HomeUncategorizedತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

ತೀರ್ಪಿನಲ್ಲಿ ಮತೀಯ ಹೇಳಿಕೆ: ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಕೋರಿ ವಕೀಲರ ಸಂಘದಿಂದ ಸಿಜೆಐಗೆ ಪತ್ರ

- Advertisement -
- Advertisement -

ಉತ್ತರ ಪ್ರದೇಶದಲ್ಲಿ 2010ರಲ್ಲಿ ನಡೆದ ಹಿಂಸಾಚಾರ ಪ್ರಕರಣದ ತೀರ್ಪನ್ನು ನೀಡುವ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ಧಾರ್ಮಿಕ ಹಿನ್ನೆಲೆಯನ್ನು ಶ್ಲಾಘಿಸಿ ಮತ್ತು ದೇಶದಲ್ಲಿ ಮತೀಯ ಹಿಂಸಾಚಾರಕ್ಕೆ ಮುಸ್ಲಿಮರನ್ನು ದೂಷಿಸಿದ ನ್ಯಾಯಾಧೀಶ ರವಿ ಕುಮಾರ್‌ ದಿವಾಕರ್‌ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರಿಗೆ ಆಲ್‌ ಇಂಡಿಯಾ ಲಾಯರ್ಸ್‌ ಅಸೋಸಿಯೇಶನ್‌ ಫಾರ್‌ ಜಸ್ಟಿಸ್‌ ( ಎಐಎಲ್‌ಎಜೆ) ಪತ್ರ ಬರೆದಿದೆ.

ಮಾರ್ಚ್‌ 5ರ ಆದೇಶದಲ್ಲಿ ರವಿ ಕುಮಾರ್‌ ದಿವಾಕರ್‌ ಮಾಡಿರುವ ಅನಗತ್ಯ ಹೇಳಿಕೆಗಳನ್ನು ದಾಖಲೆಗಳಿಂದ ತೆಗೆಸಬೇಕು ಎಂದು ಎಐಎಲ್‌ಎಜೆ ಕೋರಿದೆ. ಈ ತೀರ್ಪಿನಲ್ಲಿ ನ್ಯಾಯಾಧೀಶರ ಹೇಳಿಕೆಗಳು ಮತ್ತು ತೀರ್ಮಾನಗಳು ವಿವಾದಿತ, ಪಕ್ಷಪಾತದಿಂದ ಕೂಡಿವೆ ಮತ್ತು ಅಸಂವಿಧಾನಿಕವಾಗಿದೆ ಎಂದು ಹೇಳಿದೆ.

ನ್ಯಾಯಾಧೀಶ ದಿವಾಕರ್ ಅವರು ಸಂವಿಧಾನ ಮತ್ತು ಅದರ ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯುವ ಕರ್ತವ್ಯಕ್ಕೆ ವಿರುದ್ಧವಾಗಿ “ಬಹು ಸಂಖ್ಯಾತರ ದೃಷ್ಟಿಕೋನಕ್ಕೆ ಸಹಾನುಭೂತಿ” ಪ್ರದರ್ಶಿಸುತ್ತಿದ್ದಾರೆ ಮತ್ತು “ಸಾಂವಿಧಾನಿಕ ನೈತಿಕತೆಯ ಕಡೆಗಣನೆ” ಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಎಐಎಲ್‌ಎಜೆ ಆರೋಪಿಸಿದೆ. ಇದಕ್ಕೆ ಶಿಕ್ಷೆ ವಿಧಿಸದಿರಲು ಸಾಧ್ಯವಿಲ್ಲ ಎಂದು ಹೇಳಿದೆ.

