HomeUncategorizedತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

ತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

- Advertisement -
- Advertisement -

ಉತ್ತರ ಪ್ರದೇಶದಲ್ಲಿ 2010ರಲ್ಲಿ ನಡೆದ ಹಿಂಸಾಚಾರ ಪ್ರಕರಣದ ತೀರ್ಪನ್ನು ನೀಡುವ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಧಾರ್ಮಿಕ ಹಿನ್ನೆಲೆಯನ್ನು ಶ್ಲಾಘಿಸಿ ಮತ್ತು ದೇಶದಲ್ಲಿ ಮತೀಯ ಹಿಂಸಾಚಾರಕ್ಕೆ ಮುಸ್ಲಿಮರನ್ನು ದೂಷಿಸಿದ ನ್ಯಾಯಾಧೀಶ ರವಿ ಕುಮಾರ್‌ ದಿವಾಕರ್‌ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರಿಗೆ ಆಲ್‌ ಇಂಡಿಯಾ ಲಾಯರ್ಸ್‌ ಅಸೋಸಿಯೇಶನ್‌ ಫಾರ್‌ ಜಸ್ಟಿಸ್‌ ( ಎಐಎಲ್‌ಎಜೆ) ಪತ್ರ ಬರೆದಿದೆ.

ಮಾರ್ಚ್‌ 5ರ ಆದೇಶದಲ್ಲಿ ರವಿ ಕುಮಾರ್‌ ದಿವಾಕರ್‌ ಮಾಡಿರುವ ಅನಗತ್ಯ ಹೇಳಿಕೆಗಳನ್ನು ದಾಖಲೆಗಳಿಂದ ತೆಗೆಸಬೇಕು ಎಂದು ಎಐಎಲ್‌ಎಜೆ ಕೋರಿದೆ. ಈ ತೀರ್ಪಿನಲ್ಲಿ ನ್ಯಾಯಾಧೀಶರ ಹೇಳಿಕೆಗಳು ಮತ್ತು ತೀರ್ಮಾನಗಳು ವಿವಾದಿತ, ಪಕ್ಷಪಾತದಿಂದ ಕೂಡಿವೆ ಮತ್ತು ಅಸಂವಿಧಾನಿಕವಾಗಿದೆ ಎಂದು ಹೇಳಿದೆ.

ನ್ಯಾಯಾಧೀಶ ದಿವಾಕರ್ ಅವರು ಸಂವಿಧಾನ ಮತ್ತು ಅದರ ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯುವ ಕರ್ತವ್ಯಕ್ಕೆ ವಿರುದ್ಧವಾಗಿ “ಬಹು ಸಂಖ್ಯಾತರ ದೃಷ್ಟಿಕೋನಕ್ಕೆ ಸಹಾನುಭೂತಿ” ಪ್ರದರ್ಶಿಸುತ್ತಿದ್ದಾರೆ ಮತ್ತು “ಸಾಂವಿಧಾನಿಕ ನೈತಿಕತೆಯ ಕಡೆಗಣನೆ” ಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಎಐಎಲ್‌ಎಜೆ ಆರೋಪಿಸಿದೆ. ಇದಕ್ಕೆ ಶಿಕ್ಷೆ ವಿಧಿಸದಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಬರೇಲಿಯ ತ್ವರಿತಗತಿ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿರುವ ದಿವಾಕರ್‌ ಮಾರ್ಚ್‌ 5ರಂದು ಈ ತೀರ್ಪು ನೀಡಿದ್ದರು. ಬರೇಲಿಯಲ್ಲಿ 2010ರಲ್ಲಿ ನಡೆದ ಮತೀಯ ಹಿಂಸಾಚಾರ ಪ್ರಕರಣದಲ್ಲಿ ಖ್ಯಾತ ಮುಸ್ಲಿಂ ಧರ್ಮಗುರು-ರಾಜಕಾರಣಿ ಮೌಲಾನ ತೌಖೀರ್‌ ರಝಾ ಖಾನ್‌ ಅವರ ಹೆಸರನ್ನು ಈ ಪ್ರಕರಣದ ಚಾರ್ಚ್‌ಶೀಟ್‌ನಲ್ಲಿ ಸೇರಿಸಿ ಅವರಿಗೆ ಮಾರ್ಚ್‌ 11ರಂದು ಹಾಜರಾಗುವಂತೆ ಸೂಚಿಸಿದ್ದರು. ಅವರನ್ನು ದಂಗೆಗಳ ಪ್ರಮುಖ ಸಂಚುಕೋರ ಎಂದು ನ್ಯಾಯಾಧೀಶರು ಬಣ್ಣಿಸಿದ್ದರು.

