚ್‌ 5ರ ಆದೇಶದಲ್ಲಿ ರವಿ ಕುಮಾರ್‌ ದಿವಾಕರ್‌ ಮಾಡಿರುವ ಅನಗತ್ಯ ಹೇಳಿಕೆಗಳನ್ನು ದಾಖಲೆಗಳಿಂದ ತೆಗೆಸಬೇಕು ಎಂದು ಎಐಎಲ್‌ಎಜೆ ಕೋರಿದೆ. ಈ ತೀರ್ಪಿನಲ್ಲಿ ನ್ಯಾಯಾಧೀಶರ ಹೇಳಿಕೆಗಳು ಮತ್ತು ತೀರ್ಮಾನಗಳು ವಿವಾದಿತ, ಪಕ್ಷಪಾತದಿಂದ ಕೂಡಿವೆ ಮತ್ತು ಅಸಂವಿಧಾನಿಕವಾಗಿದೆ ಎಂದು ಹೇಳಿದೆ.

ನ್ಯಾಯಾಧೀಶ ದಿವಾಕರ್ ಅವರು ಸಂವಿಧಾನ ಮತ್ತು ಅದರ ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯುವ ಕರ್ತವ್ಯಕ್ಕೆ ವಿರುದ್ಧವಾಗಿ “ಬಹು ಸಂಖ್ಯಾತರ ದೃಷ್ಟಿಕೋನಕ್ಕೆ ಸಹಾನುಭೂತಿ” ಪ್ರದರ್ಶಿಸುತ್ತಿದ್ದಾರೆ ಮತ್ತು “ಸಾಂವಿಧಾನಿಕ ನೈತಿಕತೆಯ ಕಡೆಗಣನೆ” ಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಎಐಎಲ್‌ಎಜೆ ಆರೋಪಿಸಿದೆ. ಇದಕ್ಕೆ ಶಿಕ್ಷೆ ವಿಧಿಸದಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಬರೇಲಿಯ ತ್ವರಿತಗತಿ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿರುವ ದಿವಾಕರ್‌ ಮಾರ್ಚ್‌ 5ರಂದು ಈ ತೀರ್ಪು ನೀಡಿದ್ದರು. ಬರೇಲಿಯಲ್ಲಿ 2010ರಲ್ಲಿ ನಡೆದ ಮತೀಯ ಹಿಂಸಾಚಾರ ಪ್ರಕರಣದಲ್ಲಿ ಖ್ಯಾತ ಮುಸ್ಲಿಂ ಧರ್ಮಗುರು-ರಾಜಕಾರಣಿ ಮೌಲಾನ ತೌಖೀರ್‌ ರಝಾ ಖಾನ್‌ ಅವರ ಹೆಸರನ್ನು ಈ ಪ್ರಕರಣದ ಚಾರ್ಚ್‌ಶೀಟ್‌ನಲ್ಲಿ ಸೇರಿಸಿ ಅವರಿಗೆ ಮಾರ್ಚ್‌ 11ರಂದು ಹಾಜರಾಗುವಂತೆ ಸೂಚಿಸಿದ್ದರು. ಅವರನ್ನು ದಂಗೆಗಳ ಪ್ರಮುಖ ಸಂಚುಕೋರ ಎಂದು ನ್ಯಾಯಾಧೀಶರು ಬಣ್ಣಿಸಿದ್ದರು.

ಮುಖ್ಯಮಂತ್ರಿ ಆದಿತ್ಯನಾಥ್‌ ಅವರನ್ನು ಶ್ಲಾಘಿಸಿ, ಧಾರ್ಮಿಕ ವ್ಯಕ್ತಿಯೊಬ್ಬರು ಅಧಿಕಾರದ ಗದ್ದುಗೆಯಲ್ಲಿರುವುದಕ್ಕೆ ಅವರು ದೊಡ್ಡ ಉದಾಹರಣೆ ಎಂದಿದ್ದರು.

ಈ ಹಿಂದೆ ವಾರಣಾಸಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಿವಾದಿತ ಆದೇಶ ನೀಡಿದ್ದ ದಿವಾಕರ್‌, ಮಾರ್ಚ್‌ 5ರ ತೀರ್ಪಿನಲ್ಲಿ ಹೇಳಿಕೆ ನೀಡಿ ರಾಜಕೀಯ ಪಕ್ಷಗಳು ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುವುದರಿಂದ ದಂಗೆಗಳು ನಡೆಯುತ್ತಿವೆ ಎಂದಿದ್ದರಲ್ಲದೆ ಜ್ಞಾನವಾಪಿ ಪ್ರಕರಣ ಉಲ್ಲೇಖಿಸಿ ಮುಸ್ಲಿಂ ಗುಂಪುಗಳಿಂದ ಬೆದರಿಕೆ ಎದುರಿಸಿ ತಾವು ಮತ್ತು ತಮ್ಮ ಕುಟುಂಬ ಭಯದಲ್ಲಿ ಜೀವಿಸುವಂತಾಗಿತ್ತು ಎಂದಿದ್ದರು.

ನ್ಯಾಯಾಧೀಶರು ನೀಡಿದ ಹೇಳಿಕೆಗಳು ‘ಮುಸ್ಲಿಮ್ ಸಮುದಾಯದ ಬಗ್ಗೆ ತಪ್ಪಾದ ಮತ್ತು ಮತಾಂಧ ಭಾವನೆಯನ್ನು ಮೂಡಿಸಿದೆ. ಮುಸ್ಲಿಂ ಸಮುದಾಯದ ವಿರುದ್ಧ ಸ್ಪಷ್ಟವಾದ ಪಕ್ಷಪಾತ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆ ನೀಡುವ ಮೂಲಕ ನ್ಯಾಯಾಧೀಶರು ನ್ಯಾಯಾಂಗ ನಡವಳಿಕೆಯ ಮೂಲಭೂತ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಂದಿಸಿದ್ದಾರೆ ಎಂದು ಎಐಎಲ್‌ಎಜೆ ಖಂಡನೆ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...