Homeಕರ್ನಾಟಕಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

ಅಥಣಿಯಲ್ಲಿ ಲಕ್ಷ್ಮಣ್ ಸವದಿ ಅಥವಾ ಮಹೇಶ್ ಕುಮಟಳ್ಳಿ? ರಾಣಿಬೆನ್ನೂರಿನಲ್ಲಿ ಈಶ್ವರಪ್ಪನ ಪುತ್ರನೋ ಅಥವಾ ಆರ್ ಶಂಕರ್‌?

- Advertisement -
- Advertisement -

ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಬಹುದೆಂಬ ತೀರ್ಪು ಬಂದಾಗಿನಿಂದ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಡಿಸೆಂಬರ್‌ 05ರಂದು ನಡೆಯುವ ಉಪಚುನಾವಣೆಗೆ ಟಿಕೆಟ್ ಹಂಚಿಕೆಯ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. 17 ಅನರ್ಹ ಶಾಸಕರೂ ಸಹ ತುರುಸಿನಿಂದ ಬಿಜೆಪಿ ಸೇರಿ ಟಿಕೆಟ್ ಗಿಟ್ಟಿಸಲು ಕಾತರರಾಗಿದ್ದಾರೆ. ಆದರೆ ಅನರ್ಹ ಶಾಸಕರಾದ ಮಹೇಶ್ ಕುಮಟಳ್ಳಿ ಮತ್ತು ಆರ್‌ ಶಂಕರ್‌ ಚಿಂತಾಕ್ರಾಂತರಾಗಿದ್ದಾರೆ. ಅವರೊಡನೆ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಕೆ.ಎಸ್‌ ಈಶ್ವರಪ್ಪ ಕೂಡ ಸ್ವಲ್ಪ ಡಲ್ ಆಗಿದ್ದಾರೆ.

ಕಾರಣ ನಿಮಗೆಲ್ಲಾ ಗೊತ್ತಿದೆ. ಚುನಾವಣೆಯಲ್ಲಿ ಸೋತರೂ ಉಪಮುಖ್ಯಮಂತ್ರಿಯಾಗಿರುವ ಲಕ್ಷ್ಮಣ್ ಸವದಿ ಇನ್ನು ಮೂರು ತಿಂಗಳಲ್ಲಿ ಶಾಸಕರಾಗಿ ಆಯ್ಕೆಯಾಗಬೇಕಿದೆ. ಇಲ್ಲದಿದ್ದಲ್ಲಿ ಅವರ ಉಪಮುಖ್ಯಮಂತ್ರಿ ಹುದ್ದೆ ಕೈತಪ್ಪಲಿದೆ. ಅವರು ವಿಧಾನಸಭೆಗೆ ಆಯ್ಕೆಯಾಗಬೇಕಾದರೆ ತಮ್ಮ ಸ್ವಕ್ಷೇತ್ರ ಅಥಣಿಯಿಂದ ಈ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ ಅಲ್ಲಿ ಅವರಿಗೆ ಟಿಕೆಟ್ ಸಿಗುತ್ತೋ ಅಥವಾ ಕಾಂಗ್ರೆಸ್‌ನಿಂದ ಬಿಜೆಪಿಗೆ ಹಾರಿ ಅನರ್ಹನಾಗಿರುವ ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗುತ್ತೋ ಅಂತ ಇಬ್ಬರಲ್ಲಿಯೂ ಚಿಂತೆ ಜೋರಾಗಿದೆ.

ನಿನ್ನೆ ಕ್ಷೇತ್ರಗಳ ಉಸ್ತುವಾರಿ ಘೋಷಿಸುವ ವೇಳೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಅಥಣಿ ಕ್ಷೇತ್ರಕ್ಕೆ ಕೆ.ಎಸ್ ಈಶ್ವರಪ್ಪರವನ್ನು ಪ್ರಧಾನ ಉಸ್ತುವಾರಿಯಾಗಿಯೂ, ಲಕ್ಷ್ಮಣ್ ಸವದಿಯವರನ್ನು ಸಹ ಉಸ್ತುವಾರಿಯನ್ನಾಗಿಯೂ ಘೋಷಿಸಿದ್ದಾರೆ. ಅವರಿಗೆ ಉಸ್ತುವಾರಿ ವಹಿಸುತ್ತಾರೆಂದರೆ ಟಿಕೆಟ್ ಇಲ್ಲ ಎಂತಲೇ ಅರ್ಥ. ಆದರೆ ಡಿಸಿಎಂ ಪಟ್ಟ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಬಹುದಾದ ಲಕ್ಷ್ಮಣ್‌ ಸವದಿಯನ್ನು ಎದುರು ಹಾಕಿಕೊಳ್ಳುವುದು ಬೇಡ ಎಂಬ ಅಭಿಪ್ರಾಯವೂ ಬಿಜೆಪಿಯಲ್ಲಿದೆ. ಹಾಗಾಗಿ ಸವದಿಯನ್ನೇ ಅಭ್ಯರ್ಥಿಯನ್ನಾಗಿ ಮಾಡಿ ಮಹೇಶ್ ಕುಮಟಳ್ಳಿಗೆ ಬೇರೆ ಯಾವುದಾದರೂ ಆಯಾಕಟ್ಟಿನ ಜಾಗ ನೀಡುವ ಆಲೋಚನೆಯೂ ಇದೆ ಎನ್ನಲಾಗುತ್ತಿದೆ.

