Homeಮುಖಪುಟಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

ಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

- Advertisement -
- Advertisement -

ದೇಶದಲ್ಲಿ ನಿರೋದ್ಯೋಗದ ಸಮಸ್ಯೆ ಉತ್ತುಂಗಕ್ಕೆ ಏರಿರುವ ನಡುವೆ, ಸಾವಿರಾರು ಉದ್ಯೋಗಿಗಳು ಪ್ರಸ್ತುತ ಇರುವ ಕೆಲಸವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಹಠಾತ್ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರೆದಿದ್ದು, ಯುವ ಉದ್ಯೋಗಿಗಳಿಗೆ ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಡಿಜಿಟಲ್ ಪಾವತಿ ಆ್ಯಪ್‌ ಪೇಟಿಎಂ(Paytm) ತನ್ನ 1,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಕಂಪನಿಯ ಮಾರಾಟ ಮತ್ತು ಇಂಜಿನಿಯರಿಂಗ್ ವಿಭಾಗದ ಉದ್ಯೋಗಿಗಳನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಕೃತಕ ಬುದ್ದಿಮತ್ತೆ(Artificial Intelligence-AI)ಗೆ ಬದಲಾಗುತ್ತಿದ್ದೇವೆ. ಇದರ ಪರಿಣಾಮ ನಮ್ಮ ಇಂಜಿನಿಯರಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ. ಸಂಸ್ಥೆಯ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು ವಜಾಗೊಳಿಸುವಿಕೆಯ ಪ್ರಮುಖ ಉದ್ದೇಶ. ಇದಕ್ಕಾಗಿ ನಾವು ಎಐ ತಂತ್ರಜ್ಞಾನ ಅಳವಡಿಸಿಕೊಂಡಿದ್ದೇವೆ. ಎಐ ತಂತ್ರಜ್ಞಾನದಿಂದ ಶೇ.10ರಿಂದ 15ರಷ್ಟು ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಕೆಲಸವೂ ಅತೀ ವೇಗದಲ್ಲಿ ಆಗಲಿದೆ” ಎಂದು ಪೇಟಿಎಂ ವಕ್ತಾರ ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಒನ್ 97 ಕಮ್ಯೂನಿಕೇಶನ್ ಮಾಲಕತ್ವದ ಪೇಟಿಎಂ ಸಂಸ್ಥೆ, 2021ರಲ್ಲಿ 500ರಿಂದ 700 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸಿದ ಮತ್ತೊಂದು ಕಾರ್ಪೋರೇಟ್ ಸಂಸ್ಥೆ ಶೇರ್ ಚಾಟ್. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಸಂಸ್ಥೆಯ ಮಾಲಕತ್ವದ ಸಾಮಾಜಿಕ ಜಾಲತಾಣ ಆ್ಯಪ್‌ ಶೇರ್ ಚಾಟ್ ಸುಮಾರು 200 ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಸ್ಟಾರ್ಟ್‌ ಅಪ್‌ ಅಗಿರುವ ಶೇರ್‌ ಚಾಟ್, ಕಂಪನಿಯ ಕಾರ್ಯತಂತ್ರದ ಪುನರ್‌ರಚನೆ ಮತ್ತು ವೆಚ್ಚ ಕಡಿತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕಳೆದ ಬುಧವಾರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಂಪನಿ ಈ ವರ್ಷ ನಷ್ಟ ಅನುಭವಿಸಿರುವುದೂ ಉದ್ಯೋಗಿಗಳ ವಜಾಕ್ಕೆ ಮತ್ತೊಂದು ಕಾರಣ. 2023ರಲ್ಲಿ ಕಂಪನಿ ಸುಮಾರು 28,300 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರ್ಷ ವಿವಿಧ ಕಾರಣಗಳಿಗೆ ಒಟ್ಟು 800 ಉದ್ಯೋಗಿಗಳನ್ನು ಶೇರ್‌ ಚಾಟ್ ಕೈ ಬಿಟ್ಟಿದೆ. ಎಐ ತಂತ್ರಜ್ಞಾನ ಅಳವಡಿಕೆಯೂ ಉದ್ಯೋಗಿಗಳ ವಜಾಕ್ಕೆ ಮಗದೊಂದು ಕಾರಣ ಎನ್ನಲಾಗಿದೆ.

