Homeಕರ್ನಾಟಕಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

- Advertisement -
- Advertisement -

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದೆಂಬ ತೀರ್ಪು ಬಂದಾಗಿನಿಂದ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿಸೆಂಬರ್‌ 05ರಂದು ನಡೆಯುವ ಉಪಚುನಾವಣೆಗೆ ಟಿಕೆಟ್ ಹಂಚಿಕೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 17 ಅನರ್ಹ ಶಾಸಕರೂ ಸಹ ತುರುಸಿನಿಂದ ಬಿಜೆಪಿ ಸೇರಿ ಟಿಕೆಟ್ ಗಿಟ್ಟಿಸಲು ಕಾತರರಾಗಿದ್ದಾರೆ. ಆದರೆ ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಆರ್‌ ಶಂಕರ್‌ ಚಿಂತಾಕ್ರಾಂತರಾಗಿದ್ದಾರೆ. ಅವರೊಡನೆ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಕೆ.ಎಸ್‌ ಈಶ್ವರಪ್ಪ ಕೂಡ ಸ್ವಲ್ಪ ಡಲ್ ಆಗಿದ್ದಾರೆ.

ಕಾರಣ ನಿಮಗೆಲ್ಲಾ ಗೊತ್ತಿದೆ. ಚುನಾವಣೆಯಲ್ಲಿ ಸೋತರೂ ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ್ ಸವದಿ ಇನ್ನು ಮೂರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕಿದೆ. ಇಲ್ಲದಿದ್ದಲ್ಲಿ ಅವರ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಲಿದೆ. ಅವರು ವಿಧಾನಸಭೆಗೆ ಆಯ್ಕೆಯಾಗಬೇಕಾದರೆ ತಮ್ಮ ಸ್ವಕ್ಷೇತ್ರ ಅಥಣಿಯಿಂದ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಅಲ್ಲಿ ಅವರಿಗೆ ಟಿಕೆಟ್ ಸಿಗುತ್ತೋ ಅಥವಾ ಕಾಂಗ್ರೆಸ್‌ನಿಂದ ಬಿಜೆಪಿಗೆ ಹಾರಿ ಅನರ್ಹನಾಗಿರುವ ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗುತ್ತೋ ಅಂತ ಇಬ್ಬರಲ್ಲಿಯೂ ಚಿಂತೆ ಜೋರಾಗಿದೆ.

ನಿನ್ನೆ ಕ್ಷೇತ್ರಗಳ ಉಸ್ತುವಾರಿ ಘೋಷಿಸುವ ವೇಳೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಅಥಣಿ ಕ್ಷೇತ್ರಕ್ಕೆ ಕೆ.ಎಸ್ ಈಶ್ವರಪ್ಪರವನ್ನು ಪ್ರಧಾನ ಉಸ್ತುವಾರಿಯಾಗಿಯೂ, ಲಕ್ಷ್ಮಣ್ ಸವದಿಯವರನ್ನು ಸಹ ಉಸ್ತುವಾರಿಯನ್ನಾಗಿಯೂ ಘೋಷಿಸಿದ್ದಾರೆ. ಅವರಿಗೆ ಉಸ್ತುವಾರಿ ವಹಿಸುತ್ತಾರೆಂದರೆ ಟಿಕೆಟ್ ಇಲ್ಲ ಎಂತಲೇ ಅರ್ಥ. ಆದರೆ ಡಿಸಿಎಂ ಪಟ್ಟ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಬಹುದಾದ ಲಕ್ಷ್ಮಣ್‌ ಸವದಿಯನ್ನು ಎದುರು ಹಾಕಿಕೊಳ್ಳುವುದು ಬೇಡ ಎಂಬ ಅಭಿಪ್ರಾಯವೂ ಬಿಜೆಪಿಯಲ್ಲಿದೆ. ಹಾಗಾಗಿ ಸವದಿಯನ್ನೇ ಅಭ್ಯರ್ಥಿಯನ್ನಾಗಿ ಮಾಡಿ ಮಹೇಶ್ ಕುಮಟಳ್ಳಿಗೆ ಬೇರೆ ಯಾವುದಾದರೂ ಆಯಾಕಟ್ಟಿನ ಜಾಗ ನೀಡುವ ಆಲೋಚನೆಯೂ ಇದೆ ಎನ್ನಲಾಗುತ್ತಿದೆ.

