Homeಮುಖಪುಟಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಚುನಾವಣೆಗೆ ಮುಂಚಿತಾಗಿ ನಡೆಯುವ ಸೆಮಿಫೈನಲ್‌ ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಸಿಪಿಐ(ಎಂ)‌ ನೇತೃತ್ವದ LDF ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್‌ ನೇತೃತ್ವದ UDF ಎರಡನೇ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಚುನಾವಣೆಗೆ ಮುಂಚಿತಾಗಿ ನಡೆಯುವ ಸೆಮಿಫೈನಲ್‌ ಎಂದು ಪರಿಗಣಿಸಲಾಗುತ್ತದೆ. ಪ್ರಸ್ತುತ ಈ ಚುನಾವಣೆಯು 2021 ರ ಕೇರಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ಕೇರಳ ಚುನಾವಣೆಯು LDF‌ ಮತ್ತು UDF ‌ಗಳ ನಡುವೆ ಭಾರೀ ಸ್ಪರ್ಧೆಯನ್ನು ಏರ್ಪಡಿಸಲಿದ್ದು, ಬಿಜೆಪಿ ಹೆಚ್ಚುವರಿ ಆಟಗಾರನಂತೆ ಕಣಕ್ಕಿಯಲಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೇರಳ ರಾಜಕೀಯದ ಸಂಪ್ರದಾಯದಂತೆ ಒಂದು ಬಾರಿ LDF ಬಂದರೆ ಇನ್ನೊಂದು ಬಾರಿ UDF ಅಧಿಕಾರ ಹಿಡಿಯುತ್ತಿತ್ತು. ಒಂದು ವೇಳೆ ಮುಂದಿನ ಬಾರಿ LDF ಅಧಿಕಾರ ಹಿಡಿದರೆ ಕೇರಳ ರಾಜಕೀಯದ ಎಲ್ಲಾ ದಾಖಲೆಗಳನ್ನು ಮುರಿದಂತಾಗುತ್ತದೆ.

ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟವು ಒಟ್ಟು 941 ರಲ್ಲಿ 514 ಮತ್ತು ಯುಡಿಎಫ್‌ 375 ಗ್ರಾಮ ಪಂಚಾಯಿತಿಗಳನ್ನು ಗೆದ್ದಿದ್ದು, ಇದು ಭಾರೀ ಸ್ಪರ್ಧೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಕೇವಲ 23 ಗ್ರಾಮ ಪಂಚಾಯಿತಿಗಳನ್ನು ಮಾತ್ರ ಗೆಲ್ಲುವಲ್ಲಿ ಸಫಲವಾಗಿದೆ. ವಿರೋಧ ಪಕ್ಷಗಳ ನಿರಂತರ ಆರೋಪಗಳ ಮಧ್ಯೆಯೂ ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರ ಜನಮನ್ನಣೆ ಪಡೆಯಲು ಯಶಸ್ವಿಯಾಗಿದೆ.

ಇದನ್ನೂ ಓದಿ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವು ಕಂಡ ಎಡಪಕ್ಷಗಳು

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ
PC: Peoples Democracy

ಎಲ್ಲರಿಗೂ ಸುರಕ್ಷಿತ ವಸತಿ ಒದಗಿಸುವ ಗುರಿಯನ್ನು ಹೊಂದಿರುವ ವಸತಿ ಯೋಜನೆ, ಲೈಫ್ ಮಿಷನ್ ಸೇರಿದಂತೆ ರಾಜ್ಯ ಸರ್ಕಾರದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಹಳಿ ತಪ್ಪಿಸಲು ಯುಡಿಎಫ್ ಮತ್ತು ಎನ್‌ಡಿಎ ಪ್ರಯತ್ನಿಸಿದ್ದವು. ಆದಾಗ್ಯೂ, ಎಲ್‌ಡಿಎಫ್‌ ಅಭಿವೃದ್ಧಿ ಚಟುವಟಿಕೆಗಳತ್ತ ಗಮನ ಹರಿಸಿ, ಯಶಸ್ವಿ ಕಂಡಿದೆ.

ಬಿಜೆಪಿ ನೀಡಬಲ್ಲುದೆ ಪೈಪೋಟಿ?

