Homeಕರ್ನಾಟಕಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

- Advertisement -
- Advertisement -

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದೆಂಬ ತೀರ್ಪು ಬಂದಾಗಿನಿಂದ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿಸೆಂಬರ್‌ 05ರಂದು ನಡೆಯುವ ಉಪಚುನಾವಣೆಗೆ ಟಿಕೆಟ್ ಹಂಚಿಕೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 17 ಅನರ್ಹ ಶಾಸಕರೂ ಸಹ ತುರುಸಿನಿಂದ ಬಿಜೆಪಿ ಸೇರಿ ಟಿಕೆಟ್ ಗಿಟ್ಟಿಸಲು ಕಾತರರಾಗಿದ್ದಾರೆ. ಆದರೆ ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಆರ್‌ ಶಂಕರ್‌ ಚಿಂತಾಕ್ರಾಂತರಾಗಿದ್ದಾರೆ. ಅವರೊಡನೆ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಕೆ.ಎಸ್‌ ಈಶ್ವರಪ್ಪ ಕೂಡ ಸ್ವಲ್ಪ ಡಲ್ ಆಗಿದ್ದಾರೆ.

ಕಾರಣ ನಿಮಗೆಲ್ಲಾ ಗೊತ್ತಿದೆ. ಚುನಾವಣೆಯಲ್ಲಿ ಸೋತರೂ ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ್ ಸವದಿ ಇನ್ನು ಮೂರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕಿದೆ. ಇಲ್ಲದಿದ್ದಲ್ಲಿ ಅವರ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಲಿದೆ. ಅವರು ವಿಧಾನಸಭೆಗೆ ಆಯ್ಕೆಯಾಗಬೇಕಾದರೆ ತಮ್ಮ ಸ್ವಕ್ಷೇತ್ರ ಅಥಣಿಯಿಂದ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಅಲ್ಲಿ ಅವರಿಗೆ ಟಿಕೆಟ್ ಸಿಗುತ್ತೋ ಅಥವಾ ಕಾಂಗ್ರೆಸ್‌ನಿಂದ ಬಿಜೆಪಿಗೆ ಹಾರಿ ಅನರ್ಹನಾಗಿರುವ ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗುತ್ತೋ ಅಂತ ಇಬ್ಬರಲ್ಲಿಯೂ ಚಿಂತೆ ಜೋರಾಗಿದೆ.

ನಿನ್ನೆ ಕ್ಷೇತ್ರಗಳ ಉಸ್ತುವಾರಿ ಘೋಷಿಸುವ ವೇಳೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಅಥಣಿ ಕ್ಷೇತ್ರಕ್ಕೆ ಕೆ.ಎಸ್ ಈಶ್ವರಪ್ಪರವನ್ನು ಪ್ರಧಾನ ಉಸ್ತುವಾರಿಯಾಗಿಯೂ, ಲಕ್ಷ್ಮಣ್ ಸವದಿಯವರನ್ನು ಸಹ ಉಸ್ತುವಾರಿಯನ್ನಾಗಿಯೂ ಘೋಷಿಸಿದ್ದಾರೆ. ಅವರಿಗೆ ಉಸ್ತುವಾರಿ ವಹಿಸುತ್ತಾರೆಂದರೆ ಟಿಕೆಟ್ ಇಲ್ಲ ಎಂತಲೇ ಅರ್ಥ. ಆದರೆ ಡಿಸಿಎಂ ಪಟ್ಟ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಬಹುದಾದ ಲಕ್ಷ್ಮಣ್‌ ಸವದಿಯನ್ನು ಎದುರು ಹಾಕಿಕೊಳ್ಳುವುದು ಬೇಡ ಎಂಬ ಅಭಿಪ್ರಾಯವೂ ಬಿಜೆಪಿಯಲ್ಲಿದೆ. ಹಾಗಾಗಿ ಸವದಿಯನ್ನೇ ಅಭ್ಯರ್ಥಿಯನ್ನಾಗಿ ಮಾಡಿ ಮಹೇಶ್ ಕುಮಟಳ್ಳಿಗೆ ಬೇರೆ ಯಾವುದಾದರೂ ಆಯಾಕಟ್ಟಿನ ಜಾಗ ನೀಡುವ ಆಲೋಚನೆಯೂ ಇದೆ ಎನ್ನಲಾಗುತ್ತಿದೆ.