ಬರೇಲಿಯ ತ್ವರಿತಗತಿ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿರುವ ದಿವಾಕರ್‌ ಮಾರ್ಚ್‌ 5ರಂದು ಈ ತೀರ್ಪು ನೀಡಿದ್ದರು. ಬರೇಲಿಯಲ್ಲಿ 2010ರಲ್ಲಿ ನಡೆದ ಮತೀಯ ಹಿಂಸಾಚಾರ ಪ್ರಕರಣದಲ್ಲಿ ಖ್ಯಾತ ಮುಸ್ಲಿಂ ಧರ್ಮಗುರು-ರಾಜಕಾರಣಿ ಮೌಲಾನ ತೌಖೀರ್‌ ರಝಾ ಖಾನ್‌ ಅವರ ಹೆಸರನ್ನು ಈ ಪ್ರಕರಣದ ಚಾರ್ಚ್‌ಶೀಟ್‌ನಲ್ಲಿ ಸೇರಿಸಿ ಅವರಿಗೆ ಮಾರ್ಚ್‌ 11ರಂದು ಹಾಜರಾಗುವಂತೆ ಸೂಚಿಸಿದ್ದರು. ಅವರನ್ನು ದಂಗೆಗಳ ಪ್ರಮುಖ ಸಂಚುಕೋರ ಎಂದು ನ್ಯಾಯಾಧೀಶರು ಬಣ್ಣಿಸಿದ್ದರು.

ಮುಖ್ಯಮಂತ್ರಿ ಆದಿತ್ಯನಾಥ್‌ ಅವರನ್ನು ಶ್ಲಾಘಿಸಿ, ಧಾರ್ಮಿಕ ವ್ಯಕ್ತಿಯೊಬ್ಬರು ಅಧಿಕಾರದ ಗದ್ದುಗೆಯಲ್ಲಿರುವುದಕ್ಕೆ ಅವರು ದೊಡ್ಡ ಉದಾಹರಣೆ ಎಂದಿದ್ದರು.

ಈ ಹಿಂದೆ ವಾರಣಾಸಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಿವಾದಿತ ಆದೇಶ ನೀಡಿದ್ದ ದಿವಾಕರ್‌, ಮಾರ್ಚ್‌ 5ರ ತೀರ್ಪಿನಲ್ಲಿ ಹೇಳಿಕೆ ನೀಡಿ ರಾಜಕೀಯ ಪಕ್ಷಗಳು ಒಂದು ನಿರ್ದಿಷ್ಟ ಸಮುದಾಯವನ್ನು ಓಲೈಕೆ ಮಾಡುವುದರಿಂದ ದಂಗೆಗಳು ನಡೆಯುತ್ತಿವೆ ಎಂದಿದ್ದರಲ್ಲದೆ ಜ್ಞಾನವಾಪಿ ಪ್ರಕರಣ ಉಲ್ಲೇಖಿಸಿ ಮುಸ್ಲಿಂ ಗುಂಪುಗಳಿಂದ ಬೆದರಿಕೆ ಎದುರಿಸಿ ತಾವು ಮತ್ತು ತಮ್ಮ ಕುಟುಂಬ ಭಯದಲ್ಲಿ ಜೀವಿಸುವಂತಾಗಿತ್ತು ಎಂದಿದ್ದರು.

ನ್ಯಾಯಾಧೀಶರು ನೀಡಿದ ಹೇಳಿಕೆಗಳು ‘ಮುಸ್ಲಿಮ್ ಸಮುದಾಯದ ಬಗ್ಗೆ ತಪ್ಪಾದ ಮತ್ತು ಮತಾಂಧ ಭಾವನೆಯನ್ನು ಮೂಡಿಸಿದೆ. ಮುಸ್ಲಿಂ ಸಮುದಾಯದ ವಿರುದ್ಧ ಸ್ಪಷ್ಟವಾದ ಪಕ್ಷಪಾತ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆ ನೀಡುವ ಮೂಲಕ ನ್ಯಾಯಾಧೀಶರು ನ್ಯಾಯಾಂಗ ನಡವಳಿಕೆಯ ಮೂಲಭೂತ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ. ನ್ಯಾಯಾಂಗದ ಮೇಲಿನ ಸಾರ್ವಜನಿಕರ ವಿಶ್ವಾಸವನ್ನು ಕುಂದಿಸಿದ್ದಾರೆ ಎಂದು ಎಐಎಲ್‌ಎಜೆ ಖಂಡನೆ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಎಸ್‌ಬಿಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...