Homeಕರ್ನಾಟಕಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

- Advertisement -
- Advertisement -

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದೆಂಬ ತೀರ್ಪು ಬಂದಾಗಿನಿಂದ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿಸೆಂಬರ್‌ 05ರಂದು ನಡೆಯುವ ಉಪಚುನಾವಣೆಗೆ ಟಿಕೆಟ್ ಹಂಚಿಕೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 17 ಅನರ್ಹ ಶಾಸಕರೂ ಸಹ ತುರುಸಿನಿಂದ ಬಿಜೆಪಿ ಸೇರಿ ಟಿಕೆಟ್ ಗಿಟ್ಟಿಸಲು ಕಾತರರಾಗಿದ್ದಾರೆ. ಆದರೆ ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಆರ್‌ ಶಂಕರ್‌ ಚಿಂತಾಕ್ರಾಂತರಾಗಿದ್ದಾರೆ. ಅವರೊಡನೆ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಕೆ.ಎಸ್‌ ಈಶ್ವರಪ್ಪ ಕೂಡ ಸ್ವಲ್ಪ ಡಲ್ ಆಗಿದ್ದಾರೆ.

ಕಾರಣ ನಿಮಗೆಲ್ಲಾ ಗೊತ್ತಿದೆ. ಚುನಾವಣೆಯಲ್ಲಿ ಸೋತರೂ ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ್ ಸವದಿ ಇನ್ನು ಮೂರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕಿದೆ. ಇಲ್ಲದಿದ್ದಲ್ಲಿ ಅವರ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಲಿದೆ. ಅವರು ವಿಧಾನಸಭೆಗೆ ಆಯ್ಕೆಯಾಗಬೇಕಾದರೆ ತಮ್ಮ ಸ್ವಕ್ಷೇತ್ರ ಅಥಣಿಯಿಂದ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಅಲ್ಲಿ ಅವರಿಗೆ ಟಿಕೆಟ್ ಸಿಗುತ್ತೋ ಅಥವಾ ಕಾಂಗ್ರೆಸ್‌ನಿಂದ ಬಿಜೆಪಿಗೆ ಹಾರಿ ಅನರ್ಹನಾಗಿರುವ ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗುತ್ತೋ ಅಂತ ಇಬ್ಬರಲ್ಲಿಯೂ ಚಿಂತೆ ಜೋರಾಗಿದೆ.

ನಿನ್ನೆ ಕ್ಷೇತ್ರಗಳ ಉಸ್ತುವಾರಿ ಘೋಷಿಸುವ ವೇಳೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಅಥಣಿ ಕ್ಷೇತ್ರಕ್ಕೆ ಕೆ.ಎಸ್ ಈಶ್ವರಪ್ಪರವನ್ನು ಪ್ರಧಾನ ಉಸ್ತುವಾರಿಯಾಗಿಯೂ, ಲಕ್ಷ್ಮಣ್ ಸವದಿಯವರನ್ನು ಸಹ ಉಸ್ತುವಾರಿಯನ್ನಾಗಿಯೂ ಘೋಷಿಸಿದ್ದಾರೆ. ಅವರಿಗೆ ಉಸ್ತುವಾರಿ ವಹಿಸುತ್ತಾರೆಂದರೆ ಟಿಕೆಟ್ ಇಲ್ಲ ಎಂತಲೇ ಅರ್ಥ. ಆದರೆ ಡಿಸಿಎಂ ಪಟ್ಟ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಬಹುದಾದ ಲಕ್ಷ್ಮಣ್‌ ಸವದಿಯನ್ನು ಎದುರು ಹಾಕಿಕೊಳ್ಳುವುದು ಬೇಡ ಎಂಬ ಅಭಿಪ್ರಾಯವೂ ಬಿಜೆಪಿಯಲ್ಲಿದೆ. ಹಾಗಾಗಿ ಸವದಿಯನ್ನೇ ಅಭ್ಯರ್ಥಿಯನ್ನಾಗಿ ಮಾಡಿ ಮಹೇಶ್ ಕುಮಟಳ್ಳಿಗೆ ಬೇರೆ ಯಾವುದಾದರೂ ಆಯಾಕಟ್ಟಿನ ಜಾಗ ನೀಡುವ ಆಲೋಚನೆಯೂ ಇದೆ ಎನ್ನಲಾಗುತ್ತಿದೆ.

