Homeಕರ್ನಾಟಕಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

- Advertisement -
- Advertisement -

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದೆಂಬ ತೀರ್ಪು ಬಂದಾಗಿನಿಂದ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿಸೆಂಬರ್‌ 05ರಂದು ನಡೆಯುವ ಉಪಚುನಾವಣೆಗೆ ಟಿಕೆಟ್ ಹಂಚಿಕೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 17 ಅನರ್ಹ ಶಾಸಕರೂ ಸಹ ತುರುಸಿನಿಂದ ಬಿಜೆಪಿ ಸೇರಿ ಟಿಕೆಟ್ ಗಿಟ್ಟಿಸಲು ಕಾತರರಾಗಿದ್ದಾರೆ. ಆದರೆ ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಆರ್‌ ಶಂಕರ್‌ ಚಿಂತಾಕ್ರಾಂತರಾಗಿದ್ದಾರೆ. ಅವರೊಡನೆ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಕೆ.ಎಸ್‌ ಈಶ್ವರಪ್ಪ ಕೂಡ ಸ್ವಲ್ಪ ಡಲ್ ಆಗಿದ್ದಾರೆ.

ಕಾರಣ ನಿಮಗೆಲ್ಲಾ ಗೊತ್ತಿದೆ. ಚುನಾವಣೆಯಲ್ಲಿ ಸೋತರೂ ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ್ ಸವದಿ ಇನ್ನು ಮೂರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕಿದೆ. ಇಲ್ಲದಿದ್ದಲ್ಲಿ ಅವರ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಲಿದೆ. ಅವರು ವಿಧಾನಸಭೆಗೆ ಆಯ್ಕೆಯಾಗಬೇಕಾದರೆ ತಮ್ಮ ಸ್ವಕ್ಷೇತ್ರ ಅಥಣಿಯಿಂದ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಅಲ್ಲಿ ಅವರಿಗೆ ಟಿಕೆಟ್ ಸಿಗುತ್ತೋ ಅಥವಾ ಕಾಂಗ್ರೆಸ್‌ನಿಂದ ಬಿಜೆಪಿಗೆ ಹಾರಿ ಅನರ್ಹನಾಗಿರುವ ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗುತ್ತೋ ಅಂತ ಇಬ್ಬರಲ್ಲಿಯೂ ಚಿಂತೆ ಜೋರಾಗಿದೆ.

ನಿನ್ನೆ ಕ್ಷೇತ್ರಗಳ ಉಸ್ತುವಾರಿ ಘೋಷಿಸುವ ವೇಳೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಅಥಣಿ ಕ್ಷೇತ್ರಕ್ಕೆ ಕೆ.ಎಸ್ ಈಶ್ವರಪ್ಪರವನ್ನು ಪ್ರಧಾನ ಉಸ್ತುವಾರಿಯಾಗಿಯೂ, ಲಕ್ಷ್ಮಣ್ ಸವದಿಯವರನ್ನು ಸಹ ಉಸ್ತುವಾರಿಯನ್ನಾಗಿಯೂ ಘೋಷಿಸಿದ್ದಾರೆ. ಅವರಿಗೆ ಉಸ್ತುವಾರಿ ವಹಿಸುತ್ತಾರೆಂದರೆ ಟಿಕೆಟ್ ಇಲ್ಲ ಎಂತಲೇ ಅರ್ಥ. ಆದರೆ ಡಿಸಿಎಂ ಪಟ್ಟ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಬಹುದಾದ ಲಕ್ಷ್ಮಣ್‌ ಸವದಿಯನ್ನು ಎದುರು ಹಾಕಿಕೊಳ್ಳುವುದು ಬೇಡ ಎಂಬ ಅಭಿಪ್ರಾಯವೂ ಬಿಜೆಪಿಯಲ್ಲಿದೆ. ಹಾಗಾಗಿ ಸವದಿಯನ್ನೇ ಅಭ್ಯರ್ಥಿಯನ್ನಾಗಿ ಮಾಡಿ ಮಹೇಶ್ ಕುಮಟಳ್ಳಿಗೆ ಬೇರೆ ಯಾವುದಾದರೂ ಆಯಾಕಟ್ಟಿನ ಜಾಗ ನೀಡುವ ಆಲೋಚನೆಯೂ ಇದೆ ಎನ್ನಲಾಗುತ್ತಿದೆ.

