Homeಮುಖಪುಟವಕೀಲರ ಮುಷ್ಕರ | ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆ ಮತ್ತೆ ಮುಂದೂಡಿಕೆ

ವಕೀಲರ ಮುಷ್ಕರ | ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆ ಮತ್ತೆ ಮುಂದೂಡಿಕೆ

- Advertisement -
- Advertisement -

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ವಕೀಲರ ನಿರಂತರ ಮುಷ್ಕರದ ಕಾರಣಕ್ಕಾಗಿ ಮತ್ತೆ ಮುಂದೂಡಲಾಗಿದೆ ಎಂದು ವರದಿಯಾಗಿದೆ. ಕರ್ನಾಟಕ ಚುನಾವಣೆಯ ಸಮಯದಲ್ಲಿ ಗೃಹ ಸಚಿವ ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ವಕೀಲರ ಮುಷ್ಕರ

ಪ್ರಕರಣದ ಕ್ರಾಸ್ ಎಕ್ಸಾಮಿನೇಷನ್ ಪೂರ್ಣಗೊಳಿಸಲು ವಿಶೇಷ ಸಂಸದ ಶಾಸಕ ನ್ಯಾಯಾಲಯದ ನ್ಯಾಯಾಧೀಶ ಶುಭಂ ವರ್ಮಾ ಅವರು ಜನವರಿ 30 ರಂದು ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ ಎಂದು ವಾದಿ ವಿಜಯ್ ಮಿಶ್ರಾ ಅವರ ವಕೀಲ ಸಂತೋಷ್ ಕುಮಾರ್ ಪಾಂಡೆ ಹೇಳಿದ್ದಾರೆ.

ಕರ್ನಾಟಕ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿ ನಾಯಕ ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ರಾಜಕಾರಣಿ ಮಿಶ್ರಾ ಅವರು 2018 ರಲ್ಲಿ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಅವರು ಹೇಳಿಕೆಯು ತನ್ನ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಮಿಶ್ರಾ ಅವರು ಕೋರ್ಟ್‌ಗೆ ದೂರಿದ್ದರು. ವಕೀಲರ ಮುಷ್ಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣವು ಐದು ವರ್ಷಗಳ ಕಾಲ ಬಾಕಿ ಇತ್ತು. ಅದಾಗ್ಯೂ, ರಾಹುಲ್ ಗಾಂಧಿ ಹಾಜರಾಗಲು ವಿಫಲವಾದಾಗ, ನ್ಯಾಯಾಲಯವು ಡಿಸೆಂಬರ್ 2023 ರಲ್ಲಿ ಅವರಿಗೆ ಸಮನ್ಸ್ ಜಾರಿ ಮಾಡಿ ವಾರಂಟ್ ಹೊರಡಿಸಿತ್ತು. ಹಾಗಾಗಿ, ಫೆಬ್ರವರಿ 2024 ರಲ್ಲಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು ಮತ್ತು ಜುಲೈ 26, 2024 ರಂದು ಅವರ ಹೇಳಿಕೆಯನ್ನು ದಾಖಲಿಸಲಾಯಿತು.

ಇದರ ನಂತರ, ವಿಶೇಷ ಮ್ಯಾಜಿಸ್ಟ್ರೇಟ್ ತಲಾ 25,000 ರೂ.ಗಳ ಎರಡು ಶ್ಯೂರಿಟಿಗಳ ಮೇಲೆ ಅವರಿಗೆ ಜಾಮೀನು ನೀಡಿದ್ದರು. ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದಾಗ ರಾಹುಲ್ ಗಾಂಧಿಯವರು ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದು, ತನ್ನ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗುತ್ತಿದೆ ಎಂದು ವಾದಿಸಿದ್ದರು. ಇದರ ನಂತರ ನ್ಯಾಯಾಲಯವು ವಾದಿಗಳಿಗೆ ಸಾಕ್ಷ್ಯಗಳನ್ನು ಪ್ರಸ್ತುತಪಡಿಸಲು ಸೂಚಿಸಿತ್ತು.

ಡಿಸೆಂಬರ್ 16, 2024 ರಂದು ವಿಚಾರಣೆಯನ್ನು ನಿಗದಿಪಡಿಸಲಾಗಿದ್ದರೂ, ನ್ಯಾಯಾಧೀಶರ ಅನುಪಸ್ಥಿತಿಯಿಂದಾಗಿ ಅದನ್ನು ಮುಂದೂಡಲಾಯಿತು. ಜನವರಿ 2, 2025 ರಂದು, ಕ್ರಾಸ್ ಎಕ್ಸಾಮಿನೇಷನ್‌ ಪೂರ್ಣಗೊಳ್ಳದಿದ್ದಾಗ, ನ್ಯಾಯಾಲಯವು ಮುಂದಿನ ದಿನಾಂಕವನ್ನು ಜನವರಿ 10, 2025 ಕ್ಕೆ ನಿಗದಿಪಡಿಸಿತ್ತು. ಆದಾಗ್ಯೂ, ವಕೀಲರ ಮುಷ್ಕರದಿಂದಾಗಿ ವಿಚಾರಣೆಯನ್ನು ಜನವರಿ 22, 2025 ಕ್ಕೆ ಮರು ನಿಗದಿಪಡಿಸಲಾಯಿತು.

ಇದನ್ನೂಓದಿ:  ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...