Homeಮುಖಪುಟಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

ಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

- Advertisement -
- Advertisement -

ದೇಶದಲ್ಲಿ ನಿರೋದ್ಯೋಗದ ಸಮಸ್ಯೆ ಉತ್ತುಂಗಕ್ಕೆ ಏರಿರುವ ನಡುವೆ, ಸಾವಿರಾರು ಉದ್ಯೋಗಿಗಳು ಪ್ರಸ್ತುತ ಇರುವ ಕೆಲಸವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಹಠಾತ್ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರೆದಿದ್ದು, ಯುವ ಉದ್ಯೋಗಿಗಳಿಗೆ ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಡಿಜಿಟಲ್ ಪಾವತಿ ಆ್ಯಪ್‌ ಪೇಟಿಎಂ(Paytm) ತನ್ನ 1,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಕಂಪನಿಯ ಮಾರಾಟ ಮತ್ತು ಇಂಜಿನಿಯರಿಂಗ್ ವಿಭಾಗದ ಉದ್ಯೋಗಿಗಳನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಕೃತಕ ಬುದ್ದಿಮತ್ತೆ(Artificial Intelligence-AI)ಗೆ ಬದಲಾಗುತ್ತಿದ್ದೇವೆ. ಇದರ ಪರಿಣಾಮ ನಮ್ಮ ಇಂಜಿನಿಯರಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ. ಸಂಸ್ಥೆಯ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು ವಜಾಗೊಳಿಸುವಿಕೆಯ ಪ್ರಮುಖ ಉದ್ದೇಶ. ಇದಕ್ಕಾಗಿ ನಾವು ಎಐ ತಂತ್ರಜ್ಞಾನ ಅಳವಡಿಸಿಕೊಂಡಿದ್ದೇವೆ. ಎಐ ತಂತ್ರಜ್ಞಾನದಿಂದ ಶೇ.10ರಿಂದ 15ರಷ್ಟು ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಕೆಲಸವೂ ಅತೀ ವೇಗದಲ್ಲಿ ಆಗಲಿದೆ” ಎಂದು ಪೇಟಿಎಂ ವಕ್ತಾರ ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಒನ್ 97 ಕಮ್ಯೂನಿಕೇಶನ್ ಮಾಲಕತ್ವದ ಪೇಟಿಎಂ ಸಂಸ್ಥೆ, 2021ರಲ್ಲಿ 500ರಿಂದ 700 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸಿದ ಮತ್ತೊಂದು ಕಾರ್ಪೋರೇಟ್ ಸಂಸ್ಥೆ ಶೇರ್ ಚಾಟ್. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಸಂಸ್ಥೆಯ ಮಾಲಕತ್ವದ ಸಾಮಾಜಿಕ ಜಾಲತಾಣ ಆ್ಯಪ್‌ ಶೇರ್ ಚಾಟ್ ಸುಮಾರು 200 ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಸ್ಟಾರ್ಟ್‌ ಅಪ್‌ ಅಗಿರುವ ಶೇರ್‌ ಚಾಟ್, ಕಂಪನಿಯ ಕಾರ್ಯತಂತ್ರದ ಪುನರ್‌ರಚನೆ ಮತ್ತು ವೆಚ್ಚ ಕಡಿತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕಳೆದ ಬುಧವಾರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಂಪನಿ ಈ ವರ್ಷ ನಷ್ಟ ಅನುಭವಿಸಿರುವುದೂ ಉದ್ಯೋಗಿಗಳ ವಜಾಕ್ಕೆ ಮತ್ತೊಂದು ಕಾರಣ. 2023ರಲ್ಲಿ ಕಂಪನಿ ಸುಮಾರು 28,300 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರ್ಷ ವಿವಿಧ ಕಾರಣಗಳಿಗೆ ಒಟ್ಟು 800 ಉದ್ಯೋಗಿಗಳನ್ನು ಶೇರ್‌ ಚಾಟ್ ಕೈ ಬಿಟ್ಟಿದೆ. ಎಐ ತಂತ್ರಜ್ಞಾನ ಅಳವಡಿಕೆಯೂ ಉದ್ಯೋಗಿಗಳ ವಜಾಕ್ಕೆ ಮಗದೊಂದು ಕಾರಣ ಎನ್ನಲಾಗಿದೆ.

