ಅಥಣಿ ಬಿಜೆಪಿ ಟಿಕೆಟ್ ವಂಚಿತ ಲಕ್ಷ್ಮಣ್ ಸವದಿ ಇಂದು ಬೆಂಗಳೂರಿಗೆ ಹೊರಟಿದ್ದು, ವಿಧಾನ ಪರಿಷತ್ ಸ್ಥಾನ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದು, ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂದು ಅವರು ಬೆಂಗಳೂರಿಗೆ ಆಗಮಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಮಾನ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಲಕ್ಷ್ಮಣ್ ಸವದಿ ಜೊತೆಗಿದ್ದು ಖುದ್ದಾಗಿ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಇದೆಲ್ಲವೂ ಅವರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂಬುದಕ್ಕೆ ಸಾಕ್ಷಿಗಳಾಗಿವೆ.
#BREAKING Disgruntled former deputy CM and #BJP leader Laxman Savadi at @siddaramaiah's house. pic.twitter.com/ADfk9BJsiW
— Imran Khan (@KeypadGuerilla) April 14, 2023
ಬಿಜೆಪಿ ನಾಯಕರು ಸವದಿ ಮನವೊಲಿಸಲು ಯತ್ನಿಸಿದರೂ ಸಫಲರಾಗಿಲ್ಲ. ಇಂದು ಬಿಜೆಪಿಗೆ ರಾಜೀನಾಮೆ ನೀಡುವ ಸವದಿ ಸಂಜೆ ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ನಡೆಯುವ ಪ್ರಜಾಧ್ವನಿ ಯಾತ್ರೆಯಲ್ಲಿ ಕಾಂಗ್ರೆಸ್ ಸೇರಲಿದ್ದು, ಅಲ್ಲಿಯೇ ಅವರಿಗೆ ಅಥಣಿ ಕಾಂಗ್ರೆಸ್ ಟಿಕೆಟ್ ಘೋಷಿಸಲಾಗುವುದು ಎಂದು ವರದಿಯಾಗಿದೆ. ಆ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಸಹ ಭಾಗವಹಿಸಲಿದ್ದಾರೆ.
ಸುಮಾರು 50 ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಆಕಾಂಕ್ಷಿಗಳು ಬಂಡಾಯವೆದ್ದಿದ್ದಾರೆ. 5ಕ್ಕೂ ಹೆಚ್ಚು ಶಾಸಕರು ಈಗಾಗಲೇ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಇದರಿಂದಾಗಿ ಬಿಜೆಪಿ ನಾಯಕರಿಗೆ ತಲೆನೋವು ಜೋರಾಗಿದೆ.
ಇದನ್ನೂ ಓದಿ: ಪದ್ಮನಾಭನಗರದಿಂದ ಡಿ.ಕೆ ಸುರೇಶ್ ಕಣಕ್ಕೆ? : ಕೂತೂಹಲ ಮೂಡಿಸಿದ ಬೆಳವಣಿಗೆಗಳು