ಇನ್ನು ಆರ್‌ ಶಂಕರ್‌ ರಾಣಿಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಪಕ್ಷದಿಂದ ಶಾಸಕರಾಗಿದ್ದರು. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಅವರಿಗೆ ಮಂತ್ರಿ ಸ್ಥಾನವನ್ನು ಕೊಡಲಾಗಿತ್ತು. ಆಗ ಅವರೊಂದು ಎಡವಟ್ಟು ಮಾಡಿದರು. ಅದೇನೆಂದರೆ ಕೆಪಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡುವುದಾಗಿ ಪತ್ರ ಬರೆದುಕೊಟ್ಟರು. ಆನಂತರ ಮನಸ್ಸು ಬದಲಿಸಿದ ಅವರು ಹೆಚ್ಚಿನ ಆಶೆಯಿಂದ ಬಿಜೆಪಿಗೆ ಹಾರಿದರು. ವಿಪ್ ಉಲ್ಲಂಘನೆಯ ಆಧಾರದಲ್ಲಿ ಸ್ಪೀಕರ್‌ ಅವರನ್ನು ಸಹ ಅನರ್ಹಗೊಳಿಸಿದರು.

ಈಗ ಅವರು ಬಿಜೆಪಿಯಿಂದ ಅಲ್ಲಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಆದರೆ ಅದಕ್ಕೆ ಕೆ.ಎಸ್ ಈಶ್ವರಪ್ಪ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಮಗ ಹಾಲಿ ಶಿವಮೊಗ್ಗ ಜಿ.ಪಂ ಸದಸ್ಯನಾಗಿದ್ದು ಅವರನ್ನು ಈ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ರಾಣಿಬೆನ್ನೂರಿನಲ್ಲಿ ಕುರುಬ ಸಮುದಾಯದ ಅತಿ ಹೆಚ್ಚು ಮತಗಳಿವೆ ಹಾಗಾಗಿ ತನ್ನ ಮಗನಿಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಆರ್‌ ಶಂಕರ್‌ ಸ್ಥಿತಿ ಡೋಲಾಯಮಾನವಾಗಿದೆ.

ಒಂದು ವೇಳೆ ಎಲ್ಲಾ ಅನರ್ಹರಿಗೂ ಟಿಕೆಟ್ ಸಿಕ್ಕರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ಅವರನ್ನು ತಟ್ಟುತ್ತದೆ. ಕೆಲವರೂ ಪ್ರತ್ಯಕ್ಷವಾಗಿ ಬಂಡಾಯವೆದ್ದರೆ ಹಲವರು ಪರೋಕ್ಷವಾಗಿ ಒಳೇಟು ನೀಡಲಿದ್ದಾರೆ. ಹಾಗಾಗಿ ಅನರ್ಹರ ಗೆಲುವು ಅಷ್ಟು ಸುಲಭವಲ್ಲ.

ಆದರೆ ಇದರಿಂದ ಬಿಜೆಪಿಗೇನೂ ತೊಂದರೆಯಿಲ್ಲ. ಏಕೆಂದರೆ ಅವರಿಗೆ ಬೆಂಬಲ ನೀಡಲು ಇನ್ನು ಮೂರುವರೆ ವರ್ಷ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿರುತ್ತಾರೆಂದೂ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಘೋಷಿಸಿಯಾಗಿದೆ. ಹಾಗಾಗಿ ಸರ್ಕಾರ ಸುಭದ್ರವಾಗಿರುತ್ತದೆ. ಆದರೆ ಇಲ್ಲಿ ಬಲಿಪಶುಗಳು ಮಾತ್ರ ಅನರ್ಹ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...