Homeಕರ್ನಾಟಕಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

- Advertisement -
- Advertisement -

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದೆಂಬ ತೀರ್ಪು ಬಂದಾಗಿನಿಂದ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿಸೆಂಬರ್‌ 05ರಂದು ನಡೆಯುವ ಉಪಚುನಾವಣೆಗೆ ಟಿಕೆಟ್ ಹಂಚಿಕೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 17 ಅನರ್ಹ ಶಾಸಕರೂ ಸಹ ತುರುಸಿನಿಂದ ಬಿಜೆಪಿ ಸೇರಿ ಟಿಕೆಟ್ ಗಿಟ್ಟಿಸಲು ಕಾತರರಾಗಿದ್ದಾರೆ. ಆದರೆ ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಆರ್‌ ಶಂಕರ್‌ ಚಿಂತಾಕ್ರಾಂತರಾಗಿದ್ದಾರೆ. ಅವರೊಡನೆ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಕೆ.ಎಸ್‌ ಈಶ್ವರಪ್ಪ ಕೂಡ ಸ್ವಲ್ಪ ಡಲ್ ಆಗಿದ್ದಾರೆ.

ಕಾರಣ ನಿಮಗೆಲ್ಲಾ ಗೊತ್ತಿದೆ. ಚುನಾವಣೆಯಲ್ಲಿ ಸೋತರೂ ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ್ ಸವದಿ ಇನ್ನು ಮೂರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕಿದೆ. ಇಲ್ಲದಿದ್ದಲ್ಲಿ ಅವರ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಲಿದೆ. ಅವರು ವಿಧಾನಸಭೆಗೆ ಆಯ್ಕೆಯಾಗಬೇಕಾದರೆ ತಮ್ಮ ಸ್ವಕ್ಷೇತ್ರ ಅಥಣಿಯಿಂದ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಅಲ್ಲಿ ಅವರಿಗೆ ಟಿಕೆಟ್ ಸಿಗುತ್ತೋ ಅಥವಾ ಕಾಂಗ್ರೆಸ್‌ನಿಂದ ಬಿಜೆಪಿಗೆ ಹಾರಿ ಅನರ್ಹನಾಗಿರುವ ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗುತ್ತೋ ಅಂತ ಇಬ್ಬರಲ್ಲಿಯೂ ಚಿಂತೆ ಜೋರಾಗಿದೆ.

ನಿನ್ನೆ ಕ್ಷೇತ್ರಗಳ ಉಸ್ತುವಾರಿ ಘೋಷಿಸುವ ವೇಳೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಅಥಣಿ ಕ್ಷೇತ್ರಕ್ಕೆ ಕೆ.ಎಸ್ ಈಶ್ವರಪ್ಪರವನ್ನು ಪ್ರಧಾನ ಉಸ್ತುವಾರಿಯಾಗಿಯೂ, ಲಕ್ಷ್ಮಣ್ ಸವದಿಯವರನ್ನು ಸಹ ಉಸ್ತುವಾರಿಯನ್ನಾಗಿಯೂ ಘೋಷಿಸಿದ್ದಾರೆ. ಅವರಿಗೆ ಉಸ್ತುವಾರಿ ವಹಿಸುತ್ತಾರೆಂದರೆ ಟಿಕೆಟ್ ಇಲ್ಲ ಎಂತಲೇ ಅರ್ಥ. ಆದರೆ ಡಿಸಿಎಂ ಪಟ್ಟ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಬಹುದಾದ ಲಕ್ಷ್ಮಣ್‌ ಸವದಿಯನ್ನು ಎದುರು ಹಾಕಿಕೊಳ್ಳುವುದು ಬೇಡ ಎಂಬ ಅಭಿಪ್ರಾಯವೂ ಬಿಜೆಪಿಯಲ್ಲಿದೆ. ಹಾಗಾಗಿ ಸವದಿಯನ್ನೇ ಅಭ್ಯರ್ಥಿಯನ್ನಾಗಿ ಮಾಡಿ ಮಹೇಶ್ ಕುಮಟಳ್ಳಿಗೆ ಬೇರೆ ಯಾವುದಾದರೂ ಆಯಾಕಟ್ಟಿನ ಜಾಗ ನೀಡುವ ಆಲೋಚನೆಯೂ ಇದೆ ಎನ್ನಲಾಗುತ್ತಿದೆ.