ಮುಖ್ಯಮಂತ್ರಿ ಆದಿತ್ಯನಾಥ್‌ ಅವರನ್ನು ಶ್ಲಾಘಿಸಿ, ಧಾರ್ಮಿಕ ವ್ಯಕ್ತಿಯೊಬ್ಬರು ಅಧಿಕಾರದ ಗದ್ದುಗೆಯಲ್ಲಿರುವುದಕ್ಕೆ ಅವರು ದೊಡ್ಡ ಉದಾಹರಣೆ ಎಂದಿದ್ದರು.

ಈ ಹಿಂದೆ ವಾರಣಾಸಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಿವಾದಿತ ಆದೇಶ ನೀಡಿದ್ದ ದಿವಾಕರ್‌, ಮಾರ್ಚ್‌ 5ರ ತೀರ್ಪಿನಲ್ಲಿ ಹೇಳಿಕೆ ನೀಡಿ ರಾಜಕೀಯ ಪಕ್ಷಗಳು ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುವುದರಿಂದ ದಂಗೆಗಳು ನಡೆಯುತ್ತಿವೆ ಎಂದಿದ್ದರಲ್ಲದೆ ಜ್ಞಾನವಾಪಿ ಪ್ರಕರಣ ಉಲ್ಲೇಖಿಸಿ ಮುಸ್ಲಿಂ ಗುಂಪುಗಳಿಂದ ಬೆದರಿಕೆ ಎದುರಿಸಿ ತಾವು ಮತ್ತು ತಮ್ಮ ಕುಟುಂಬ ಭಯದಲ್ಲಿ ಜೀವಿಸುವಂತಾಗಿತ್ತು ಎಂದಿದ್ದರು.

ನ್ಯಾಯಾಧೀಶರು ನೀಡಿದ ಹೇಳಿಕೆಗಳು ‘ಮುಸ್ಲಿಮ್ ಸಮುದಾಯದ ಬಗ್ಗೆ ತಪ್ಪಾದ ಮತ್ತು ಮತಾಂಧ ಭಾವನೆಯನ್ನು ಮೂಡಿಸಿದೆ. ಮುಸ್ಲಿಂ ಸಮುದಾಯದ ವಿರುದ್ಧ ಸ್ಪಷ್ಟವಾದ ಪಕ್ಷಪಾತ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆ ನೀಡುವ ಮೂಲಕ ನ್ಯಾಯಾಧೀಶರು ನ್ಯಾಯಾಂಗ ನಡವಳಿಕೆಯ ಮೂಲಭೂತ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಂದಿಸಿದ್ದಾರೆ ಎಂದು ಎಐಎಲ್‌ಎಜೆ ಖಂಡನೆ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ’: ಪ್ರಿಯಾಂಕ್ ಖರ್ಗೆ

ಬೆಂಗಳೂರು: ‘ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ’ ಎಂದು ಆರ್.ಎಸ್.ಎಸ್ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಗುಡುಗಿದ್ದಾರೆ.  ರಾಜ್ಯದ ಗಮನ‌ ಸೆಳೆದಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ...

“ಮಾಸ್ಕ್ ಧರಿಸಿದರೂ ಪ್ರಯೋಜನವಿಲ್ಲ”: ದೆಹಲಿ ವಾಯುಮಾಲಿನ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ದೆಹಲಿಯ ವಾಯುಮಾಲಿನ್ಯ 'ಗಂಭೀರ ಮಟ್ಟ' ತಲುಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಮಾಸ್ಕ್‌ ಧರಿಸಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ವಕೀಲರು ವರ್ಚುವಲ್ ಮೂಲಕ ನ್ಯಾಯಾಲಯಕ್ಕೆ ಹಾಜರಾದರೆ ಸಾಕು ಎಂದು ಹೇಳಿದೆ. ವಿವಿಧ ಪ್ರಕರಣಗಳಲ್ಲಿ...

ಛತ್ತೀಸ್‌ಗಢ| ಇಬ್ಬರು ಉನ್ನತ ಕಮಾಂಡರ್‌ಗಳು ಸೇರಿದಂತೆ ಆರು ಜನ ಮಾವೋವಾದಿಗಳ ಎನ್‌ಕೌಂಟರ್‌

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನವೆಂಬರ್ 11 ರಂದು ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ಆರು ಮಾವೋವಾದಿಗಳಲ್ಲಿ ಮಾವೋವಾದಿ ನಾಯಕಿ, ಹಿರಿಯ ಕಾರ್ಯಕರ್ತ ಪಾಪಾ ರಾವ್ ಅವರ ಪತ್ನಿ ಊರ್ಮಿಳಾ ಮತ್ತು ಬುಚಣ್ಣ...

ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ, ಪಾಕ್ ಐಎಸ್ಐ ಬೆಂಬಲಿತ ಗುಂಪು: ವಿದೇಶಿ ಮೂಲದ 10 ಹ್ಯಾಂಡ್ಲರ್‌ಗಳ ಬಂಧನ

ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಮಹತ್ವದ ಪ್ರಗತಿ ಸಾಧಿಸಿರುವ ಲುಧಿಯಾನ ಕಮಿಷನರೇಟ್ ಪೊಲೀಸರು, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಗ್ರೆನೇಡ್ ದಾಳಿ ಘಟಕದ 10 ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಅವರಿಂದ ಸ್ಪೋಟಕಗಳನ್ನು ವಶಕ್ಕೆ ಪಡೆದಿದ್ದಾರೆ.  ನವೆಂಬರ್...

ಗಾಜಾದಲ್ಲಿ ಮುಂದುವರೆದ ಪ್ಯಾಲೆಸ್ತೀನಿಯನ್ ಮಕ್ಕಳ ಕಾಣೆ ಪ್ರಕರಣ: ಮಕ್ಕಳ ಹಕ್ಕುಗಳ ಗುಂಪು

ಬುಧವಾರ ಪ್ಯಾಲೆಸ್ತೀನಿಯನ್ ಹಕ್ಕುಗಳ ಗುಂಪಿನ ವರದಿಯ ಪ್ರಕಾರ, ಇತ್ತೀಚಿನ ತಿಂಗಳುಗಳಲ್ಲಿ ಗಾಜಾದಿಂದ ಕನಿಷ್ಠ ಆರು ಮಕ್ಕಳು ಕಣ್ಮರೆಯಾಗಿದ್ದಾರೆ ಎಂದು 'ಮಕ್ತೂಬ್‌ ಮೀಡಿಯಾ' ವರದಿ ಮಾಡಿದೆ. ಕಾಣೆಯಾದ ಮಕ್ಕಳ ಕುಟುಂಬಗಳು ಈ ಪ್ರದೇಶದಲ್ಲಿನ ತನ್ನ ಮಿಲಿಟರಿ...

ರೂ. 15 ಲಕ್ಷ ಲಂಚ ಪಡೆದ ಪ್ರಕರಣ : ನ್ಯಾಯಾಧೀಶನ ಮೇಲೆ ಕೇಸ್, ಕೋರ್ಟ್ ಗುಮಾಸ್ತ ಅರೆಸ್ಟ್

ವಾಣಿಜ್ಯ ಮೊಕದ್ದಮೆಯೊಂದರಲ್ಲಿ ಅನುಕೂಲಕರ ಆದೇಶವನ್ನು ಪಡೆಯಲು 15 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಮುಂಬೈ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಜಗಾಂವ್ ಸಿವಿಲ್ ಮತ್ತು ಸೆಷನ್ಸ್...

ಅಲಿಘರ್| ಶಾಲೆಯಲ್ಲಿ ‘ವಂದೇ ಮಾತರಂ’ ಹಾಡುವುದಕ್ಕೆ ಆಕ್ಷೇಪಿಸಿದ ಶಿಕ್ಷಕನ ಅಮಾನತು

ಉತ್ತರ ಪ್ರದೇಶದ ಶಾಹಪುರ್ ಕುತುಬ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ 'ವಂದೇ ಮಾತರಂ' ಹಾಡುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರಗೀತೆಯ ನಂತರ ವಂದೇಮಾತರಂ...

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ ಪ್ರತಿಷ್ಠೆಯ ವಿಷಯವಾಗಿದ್ದ ಚಿತ್ತಾಪುರ ಆರ್‌ಎಸ್‌ಎಸ್ ಪಥಸಂಚಲನಕ್ಕೆ ದಿನಾಂಕ ನಿಗದಿಯಾಗಿದೆ. ನವೆಂಬರ್ 16ರ‌ ಭಾನುವಾರ...

ಯಡಿಯೂರಪ್ಪ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ನ್ಯಾಯಮೂರ್ತಿ ಎಂ.ಐ ಅರುಣ್ ಅವರು, ವಿಚಾರಣಾ ನ್ಯಾಯಾಲಯ ಸಂಜ್ಞೇ (cognisance)ಪರಿಗಣಿಸಿ ಯಡಿಯೂರಪ್ಪ ಅವರಿಗೆ ಸಮನ್ಸ್ ಜಾರಿ...

ಗುಜರಾತ್| ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ; ರೂ.18 ಲಕ್ಷ ದಂಡ

ಗುಜರಾತ್‌ನ ಅಮ್ರೇಲಿಯಲ್ಲಿರುವ ಸೆಷನ್ಸ್ ನ್ಯಾಯಾಲಯವು, ಗುಜರಾತ್ ಪ್ರಾಣಿ ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡಿದ್ದಕ್ಕಾಗಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಗೋ ಕುಟುಂಬಕ್ಕೆ ಸೇರಿದ ಪ್ರಾಣಿಗಳ ಹತ್ಯೆಯನ್ನು ಕಾನೂನು...