ಇನ್ನು ಆರ್‌ ಶಂಕರ್‌ ರಾಣಿಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಪಕ್ಷದಿಂದ ಶಾಸಕರಾಗಿದ್ದರು. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಅವರಿಗೆ ಮಂತ್ರಿ ಸ್ಥಾನವನ್ನು ಕೊಡಲಾಗಿತ್ತು. ಆಗ ಅವರೊಂದು ಎಡವಟ್ಟು ಮಾಡಿದರು. ಅದೇನೆಂದರೆ ಕೆಪಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡುವುದಾಗಿ ಪತ್ರ ಬರೆದುಕೊಟ್ಟರು. ಆನಂತರ ಮನಸ್ಸು ಬದಲಿಸಿದ ಅವರು ಹೆಚ್ಚಿನ ಆಶೆಯಿಂದ ಬಿಜೆಪಿಗೆ ಹಾರಿದರು. ವಿಪ್ ಉಲ್ಲಂಘನೆಯ ಆಧಾರದಲ್ಲಿ ಸ್ಪೀಕರ್‌ ಅವರನ್ನು ಸಹ ಅನರ್ಹಗೊಳಿಸಿದರು.

ಈಗ ಅವರು ಬಿಜೆಪಿಯಿಂದ ಅಲ್ಲಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಆದರೆ ಅದಕ್ಕೆ ಕೆ.ಎಸ್ ಈಶ್ವರಪ್ಪ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಮಗ ಹಾಲಿ ಶಿವಮೊಗ್ಗ ಜಿ.ಪಂ ಸದಸ್ಯನಾಗಿದ್ದು ಅವರನ್ನು ಈ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ರಾಣಿಬೆನ್ನೂರಿನಲ್ಲಿ ಕುರುಬ ಸಮುದಾಯದ ಅತಿ ಹೆಚ್ಚು ಮತಗಳಿವೆ ಹಾಗಾಗಿ ತನ್ನ ಮಗನಿಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಆರ್‌ ಶಂಕರ್‌ ಸ್ಥಿತಿ ಡೋಲಾಯಮಾನವಾಗಿದೆ.

ಒಂದು ವೇಳೆ ಎಲ್ಲಾ ಅನರ್ಹರಿಗೂ ಟಿಕೆಟ್ ಸಿಕ್ಕರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ಅವರನ್ನು ತಟ್ಟುತ್ತದೆ. ಕೆಲವರೂ ಪ್ರತ್ಯಕ್ಷವಾಗಿ ಬಂಡಾಯವೆದ್ದರೆ ಹಲವರು ಪರೋಕ್ಷವಾಗಿ ಒಳೇಟು ನೀಡಲಿದ್ದಾರೆ. ಹಾಗಾಗಿ ಅನರ್ಹರ ಗೆಲುವು ಅಷ್ಟು ಸುಲಭವಲ್ಲ.

ಆದರೆ ಇದರಿಂದ ಬಿಜೆಪಿಗೇನೂ ತೊಂದರೆಯಿಲ್ಲ. ಏಕೆಂದರೆ ಅವರಿಗೆ ಬೆಂಬಲ ನೀಡಲು ಇನ್ನು ಮೂರುವರೆ ವರ್ಷ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿರುತ್ತಾರೆಂದೂ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಘೋಷಿಸಿಯಾಗಿದೆ. ಹಾಗಾಗಿ ಸರ್ಕಾರ ಸುಭದ್ರವಾಗಿರುತ್ತದೆ. ಆದರೆ ಇಲ್ಲಿ ಬಲಿಪಶುಗಳು ಮಾತ್ರ ಅನರ್ಹ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...