ಇನ್ನು ಆರ್‌ ಶಂಕರ್‌ ರಾಣಿಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಪಕ್ಷದಿಂದ ಶಾಸಕರಾಗಿದ್ದರು. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಅವರಿಗೆ ಮಂತ್ರಿ ಸ್ಥಾನವನ್ನು ಕೊಡಲಾಗಿತ್ತು. ಆಗ ಅವರೊಂದು ಎಡವಟ್ಟು ಮಾಡಿದರು. ಅದೇನೆಂದರೆ ಕೆಪಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡುವುದಾಗಿ ಪತ್ರ ಬರೆದುಕೊಟ್ಟರು. ಆನಂತರ ಮನಸ್ಸು ಬದಲಿಸಿದ ಅವರು ಹೆಚ್ಚಿನ ಆಶೆಯಿಂದ ಬಿಜೆಪಿಗೆ ಹಾರಿದರು. ವಿಪ್ ಉಲ್ಲಂಘನೆಯ ಆಧಾರದಲ್ಲಿ ಸ್ಪೀಕರ್‌ ಅವರನ್ನು ಸಹ ಅನರ್ಹಗೊಳಿಸಿದರು.

ಈಗ ಅವರು ಬಿಜೆಪಿಯಿಂದ ಅಲ್ಲಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಆದರೆ ಅದಕ್ಕೆ ಕೆ.ಎಸ್ ಈಶ್ವರಪ್ಪ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಮಗ ಹಾಲಿ ಶಿವಮೊಗ್ಗ ಜಿ.ಪಂ ಸದಸ್ಯನಾಗಿದ್ದು ಅವರನ್ನು ಈ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ರಾಣಿಬೆನ್ನೂರಿನಲ್ಲಿ ಕುರುಬ ಸಮುದಾಯದ ಅತಿ ಹೆಚ್ಚು ಮತಗಳಿವೆ ಹಾಗಾಗಿ ತನ್ನ ಮಗನಿಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಆರ್‌ ಶಂಕರ್‌ ಸ್ಥಿತಿ ಡೋಲಾಯಮಾನವಾಗಿದೆ.

ಒಂದು ವೇಳೆ ಎಲ್ಲಾ ಅನರ್ಹರಿಗೂ ಟಿಕೆಟ್ ಸಿಕ್ಕರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ಅವರನ್ನು ತಟ್ಟುತ್ತದೆ. ಕೆಲವರೂ ಪ್ರತ್ಯಕ್ಷವಾಗಿ ಬಂಡಾಯವೆದ್ದರೆ ಹಲವರು ಪರೋಕ್ಷವಾಗಿ ಒಳೇಟು ನೀಡಲಿದ್ದಾರೆ. ಹಾಗಾಗಿ ಅನರ್ಹರ ಗೆಲುವು ಅಷ್ಟು ಸುಲಭವಲ್ಲ.

ಆದರೆ ಇದರಿಂದ ಬಿಜೆಪಿಗೇನೂ ತೊಂದರೆಯಿಲ್ಲ. ಏಕೆಂದರೆ ಅವರಿಗೆ ಬೆಂಬಲ ನೀಡಲು ಇನ್ನು ಮೂರುವರೆ ವರ್ಷ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿರುತ್ತಾರೆಂದೂ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಘೋಷಿಸಿಯಾಗಿದೆ. ಹಾಗಾಗಿ ಸರ್ಕಾರ ಸುಭದ್ರವಾಗಿರುತ್ತದೆ. ಆದರೆ ಇಲ್ಲಿ ಬಲಿಪಶುಗಳು ಮಾತ್ರ ಅನರ್ಹ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...