ಈ ಕುರಿತು ನಾನೂ ಗೌರಿ ಜೊತೆ ಮಾತನಾಡಿರುವ ಕಂಪನಿಯ ಉದ್ಯೋಗಿಯೊಬ್ಬರು, “ವಜಾಗೊಳಿಸುವ ಮುನ್ನ ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡಿಲ್ಲ. ಏಕಾಏಕಿ ವಜಾ ಪ್ರಕ್ರಿಯೆ ನಡೆದಿದೆ. ವಜಾಗೊಂಡವರು ಕಚೇರಿಗೆ ಬಂದು ಇಡೀ ದಿನ ಮಾಡುವ ಕೆಲಸಗಳೇನು ಇರಲಿಲ್ಲ. ಉದ್ಯೋಗಿಗಳ ಸಂಖ್ಯೆ ಅಗತ್ಯಕ್ಕಿಂತ ಹೆಚ್ಚಿತ್ತು. ಇದು ಕೂಡ ವಜಾಕ್ಕೆ ಕಾರಣ. ನನಗೆ ತಿಳಿದಿರುವ ಪ್ರಕಾರ, ವಜಾಗೊಂಡವರಿಗೆ ಕಂಪನಿ ಮುಂದಿನ ಮೂರು ತಿಂಗಳ ವೇತನ ಪಾವತಿಸಿದೆ. ಆದರೆ, ಏಕಾಏಕಿ ಕೆಲಸ ಕಳೆದುಕೊಂಡವರು ಅತಂತ್ರರಾಗಿದ್ದಾರೆ” ಎಂದು ಹೇಳಿದ್ದಾರೆ.

ಅತಂತ್ರರಾದ ಉದ್ಯೋಗಿಗಳು : ಕೋವಿಡ್ ಸಾಂಕ್ರಾಮಿಕದ ಬಳಿಕ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ವಜಾಗೊಳಿಸುವಿಕೆ ನಡೆಸುತ್ತಿವೆ. ಟೆಕ್ ದೈತ್ಯಗಳಾದ ಗೂಗಲ್, ಮೈಕ್ರೋಸಾಫ್ಟ್, ಇನ್ಪೋಸಿಸ್, ವಿಪ್ರೋಗಳು ಕೂಡ ಇದಕ್ಕೆ ಹೊರತಾಗಿಲ್ಲ. ವಜಾಗೊಳಿಸುವಿಕೆಗೆ ಕಂಪನಿಗಳು ನೀಡುತ್ತಿರುವ ಕಾರಣ ವೆಚ್ಚ ಕಡಿತ ಮತ್ತು ಎಐ ತಂತ್ರಜ್ಞಾನದ ಅನುಷ್ಠಾನ. ಏನೇ ಆದರೂ, ಕಂಪನಿಗಳ ದಿಢೀರ್ ನಿರ್ಧಾರದಿಂದ ಕೆಲಸ ಕಳೆದುಕೊಂಡ ಉದ್ಯೋಗಿಗಳು ಮಾತ್ರ ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ತಮ್ಮ ಸಂಬಳಕ್ಕೆ ತಕ್ಕಂತೆ ನಗರಕ್ಕೆ ಬಂದು ಜೀವನ ರೂಪಿಸಿಕೊಂಡಿರುವ ಉದ್ಯೋಗಿಗಳು, ಹಠಾತ್ ಕೆಲಸ ಕಳೆದುಕೊಂಡಾಗ ಹೊಸ ಕೆಲಸ ಹುಡುಕುವ ಅನಿವಾರ್ಯತೆ ಎದುರಾಗುತ್ತದೆ. ಹೊಸ ಕೆಲಸ ಸಿಗುವವರೆಗೆ ಕೈಯಲ್ಲಿ ಕೆಲಸ, ಸಂಬಳ ಇಲ್ಲದೆ ಬೆಂಗಳೂರಿನಂತಹ ನಗರಗಳಲ್ಲಿ ಬದುಕುದು ಅಸಾಧ್ಯ. ಹೊಸ ಕೆಲಸ ಹುಡುಕೋಣ ಎಂದರೆ ತ್ವರಿತವಾಗಿ ಎಲ್ಲೂ ಕೆಲಸ ಸಿದ್ದ ಇರುವುದಿಲ್ಲ. ತಮ್ಮ ಶಿಕ್ಷಣ, ಅನುಭವಕ್ಕೆ ತಕ್ಕಂತೆ ಕೆಲಸದ ಅವಕಾಶಗಳನ್ನು ಹುಡುಕಬೇಕು. ಎಲ್ಲಾದರು ಅವಕಾಶ ಇದ್ದರೆ ಲಿಖಿತ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗಬೇಕು. ಅದರಲ್ಲಿ ಯಶಸ್ವಿಯಾದರೆ ಮುಂದೆ ಸಂಬಳ ಹೊಂದಾಣಿಕೆಯಾಗಬೇಕು. ಉದ್ಯೋಗಿ ವಜಾಗೊಂಡವರು ಎಂದು ಗೊತ್ತಾದರೆ ಸಂಸ್ಥೆಗಳು ನೋಡುವ ರೀತಿಯೇ ಬೇರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಕೊನೆಗೆ ಕೆಲಸ ಗಿಟ್ಟಿಸಿಕೊಳ್ಳುವ ಹೊತ್ತಿಗೆ ಬಡ, ಮಧ್ಯಮ ವರ್ಗದ ಯುವ ಜನತೆಯ ಜೀವನ ಬೀದಿಗೆ ಬಂದಿರುತ್ತದೆ. ಒಂದು ವಜಾಗೊಳಿಸುವಿಕೆ ದೊಡ್ಡ ಸಂಕಷ್ಟಕ್ಕೆ ತಳ್ಳಿ ಬಿಡುತ್ತದೆ.

ಇದನ್ನೂ ಓದಿ : WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...