Homeಮುಖಪುಟಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

ಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

- Advertisement -
- Advertisement -

ದೇಶದಲ್ಲಿ ನಿರೋದ್ಯೋಗದ ಸಮಸ್ಯೆ ಉತ್ತುಂಗಕ್ಕೆ ಏರಿರುವ ನಡುವೆ, ಸಾವಿರಾರು ಉದ್ಯೋಗಿಗಳು ಪ್ರಸ್ತುತ ಇರುವ ಕೆಲಸವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಹಠಾತ್ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರೆದಿದ್ದು, ಯುವ ಉದ್ಯೋಗಿಗಳಿಗೆ ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಡಿಜಿಟಲ್ ಪಾವತಿ ಆ್ಯಪ್‌ ಪೇಟಿಎಂ(Paytm) ತನ್ನ 1,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಕಂಪನಿಯ ಮಾರಾಟ ಮತ್ತು ಇಂಜಿನಿಯರಿಂಗ್ ವಿಭಾಗದ ಉದ್ಯೋಗಿಗಳನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಕೃತಕ ಬುದ್ದಿಮತ್ತೆ(Artificial Intelligence-AI)ಗೆ ಬದಲಾಗುತ್ತಿದ್ದೇವೆ. ಇದರ ಪರಿಣಾಮ ನಮ್ಮ ಇಂಜಿನಿಯರಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ. ಸಂಸ್ಥೆಯ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು ವಜಾಗೊಳಿಸುವಿಕೆಯ ಪ್ರಮುಖ ಉದ್ದೇಶ. ಇದಕ್ಕಾಗಿ ನಾವು ಎಐ ತಂತ್ರಜ್ಞಾನ ಅಳವಡಿಸಿಕೊಂಡಿದ್ದೇವೆ. ಎಐ ತಂತ್ರಜ್ಞಾನದಿಂದ ಶೇ.10ರಿಂದ 15ರಷ್ಟು ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಕೆಲಸವೂ ಅತೀ ವೇಗದಲ್ಲಿ ಆಗಲಿದೆ” ಎಂದು ಪೇಟಿಎಂ ವಕ್ತಾರ ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಒನ್ 97 ಕಮ್ಯೂನಿಕೇಶನ್ ಮಾಲಕತ್ವದ ಪೇಟಿಎಂ ಸಂಸ್ಥೆ, 2021ರಲ್ಲಿ 500ರಿಂದ 700 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸಿದ ಮತ್ತೊಂದು ಕಾರ್ಪೋರೇಟ್ ಸಂಸ್ಥೆ ಶೇರ್ ಚಾಟ್. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಸಂಸ್ಥೆಯ ಮಾಲಕತ್ವದ ಸಾಮಾಜಿಕ ಜಾಲತಾಣ ಆ್ಯಪ್‌ ಶೇರ್ ಚಾಟ್ ಸುಮಾರು 200 ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಸ್ಟಾರ್ಟ್‌ ಅಪ್‌ ಅಗಿರುವ ಶೇರ್‌ ಚಾಟ್, ಕಂಪನಿಯ ಕಾರ್ಯತಂತ್ರದ ಪುನರ್‌ರಚನೆ ಮತ್ತು ವೆಚ್ಚ ಕಡಿತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕಳೆದ ಬುಧವಾರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಂಪನಿ ಈ ವರ್ಷ ನಷ್ಟ ಅನುಭವಿಸಿರುವುದೂ ಉದ್ಯೋಗಿಗಳ ವಜಾಕ್ಕೆ ಮತ್ತೊಂದು ಕಾರಣ. 2023ರಲ್ಲಿ ಕಂಪನಿ ಸುಮಾರು 28,300 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರ್ಷ ವಿವಿಧ ಕಾರಣಗಳಿಗೆ ಒಟ್ಟು 800 ಉದ್ಯೋಗಿಗಳನ್ನು ಶೇರ್‌ ಚಾಟ್ ಕೈ ಬಿಟ್ಟಿದೆ. ಎಐ ತಂತ್ರಜ್ಞಾನ ಅಳವಡಿಕೆಯೂ ಉದ್ಯೋಗಿಗಳ ವಜಾಕ್ಕೆ ಮಗದೊಂದು ಕಾರಣ ಎನ್ನಲಾಗಿದೆ.

