Homeಮುಖಪುಟಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

ಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

- Advertisement -
- Advertisement -

ದೇಶದಲ್ಲಿ ನಿರೋದ್ಯೋಗದ ಸಮಸ್ಯೆ ಉತ್ತುಂಗಕ್ಕೆ ಏರಿರುವ ನಡುವೆ, ಸಾವಿರಾರು ಉದ್ಯೋಗಿಗಳು ಪ್ರಸ್ತುತ ಇರುವ ಕೆಲಸವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಹಠಾತ್ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರೆದಿದ್ದು, ಯುವ ಉದ್ಯೋಗಿಗಳಿಗೆ ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಡಿಜಿಟಲ್ ಪಾವತಿ ಆ್ಯಪ್‌ ಪೇಟಿಎಂ(Paytm) ತನ್ನ 1,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಕಂಪನಿಯ ಮಾರಾಟ ಮತ್ತು ಇಂಜಿನಿಯರಿಂಗ್ ವಿಭಾಗದ ಉದ್ಯೋಗಿಗಳನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಕೃತಕ ಬುದ್ದಿಮತ್ತೆ(Artificial Intelligence-AI)ಗೆ ಬದಲಾಗುತ್ತಿದ್ದೇವೆ. ಇದರ ಪರಿಣಾಮ ನಮ್ಮ ಇಂಜಿನಿಯರಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ. ಸಂಸ್ಥೆಯ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು ವಜಾಗೊಳಿಸುವಿಕೆಯ ಪ್ರಮುಖ ಉದ್ದೇಶ. ಇದಕ್ಕಾಗಿ ನಾವು ಎಐ ತಂತ್ರಜ್ಞಾನ ಅಳವಡಿಸಿಕೊಂಡಿದ್ದೇವೆ. ಎಐ ತಂತ್ರಜ್ಞಾನದಿಂದ ಶೇ.10ರಿಂದ 15ರಷ್ಟು ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಕೆಲಸವೂ ಅತೀ ವೇಗದಲ್ಲಿ ಆಗಲಿದೆ” ಎಂದು ಪೇಟಿಎಂ ವಕ್ತಾರ ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಒನ್ 97 ಕಮ್ಯೂನಿಕೇಶನ್ ಮಾಲಕತ್ವದ ಪೇಟಿಎಂ ಸಂಸ್ಥೆ, 2021ರಲ್ಲಿ 500ರಿಂದ 700 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸಿದ ಮತ್ತೊಂದು ಕಾರ್ಪೋರೇಟ್ ಸಂಸ್ಥೆ ಶೇರ್ ಚಾಟ್. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಸಂಸ್ಥೆಯ ಮಾಲಕತ್ವದ ಸಾಮಾಜಿಕ ಜಾಲತಾಣ ಆ್ಯಪ್‌ ಶೇರ್ ಚಾಟ್ ಸುಮಾರು 200 ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಸ್ಟಾರ್ಟ್‌ ಅಪ್‌ ಅಗಿರುವ ಶೇರ್‌ ಚಾಟ್, ಕಂಪನಿಯ ಕಾರ್ಯತಂತ್ರದ ಪುನರ್‌ರಚನೆ ಮತ್ತು ವೆಚ್ಚ ಕಡಿತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕಳೆದ ಬುಧವಾರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಂಪನಿ ಈ ವರ್ಷ ನಷ್ಟ ಅನುಭವಿಸಿರುವುದೂ ಉದ್ಯೋಗಿಗಳ ವಜಾಕ್ಕೆ ಮತ್ತೊಂದು ಕಾರಣ. 2023ರಲ್ಲಿ ಕಂಪನಿ ಸುಮಾರು 28,300 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರ್ಷ ವಿವಿಧ ಕಾರಣಗಳಿಗೆ ಒಟ್ಟು 800 ಉದ್ಯೋಗಿಗಳನ್ನು ಶೇರ್‌ ಚಾಟ್ ಕೈ ಬಿಟ್ಟಿದೆ. ಎಐ ತಂತ್ರಜ್ಞಾನ ಅಳವಡಿಕೆಯೂ ಉದ್ಯೋಗಿಗಳ ವಜಾಕ್ಕೆ ಮಗದೊಂದು ಕಾರಣ ಎನ್ನಲಾಗಿದೆ.