ಇನ್ನು ಆರ್‌ ಶಂಕರ್‌ ರಾಣಿಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಪಕ್ಷದಿಂದ ಶಾಸಕರಾಗಿದ್ದರು. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಅವರಿಗೆ ಮಂತ್ರಿ ಸ್ಥಾನವನ್ನು ಕೊಡಲಾಗಿತ್ತು. ಆಗ ಅವರೊಂದು ಎಡವಟ್ಟು ಮಾಡಿದರು. ಅದೇನೆಂದರೆ ಕೆಪಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡುವುದಾಗಿ ಪತ್ರ ಬರೆದುಕೊಟ್ಟರು. ಆನಂತರ ಮನಸ್ಸು ಬದಲಿಸಿದ ಅವರು ಹೆಚ್ಚಿನ ಆಶೆಯಿಂದ ಬಿಜೆಪಿಗೆ ಹಾರಿದರು. ವಿಪ್ ಉಲ್ಲಂಘನೆಯ ಆಧಾರದಲ್ಲಿ ಸ್ಪೀಕರ್‌ ಅವರನ್ನು ಸಹ ಅನರ್ಹಗೊಳಿಸಿದರು.

ಈಗ ಅವರು ಬಿಜೆಪಿಯಿಂದ ಅಲ್ಲಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಆದರೆ ಅದಕ್ಕೆ ಕೆ.ಎಸ್ ಈಶ್ವರಪ್ಪ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಮಗ ಹಾಲಿ ಶಿವಮೊಗ್ಗ ಜಿ.ಪಂ ಸದಸ್ಯನಾಗಿದ್ದು ಅವರನ್ನು ಈ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ರಾಣಿಬೆನ್ನೂರಿನಲ್ಲಿ ಕುರುಬ ಸಮುದಾಯದ ಅತಿ ಹೆಚ್ಚು ಮತಗಳಿವೆ ಹಾಗಾಗಿ ತನ್ನ ಮಗನಿಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಆರ್‌ ಶಂಕರ್‌ ಸ್ಥಿತಿ ಡೋಲಾಯಮಾನವಾಗಿದೆ.

ಒಂದು ವೇಳೆ ಎಲ್ಲಾ ಅನರ್ಹರಿಗೂ ಟಿಕೆಟ್ ಸಿಕ್ಕರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ಅವರನ್ನು ತಟ್ಟುತ್ತದೆ. ಕೆಲವರೂ ಪ್ರತ್ಯಕ್ಷವಾಗಿ ಬಂಡಾಯವೆದ್ದರೆ ಹಲವರು ಪರೋಕ್ಷವಾಗಿ ಒಳೇಟು ನೀಡಲಿದ್ದಾರೆ. ಹಾಗಾಗಿ ಅನರ್ಹರ ಗೆಲುವು ಅಷ್ಟು ಸುಲಭವಲ್ಲ.

ಆದರೆ ಇದರಿಂದ ಬಿಜೆಪಿಗೇನೂ ತೊಂದರೆಯಿಲ್ಲ. ಏಕೆಂದರೆ ಅವರಿಗೆ ಬೆಂಬಲ ನೀಡಲು ಇನ್ನು ಮೂರುವರೆ ವರ್ಷ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿರುತ್ತಾರೆಂದೂ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಘೋಷಿಸಿಯಾಗಿದೆ. ಹಾಗಾಗಿ ಸರ್ಕಾರ ಸುಭದ್ರವಾಗಿರುತ್ತದೆ. ಆದರೆ ಇಲ್ಲಿ ಬಲಿಪಶುಗಳು ಮಾತ್ರ ಅನರ್ಹ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...