Homeಮುಖಪುಟಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

ಕಾರ್ಪೋರೇಟ್ ಸಂಸ್ಥೆಗಳಿಂದ ಹಠಾತ್ ವಜಾ: ಅತಂತ್ರರಾದ ಸಾವಿರಾರು ಉದ್ಯೋಗಿಗಳು

- Advertisement -
- Advertisement -

ದೇಶದಲ್ಲಿ ನಿರೋದ್ಯೋಗದ ಸಮಸ್ಯೆ ಉತ್ತುಂಗಕ್ಕೆ ಏರಿರುವ ನಡುವೆ, ಸಾವಿರಾರು ಉದ್ಯೋಗಿಗಳು ಪ್ರಸ್ತುತ ಇರುವ ಕೆಲಸವನ್ನೂ ಕಳೆದುಕೊಳ್ಳುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳ ಹಠಾತ್ ವಜಾಗೊಳಿಸುವಿಕೆ ಪ್ರಕ್ರಿಯೆ ಮುಂದುವರೆದಿದ್ದು, ಯುವ ಉದ್ಯೋಗಿಗಳಿಗೆ ಆತಂಕಕಾರಿ ಬೆಳವಣಿಗೆಯಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ಡಿಜಿಟಲ್ ಪಾವತಿ ಆ್ಯಪ್‌ ಪೇಟಿಎಂ(Paytm) ತನ್ನ 1,000 ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಿದೆ. ಕಂಪನಿಯ ಮಾರಾಟ ಮತ್ತು ಇಂಜಿನಿಯರಿಂಗ್ ವಿಭಾಗದ ಉದ್ಯೋಗಿಗಳನ್ನು ಕೈ ಬಿಡಲಾಗಿದೆ ಎಂದು ತಿಳಿದು ಬಂದಿದೆ.

“ನಾವು ಕೃತಕ ಬುದ್ದಿಮತ್ತೆ(Artificial Intelligence-AI)ಗೆ ಬದಲಾಗುತ್ತಿದ್ದೇವೆ. ಇದರ ಪರಿಣಾಮ ನಮ್ಮ ಇಂಜಿನಿಯರಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದೇವೆ. ಸಂಸ್ಥೆಯ ನಿರ್ವಹಣಾ ವೆಚ್ಚ ಕಡಿತಗೊಳಿಸುವುದು ವಜಾಗೊಳಿಸುವಿಕೆಯ ಪ್ರಮುಖ ಉದ್ದೇಶ. ಇದಕ್ಕಾಗಿ ನಾವು ಎಐ ತಂತ್ರಜ್ಞಾನ ಅಳವಡಿಸಿಕೊಂಡಿದ್ದೇವೆ. ಎಐ ತಂತ್ರಜ್ಞಾನದಿಂದ ಶೇ.10ರಿಂದ 15ರಷ್ಟು ವೆಚ್ಚ ಕಡಿಮೆಯಾಗಲಿದೆ. ಅಲ್ಲದೆ ಕೆಲಸವೂ ಅತೀ ವೇಗದಲ್ಲಿ ಆಗಲಿದೆ” ಎಂದು ಪೇಟಿಎಂ ವಕ್ತಾರ ಹೇಳಿರುವುದಾಗಿ ಮನಿ ಕಂಟ್ರೋಲ್ ವರದಿ ಮಾಡಿದೆ.

ಒನ್ 97 ಕಮ್ಯೂನಿಕೇಶನ್ ಮಾಲಕತ್ವದ ಪೇಟಿಎಂ ಸಂಸ್ಥೆ, 2021ರಲ್ಲಿ 500ರಿಂದ 700 ಉದ್ಯೋಗಿಗಳನ್ನು ವಜಾಗೊಳಿಸಿತ್ತು ಎಂದು ವರದಿಗಳು ಹೇಳಿವೆ.