ಇನ್ನು ಆರ್‌ ಶಂಕರ್‌ ರಾಣಿಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಪಕ್ಷದಿಂದ ಶಾಸಕರಾಗಿದ್ದರು. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಅವರಿಗೆ ಮಂತ್ರಿ ಸ್ಥಾನವನ್ನು ಕೊಡಲಾಗಿತ್ತು. ಆಗ ಅವರೊಂದು ಎಡವಟ್ಟು ಮಾಡಿದರು. ಅದೇನೆಂದರೆ ಕೆಪಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡುವುದಾಗಿ ಪತ್ರ ಬರೆದುಕೊಟ್ಟರು. ಆನಂತರ ಮನಸ್ಸು ಬದಲಿಸಿದ ಅವರು ಹೆಚ್ಚಿನ ಆಶೆಯಿಂದ ಬಿಜೆಪಿಗೆ ಹಾರಿದರು. ವಿಪ್ ಉಲ್ಲಂಘನೆಯ ಆಧಾರದಲ್ಲಿ ಸ್ಪೀಕರ್‌ ಅವರನ್ನು ಸಹ ಅನರ್ಹಗೊಳಿಸಿದರು.

ಈಗ ಅವರು ಬಿಜೆಪಿಯಿಂದ ಅಲ್ಲಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಆದರೆ ಅದಕ್ಕೆ ಕೆ.ಎಸ್ ಈಶ್ವರಪ್ಪ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಮಗ ಹಾಲಿ ಶಿವಮೊಗ್ಗ ಜಿ.ಪಂ ಸದಸ್ಯನಾಗಿದ್ದು ಅವರನ್ನು ಈ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ರಾಣಿಬೆನ್ನೂರಿನಲ್ಲಿ ಕುರುಬ ಸಮುದಾಯದ ಅತಿ ಹೆಚ್ಚು ಮತಗಳಿವೆ ಹಾಗಾಗಿ ತನ್ನ ಮಗನಿಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಆರ್‌ ಶಂಕರ್‌ ಸ್ಥಿತಿ ಡೋಲಾಯಮಾನವಾಗಿದೆ.

ಒಂದು ವೇಳೆ ಎಲ್ಲಾ ಅನರ್ಹರಿಗೂ ಟಿಕೆಟ್ ಸಿಕ್ಕರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ಅವರನ್ನು ತಟ್ಟುತ್ತದೆ. ಕೆಲವರೂ ಪ್ರತ್ಯಕ್ಷವಾಗಿ ಬಂಡಾಯವೆದ್ದರೆ ಹಲವರು ಪರೋಕ್ಷವಾಗಿ ಒಳೇಟು ನೀಡಲಿದ್ದಾರೆ. ಹಾಗಾಗಿ ಅನರ್ಹರ ಗೆಲುವು ಅಷ್ಟು ಸುಲಭವಲ್ಲ.

ಆದರೆ ಇದರಿಂದ ಬಿಜೆಪಿಗೇನೂ ತೊಂದರೆಯಿಲ್ಲ. ಏಕೆಂದರೆ ಅವರಿಗೆ ಬೆಂಬಲ ನೀಡಲು ಇನ್ನು ಮೂರುವರೆ ವರ್ಷ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿರುತ್ತಾರೆಂದೂ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಘೋಷಿಸಿಯಾಗಿದೆ. ಹಾಗಾಗಿ ಸರ್ಕಾರ ಸುಭದ್ರವಾಗಿರುತ್ತದೆ. ಆದರೆ ಇಲ್ಲಿ ಬಲಿಪಶುಗಳು ಮಾತ್ರ ಅನರ್ಹ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...