Homeಮುಖಪುಟಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

ಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

- Advertisement -
- Advertisement -

ದೇಶದಲ್ಲಿ ನಿರೋದ್ಯೋಗದ ಸಮಸ್ಯೆ ಉತ್ತುಂಗಕ್ಕೆ ಏರಿರುವ ನಡುವೆ, ಸಾವಿರಾರು ಉದ್ಯೋಗಿಗಳು ಪ್ರಸ್ತುತ ಇರುವ ಕೆಲಸವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಹಠಾತ್ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರೆದಿದ್ದು, ಯುವ ಉದ್ಯೋಗಿಗಳಿಗೆ ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಡಿಜಿಟಲ್ ಪಾವತಿ ಆ್ಯಪ್‌ ಪೇಟಿಎಂ(Paytm) ತನ್ನ 1,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಕಂಪನಿಯ ಮಾರಾಟ ಮತ್ತು ಇಂಜಿನಿಯರಿಂಗ್ ವಿಭಾಗದ ಉದ್ಯೋಗಿಗಳನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಕೃತಕ ಬುದ್ದಿಮತ್ತೆ(Artificial Intelligence-AI)ಗೆ ಬದಲಾಗುತ್ತಿದ್ದೇವೆ. ಇದರ ಪರಿಣಾಮ ನಮ್ಮ ಇಂಜಿನಿಯರಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ. ಸಂಸ್ಥೆಯ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು ವಜಾಗೊಳಿಸುವಿಕೆಯ ಪ್ರಮುಖ ಉದ್ದೇಶ. ಇದಕ್ಕಾಗಿ ನಾವು ಎಐ ತಂತ್ರಜ್ಞಾನ ಅಳವಡಿಸಿಕೊಂಡಿದ್ದೇವೆ. ಎಐ ತಂತ್ರಜ್ಞಾನದಿಂದ ಶೇ.10ರಿಂದ 15ರಷ್ಟು ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಕೆಲಸವೂ ಅತೀ ವೇಗದಲ್ಲಿ ಆಗಲಿದೆ” ಎಂದು ಪೇಟಿಎಂ ವಕ್ತಾರ ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಒನ್ 97 ಕಮ್ಯೂನಿಕೇಶನ್ ಮಾಲಕತ್ವದ ಪೇಟಿಎಂ ಸಂಸ್ಥೆ, 2021ರಲ್ಲಿ 500ರಿಂದ 700 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸಿದ ಮತ್ತೊಂದು ಕಾರ್ಪೋರೇಟ್ ಸಂಸ್ಥೆ ಶೇರ್ ಚಾಟ್. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಸಂಸ್ಥೆಯ ಮಾಲಕತ್ವದ ಸಾಮಾಜಿಕ ಜಾಲತಾಣ ಆ್ಯಪ್‌ ಶೇರ್ ಚಾಟ್ ಸುಮಾರು 200 ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಸ್ಟಾರ್ಟ್‌ ಅಪ್‌ ಅಗಿರುವ ಶೇರ್‌ ಚಾಟ್, ಕಂಪನಿಯ ಕಾರ್ಯತಂತ್ರದ ಪುನರ್‌ರಚನೆ ಮತ್ತು ವೆಚ್ಚ ಕಡಿತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕಳೆದ ಬುಧವಾರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಂಪನಿ ಈ ವರ್ಷ ನಷ್ಟ ಅನುಭವಿಸಿರುವುದೂ ಉದ್ಯೋಗಿಗಳ ವಜಾಕ್ಕೆ ಮತ್ತೊಂದು ಕಾರಣ. 2023ರಲ್ಲಿ ಕಂಪನಿ ಸುಮಾರು 28,300 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರ್ಷ ವಿವಿಧ ಕಾರಣಗಳಿಗೆ ಒಟ್ಟು 800 ಉದ್ಯೋಗಿಗಳನ್ನು ಶೇರ್‌ ಚಾಟ್ ಕೈ ಬಿಟ್ಟಿದೆ. ಎಐ ತಂತ್ರಜ್ಞಾನ ಅಳವಡಿಕೆಯೂ ಉದ್ಯೋಗಿಗಳ ವಜಾಕ್ಕೆ ಮಗದೊಂದು ಕಾರಣ ಎನ್ನಲಾಗಿದೆ.