ಮೇಲ್ನೋಟಕ್ಕೆ ಎಲ್‌ಡಿಎಫ್‌ ಮತ್ತು ಬಿಜೆಪಿ ನಡುವೆ ಹೋರಾಟ ನಡೆಯುತ್ತಿದೆ ಎಂದು ಹೇಳಲಾಗುತ್ತಿದ್ದರೂ, ಕೇರಳದಲ್ಲಿ ಬಿಜೆಪಿ ಅಂತಹ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಸ್ಥಳೀಯ ಚುನಾವಣೆಯಲ್ಲಿ ಎಲ್‌ಡಿಎಫ್‌ನಿಂದ ಅಧಿಕಾರ ಕಿತ್ತುಕೊಳ್ಳಲು ಮುಂದಾಗಿದ್ದ ಬಿಜೆಪಿ ಉನ್ನತ ನಾಯಕರನ್ನೇ ಕಣಕ್ಕಿಳಿಸಿತ್ತು. ಅದರೂ, 2015 ಕ್ಕಿಂತ ಸ್ವಲ್ಪ ಪ್ರಾಮಾಣದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದರೂ, ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ಕೇವಲ 23 ಗ್ರಾಮ ಪಂಚಾಯತಿಗಳನ್ನು ಗೆದ್ದರೂ, ಯಾವುದೇ ಬ್ಲಾಕ್ ಪಂಚಾಯತ್, ಜಿಲ್ಲಾ ಪಂಚಾಯತಿಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

ಕೇವಲ ಒಂದು ಪುರಸಭೆ (ಪಾಲಕ್ಕಾಡ್)ಯನ್ನು ಗೆದ್ದಿರುವ ಎನ್‌ಡಿಎ, ಪಂದಲಂನಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಇನ್ನೆಲ್ಲಿಯೂ ತೀವ್ರ ಪೈಪೋಟಿಯನ್ನು ನೀಡಿಲ್ಲ. ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ವಿರುದ್ಧ ಜನರನ್ನು ಸಂಘಟಿಸುತ್ತಿದ್ದ ಬಿಜೆಪಿ/ಆರ್‌ಎಸ್‌ಎಸ್‌ ಸಂಘಟನೆಗಳು 2018 ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ನಂತರ ಪಥನಂತಿಟ್ಟ ಜಿಲ್ಲೆಯ ಪಂದಲಂನಲ್ಲಿಯೂ ತಮ್ಮ ನೆಲೆಯನ್ನು ಕಳೆದುಕೊಂಡಿದೆ.

ಕೇರಳ

ಎಲ್‌ಡಿಎಫ್‌ನಿಂದ ಅಧಿಕಾರ ಕಿತ್ತುಕೊಳ್ಳಲು ಬಿಜೆಪಿ ತನ್ನ ರಾಜ್ಯ ನಾಯಕರನ್ನೇ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದ್ದ ತಿರುವನಂತಪುರಂ ಕಾರ್ಪೊರೇಶನ್‌ನಲ್ಲಿ, ಈ ಹಿಂದೆ ಪಡೆದಿದ್ದಷ್ಟೂ ಸ್ಥಾನಗಳನ್ನೂ ಕೂಡ ಉಳಿಸಿಕೊಳ್ಳಲಷ್ಟೇ ಸೀಮಿತವಾಗಿದೆ. ತಿರುವನಂತಪುರಂ ಪಾಲಿಕೆಯ 100 ಸ್ಥಾನಗಳಲ್ಲಿ ಎಲ್‌ಡಿಎಫ್‌ 51 ಸ್ಥಾನಗಳನ್ನು ಪಡೆದರೆ, ಎನ್‌ಡಿಎ 34, ಯುಡಿಎಫ್ 10 ಮತ್ತು ಇತರರು 5 ಸ್ಥಾನಗಳನ್ನು ಗೆದ್ದಿದ್ದಾರೆ. 2015 ರಲ್ಲಿ ಎಲ್‌ಡಿಎಫ್ 42 ವಾರ್ಡ್‌ಗಳನ್ನು ಗೆದ್ದಿತ್ತು ಮತ್ತು ಆಗ ಬಿಜೆಪಿ ಮೈತ್ರಿಕೂಟವು ಅದೇ 34 ಸ್ಥಾನಗಳನ್ನು ಹೊಂದಿತ್ತು.

ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಮತ್ತು ಯುಡಿಎಫ್‌ ಎರಡೂ ಮೈತ್ರಿಕೂಟಗಳು ಎಲ್‌ಡಿಎಫ್‌ ವಿರುದ್ಧ ಪ್ರಚಾರ ಮಾಡಿದರೂ, ಅವುಗಳು ಎಲ್‌ಡಿಎಫ್‌ನ ಸ್ಥಾನಗಳನ್ನ ಕಸಿದುಕೊಳ್ಳಲು ಅಂತಹ ಸಫಲತೆ ಕಂಡಿಲ್ಲ. ಬದಲಾಗಿದೆ, ಈ ಎರಡು ಮೈತ್ರಿಕೂಟಗಳ ಸ್ಥಾನಗಳೇ ಚದುರಿ ಹೋಗಿದೆ.

ಇದನ್ನೂ ಓದಿ: ಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...