Homeಮುಖಪುಟವಕೀಲರ ಮುಷ್ಕರ | ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆ ಮತ್ತೆ ಮುಂದೂಡಿಕೆ

ವಕೀಲರ ಮುಷ್ಕರ | ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆ ಮತ್ತೆ ಮುಂದೂಡಿಕೆ

- Advertisement -
- Advertisement -

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ವಕೀಲರ ನಿರಂತರ ಮುಷ್ಕರದ ಕಾರಣಕ್ಕಾಗಿ ಮತ್ತೆ ಮುಂದೂಡಲಾಗಿದೆ ಎಂದು ವರದಿಯಾಗಿದೆ. ಕರ್ನಾಟಕ ಚುನಾವಣೆಯ ಸಮಯದಲ್ಲಿ ಗೃಹ ಸಚಿವ ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ವಕೀಲರ ಮುಷ್ಕರ

ಪ್ರಕರಣದ ಕ್ರಾಸ್ ಎಕ್ಸಾಮಿನೇಷನ್ ಪೂರ್ಣಗೊಳಿಸಲು ವಿಶೇಷ ಸಂಸದ ಶಾಸಕ ನ್ಯಾಯಾಲಯದ ನ್ಯಾಯಾಧೀಶ ಶುಭಂ ವರ್ಮಾ ಅವರು ಜನವರಿ 30 ರಂದು ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ ಎಂದು ವಾದಿ ವಿಜಯ್ ಮಿಶ್ರಾ ಅವರ ವಕೀಲ ಸಂತೋಷ್ ಕುಮಾರ್ ಪಾಂಡೆ ಹೇಳಿದ್ದಾರೆ.

ಕರ್ನಾಟಕ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿ ನಾಯಕ ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ರಾಜಕಾರಣಿ ಮಿಶ್ರಾ ಅವರು 2018 ರಲ್ಲಿ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಗಾಂಧಿ ಅವರು ಹೇಳಿಕೆಯು ತನ್ನ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಮಿಶ್ರಾ ಅವರು ಕೋರ್ಟ್‌ಗೆ ದೂರಿದ್ದರು. ವಕೀಲರ ಮುಷ್ಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಕರಣವು ಐದು ವರ್ಷಗಳ ಕಾಲ ಬಾಕಿ ಇತ್ತು. ಅದಾಗ್ಯೂ, ರಾಹುಲ್ ಗಾಂಧಿ ಹಾಜರಾಗಲು ವಿಫಲವಾದಾಗ, ನ್ಯಾಯಾಲಯವು ಡಿಸೆಂಬರ್ 2023 ರಲ್ಲಿ ಅವರಿಗೆ ಸಮನ್ಸ್ ಜಾರಿ ಮಾಡಿ ವಾರಂಟ್ ಹೊರಡಿಸಿತ್ತು. ಹಾಗಾಗಿ, ಫೆಬ್ರವರಿ 2024 ರಲ್ಲಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು ಮತ್ತು ಜುಲೈ 26, 2024 ರಂದು ಅವರ ಹೇಳಿಕೆಯನ್ನು ದಾಖಲಿಸಲಾಯಿತು.

ಇದರ ನಂತರ, ವಿಶೇಷ ಮ್ಯಾಜಿಸ್ಟ್ರೇಟ್ ತಲಾ 25,000 ರೂ.ಗಳ ಎರಡು ಶ್ಯೂರಿಟಿಗಳ ಮೇಲೆ ಅವರಿಗೆ ಜಾಮೀನು ನೀಡಿದ್ದರು. ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದಾಗ ರಾಹುಲ್ ಗಾಂಧಿಯವರು ತಾನು ನಿರಪರಾಧಿ ಎಂದು ಹೇಳಿಕೊಂಡಿದ್ದು, ತನ್ನ ವಿರುದ್ಧ ರಾಜಕೀಯ ಪಿತೂರಿ ನಡೆಸಲಾಗುತ್ತಿದೆ ಎಂದು ವಾದಿಸಿದ್ದರು. ಇದರ ನಂತರ ನ್ಯಾಯಾಲಯವು ವಾದಿಗಳಿಗೆ ಸಾಕ್ಷ್ಯಗಳನ್ನು ಪ್ರಸ್ತುತಪಡಿಸಲು ಸೂಚಿಸಿತ್ತು.

ಡಿಸೆಂಬರ್ 16, 2024 ರಂದು ವಿಚಾರಣೆಯನ್ನು ನಿಗದಿಪಡಿಸಲಾಗಿದ್ದರೂ, ನ್ಯಾಯಾಧೀಶರ ಅನುಪಸ್ಥಿತಿಯಿಂದಾಗಿ ಅದನ್ನು ಮುಂದೂಡಲಾಯಿತು. ಜನವರಿ 2, 2025 ರಂದು, ಕ್ರಾಸ್ ಎಕ್ಸಾಮಿನೇಷನ್‌ ಪೂರ್ಣಗೊಳ್ಳದಿದ್ದಾಗ, ನ್ಯಾಯಾಲಯವು ಮುಂದಿನ ದಿನಾಂಕವನ್ನು ಜನವರಿ 10, 2025 ಕ್ಕೆ ನಿಗದಿಪಡಿಸಿತ್ತು. ಆದಾಗ್ಯೂ, ವಕೀಲರ ಮುಷ್ಕರದಿಂದಾಗಿ ವಿಚಾರಣೆಯನ್ನು ಜನವರಿ 22, 2025 ಕ್ಕೆ ಮರು ನಿಗದಿಪಡಿಸಲಾಯಿತು.

ಇದನ್ನೂಓದಿ:  ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ವಿಜಯಪುರ | ಮೂವರು ದಲಿತ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ : ಐವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...