ಈ ಕುರಿತು ನಾನೂ ಗೌರಿ ಜೊತೆ ಮಾತನಾಡಿರುವ ಕಂಪನಿಯ ಉದ್ಯೋಗಿಯೊಬ್ಬರು, “ವಜಾಗೊಳಿಸುವ ಮುನ್ನ ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡಿಲ್ಲ. ಏಕಾಏಕಿ ವಜಾ ಪ್ರಕ್ರಿಯೆ ನಡೆದಿದೆ. ವಜಾಗೊಂಡವರು ಕಚೇರಿಗೆ ಬಂದು ಇಡೀ ದಿನ ಮಾಡುವ ಕೆಲಸಗಳೇನು ಇರಲಿಲ್ಲ. ಉದ್ಯೋಗಿಗಳ ಸಂಖ್ಯೆ ಅಗತ್ಯಕ್ಕಿಂತ ಹೆಚ್ಚಿತ್ತು. ಇದು ಕೂಡ ವಜಾಕ್ಕೆ ಕಾರಣ. ನನಗೆ ತಿಳಿದಿರುವ ಪ್ರಕಾರ, ವಜಾಗೊಂಡವರಿಗೆ ಕಂಪನಿ ಮುಂದಿನ ಮೂರು ತಿಂಗಳ ವೇತನ ಪಾವತಿಸಿದೆ. ಆದರೆ, ಏಕಾಏಕಿ ಕೆಲಸ ಕಳೆದುಕೊಂಡವರು ಅತಂತ್ರರಾಗಿದ್ದಾರೆ” ಎಂದು ಹೇಳಿದ್ದಾರೆ.

ಅತಂತ್ರರಾದ ಉದ್ಯೋಗಿಗಳು : ಕೋವಿಡ್ ಸಾಂಕ್ರಾಮಿಕದ ಬಳಿಕ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ವಜಾಗೊಳಿಸುವಿಕೆ ನಡೆಸುತ್ತಿವೆ. ಟೆಕ್ ದೈತ್ಯಗಳಾದ ಗೂಗಲ್, ಮೈಕ್ರೋಸಾಫ್ಟ್, ಇನ್ಪೋಸಿಸ್, ವಿಪ್ರೋಗಳು ಕೂಡ ಇದಕ್ಕೆ ಹೊರತಾಗಿಲ್ಲ. ವಜಾಗೊಳಿಸುವಿಕೆಗೆ ಕಂಪನಿಗಳು ನೀಡುತ್ತಿರುವ ಕಾರಣ ವೆಚ್ಚ ಕಡಿತ ಮತ್ತು ಎಐ ತಂತ್ರಜ್ಞಾನದ ಅನುಷ್ಠಾನ. ಏನೇ ಆದರೂ, ಕಂಪನಿಗಳ ದಿಢೀರ್ ನಿರ್ಧಾರದಿಂದ ಕೆಲಸ ಕಳೆದುಕೊಂಡ ಉದ್ಯೋಗಿಗಳು ಮಾತ್ರ ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ತಮ್ಮ ಸಂಬಳಕ್ಕೆ ತಕ್ಕಂತೆ ನಗರಕ್ಕೆ ಬಂದು ಜೀವನ ರೂಪಿಸಿಕೊಂಡಿರುವ ಉದ್ಯೋಗಿಗಳು, ಹಠಾತ್ ಕೆಲಸ ಕಳೆದುಕೊಂಡಾಗ ಹೊಸ ಕೆಲಸ ಹುಡುಕುವ ಅನಿವಾರ್ಯತೆ ಎದುರಾಗುತ್ತದೆ. ಹೊಸ ಕೆಲಸ ಸಿಗುವವರೆಗೆ ಕೈಯಲ್ಲಿ ಕೆಲಸ, ಸಂಬಳ ಇಲ್ಲದೆ ಬೆಂಗಳೂರಿನಂತಹ ನಗರಗಳಲ್ಲಿ ಬದುಕುದು ಅಸಾಧ್ಯ. ಹೊಸ ಕೆಲಸ ಹುಡುಕೋಣ ಎಂದರೆ ತ್ವರಿತವಾಗಿ ಎಲ್ಲೂ ಕೆಲಸ ಸಿದ್ದ ಇರುವುದಿಲ್ಲ. ತಮ್ಮ ಶಿಕ್ಷಣ, ಅನುಭವಕ್ಕೆ ತಕ್ಕಂತೆ ಕೆಲಸದ ಅವಕಾಶಗಳನ್ನು ಹುಡುಕಬೇಕು. ಎಲ್ಲಾದರು ಅವಕಾಶ ಇದ್ದರೆ ಲಿಖಿತ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗಬೇಕು. ಅದರಲ್ಲಿ ಯಶಸ್ವಿಯಾದರೆ ಮುಂದೆ ಸಂಬಳ ಹೊಂದಾಣಿಕೆಯಾಗಬೇಕು. ಉದ್ಯೋಗಿ ವಜಾಗೊಂಡವರು ಎಂದು ಗೊತ್ತಾದರೆ ಸಂಸ್ಥೆಗಳು ನೋಡುವ ರೀತಿಯೇ ಬೇರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಕೊನೆಗೆ ಕೆಲಸ ಗಿಟ್ಟಿಸಿಕೊಳ್ಳುವ ಹೊತ್ತಿಗೆ ಬಡ, ಮಧ್ಯಮ ವರ್ಗದ ಯುವ ಜನತೆಯ ಜೀವನ ಬೀದಿಗೆ ಬಂದಿರುತ್ತದೆ. ಒಂದು ವಜಾಗೊಳಿಸುವಿಕೆ ದೊಡ್ಡ ಸಂಕಷ್ಟಕ್ಕೆ ತಳ್ಳಿ ಬಿಡುತ್ತದೆ.

ಇದನ್ನೂ ಓದಿ : WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...