ಇನ್ನು ಆರ್‌ ಶಂಕರ್‌ ರಾಣಿಬೆನ್ನೂರು ಕ್ಷೇತ್ರದಿಂದ ಕೆಪಿಜೆಪಿ ಪಕ್ಷದಿಂದ ಶಾಸಕರಾಗಿದ್ದರು. ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಅವರಿಗೆ ಮಂತ್ರಿ ಸ್ಥಾನವನ್ನು ಕೊಡಲಾಗಿತ್ತು. ಆಗ ಅವರೊಂದು ಎಡವಟ್ಟು ಮಾಡಿದರು. ಅದೇನೆಂದರೆ ಕೆಪಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ವಿಲೀನ ಮಾಡುವುದಾಗಿ ಪತ್ರ ಬರೆದುಕೊಟ್ಟರು. ಆನಂತರ ಮನಸ್ಸು ಬದಲಿಸಿದ ಅವರು ಹೆಚ್ಚಿನ ಆಶೆಯಿಂದ ಬಿಜೆಪಿಗೆ ಹಾರಿದರು. ವಿಪ್ ಉಲ್ಲಂಘನೆಯ ಆಧಾರದಲ್ಲಿ ಸ್ಪೀಕರ್‌ ಅವರನ್ನು ಸಹ ಅನರ್ಹಗೊಳಿಸಿದರು.

ಈಗ ಅವರು ಬಿಜೆಪಿಯಿಂದ ಅಲ್ಲಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಆದರೆ ಅದಕ್ಕೆ ಕೆ.ಎಸ್ ಈಶ್ವರಪ್ಪ ಅಡ್ಡಗಾಲು ಹಾಕುತ್ತಿದ್ದಾರೆ. ಅವರ ಮಗ ಹಾಲಿ ಶಿವಮೊಗ್ಗ ಜಿ.ಪಂ ಸದಸ್ಯನಾಗಿದ್ದು ಅವರನ್ನು ಈ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿಸಲು ತಯಾರಿ ನಡೆಸಿದ್ದಾರೆ. ರಾಣಿಬೆನ್ನೂರಿನಲ್ಲಿ ಕುರುಬ ಸಮುದಾಯದ ಅತಿ ಹೆಚ್ಚು ಮತಗಳಿವೆ ಹಾಗಾಗಿ ತನ್ನ ಮಗನಿಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹಾಗಾಗಿ ಆರ್‌ ಶಂಕರ್‌ ಸ್ಥಿತಿ ಡೋಲಾಯಮಾನವಾಗಿದೆ.

ಒಂದು ವೇಳೆ ಎಲ್ಲಾ ಅನರ್ಹರಿಗೂ ಟಿಕೆಟ್ ಸಿಕ್ಕರೂ ಕೂಡ ಎಲ್ಲಾ ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ಅವರನ್ನು ತಟ್ಟುತ್ತದೆ. ಕೆಲವರೂ ಪ್ರತ್ಯಕ್ಷವಾಗಿ ಬಂಡಾಯವೆದ್ದರೆ ಹಲವರು ಪರೋಕ್ಷವಾಗಿ ಒಳೇಟು ನೀಡಲಿದ್ದಾರೆ. ಹಾಗಾಗಿ ಅನರ್ಹರ ಗೆಲುವು ಅಷ್ಟು ಸುಲಭವಲ್ಲ.

ಆದರೆ ಇದರಿಂದ ಬಿಜೆಪಿಗೇನೂ ತೊಂದರೆಯಿಲ್ಲ. ಏಕೆಂದರೆ ಅವರಿಗೆ ಬೆಂಬಲ ನೀಡಲು ಇನ್ನು ಮೂರುವರೆ ವರ್ಷ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿರುತ್ತಾರೆಂದೂ ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಘೋಷಿಸಿಯಾಗಿದೆ. ಹಾಗಾಗಿ ಸರ್ಕಾರ ಸುಭದ್ರವಾಗಿರುತ್ತದೆ. ಆದರೆ ಇಲ್ಲಿ ಬಲಿಪಶುಗಳು ಮಾತ್ರ ಅನರ್ಹ ಶಾಸಕರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...