ಈ ಕುರಿತು ನಾನೂ ಗೌರಿ ಜೊತೆ ಮಾತನಾಡಿರುವ ಕಂಪನಿಯ ಉದ್ಯೋಗಿಯೊಬ್ಬರು, “ವಜಾಗೊಳಿಸುವ ಮುನ್ನ ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡಿಲ್ಲ. ಏಕಾಏಕಿ ವಜಾ ಪ್ರಕ್ರಿಯೆ ನಡೆದಿದೆ. ವಜಾಗೊಂಡವರು ಕಚೇರಿಗೆ ಬಂದು ಇಡೀ ದಿನ ಮಾಡುವ ಕೆಲಸಗಳೇನು ಇರಲಿಲ್ಲ. ಉದ್ಯೋಗಿಗಳ ಸಂಖ್ಯೆ ಅಗತ್ಯಕ್ಕಿಂತ ಹೆಚ್ಚಿತ್ತು. ಇದು ಕೂಡ ವಜಾಕ್ಕೆ ಕಾರಣ. ನನಗೆ ತಿಳಿದಿರುವ ಪ್ರಕಾರ, ವಜಾಗೊಂಡವರಿಗೆ ಕಂಪನಿ ಮುಂದಿನ ಮೂರು ತಿಂಗಳ ವೇತನ ಪಾವತಿಸಿದೆ. ಆದರೆ, ಏಕಾಏಕಿ ಕೆಲಸ ಕಳೆದುಕೊಂಡವರು ಅತಂತ್ರರಾಗಿದ್ದಾರೆ” ಎಂದು ಹೇಳಿದ್ದಾರೆ.

ಅತಂತ್ರರಾದ ಉದ್ಯೋಗಿಗಳು : ಕೋವಿಡ್ ಸಾಂಕ್ರಾಮಿಕದ ಬಳಿಕ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ವಜಾಗೊಳಿಸುವಿಕೆ ನಡೆಸುತ್ತಿವೆ. ಟೆಕ್ ದೈತ್ಯಗಳಾದ ಗೂಗಲ್, ಮೈಕ್ರೋಸಾಫ್ಟ್, ಇನ್ಪೋಸಿಸ್, ವಿಪ್ರೋಗಳು ಕೂಡ ಇದಕ್ಕೆ ಹೊರತಾಗಿಲ್ಲ. ವಜಾಗೊಳಿಸುವಿಕೆಗೆ ಕಂಪನಿಗಳು ನೀಡುತ್ತಿರುವ ಕಾರಣ ವೆಚ್ಚ ಕಡಿತ ಮತ್ತು ಎಐ ತಂತ್ರಜ್ಞಾನದ ಅನುಷ್ಠಾನ. ಏನೇ ಆದರೂ, ಕಂಪನಿಗಳ ದಿಢೀರ್ ನಿರ್ಧಾರದಿಂದ ಕೆಲಸ ಕಳೆದುಕೊಂಡ ಉದ್ಯೋಗಿಗಳು ಮಾತ್ರ ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ತಮ್ಮ ಸಂಬಳಕ್ಕೆ ತಕ್ಕಂತೆ ನಗರಕ್ಕೆ ಬಂದು ಜೀವನ ರೂಪಿಸಿಕೊಂಡಿರುವ ಉದ್ಯೋಗಿಗಳು, ಹಠಾತ್ ಕೆಲಸ ಕಳೆದುಕೊಂಡಾಗ ಹೊಸ ಕೆಲಸ ಹುಡುಕುವ ಅನಿವಾರ್ಯತೆ ಎದುರಾಗುತ್ತದೆ. ಹೊಸ ಕೆಲಸ ಸಿಗುವವರೆಗೆ ಕೈಯಲ್ಲಿ ಕೆಲಸ, ಸಂಬಳ ಇಲ್ಲದೆ ಬೆಂಗಳೂರಿನಂತಹ ನಗರಗಳಲ್ಲಿ ಬದುಕುದು ಅಸಾಧ್ಯ. ಹೊಸ ಕೆಲಸ ಹುಡುಕೋಣ ಎಂದರೆ ತ್ವರಿತವಾಗಿ ಎಲ್ಲೂ ಕೆಲಸ ಸಿದ್ದ ಇರುವುದಿಲ್ಲ. ತಮ್ಮ ಶಿಕ್ಷಣ, ಅನುಭವಕ್ಕೆ ತಕ್ಕಂತೆ ಕೆಲಸದ ಅವಕಾಶಗಳನ್ನು ಹುಡುಕಬೇಕು. ಎಲ್ಲಾದರು ಅವಕಾಶ ಇದ್ದರೆ ಲಿಖಿತ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗಬೇಕು. ಅದರಲ್ಲಿ ಯಶಸ್ವಿಯಾದರೆ ಮುಂದೆ ಸಂಬಳ ಹೊಂದಾಣಿಕೆಯಾಗಬೇಕು. ಉದ್ಯೋಗಿ ವಜಾಗೊಂಡವರು ಎಂದು ಗೊತ್ತಾದರೆ ಸಂಸ್ಥೆಗಳು ನೋಡುವ ರೀತಿಯೇ ಬೇರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಕೊನೆಗೆ ಕೆಲಸ ಗಿಟ್ಟಿಸಿಕೊಳ್ಳುವ ಹೊತ್ತಿಗೆ ಬಡ, ಮಧ್ಯಮ ವರ್ಗದ ಯುವ ಜನತೆಯ ಜೀವನ ಬೀದಿಗೆ ಬಂದಿರುತ್ತದೆ. ಒಂದು ವಜಾಗೊಳಿಸುವಿಕೆ ದೊಡ್ಡ ಸಂಕಷ್ಟಕ್ಕೆ ತಳ್ಳಿ ಬಿಡುತ್ತದೆ.

ಇದನ್ನೂ ಓದಿ : WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...