ಈ ಕುರಿತು ನಾನೂ ಗೌರಿ ಜೊತೆ ಮಾತನಾಡಿರುವ ಕಂಪನಿಯ ಉದ್ಯೋಗಿಯೊಬ್ಬರು, “ವಜಾಗೊಳಿಸುವ ಮುನ್ನ ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡಿಲ್ಲ. ಏಕಾಏಕಿ ವಜಾ ಪ್ರಕ್ರಿಯೆ ನಡೆದಿದೆ. ವಜಾಗೊಂಡವರು ಕಚೇರಿಗೆ ಬಂದು ಇಡೀ ದಿನ ಮಾಡುವ ಕೆಲಸಗಳೇನು ಇರಲಿಲ್ಲ. ಉದ್ಯೋಗಿಗಳ ಸಂಖ್ಯೆ ಅಗತ್ಯಕ್ಕಿಂತ ಹೆಚ್ಚಿತ್ತು. ಇದು ಕೂಡ ವಜಾಕ್ಕೆ ಕಾರಣ. ನನಗೆ ತಿಳಿದಿರುವ ಪ್ರಕಾರ, ವಜಾಗೊಂಡವರಿಗೆ ಕಂಪನಿ ಮುಂದಿನ ಮೂರು ತಿಂಗಳ ವೇತನ ಪಾವತಿಸಿದೆ. ಆದರೆ, ಏಕಾಏಕಿ ಕೆಲಸ ಕಳೆದುಕೊಂಡವರು ಅತಂತ್ರರಾಗಿದ್ದಾರೆ” ಎಂದು ಹೇಳಿದ್ದಾರೆ.

ಅತಂತ್ರರಾದ ಉದ್ಯೋಗಿಗಳು : ಕೋವಿಡ್ ಸಾಂಕ್ರಾಮಿಕದ ಬಳಿಕ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ವಜಾಗೊಳಿಸುವಿಕೆ ನಡೆಸುತ್ತಿವೆ. ಟೆಕ್ ದೈತ್ಯಗಳಾದ ಗೂಗಲ್, ಮೈಕ್ರೋಸಾಫ್ಟ್, ಇನ್ಪೋಸಿಸ್, ವಿಪ್ರೋಗಳು ಕೂಡ ಇದಕ್ಕೆ ಹೊರತಾಗಿಲ್ಲ. ವಜಾಗೊಳಿಸುವಿಕೆಗೆ ಕಂಪನಿಗಳು ನೀಡುತ್ತಿರುವ ಕಾರಣ ವೆಚ್ಚ ಕಡಿತ ಮತ್ತು ಎಐ ತಂತ್ರಜ್ಞಾನದ ಅನುಷ್ಠಾನ. ಏನೇ ಆದರೂ, ಕಂಪನಿಗಳ ದಿಢೀರ್ ನಿರ್ಧಾರದಿಂದ ಕೆಲಸ ಕಳೆದುಕೊಂಡ ಉದ್ಯೋಗಿಗಳು ಮಾತ್ರ ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ತಮ್ಮ ಸಂಬಳಕ್ಕೆ ತಕ್ಕಂತೆ ನಗರಕ್ಕೆ ಬಂದು ಜೀವನ ರೂಪಿಸಿಕೊಂಡಿರುವ ಉದ್ಯೋಗಿಗಳು, ಹಠಾತ್ ಕೆಲಸ ಕಳೆದುಕೊಂಡಾಗ ಹೊಸ ಕೆಲಸ ಹುಡುಕುವ ಅನಿವಾರ್ಯತೆ ಎದುರಾಗುತ್ತದೆ. ಹೊಸ ಕೆಲಸ ಸಿಗುವವರೆಗೆ ಕೈಯಲ್ಲಿ ಕೆಲಸ, ಸಂಬಳ ಇಲ್ಲದೆ ಬೆಂಗಳೂರಿನಂತಹ ನಗರಗಳಲ್ಲಿ ಬದುಕುದು ಅಸಾಧ್ಯ. ಹೊಸ ಕೆಲಸ ಹುಡುಕೋಣ ಎಂದರೆ ತ್ವರಿತವಾಗಿ ಎಲ್ಲೂ ಕೆಲಸ ಸಿದ್ದ ಇರುವುದಿಲ್ಲ. ತಮ್ಮ ಶಿಕ್ಷಣ, ಅನುಭವಕ್ಕೆ ತಕ್ಕಂತೆ ಕೆಲಸದ ಅವಕಾಶಗಳನ್ನು ಹುಡುಕಬೇಕು. ಎಲ್ಲಾದರು ಅವಕಾಶ ಇದ್ದರೆ ಲಿಖಿತ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗಬೇಕು. ಅದರಲ್ಲಿ ಯಶಸ್ವಿಯಾದರೆ ಮುಂದೆ ಸಂಬಳ ಹೊಂದಾಣಿಕೆಯಾಗಬೇಕು. ಉದ್ಯೋಗಿ ವಜಾಗೊಂಡವರು ಎಂದು ಗೊತ್ತಾದರೆ ಸಂಸ್ಥೆಗಳು ನೋಡುವ ರೀತಿಯೇ ಬೇರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಕೊನೆಗೆ ಕೆಲಸ ಗಿಟ್ಟಿಸಿಕೊಳ್ಳುವ ಹೊತ್ತಿಗೆ ಬಡ, ಮಧ್ಯಮ ವರ್ಗದ ಯುವ ಜನತೆಯ ಜೀವನ ಬೀದಿಗೆ ಬಂದಿರುತ್ತದೆ. ಒಂದು ವಜಾಗೊಳಿಸುವಿಕೆ ದೊಡ್ಡ ಸಂಕಷ್ಟಕ್ಕೆ ತಳ್ಳಿ ಬಿಡುತ್ತದೆ.

ಇದನ್ನೂ ಓದಿ : WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...