ಈ ಕುರಿತು ನಾನೂ ಗೌರಿ ಜೊತೆ ಮಾತನಾಡಿರುವ ಕಂಪನಿಯ ಉದ್ಯೋಗಿಯೊಬ್ಬರು, “ವಜಾಗೊಳಿಸುವ ಮುನ್ನ ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡಿಲ್ಲ. ಏಕಾಏಕಿ ವಜಾ ಪ್ರಕ್ರಿಯೆ ನಡೆದಿದೆ. ವಜಾಗೊಂಡವರು ಕಚೇರಿಗೆ ಬಂದು ಇಡೀ ದಿನ ಮಾಡುವ ಕೆಲಸಗಳೇನು ಇರಲಿಲ್ಲ. ಉದ್ಯೋಗಿಗಳ ಸಂಖ್ಯೆ ಅಗತ್ಯಕ್ಕಿಂತ ಹೆಚ್ಚಿತ್ತು. ಇದು ಕೂಡ ವಜಾಕ್ಕೆ ಕಾರಣ. ನನಗೆ ತಿಳಿದಿರುವ ಪ್ರಕಾರ, ವಜಾಗೊಂಡವರಿಗೆ ಕಂಪನಿ ಮುಂದಿನ ಮೂರು ತಿಂಗಳ ವೇತನ ಪಾವತಿಸಿದೆ. ಆದರೆ, ಏಕಾಏಕಿ ಕೆಲಸ ಕಳೆದುಕೊಂಡವರು ಅತಂತ್ರರಾಗಿದ್ದಾರೆ” ಎಂದು ಹೇಳಿದ್ದಾರೆ.

ಅತಂತ್ರರಾದ ಉದ್ಯೋಗಿಗಳು : ಕೋವಿಡ್ ಸಾಂಕ್ರಾಮಿಕದ ಬಳಿಕ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ವಜಾಗೊಳಿಸುವಿಕೆ ನಡೆಸುತ್ತಿವೆ. ಟೆಕ್ ದೈತ್ಯಗಳಾದ ಗೂಗಲ್, ಮೈಕ್ರೋಸಾಫ್ಟ್, ಇನ್ಪೋಸಿಸ್, ವಿಪ್ರೋಗಳು ಕೂಡ ಇದಕ್ಕೆ ಹೊರತಾಗಿಲ್ಲ. ವಜಾಗೊಳಿಸುವಿಕೆಗೆ ಕಂಪನಿಗಳು ನೀಡುತ್ತಿರುವ ಕಾರಣ ವೆಚ್ಚ ಕಡಿತ ಮತ್ತು ಎಐ ತಂತ್ರಜ್ಞಾನದ ಅನುಷ್ಠಾನ. ಏನೇ ಆದರೂ, ಕಂಪನಿಗಳ ದಿಢೀರ್ ನಿರ್ಧಾರದಿಂದ ಕೆಲಸ ಕಳೆದುಕೊಂಡ ಉದ್ಯೋಗಿಗಳು ಮಾತ್ರ ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ತಮ್ಮ ಸಂಬಳಕ್ಕೆ ತಕ್ಕಂತೆ ನಗರಕ್ಕೆ ಬಂದು ಜೀವನ ರೂಪಿಸಿಕೊಂಡಿರುವ ಉದ್ಯೋಗಿಗಳು, ಹಠಾತ್ ಕೆಲಸ ಕಳೆದುಕೊಂಡಾಗ ಹೊಸ ಕೆಲಸ ಹುಡುಕುವ ಅನಿವಾರ್ಯತೆ ಎದುರಾಗುತ್ತದೆ. ಹೊಸ ಕೆಲಸ ಸಿಗುವವರೆಗೆ ಕೈಯಲ್ಲಿ ಕೆಲಸ, ಸಂಬಳ ಇಲ್ಲದೆ ಬೆಂಗಳೂರಿನಂತಹ ನಗರಗಳಲ್ಲಿ ಬದುಕುದು ಅಸಾಧ್ಯ. ಹೊಸ ಕೆಲಸ ಹುಡುಕೋಣ ಎಂದರೆ ತ್ವರಿತವಾಗಿ ಎಲ್ಲೂ ಕೆಲಸ ಸಿದ್ದ ಇರುವುದಿಲ್ಲ. ತಮ್ಮ ಶಿಕ್ಷಣ, ಅನುಭವಕ್ಕೆ ತಕ್ಕಂತೆ ಕೆಲಸದ ಅವಕಾಶಗಳನ್ನು ಹುಡುಕಬೇಕು. ಎಲ್ಲಾದರು ಅವಕಾಶ ಇದ್ದರೆ ಲಿಖಿತ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗಬೇಕು. ಅದರಲ್ಲಿ ಯಶಸ್ವಿಯಾದರೆ ಮುಂದೆ ಸಂಬಳ ಹೊಂದಾಣಿಕೆಯಾಗಬೇಕು. ಉದ್ಯೋಗಿ ವಜಾಗೊಂಡವರು ಎಂದು ಗೊತ್ತಾದರೆ ಸಂಸ್ಥೆಗಳು ನೋಡುವ ರೀತಿಯೇ ಬೇರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಕೊನೆಗೆ ಕೆಲಸ ಗಿಟ್ಟಿಸಿಕೊಳ್ಳುವ ಹೊತ್ತಿಗೆ ಬಡ, ಮಧ್ಯಮ ವರ್ಗದ ಯುವ ಜನತೆಯ ಜೀವನ ಬೀದಿಗೆ ಬಂದಿರುತ್ತದೆ. ಒಂದು ವಜಾಗೊಳಿಸುವಿಕೆ ದೊಡ್ಡ ಸಂಕಷ್ಟಕ್ಕೆ ತಳ್ಳಿ ಬಿಡುತ್ತದೆ.

ಇದನ್ನೂ ಓದಿ : WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...