ಇತ್ತೀಚೆಗೆ ಉದ್ಯೋಗಿಗಳನ್ನು ವಜಾಗೊಳಿಸಿದ ಮತ್ತೊಂದು ಕಾರ್ಪೋರೇಟ್ ಸಂಸ್ಥೆ ಶೇರ್ ಚಾಟ್. ಬೆಂಗಳೂರು ಮೂಲದ ಮೊಹಲ್ಲಾ ಟೆಕ್ ಸಂಸ್ಥೆಯ ಮಾಲಕತ್ವದ ಸಾಮಾಜಿಕ ಜಾಲತಾಣ ಆ್ಯಪ್‌ ಶೇರ್ ಚಾಟ್ ಸುಮಾರು 200 ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ತಿಳಿಸಿದೆ.

ಸ್ಟಾರ್ಟ್‌ ಅಪ್‌ ಅಗಿರುವ ಶೇರ್‌ ಚಾಟ್, ಕಂಪನಿಯ ಕಾರ್ಯತಂತ್ರದ ಪುನರ್‌ರಚನೆ ಮತ್ತು ವೆಚ್ಚ ಕಡಿತದ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಬೆನ್ನಲ್ಲೇ ಕಳೆದ ಬುಧವಾರ ಉದ್ಯೋಗಿಗಳನ್ನು ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಕಂಪನಿ ಈ ವರ್ಷ ನಷ್ಟ ಅನುಭವಿಸಿರುವುದೂ ಉದ್ಯೋಗಿಗಳ ವಜಾಕ್ಕೆ ಮತ್ತೊಂದು ಕಾರಣ. 2023ರಲ್ಲಿ ಕಂಪನಿ ಸುಮಾರು 28,300 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಈ ವರ್ಷ ವಿವಿಧ ಕಾರಣಗಳಿಗೆ ಒಟ್ಟು 800 ಉದ್ಯೋಗಿಗಳನ್ನು ಶೇರ್‌ ಚಾಟ್ ಕೈ ಬಿಟ್ಟಿದೆ. ಎಐ ತಂತ್ರಜ್ಞಾನ ಅಳವಡಿಕೆಯೂ ಉದ್ಯೋಗಿಗಳ ವಜಾಕ್ಕೆ ಮಗದೊಂದು ಕಾರಣ ಎನ್ನಲಾಗಿದೆ.

ಈ ಕುರಿತು ನಾನೂ ಗೌರಿ ಜೊತೆ ಮಾತನಾಡಿರುವ ಕಂಪನಿಯ ಉದ್ಯೋಗಿಯೊಬ್ಬರು, “ವಜಾಗೊಳಿಸುವ ಮುನ್ನ ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡಿಲ್ಲ. ಏಕಾಏಕಿ ವಜಾ ಪ್ರಕ್ರಿಯೆ ನಡೆದಿದೆ. ವಜಾಗೊಂಡವರು ಕಚೇರಿಗೆ ಬಂದು ಇಡೀ ದಿನ ಮಾಡುವ ಕೆಲಸಗಳೇನು ಇರಲಿಲ್ಲ. ಉದ್ಯೋಗಿಗಳ ಸಂಖ್ಯೆ ಅಗತ್ಯಕ್ಕಿಂತ ಹೆಚ್ಚಿತ್ತು. ಇದು ಕೂಡ ವಜಾಕ್ಕೆ ಕಾರಣ. ನನಗೆ ತಿಳಿದಿರುವ ಪ್ರಕಾರ, ವಜಾಗೊಂಡವರಿಗೆ ಕಂಪನಿ ಮುಂದಿನ ಮೂರು ತಿಂಗಳ ವೇತನ ಪಾವತಿಸಿದೆ. ಆದರೆ, ಏಕಾಏಕಿ ಕೆಲಸ ಕಳೆದುಕೊಂಡವರು ಅತಂತ್ರರಾಗಿದ್ದಾರೆ” ಎಂದು ಹೇಳಿದ್ದಾರೆ.

ಅತಂತ್ರರಾದ ಉದ್ಯೋಗಿಗಳು : ಕೋವಿಡ್ ಸಾಂಕ್ರಾಮಿಕದ ಬಳಿಕ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ವಜಾಗೊಳಿಸುವಿಕೆ ನಡೆಸುತ್ತಿವೆ. ಟೆಕ್ ದೈತ್ಯಗಳಾದ ಗೂಗಲ್, ಮೈಕ್ರೋಸಾಫ್ಟ್, ಇನ್ಪೋಸಿಸ್, ವಿಪ್ರೋಗಳು ಕೂಡ ಇದಕ್ಕೆ ಹೊರತಾಗಿಲ್ಲ. ವಜಾಗೊಳಿಸುವಿಕೆಗೆ ಕಂಪನಿಗಳು ನೀಡುತ್ತಿರುವ ಕಾರಣ ವೆಚ್ಚ ಕಡಿತ ಮತ್ತು ಎಐ ತಂತ್ರಜ್ಞಾನದ ಅನುಷ್ಠಾನ. ಏನೇ ಆದರೂ, ಕಂಪನಿಗಳ ದಿಢೀರ್ ನಿರ್ಧಾರದಿಂದ ಕೆಲಸ ಕಳೆದುಕೊಂಡ ಉದ್ಯೋಗಿಗಳು ಮಾತ್ರ ಅಕ್ಷರಶಃ ಬೀದಿಗೆ ಬೀಳುತ್ತಿದ್ದಾರೆ.

ತಮ್ಮ ಸಂಬಳಕ್ಕೆ ತಕ್ಕಂತೆ ನಗರಕ್ಕೆ ಬಂದು ಜೀವನ ರೂಪಿಸಿಕೊಂಡಿರುವ ಉದ್ಯೋಗಿಗಳು, ಹಠಾತ್ ಕೆಲಸ ಕಳೆದುಕೊಂಡಾಗ ಹೊಸ ಕೆಲಸ ಹುಡುಕುವ ಅನಿವಾರ್ಯತೆ ಎದುರಾಗುತ್ತದೆ. ಹೊಸ ಕೆಲಸ ಸಿಗುವವರೆಗೆ ಕೈಯಲ್ಲಿ ಕೆಲಸ, ಸಂಬಳ ಇಲ್ಲದೆ ಬೆಂಗಳೂರಿನಂತಹ ನಗರಗಳಲ್ಲಿ ಬದುಕುದು ಅಸಾಧ್ಯ. ಹೊಸ ಕೆಲಸ ಹುಡುಕೋಣ ಎಂದರೆ ತ್ವರಿತವಾಗಿ ಎಲ್ಲೂ ಕೆಲಸ ಸಿದ್ದ ಇರುವುದಿಲ್ಲ. ತಮ್ಮ ಶಿಕ್ಷಣ, ಅನುಭವಕ್ಕೆ ತಕ್ಕಂತೆ ಕೆಲಸದ ಅವಕಾಶಗಳನ್ನು ಹುಡುಕಬೇಕು. ಎಲ್ಲಾದರು ಅವಕಾಶ ಇದ್ದರೆ ಲಿಖಿತ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗಬೇಕು. ಅದರಲ್ಲಿ ಯಶಸ್ವಿಯಾದರೆ ಮುಂದೆ ಸಂಬಳ ಹೊಂದಾಣಿಕೆಯಾಗಬೇಕು. ಉದ್ಯೋಗಿ ವಜಾಗೊಂಡವರು ಎಂದು ಗೊತ್ತಾದರೆ ಸಂಸ್ಥೆಗಳು ನೋಡುವ ರೀತಿಯೇ ಬೇರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಕೊನೆಗೆ ಕೆಲಸ ಗಿಟ್ಟಿಸಿಕೊಳ್ಳುವ ಹೊತ್ತಿಗೆ ಬಡ, ಮಧ್ಯಮ ವರ್ಗದ ಯುವ ಜನತೆಯ ಜೀವನ ಬೀದಿಗೆ ಬಂದಿರುತ್ತದೆ. ಒಂದು ವಜಾಗೊಳಿಸುವಿಕೆ ದೊಡ್ಡ ಸಂಕಷ್ಟಕ್ಕೆ ತಳ್ಳಿ ಬಿಡುತ್ತದೆ.

ಇದನ್ನೂ ಓದಿ : WFI ಆಡಳಿತ ಮಂಡಳಿ ಅಮಾನತುಗೊಂಡಿಲ್ಲ, ಗೊಂದಲ ಸೃಷ್ಟಿಸಲು ಚಟುವಟಿಕೆ ಸ್ಥಗಿತ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...